Homeಅಂಕಣಗಳುಪತ್ರಿಕಾ ವೃತ್ತಿಧರ್ಮ, `ಉದ್ಯಮ’ವಾದಾಗ.....

ಪತ್ರಿಕಾ ವೃತ್ತಿಧರ್ಮ, `ಉದ್ಯಮ’ವಾದಾಗ…..

- Advertisement -
- Advertisement -

– ಗೌರಿ ಲಂಕೇಶ್
ಆಗಸ್ಟ್ 10, 2005 (`ಕಂಡಹಾಗೆ’ ಸಂಪಾದಕೀಯದಿಂದ) |

ಪತ್ರಕರ್ತೆಯಾಗಿ ನನ್ನ 22 ವರ್ಷದ ಅನುಭವದಲ್ಲಿ ಪತ್ರಿಕೋದ್ಯಮ ಹೊಸ ಆಯಾಮಗಳನ್ನು ಪಡೆಯುತ್ತಿರುವುದನ್ನು ಕಂಡಿದ್ದೇನೆ. ಇಂದು ನನ್ನ ಸಹೋದ್ಯೋಗಿ ಮಿತ್ರರು ಮುಂಬೈ, ದೆಹಲಿ, ಅಮೆರಿಕಾ, ಇಂಗ್ಲೆಂಡ್‍ಗಳಲ್ಲಿ ಕೆಲಸ ನಿರ್ವಹಿಸುತ್ತಿದ್ದಾರೆ. ವಿದೇಶಗಳಲ್ಲಿ ಕಾರ್ಯನಿರ್ವಹಿಸುತ್ತಿರುವವರು ತಿಂಗಳಿಗೆ ಮೂರು ಲಕ್ಷ ರೂಪಾಯಿ ಪಡೆಯುತ್ತಿದ್ದರೆ, ಮುಂಬೈ ಮತ್ತು ದೆಹಲಿಯಲ್ಲಿರುವವರು ಐವತ್ತು ಸಾವಿರದಷ್ಟು ಸಂಬಳ ಪಡೆಯುತ್ತಿದ್ದಾರೆ.
ಪತ್ರಿಕಾ ವೃತ್ತಿ ಎಂಬುದು ಪತ್ರಿಕೋದ್ಯಮವಾಗಿ ಪರಿವರ್ತನೆಗೊಂಡಿರುವುದರ ಪರಿಣಾಮ ಇದು. ಇವತ್ತು ದೊಡ್ಡ ಉದ್ಯಮಪತಿಗಳು, ಶ್ರೀಮಂತ ರಾಜಕಾರಣಿಗಳು ಪತ್ರಿಕಾ ಮಾಲಿಕರಾಗಿದ್ದಾರೆ. ಇದರಿಂದಾಗಿ ಬಹುತೇಕ ಎಲ್ಲಾ ಪತ್ರಿಕೆಗಳೂ ಕಾಪೆರ್ರೇಟ್ ಮತ್ತು ರಾಜಕಾರಣಿಗಳ ಹಂಗಿನಲ್ಲಿರುತ್ತವೆ. ಅಂತಹವರಿಂದ ಸಮಾಜಿಕ ಬದ್ಧತೆ, ಜನಪರ ಕಾಳಜಿಗಳನ್ನು ನಿರೀಕ್ಷಿಸುವುದು ಅಸಾಧ್ಯ. ಇದಕ್ಕೆ ಒಂದು ಉದಾಹರಣೆ ಕೊಡಬಹುದು. ಬೆಂಗಳೂರು ಜಿಲ್ಲೆಯ ದೊಡ್ಡಬಳ್ಳಾಪುರ, ನೆಲಮಂಗಲ ಸುತ್ತಮುತ್ತ ಅರ್ಕಾವತಿ, ದಕ್ಷಿಣ ಪಿನಾಕಿನಿ ನದಿಗಳಿವೆ. ಇವುಗಳ ಅಂತರ್ಜಲ ಬತ್ತಿ ಹೋಗುತ್ತಿರುವಾಗಲೇ ಖಾಸಗಿ ಕಾರ್ಖಾನೆಗಳು ತಮ್ಮtoxic wasteಗಳನ್ನು ಈ ನದಿಗಳಿಗೇ ಹರಿಸಿ ಜಲಮಾಲಿನ್ಯ ಮಾಡುತ್ತಿವೆ. ಇದರ ವಿರುದ್ಧ ಹೋರಾಟ ಪ್ರಾರಂಭಿಸಿರುವ ವಕೀಲ ಜಯರಾಂ ಮತ್ತು ಸ್ನೇಹಿತರು ಪತ್ರಕರ್ತರನ್ನು ಕರೆದು ಕೊಂಡು ಪೆಪ್ಸಿಯ ಘಟಕವೊಂದು ಹೀಗೆ ಜಲಮಾಲಿನ್ಯ ಮಾಡುತ್ತಿರುವುದನ್ನು ತೋರಿಸಿ ದರು. ಆದರೆ ಅದು ಯಾವ ಪತ್ರಿಕೆಗಳಲ್ಲೂ ಪ್ರಕಟವಾಗಲಿಲ್ಲ. ಇದಕ್ಕೆ ಕಾರಣವೇನೆಂದು ಜಯರಾಂರವರು ವಿಚಾರಿಸಿದಾಗ ಪತ್ರಿಕೆಯ ಮಾಲೀಕರು ಪೆಪ್ಸಿಯ ಜಾಹೀರಾತುಗಳು ಸಿಗುವುದಿಲ್ಲವೆಂದು ಹೆದರಿ ಅದನ್ನು ಪ್ರಕಟಿಸದಿರಲು ನಿರ್ಧರಿಸಿದ್ದು ಗೊತ್ತಾಯಿತು. ಅಂದರೆ ಪತ್ರಿಕಾ ಮಾಲೀಕರಿಗೆ ಪೆಪ್ಸಿಯ ಹಣ ಬೇಕೆ ಹೊರತು ಬೆಂಗಳೂರಿಗೆ ಶೇ. 30ರಷ್ಟು ಕುಡಿಯುವ ನೀರನ್ನು ನೀಡುತ್ತಿರುವ ನದಿಗಳ ಸ್ವಚ್ಛತೆ ಅಲ್ಲ!
ಇತ್ತೀಚೆಗೆ ಎಲ್ಲ ಪತ್ರಿಕೆಗಳಲ್ಲಿ ವಾಚಕರು “ಪ್ರತಿಭಟನೆಗಳಿಂದಾಗಿ ಸಾರ್ವಜನಿಕರಾದ ನಮಗೆ ಅನಾನುಕೂಲವಾಗುತ್ತಿದೆ” ಎಂದು ಬರೆದಿರುವ ಪತ್ರಗಳನ್ನೇ ಗಮನಿಸಿ. ಈ ವಾಚಕರಿಗೆ ಬೀದಿಗೆ ಬಿದ್ದು ಪ್ರತಿಭಟಿಸುತ್ತಿರುವವರೂ ಸಾರ್ವಜನಿಕರು ಎಂದು ಯಾಕೆ ಅರ್ಥವಾಗುತ್ತಿಲ್ಲ; ಅಥವಾ ಪತ್ರಿಕೆಗಳು ಯಾಕೆ ಅರ್ಥ ಮಾಡಿಕೊಡುತ್ತಿಲ್ಲ. ಇವತ್ತು ಅಂದರೆ ಭಾನುವಾರದ ಪತ್ರಿಕೆಗಳು ಕೆಎಸ್‍ಆರ್‍ಟಿಸಿ ಹಾಗೂ ಬಿಎಂಟಿಸಿ ಕಾರ್ಮಿಕರಿಂದ ನಡೆದ ರ್ಯಾಲಿಯಿಂದಾಗಿ ಎಲ್ಲೆಡೆ ಸಂಚಾರ ಅಸ್ತವ್ಯಸ್ಥ ಗೊಂಡಿತು ಎಂದೇ ವರದಿ ಮಾಡಿವೆ. ಆದರೆ ಅದೇ ಕೆಎಸ್‍ಆರ್‍ಟಿಸಿ ಮತ್ತು ಬಿಎಂಟಿಸಿಗಳಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ ಹಾಗೂ ಕಾರ್ಮಿಕರ ಶೋಷಣೆ ಬಗ್ಗೆ ಮಾತ್ರ ಯಾರೂ ಬರೆದಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...