Homeಅಂಕಣಗಳುಪತ್ರಿಕಾ ವೃತ್ತಿಧರ್ಮ, `ಉದ್ಯಮ’ವಾದಾಗ.....

ಪತ್ರಿಕಾ ವೃತ್ತಿಧರ್ಮ, `ಉದ್ಯಮ’ವಾದಾಗ…..

- Advertisement -
- Advertisement -

– ಗೌರಿ ಲಂಕೇಶ್
ಆಗಸ್ಟ್ 10, 2005 (`ಕಂಡಹಾಗೆ’ ಸಂಪಾದಕೀಯದಿಂದ) |

ಪತ್ರಕರ್ತೆಯಾಗಿ ನನ್ನ 22 ವರ್ಷದ ಅನುಭವದಲ್ಲಿ ಪತ್ರಿಕೋದ್ಯಮ ಹೊಸ ಆಯಾಮಗಳನ್ನು ಪಡೆಯುತ್ತಿರುವುದನ್ನು ಕಂಡಿದ್ದೇನೆ. ಇಂದು ನನ್ನ ಸಹೋದ್ಯೋಗಿ ಮಿತ್ರರು ಮುಂಬೈ, ದೆಹಲಿ, ಅಮೆರಿಕಾ, ಇಂಗ್ಲೆಂಡ್‍ಗಳಲ್ಲಿ ಕೆಲಸ ನಿರ್ವಹಿಸುತ್ತಿದ್ದಾರೆ. ವಿದೇಶಗಳಲ್ಲಿ ಕಾರ್ಯನಿರ್ವಹಿಸುತ್ತಿರುವವರು ತಿಂಗಳಿಗೆ ಮೂರು ಲಕ್ಷ ರೂಪಾಯಿ ಪಡೆಯುತ್ತಿದ್ದರೆ, ಮುಂಬೈ ಮತ್ತು ದೆಹಲಿಯಲ್ಲಿರುವವರು ಐವತ್ತು ಸಾವಿರದಷ್ಟು ಸಂಬಳ ಪಡೆಯುತ್ತಿದ್ದಾರೆ.
ಪತ್ರಿಕಾ ವೃತ್ತಿ ಎಂಬುದು ಪತ್ರಿಕೋದ್ಯಮವಾಗಿ ಪರಿವರ್ತನೆಗೊಂಡಿರುವುದರ ಪರಿಣಾಮ ಇದು. ಇವತ್ತು ದೊಡ್ಡ ಉದ್ಯಮಪತಿಗಳು, ಶ್ರೀಮಂತ ರಾಜಕಾರಣಿಗಳು ಪತ್ರಿಕಾ ಮಾಲಿಕರಾಗಿದ್ದಾರೆ. ಇದರಿಂದಾಗಿ ಬಹುತೇಕ ಎಲ್ಲಾ ಪತ್ರಿಕೆಗಳೂ ಕಾಪೆರ್ರೇಟ್ ಮತ್ತು ರಾಜಕಾರಣಿಗಳ ಹಂಗಿನಲ್ಲಿರುತ್ತವೆ. ಅಂತಹವರಿಂದ ಸಮಾಜಿಕ ಬದ್ಧತೆ, ಜನಪರ ಕಾಳಜಿಗಳನ್ನು ನಿರೀಕ್ಷಿಸುವುದು ಅಸಾಧ್ಯ. ಇದಕ್ಕೆ ಒಂದು ಉದಾಹರಣೆ ಕೊಡಬಹುದು. ಬೆಂಗಳೂರು ಜಿಲ್ಲೆಯ ದೊಡ್ಡಬಳ್ಳಾಪುರ, ನೆಲಮಂಗಲ ಸುತ್ತಮುತ್ತ ಅರ್ಕಾವತಿ, ದಕ್ಷಿಣ ಪಿನಾಕಿನಿ ನದಿಗಳಿವೆ. ಇವುಗಳ ಅಂತರ್ಜಲ ಬತ್ತಿ ಹೋಗುತ್ತಿರುವಾಗಲೇ ಖಾಸಗಿ ಕಾರ್ಖಾನೆಗಳು ತಮ್ಮtoxic wasteಗಳನ್ನು ಈ ನದಿಗಳಿಗೇ ಹರಿಸಿ ಜಲಮಾಲಿನ್ಯ ಮಾಡುತ್ತಿವೆ. ಇದರ ವಿರುದ್ಧ ಹೋರಾಟ ಪ್ರಾರಂಭಿಸಿರುವ ವಕೀಲ ಜಯರಾಂ ಮತ್ತು ಸ್ನೇಹಿತರು ಪತ್ರಕರ್ತರನ್ನು ಕರೆದು ಕೊಂಡು ಪೆಪ್ಸಿಯ ಘಟಕವೊಂದು ಹೀಗೆ ಜಲಮಾಲಿನ್ಯ ಮಾಡುತ್ತಿರುವುದನ್ನು ತೋರಿಸಿ ದರು. ಆದರೆ ಅದು ಯಾವ ಪತ್ರಿಕೆಗಳಲ್ಲೂ ಪ್ರಕಟವಾಗಲಿಲ್ಲ. ಇದಕ್ಕೆ ಕಾರಣವೇನೆಂದು ಜಯರಾಂರವರು ವಿಚಾರಿಸಿದಾಗ ಪತ್ರಿಕೆಯ ಮಾಲೀಕರು ಪೆಪ್ಸಿಯ ಜಾಹೀರಾತುಗಳು ಸಿಗುವುದಿಲ್ಲವೆಂದು ಹೆದರಿ ಅದನ್ನು ಪ್ರಕಟಿಸದಿರಲು ನಿರ್ಧರಿಸಿದ್ದು ಗೊತ್ತಾಯಿತು. ಅಂದರೆ ಪತ್ರಿಕಾ ಮಾಲೀಕರಿಗೆ ಪೆಪ್ಸಿಯ ಹಣ ಬೇಕೆ ಹೊರತು ಬೆಂಗಳೂರಿಗೆ ಶೇ. 30ರಷ್ಟು ಕುಡಿಯುವ ನೀರನ್ನು ನೀಡುತ್ತಿರುವ ನದಿಗಳ ಸ್ವಚ್ಛತೆ ಅಲ್ಲ!
ಇತ್ತೀಚೆಗೆ ಎಲ್ಲ ಪತ್ರಿಕೆಗಳಲ್ಲಿ ವಾಚಕರು “ಪ್ರತಿಭಟನೆಗಳಿಂದಾಗಿ ಸಾರ್ವಜನಿಕರಾದ ನಮಗೆ ಅನಾನುಕೂಲವಾಗುತ್ತಿದೆ” ಎಂದು ಬರೆದಿರುವ ಪತ್ರಗಳನ್ನೇ ಗಮನಿಸಿ. ಈ ವಾಚಕರಿಗೆ ಬೀದಿಗೆ ಬಿದ್ದು ಪ್ರತಿಭಟಿಸುತ್ತಿರುವವರೂ ಸಾರ್ವಜನಿಕರು ಎಂದು ಯಾಕೆ ಅರ್ಥವಾಗುತ್ತಿಲ್ಲ; ಅಥವಾ ಪತ್ರಿಕೆಗಳು ಯಾಕೆ ಅರ್ಥ ಮಾಡಿಕೊಡುತ್ತಿಲ್ಲ. ಇವತ್ತು ಅಂದರೆ ಭಾನುವಾರದ ಪತ್ರಿಕೆಗಳು ಕೆಎಸ್‍ಆರ್‍ಟಿಸಿ ಹಾಗೂ ಬಿಎಂಟಿಸಿ ಕಾರ್ಮಿಕರಿಂದ ನಡೆದ ರ್ಯಾಲಿಯಿಂದಾಗಿ ಎಲ್ಲೆಡೆ ಸಂಚಾರ ಅಸ್ತವ್ಯಸ್ಥ ಗೊಂಡಿತು ಎಂದೇ ವರದಿ ಮಾಡಿವೆ. ಆದರೆ ಅದೇ ಕೆಎಸ್‍ಆರ್‍ಟಿಸಿ ಮತ್ತು ಬಿಎಂಟಿಸಿಗಳಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ ಹಾಗೂ ಕಾರ್ಮಿಕರ ಶೋಷಣೆ ಬಗ್ಗೆ ಮಾತ್ರ ಯಾರೂ ಬರೆದಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...