Homeಅಂಕಣಗಳುಪತ್ರಿಕಾ ವೃತ್ತಿಧರ್ಮ, `ಉದ್ಯಮ’ವಾದಾಗ.....

ಪತ್ರಿಕಾ ವೃತ್ತಿಧರ್ಮ, `ಉದ್ಯಮ’ವಾದಾಗ…..

- Advertisement -
- Advertisement -

– ಗೌರಿ ಲಂಕೇಶ್
ಆಗಸ್ಟ್ 10, 2005 (`ಕಂಡಹಾಗೆ’ ಸಂಪಾದಕೀಯದಿಂದ) |

ಪತ್ರಕರ್ತೆಯಾಗಿ ನನ್ನ 22 ವರ್ಷದ ಅನುಭವದಲ್ಲಿ ಪತ್ರಿಕೋದ್ಯಮ ಹೊಸ ಆಯಾಮಗಳನ್ನು ಪಡೆಯುತ್ತಿರುವುದನ್ನು ಕಂಡಿದ್ದೇನೆ. ಇಂದು ನನ್ನ ಸಹೋದ್ಯೋಗಿ ಮಿತ್ರರು ಮುಂಬೈ, ದೆಹಲಿ, ಅಮೆರಿಕಾ, ಇಂಗ್ಲೆಂಡ್‍ಗಳಲ್ಲಿ ಕೆಲಸ ನಿರ್ವಹಿಸುತ್ತಿದ್ದಾರೆ. ವಿದೇಶಗಳಲ್ಲಿ ಕಾರ್ಯನಿರ್ವಹಿಸುತ್ತಿರುವವರು ತಿಂಗಳಿಗೆ ಮೂರು ಲಕ್ಷ ರೂಪಾಯಿ ಪಡೆಯುತ್ತಿದ್ದರೆ, ಮುಂಬೈ ಮತ್ತು ದೆಹಲಿಯಲ್ಲಿರುವವರು ಐವತ್ತು ಸಾವಿರದಷ್ಟು ಸಂಬಳ ಪಡೆಯುತ್ತಿದ್ದಾರೆ.
ಪತ್ರಿಕಾ ವೃತ್ತಿ ಎಂಬುದು ಪತ್ರಿಕೋದ್ಯಮವಾಗಿ ಪರಿವರ್ತನೆಗೊಂಡಿರುವುದರ ಪರಿಣಾಮ ಇದು. ಇವತ್ತು ದೊಡ್ಡ ಉದ್ಯಮಪತಿಗಳು, ಶ್ರೀಮಂತ ರಾಜಕಾರಣಿಗಳು ಪತ್ರಿಕಾ ಮಾಲಿಕರಾಗಿದ್ದಾರೆ. ಇದರಿಂದಾಗಿ ಬಹುತೇಕ ಎಲ್ಲಾ ಪತ್ರಿಕೆಗಳೂ ಕಾಪೆರ್ರೇಟ್ ಮತ್ತು ರಾಜಕಾರಣಿಗಳ ಹಂಗಿನಲ್ಲಿರುತ್ತವೆ. ಅಂತಹವರಿಂದ ಸಮಾಜಿಕ ಬದ್ಧತೆ, ಜನಪರ ಕಾಳಜಿಗಳನ್ನು ನಿರೀಕ್ಷಿಸುವುದು ಅಸಾಧ್ಯ. ಇದಕ್ಕೆ ಒಂದು ಉದಾಹರಣೆ ಕೊಡಬಹುದು. ಬೆಂಗಳೂರು ಜಿಲ್ಲೆಯ ದೊಡ್ಡಬಳ್ಳಾಪುರ, ನೆಲಮಂಗಲ ಸುತ್ತಮುತ್ತ ಅರ್ಕಾವತಿ, ದಕ್ಷಿಣ ಪಿನಾಕಿನಿ ನದಿಗಳಿವೆ. ಇವುಗಳ ಅಂತರ್ಜಲ ಬತ್ತಿ ಹೋಗುತ್ತಿರುವಾಗಲೇ ಖಾಸಗಿ ಕಾರ್ಖಾನೆಗಳು ತಮ್ಮtoxic wasteಗಳನ್ನು ಈ ನದಿಗಳಿಗೇ ಹರಿಸಿ ಜಲಮಾಲಿನ್ಯ ಮಾಡುತ್ತಿವೆ. ಇದರ ವಿರುದ್ಧ ಹೋರಾಟ ಪ್ರಾರಂಭಿಸಿರುವ ವಕೀಲ ಜಯರಾಂ ಮತ್ತು ಸ್ನೇಹಿತರು ಪತ್ರಕರ್ತರನ್ನು ಕರೆದು ಕೊಂಡು ಪೆಪ್ಸಿಯ ಘಟಕವೊಂದು ಹೀಗೆ ಜಲಮಾಲಿನ್ಯ ಮಾಡುತ್ತಿರುವುದನ್ನು ತೋರಿಸಿ ದರು. ಆದರೆ ಅದು ಯಾವ ಪತ್ರಿಕೆಗಳಲ್ಲೂ ಪ್ರಕಟವಾಗಲಿಲ್ಲ. ಇದಕ್ಕೆ ಕಾರಣವೇನೆಂದು ಜಯರಾಂರವರು ವಿಚಾರಿಸಿದಾಗ ಪತ್ರಿಕೆಯ ಮಾಲೀಕರು ಪೆಪ್ಸಿಯ ಜಾಹೀರಾತುಗಳು ಸಿಗುವುದಿಲ್ಲವೆಂದು ಹೆದರಿ ಅದನ್ನು ಪ್ರಕಟಿಸದಿರಲು ನಿರ್ಧರಿಸಿದ್ದು ಗೊತ್ತಾಯಿತು. ಅಂದರೆ ಪತ್ರಿಕಾ ಮಾಲೀಕರಿಗೆ ಪೆಪ್ಸಿಯ ಹಣ ಬೇಕೆ ಹೊರತು ಬೆಂಗಳೂರಿಗೆ ಶೇ. 30ರಷ್ಟು ಕುಡಿಯುವ ನೀರನ್ನು ನೀಡುತ್ತಿರುವ ನದಿಗಳ ಸ್ವಚ್ಛತೆ ಅಲ್ಲ!
ಇತ್ತೀಚೆಗೆ ಎಲ್ಲ ಪತ್ರಿಕೆಗಳಲ್ಲಿ ವಾಚಕರು “ಪ್ರತಿಭಟನೆಗಳಿಂದಾಗಿ ಸಾರ್ವಜನಿಕರಾದ ನಮಗೆ ಅನಾನುಕೂಲವಾಗುತ್ತಿದೆ” ಎಂದು ಬರೆದಿರುವ ಪತ್ರಗಳನ್ನೇ ಗಮನಿಸಿ. ಈ ವಾಚಕರಿಗೆ ಬೀದಿಗೆ ಬಿದ್ದು ಪ್ರತಿಭಟಿಸುತ್ತಿರುವವರೂ ಸಾರ್ವಜನಿಕರು ಎಂದು ಯಾಕೆ ಅರ್ಥವಾಗುತ್ತಿಲ್ಲ; ಅಥವಾ ಪತ್ರಿಕೆಗಳು ಯಾಕೆ ಅರ್ಥ ಮಾಡಿಕೊಡುತ್ತಿಲ್ಲ. ಇವತ್ತು ಅಂದರೆ ಭಾನುವಾರದ ಪತ್ರಿಕೆಗಳು ಕೆಎಸ್‍ಆರ್‍ಟಿಸಿ ಹಾಗೂ ಬಿಎಂಟಿಸಿ ಕಾರ್ಮಿಕರಿಂದ ನಡೆದ ರ್ಯಾಲಿಯಿಂದಾಗಿ ಎಲ್ಲೆಡೆ ಸಂಚಾರ ಅಸ್ತವ್ಯಸ್ಥ ಗೊಂಡಿತು ಎಂದೇ ವರದಿ ಮಾಡಿವೆ. ಆದರೆ ಅದೇ ಕೆಎಸ್‍ಆರ್‍ಟಿಸಿ ಮತ್ತು ಬಿಎಂಟಿಸಿಗಳಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ ಹಾಗೂ ಕಾರ್ಮಿಕರ ಶೋಷಣೆ ಬಗ್ಗೆ ಮಾತ್ರ ಯಾರೂ ಬರೆದಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....