Homeಮುಖಪುಟಫಾರ್ಬಿಡನ್‌ ಪ್ರಕಟಿಸುತ್ತಿರುವ ‘ಸ್ಟೋರಿ ಕಿಲ್ಲರ್ಸ್’ ಸರಣಿಗೆ ಗೌರಿ ಲಂಕೇಶ್‌ ಸ್ಫೂರ್ತಿ; ಗಾರ್ಡಿಯನ್‌ ಉಲ್ಲೇಖ

ಫಾರ್ಬಿಡನ್‌ ಪ್ರಕಟಿಸುತ್ತಿರುವ ‘ಸ್ಟೋರಿ ಕಿಲ್ಲರ್ಸ್’ ಸರಣಿಗೆ ಗೌರಿ ಲಂಕೇಶ್‌ ಸ್ಫೂರ್ತಿ; ಗಾರ್ಡಿಯನ್‌ ಉಲ್ಲೇಖ

- Advertisement -
- Advertisement -

ಪ್ರಖ್ಯಾತ ತನಿಖಾ ಸಂಸ್ಥೆಯಾಗಿರುವ ‘ಫಾರ್ಬಿಡನ್‌ ಸ್ಟೋರೀಸ್‌’ ಪ್ರಕಟಿಸುತ್ತಿರುವ ‘ಸ್ಟೋರಿ ಕಿಲ್ಲರ್ಸ್’ ವಿಶೇಷ ಸರಣಿಗೆ ‘ಗೌರಿ ಲಂಕೇಶ್‌’ ಅವರು ಸ್ಫೂರ್ತಿಯಾಗಿದ್ದಾರೆ ಎಂದು ‘ದಿ ಗಾರ್ಡಿಯನ್‌’ ವರದಿ ಮಾಡಿದೆ.

ಸುಳ್ಳು ಸುದ್ದಿಗಳಿಂದ ಆಗಿರುವ ಅನಾಹುತಗಳನ್ನು, ಕೊಲೆ, ಹಿಂಸೆಗಳನ್ನು ಈ ಸರಣಿ ಬಿಚ್ಚಿಡುತ್ತಿದೆ. ಗೌರಿ ಲಂಕೇಶ್ ಅವರ ಕುರಿತು ವಿಶೇಷ ವರದಿಯನ್ನು ಇಲ್ಲಿ ಪ್ರಕಟಿಸಲಾಗಿದೆ.

ಗಾರ್ಡಿಯನ್ ತನ್ನ ವರದಿಯಲ್ಲಿ, “ಸುಳ್ಳು ಮಾಹಿತಿಗಳನ್ನು ನಮ್ಮ ಮಾಹಿತಿ ಪರಿಸರ ವ್ಯವಸ್ಥೆಯಲ್ಲಿನ ಪರಮಾಣು ಬಾಂಬ್‌ಗೆ ಹೋಲಿಸಲಾಗಿದೆ. ಸುಳ್ಳು ಮಾಹಿತಿಯು ಗಂಭೀರ ಸಮಸ್ಯೆಯಾಗಿದೆ. ಏಕೆಂದರೆ ಸತ್ಯಕ್ಕಿಂತ ವೇಗವಾಗಿ ದ್ವೇಷ, ಕೋಪ ಮತ್ತು ಪಿತೂರಿ ಸಿದ್ಧಾಂತಗಳು ಹರಡಲು ಸುಳ್ಳು ಮಾಹಿತಿಗಳು ಕಾರಣವಾಗುತ್ತವೆ. ಪತ್ರಕರ್ತೆ ಮತ್ತು ನೊಬೆಲ್ ಶಾಂತಿ ಪ್ರಶಸ್ತಿ ವಿಜೇತೆ ಮಾರಿಯಾ ರೆಸ್ಸಾ ಅವರ ಹೇಳುವಂತೆ- ‘ಪ್ರಜಾಪ್ರಭುತ್ವ ಎಂಬುದು ಕನಸಷ್ಟೇ” ಎಂಬ ಸಾಲುಗಳನ್ನು ಉಲ್ಲೇಖಿಸಿದೆ.

ಉಕ್ರೇನ್‌ನ ಮೇಲೆ ರಷ್ಯಾದ ಕ್ರೂರ ಆಕ್ರಮಣ, ಅಮೆರಿಕದ ಸಂಸತ್‌ ಮೇಲೆ ದಾಳಿ, ಕೋವಿಡ್ -19ರ ಸುತ್ತ ಹುಟ್ಟಿದ ಸುಳ್ಳುಗಳು- ಇವೆಲ್ಲ ತಪ್ಪು ಮಾಹಿತಿಯ ಪ್ರಮುಖ ಜಾಗತಿಕ ಘಟನೆಗಳಾಗಿ ಕಾಣುತ್ತವೆ ಎಂದಿದೆ.

‘Disinfo black ops’ ಎಂಬ ವಿಶೇಷ ತನಿಖೆಯು ಪ್ರಪಂಚದಾದ್ಯಂತ ಆಗುತ್ತಿರುವ ಸುಳ್ಳು ಮಾಹಿತಿಯ ಉದ್ದೇಶಪೂರ್ವಕ ಹರಡುವಿಕೆಯ ಕುರಿತು ಬಹಿರಂಗಪಡಿಸುತ್ತಿದೆ. ಇದು ಸ್ಟೋರಿ ಕಿಲ್ಲರ್ಸ್‌ ಸರಣಿಯ ಭಾಗವಾಗಿದೆ. ಗಾರ್ಡಿಯನ್, ಅಬ್ಸರ್ವರ್, ಹಾರೆಟ್ಜ್, ಲೆ ಮಾಂಡೆ, ಡೆರ್ ಸ್ಪೀಗೆಲ್, ರೇಡಿಯೋ ಫ್ರಾನ್ಸ್, ದಿ ಮಾರ್ಕರ್, ಪೇಪರ್ ಟ್ರಯಲ್ ಮೀಡಿಯಾ ಮತ್ತು ವಾಷಿಂಗ್ಟನ್ ಪೋಸ್ಟ್ ಸೇರಿದಂತೆ 30 ಸುದ್ದಿ ಮಾಧ್ಯಮಗಳ ಪತ್ರಕರ್ತರನ್ನು ಒಳಗೊಂಡ ಅಂತಾರಾಷ್ಟ್ರೀಯ ಮಟ್ಟದ ಸಹಯೋಗದಲ್ಲಿ ನಡೆಯುತ್ತಿರುವ ಯೋಜನೆ ಇದಾಗಿದೆ.

ಲಾಭದ ಉದ್ದೇಶದಿಂದ ಅಂತರ್ಜಾಲದಾದ್ಯಂತ ನಕಲಿ ಮಾಹಿತಿಯನ್ನು ಹರಡುವ ಸರ್ಕಾರಿ-ಪ್ರಾಯೋಜಿತ ಘಟಕಗಳು ಅಥವಾ ಖಾಸಗಿ ಸಂಸ್ಥೆಗಳು ಹರಡುವ ಸುಳ್ಳು ಮಾಹಿತಿಗಳ ಬಗ್ಗೆ ಈ ತನಿಖೆ ಬೆಳಕು ಚೆಲ್ಲುತ್ತಿದೆ.

ಡ್ಯಾಫ್ನೆ ಪ್ರಾಜೆಕ್ಟ್ ಮತ್ತು ಪೆಗಾಸಸ್ ಪ್ರಾಜೆಕ್ಟ್‌ನ ಹಿಂದಿರುವ ‘ಫೋರ್ಬಿಡನ್ ಸ್ಟೋರೀಸ್’ (ಲಾಭೋದ್ದೇಶವಿಲ್ಲದ ಫ್ರೆಂಚ್ ಮೂಲದ ಸಂಸ್ಥೆ) ಈ ಯೋಜನೆಯನ್ನು ಕೈಗೆತ್ತಿಕೊಂಡಿದೆ. ಹತ್ಯೆಗೀಡಾದ, ಬೆದರಿಕೆ ಅಥವಾ ಜೈಲಿನಲ್ಲಿರುವ ಪತ್ರಕರ್ತರ ಆಶಯಗಳನ್ನು ಮುಂದುವರಿಸುವುದು ಈ ಯೋಜನೆಯ ಉದ್ದೇಶವಾಗಿದೆ.

2017ರಲ್ಲಿ ತಮ್ಮ ಬೆಂಗಳೂರಿನ ಮನೆಯ ಹೊರಗೆ ಹತ್ಯೆಯಾದ ಗೌರಿ ಲಂಕೇಶ್ ಅವರ ನಿರ್ಭೀತ ಕೆಲಸಗಳೇ ಈ ಎಂಟು ತಿಂಗಳ ಕಾಲ ನಡೆಸಿರುವ ತನಿಖೆಗೆ ಸ್ಫೂರ್ತಿಯಾಗಿದೆ ಎಂದು ‘ಗಾರ್ಡಿಯನ್‌’ ಉಲ್ಲೇಖಿಸಿದೆ.

ಹತ್ಯೆಯಾಗುವ ಕೆಲವೇ ಗಂಟೆಗಳ ಮೊದಲು ಗೌರಿ ಲಂಕೇಶ್ ಅವರು ‘ಸುಳ್ಳು ಸುದ್ದಿಗಳ ಯುಗದಲ್ಲಿ’ ಎಂಬ ಲೇಖನಕ್ಕೆ ಅಂತಿಮ ಸ್ಪರ್ಶ ನೀಡುತ್ತಿದ್ದರು. ಆನ್‌ಲೈನ್‌ನಲ್ಲಿ ಫೇಕ್‌ನ್ಯೂಸ್ ಪ್ಯಾಕ್ಟರಿಗಳು ಹೇಗೆ ಭಾರತದಲ್ಲಿ ತಪ್ಪು ಮಾಹಿತಿಗಳನ್ನು ಹರಡುತ್ತಿವೆ ಎಂಬುದನ್ನು ಈ ಲೇಖನ ಚರ್ಚಿಸಿದೆ ಎಂಬ ಸಂಗತಿಯನ್ನು ವರದಿಯಲ್ಲಿ ಪ್ರಸ್ತಾಪಿಸಲಾಗಿದೆ.

‘ಇನ್ ಏಜ್ ಆಫ್ ಫಾಲ್ಸ್ ನ್ಯೂಸ್’ ಲೇಖನವು ಗೌರಿಯವರ ಸಾವಿನ ನಂತರ ಪ್ರಕಟವಾಯಿತು. ಗೌರಿ ತಮ್ಮ ಅಂತಿಮ ವಾಕ್ಯದಲ್ಲಿ, “ನಕಲಿ ಸುದ್ದಿಗಳನ್ನು ಬಹಿರಂಗಪಡಿಸುವ ಎಲ್ಲರಿಗೂ ನಾನು ಸೆಲ್ಯೂಟ್ ಮಾಡಲು ಬಯಸುತ್ತೇನೆ. ಅಲ್ಲಿ ಇನ್ನೂ ಹೆಚ್ಚಿನವರು ಇರಬೇಕೆಂದು ನಾನು ಬಯಸುತ್ತೇನೆ” ಎಂದಿದ್ದರು.

ಹತ್ಯೆಗೆ ಸಂಬಂಧಿಸಿದಂತೆ 17 ಮಂದಿಯನ್ನು ಅಧಿಕಾರಿಗಳು ಬಂಧಿಸಿದ್ದಾರೆ. ವಿಚಾರಗಳು ಮುಂದುವರಿದಿವೆ.

ಇಸ್ರೇಲ್‌ನ ಬೆನ್-ಗುರಿಯನ್ ವಿಶ್ವವಿದ್ಯಾನಿಲಯದ ಸಹಾಯಕ ಪ್ರಾಧ್ಯಾಪಕರಾದ ನಿರ್ ಗ್ರಿನ್‌ಬರ್ಗ್ ಪ್ರತಿಕ್ರಿಯಿಸಿ, “ತಪ್ಪು ಮಾಹಿತಿಗಳ ಕುರಿತು ಸ್ಟೋರಿ ಕಿಲ್ಲರ್ಸ್ ಯೋಜನೆಯಲ್ಲಿ ಬಹಿರಂಗವಾಗುತ್ತಿರುವ ಸಂಗತಿಗಳು ನವೀನವಾಗಿದೆ” ಎಂದಿದ್ದಾರೆ.

“ನಾಗರಿಕ ಸಮಾಜವು ಈ ಆನ್‌ಲೈನ್ ವೇದಿಕೆಗಳಿಗೆ ಸಂಬಂಧಿಸಿದಂತೆ ನಿಯಮಗಳನ್ನು ಪುನಾ ರಚಿಸದ ಹೊರತು, ಈ ವೇದಿಕೆಗಳನ್ನು ಹೊಣೆಗಾರರನ್ನಾಗಿ ಮಾಡದ ಹೊರತು, ಅಂತಹ ತಪ್ಪು ಮಾಹಿತಿಯ ಪ್ರಚಾರಗಳಿಗೆ ಯಾರಾದರೂ ಬಲಿಯಾಗಬಹುದೆಂಬ ಭವಿಷ್ಯವನ್ನು ನಾವು ನೋಡುತ್ತಿದ್ದೇವೆ” ಎಂದಿದ್ದಾರೆ ಗ್ರಿನ್‌ಬರ್ಗ್.

ಈ ಸುಳ್ಳು ಸುದ್ದಿಗಳಿಂದಾಗಿ ವಿಶೇಷವಾಗಿ ಜಗತ್ತಿನಾದ್ಯಂತ ಮಹಿಳಾ ಪತ್ರಕರ್ತರು ಟಾರ್ಗೆಟ್ ಆಗಿದ್ದಾರೆ. ರೆಸ್ಸಾ ಅವರು ತಮ್ಮ ‘ರಾಪ್ಲರ್’ ಡಿಜಿಟಲ್‌ ವೇದಿಕೆಯ ಮೂಲಕ ಮಾಡಿದ ವರದಿಗಳ ಕಾರಣಕ್ಕೆ ಟ್ರೋಲ್ ಆಗಿದ್ದಾರೆ.

‘ಫಿಲಿಪೈನ್ಸ್‌ನ ಮುಕ್ತ ಪತ್ರಿಕಾ ಮುಖ’ ಎಂದೇ ಖ್ಯಾತರಾಗಿರುವ ರೆಸ್ಸಾ, ತೆರಿಗೆ ವಂಚನೆ ಆರೋಪಗಳಿಂದ ಖುಲಾಸೆಗೊಂಡರು, ಒಂದು ಪ್ರಕರಣದಲ್ಲಿ ಅವರು ಕಿರುಕುಳ ಎದುರಿಸಿದ್ದಾರೆ. ಫಿನ್‌ಲ್ಯಾಂಡ್‌ನ ಪತ್ರಕರ್ತೆ ಜೆಸ್ಸಿಕ್ಕಾ ಅರೋ ಅವರು ಫೇಕ್‌ನ್ಯೂಸ್‌ಗಳ ದಾಳಿಗೆ ಗುರಿಯಾಗಿದ್ದಾರೆ. ಹೀಗೆ ಸುಳ್ಳು ಸುದ್ದಿಗಳಿಂದ ತೊಂದರೆಗೊಳಗಾದ ಪತ್ರಕರ್ತರ ಕುರಿತು ‘ಫಾರ್ಬಿಡನ್‌ ಸ್ಟೋರೀಸ್‌’ ಸರಣಿ ತನಿಖಾ ವರದಿಗಳನ್ನು ಪ್ರಕಟಿಸುತ್ತಿದೆ.

ಮಾಹಿತಿ ಕೃಪೆ: ದಿ ಗಾರ್ಡಿಯನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...

ಮಾನವೀಯತೆ ಮರೆತ ಪಂಚಾಯಿತಿ: 3 ವರ್ಷದ ಮಗುವಿನ ಮೇಲಿನ ಅತ್ಯಾಚಾರ ಪ್ರಕರಣ ಮುಚ್ಚಿಹಾಕಲು 1 ಲಕ್ಷ ರೂ.ದಂಡ, ಆ ಹಣದಲ್ಲೇ ಮದ್ಯದ ಪಾರ್ಟಿ!

ರಾಂಚಿ: ಜಾರ್ಖಂಡ್‌ನ ಗುಮ್ಲಾ ಜಿಲ್ಲೆಯ ಘಾಗ್ರಾ ಪೊಲೀಸ್ ಠಾಣಾ ವ್ಯಾಪ್ತಿಯ ಪಾಲ್ಮಾ ಗ್ರಾಮದಲ್ಲಿ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ವಿಕೃತ ಘಟನೆಯೊಂದು ಬೆಳಕಿಗೆ ಬಂದಿದೆ. ಮೂರು ವರ್ಷದ ಮಗುವಿನ ಮೇಲೆ ನಡೆದ ಭೀಕರ...

ಪೆಟ್ರೋಲ್ – ಎಥೆನಾಲ್ ಕುರಿತ ಮಾಹಿತಿ ಒದಗಿಸುವಂತೆ ತೈಲ ಸಚಿವಾಲಯಕ್ಕೆ ಕೇಂದ್ರ ಮಾಹಿತಿ ಆಯೋಗ ಆದೇಶ

ಪೆಟ್ರೋಲ್ ಉತ್ಪಾದನೆ ಮತ್ತು ಆಮದು, ಎಥೆನಾಲ್ ಸಂಗ್ರಹಣೆ, ಮಿಶ್ರಣ ಮತ್ತು ಪೆಟ್ರೋಲಿಯಂ ವಲಯದ ಲಾಭದ ಕುರಿತ ಹಿಂದಿನ ಡೇಟಾವನ್ನು ಬಹಿರಂಗಪಡಿಸುವಂತೆ ತೈಲ ಸಚಿವಾಲಯದ ಯೋಜನಾ ವಿಭಾಗವಾದ ಪೆಟ್ರೋಲಿಯಂ ಯೋಜನೆ ಮತ್ತು ವಿಶ್ಲೇಷಣಾ ಕೋಶ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣ : ಮುಸ್ಲಿಮರ ಮೇಲ್ಮನವಿ ವಿಚಾರಣೆಗೆ ಸುಪ್ರೀಂ ಸಮ್ಮತಿ; ಮಧ್ಯಂತರ ನಮಾಝ್‌ಗೆ ನಿರಾಕರಣೆ

ಮಧ್ಯಪ್ರದೇಶದ ಧಾರ್‌ನಲ್ಲಿರುವ ಐತಿಹಾಸಿಕ ಭೋಜ್‌ಶಾಲಾ-ಕಮಲ್ ಮೌಲಾ ಸಂಕೀರ್ಣವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು ಘೋಷಿಸಿ, ಅಲ್ಲಿ ನಮಾಝ್ ಮಾಡುವುದನ್ನು ನಿಷೇಧಿಸಿರುವ ಮಧ್ಯಪ್ರದೇಶ ಹೈಕೋರ್ಟ್‌ನ ತೀರ್ಪನ್ನು ಪ್ರಶ್ನಿಸಿ, ವಿವಿಧ ಮುಸ್ಲಿಂ ಸಂಘಟನೆಗಳು ಸಲ್ಲಿಸಿರುವ...

ತೀವ್ರ ಹದಗೆಟ್ಟ ಸೋನಮ್ ವಾಂಗ್ಚುಕ್ ಆರೋಗ್ಯ : ಉಪವಾಸ ಕೈ ಬಿಡುವಂತೆ ವಿಪಕ್ಷ ನಾಯಕರಿಂದ ಮನವಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಶಿಕ್ಷಣ ತಜ್ಞ ಹಾಗೂ ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರಿಗೆ ತಮ್ಮ ಪ್ರತಿಭಟನೆಯನ್ನು ಕೊನೆಗೊಳಿಸುವಂತೆ ವಿರೋಧ ಪಕ್ಷಗಳ ನಾಯಕರು ಮಂಗಳವಾರ (ಜು.14) ಮನವಿ...

ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇ ಸಮೀಪವೇ ರಸ್ತೆಯಿಲ್ಲ; ಬಟ್ಟೆ ಜೋಲಿಯಲ್ಲಿ ಗರ್ಭಿಣಿಯನ್ನು ಆಸ್ಪತ್ರೆಗೆ ಸಾಗಿಸಿದ ಉಂಬರಾನೆ ವಾಡಿಯ ಜನ

ಖಲಾಪುರ (ರಾಯಗಢ): ಗರ್ಭಿಣಿಯನ್ನು ಯೋಗ್ಯವಾದ ರಸ್ತೆ, ಆಂಬ್ಯುಲೆನ್ಸ್ ಇಲ್ಲದ ಕಾರಣ ಬಟ್ಟೆಯ ಜೋಳಿಗೆಯಲ್ಲಿ ಆಸ್ಪತ್ರೆಗೆ ಸಾಗಿಸಿದ ಹೃದಯ ವಿದ್ರಾವಕ ಘಟನೆ ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಖಲಾಪುರ ತಾಲ್ಲೂಕಿಗೆ ಸೇರಿದ ಉಂಬರಾನೆ ವಾಡಿಯಲ್ಲಿ ನಡೆದಿದೆ.  ದೇಶದಲ್ಲೇ...

ಕಾಜಿರಂಗ ಹೋಟೆಲ್ ಯೋಜನೆ ವಿರುದ್ಧ ಪ್ರತಿಭಟನೆ: ಅಸ್ಸಾಂ ಹೋರಾಟಗಾರ ಪ್ರಣಬ್ ಡೋಲೆ ಅಕ್ರಮ ಬಂಧನ: ಜಿಕೆಎಲ್‌ಎಚ್‌ಆರ್‌ಪಿಸಿ ಗಂಭೀರ ಆರೋಪ

ಗುವಾಹಟಿ: ವಿಶ್ವಪ್ರಸಿದ್ಧ ಕಾಜಿರಂಗ ರಾಷ್ಟ್ರೀಯ ಉದ್ಯಾನವನದ ಸಮೀಪ ಪ್ರಸ್ತಾವಿತ ಐಷಾರಾಮಿ ಪಂಚತಾರಾ ಹೋಟೆಲ್ ಯೋಜನೆಗಾಗಿ ಆದಿವಾಸಿಗಳ ಕೃಷಿ ಹಾಗೂ ಗೋಮಾಳ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದನ್ನು ವಿರೋಧಿಸಿ ನಡೆದ ಪ್ರತಿಭಟನೆಗಳ ಹಿನ್ನೆಲೆಯಲ್ಲಿ, ಅಸ್ಸಾಂನ ಸಾಮಾಜಿಕ ಕಾರ್ಯಕರ್ತ...

ಬಿಡದಿ ಟೌನ್‌ಶಿಪ್: ಸರ್ಕಾರದ ಸರ್ವಾಧಿಕಾರಿ ಧೋರಣೆಗೆ ‘ಸಂಯುಕ್ತ ಹೋರಾಟ ಸಮಿತಿ’ ತೀವ್ರ ಖಂಡನೆ

"ಬಿಡದಿ ಟೌನ್‌ಶಿಪ್ ಯೋಜನೆಯು ತೀವ್ರ ವಿವಾದದಲ್ಲಿರುವಾಗಲೇ ರೈತರೊಂದಿಗೆ ಯಾವುದೇ ಮಾತುಕತೆ ನಡೆಸದೆ, ಪೊಲೀಸ್ ಬಲಪ್ರಯೋಗದ ಮೂಲಕ ಸರ್ವಾಧಿಕಾರಿ ರೀತಿಯಲ್ಲಿ ಜಂಟಿ ಸರ್ವೆ (JMC) ನಡೆಸಲು ಮುಂದಾಗಿರುವ ಸರ್ಕಾರದ ಕ್ರಮ ಅತ್ಯಂತ ಖಂಡನೀಯ" ಎಂದು...

ಜ್ಞಾನವಾಪಿ, ಮಥುರಾ, ಸಂಭಾಲ್ ದೇವಾಲಯ-ಮಸೀದಿಗಳ ವಿವಾದ : ಸುಪ್ರೀಂ ಕೋರ್ಟ್‌ನ ಮಧ್ಯಸ್ಥಿಕೆ ಪ್ರಸ್ತಾಪ ತಿರಸ್ಕರಿಸಿದ ಹಿಂದೂ-ಮುಸ್ಲಿಂ ಪಕ್ಷಗಳು

ಧಾರ್ಮಿಕ ಸ್ಥಳಗಳ ವಿವಾದಗಳಿಗೆ ಸೌಹಾರ್ದಯುತ ಪರಿಹಾರವನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ಹೆಜ್ಜೆಯನ್ನಿಟ್ಟಿದೆ. ವಾರಣಾಸಿಯ ಜ್ಞಾನವಾಪಿ ಮಸೀದಿ ವಿವಾದ, ಮಥುರಾದ ಕೃಷ್ಣ ಜನ್ಮಭೂಮಿ-ಶಾಹಿ ಇದ್ಗಾ ವಿವಾದ ಮತ್ತು ಸಂಭಾಲ್ ಜಮಾ ಮಸೀದಿ...