Homeಅಂಕಣಗಳುಪತ್ರಿಕಾ ವೃತ್ತಿಧರ್ಮ, `ಉದ್ಯಮ’ವಾದಾಗ.....

ಪತ್ರಿಕಾ ವೃತ್ತಿಧರ್ಮ, `ಉದ್ಯಮ’ವಾದಾಗ…..

- Advertisement -
- Advertisement -

– ಗೌರಿ ಲಂಕೇಶ್
ಆಗಸ್ಟ್ 10, 2005 (`ಕಂಡಹಾಗೆ’ ಸಂಪಾದಕೀಯದಿಂದ) |

ಪತ್ರಕರ್ತೆಯಾಗಿ ನನ್ನ 22 ವರ್ಷದ ಅನುಭವದಲ್ಲಿ ಪತ್ರಿಕೋದ್ಯಮ ಹೊಸ ಆಯಾಮಗಳನ್ನು ಪಡೆಯುತ್ತಿರುವುದನ್ನು ಕಂಡಿದ್ದೇನೆ. ಇಂದು ನನ್ನ ಸಹೋದ್ಯೋಗಿ ಮಿತ್ರರು ಮುಂಬೈ, ದೆಹಲಿ, ಅಮೆರಿಕಾ, ಇಂಗ್ಲೆಂಡ್‍ಗಳಲ್ಲಿ ಕೆಲಸ ನಿರ್ವಹಿಸುತ್ತಿದ್ದಾರೆ. ವಿದೇಶಗಳಲ್ಲಿ ಕಾರ್ಯನಿರ್ವಹಿಸುತ್ತಿರುವವರು ತಿಂಗಳಿಗೆ ಮೂರು ಲಕ್ಷ ರೂಪಾಯಿ ಪಡೆಯುತ್ತಿದ್ದರೆ, ಮುಂಬೈ ಮತ್ತು ದೆಹಲಿಯಲ್ಲಿರುವವರು ಐವತ್ತು ಸಾವಿರದಷ್ಟು ಸಂಬಳ ಪಡೆಯುತ್ತಿದ್ದಾರೆ.
ಪತ್ರಿಕಾ ವೃತ್ತಿ ಎಂಬುದು ಪತ್ರಿಕೋದ್ಯಮವಾಗಿ ಪರಿವರ್ತನೆಗೊಂಡಿರುವುದರ ಪರಿಣಾಮ ಇದು. ಇವತ್ತು ದೊಡ್ಡ ಉದ್ಯಮಪತಿಗಳು, ಶ್ರೀಮಂತ ರಾಜಕಾರಣಿಗಳು ಪತ್ರಿಕಾ ಮಾಲಿಕರಾಗಿದ್ದಾರೆ. ಇದರಿಂದಾಗಿ ಬಹುತೇಕ ಎಲ್ಲಾ ಪತ್ರಿಕೆಗಳೂ ಕಾಪೆರ್ರೇಟ್ ಮತ್ತು ರಾಜಕಾರಣಿಗಳ ಹಂಗಿನಲ್ಲಿರುತ್ತವೆ. ಅಂತಹವರಿಂದ ಸಮಾಜಿಕ ಬದ್ಧತೆ, ಜನಪರ ಕಾಳಜಿಗಳನ್ನು ನಿರೀಕ್ಷಿಸುವುದು ಅಸಾಧ್ಯ. ಇದಕ್ಕೆ ಒಂದು ಉದಾಹರಣೆ ಕೊಡಬಹುದು. ಬೆಂಗಳೂರು ಜಿಲ್ಲೆಯ ದೊಡ್ಡಬಳ್ಳಾಪುರ, ನೆಲಮಂಗಲ ಸುತ್ತಮುತ್ತ ಅರ್ಕಾವತಿ, ದಕ್ಷಿಣ ಪಿನಾಕಿನಿ ನದಿಗಳಿವೆ. ಇವುಗಳ ಅಂತರ್ಜಲ ಬತ್ತಿ ಹೋಗುತ್ತಿರುವಾಗಲೇ ಖಾಸಗಿ ಕಾರ್ಖಾನೆಗಳು ತಮ್ಮtoxic wasteಗಳನ್ನು ಈ ನದಿಗಳಿಗೇ ಹರಿಸಿ ಜಲಮಾಲಿನ್ಯ ಮಾಡುತ್ತಿವೆ. ಇದರ ವಿರುದ್ಧ ಹೋರಾಟ ಪ್ರಾರಂಭಿಸಿರುವ ವಕೀಲ ಜಯರಾಂ ಮತ್ತು ಸ್ನೇಹಿತರು ಪತ್ರಕರ್ತರನ್ನು ಕರೆದು ಕೊಂಡು ಪೆಪ್ಸಿಯ ಘಟಕವೊಂದು ಹೀಗೆ ಜಲಮಾಲಿನ್ಯ ಮಾಡುತ್ತಿರುವುದನ್ನು ತೋರಿಸಿ ದರು. ಆದರೆ ಅದು ಯಾವ ಪತ್ರಿಕೆಗಳಲ್ಲೂ ಪ್ರಕಟವಾಗಲಿಲ್ಲ. ಇದಕ್ಕೆ ಕಾರಣವೇನೆಂದು ಜಯರಾಂರವರು ವಿಚಾರಿಸಿದಾಗ ಪತ್ರಿಕೆಯ ಮಾಲೀಕರು ಪೆಪ್ಸಿಯ ಜಾಹೀರಾತುಗಳು ಸಿಗುವುದಿಲ್ಲವೆಂದು ಹೆದರಿ ಅದನ್ನು ಪ್ರಕಟಿಸದಿರಲು ನಿರ್ಧರಿಸಿದ್ದು ಗೊತ್ತಾಯಿತು. ಅಂದರೆ ಪತ್ರಿಕಾ ಮಾಲೀಕರಿಗೆ ಪೆಪ್ಸಿಯ ಹಣ ಬೇಕೆ ಹೊರತು ಬೆಂಗಳೂರಿಗೆ ಶೇ. 30ರಷ್ಟು ಕುಡಿಯುವ ನೀರನ್ನು ನೀಡುತ್ತಿರುವ ನದಿಗಳ ಸ್ವಚ್ಛತೆ ಅಲ್ಲ!
ಇತ್ತೀಚೆಗೆ ಎಲ್ಲ ಪತ್ರಿಕೆಗಳಲ್ಲಿ ವಾಚಕರು “ಪ್ರತಿಭಟನೆಗಳಿಂದಾಗಿ ಸಾರ್ವಜನಿಕರಾದ ನಮಗೆ ಅನಾನುಕೂಲವಾಗುತ್ತಿದೆ” ಎಂದು ಬರೆದಿರುವ ಪತ್ರಗಳನ್ನೇ ಗಮನಿಸಿ. ಈ ವಾಚಕರಿಗೆ ಬೀದಿಗೆ ಬಿದ್ದು ಪ್ರತಿಭಟಿಸುತ್ತಿರುವವರೂ ಸಾರ್ವಜನಿಕರು ಎಂದು ಯಾಕೆ ಅರ್ಥವಾಗುತ್ತಿಲ್ಲ; ಅಥವಾ ಪತ್ರಿಕೆಗಳು ಯಾಕೆ ಅರ್ಥ ಮಾಡಿಕೊಡುತ್ತಿಲ್ಲ. ಇವತ್ತು ಅಂದರೆ ಭಾನುವಾರದ ಪತ್ರಿಕೆಗಳು ಕೆಎಸ್‍ಆರ್‍ಟಿಸಿ ಹಾಗೂ ಬಿಎಂಟಿಸಿ ಕಾರ್ಮಿಕರಿಂದ ನಡೆದ ರ್ಯಾಲಿಯಿಂದಾಗಿ ಎಲ್ಲೆಡೆ ಸಂಚಾರ ಅಸ್ತವ್ಯಸ್ಥ ಗೊಂಡಿತು ಎಂದೇ ವರದಿ ಮಾಡಿವೆ. ಆದರೆ ಅದೇ ಕೆಎಸ್‍ಆರ್‍ಟಿಸಿ ಮತ್ತು ಬಿಎಂಟಿಸಿಗಳಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ ಹಾಗೂ ಕಾರ್ಮಿಕರ ಶೋಷಣೆ ಬಗ್ಗೆ ಮಾತ್ರ ಯಾರೂ ಬರೆದಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...