Homeಅಂಕಣಗಳುಪತ್ರಿಕಾ ವೃತ್ತಿಧರ್ಮ, `ಉದ್ಯಮ’ವಾದಾಗ.....

ಪತ್ರಿಕಾ ವೃತ್ತಿಧರ್ಮ, `ಉದ್ಯಮ’ವಾದಾಗ…..

- Advertisement -
- Advertisement -

– ಗೌರಿ ಲಂಕೇಶ್
ಆಗಸ್ಟ್ 10, 2005 (`ಕಂಡಹಾಗೆ’ ಸಂಪಾದಕೀಯದಿಂದ) |

ಪತ್ರಕರ್ತೆಯಾಗಿ ನನ್ನ 22 ವರ್ಷದ ಅನುಭವದಲ್ಲಿ ಪತ್ರಿಕೋದ್ಯಮ ಹೊಸ ಆಯಾಮಗಳನ್ನು ಪಡೆಯುತ್ತಿರುವುದನ್ನು ಕಂಡಿದ್ದೇನೆ. ಇಂದು ನನ್ನ ಸಹೋದ್ಯೋಗಿ ಮಿತ್ರರು ಮುಂಬೈ, ದೆಹಲಿ, ಅಮೆರಿಕಾ, ಇಂಗ್ಲೆಂಡ್‍ಗಳಲ್ಲಿ ಕೆಲಸ ನಿರ್ವಹಿಸುತ್ತಿದ್ದಾರೆ. ವಿದೇಶಗಳಲ್ಲಿ ಕಾರ್ಯನಿರ್ವಹಿಸುತ್ತಿರುವವರು ತಿಂಗಳಿಗೆ ಮೂರು ಲಕ್ಷ ರೂಪಾಯಿ ಪಡೆಯುತ್ತಿದ್ದರೆ, ಮುಂಬೈ ಮತ್ತು ದೆಹಲಿಯಲ್ಲಿರುವವರು ಐವತ್ತು ಸಾವಿರದಷ್ಟು ಸಂಬಳ ಪಡೆಯುತ್ತಿದ್ದಾರೆ.
ಪತ್ರಿಕಾ ವೃತ್ತಿ ಎಂಬುದು ಪತ್ರಿಕೋದ್ಯಮವಾಗಿ ಪರಿವರ್ತನೆಗೊಂಡಿರುವುದರ ಪರಿಣಾಮ ಇದು. ಇವತ್ತು ದೊಡ್ಡ ಉದ್ಯಮಪತಿಗಳು, ಶ್ರೀಮಂತ ರಾಜಕಾರಣಿಗಳು ಪತ್ರಿಕಾ ಮಾಲಿಕರಾಗಿದ್ದಾರೆ. ಇದರಿಂದಾಗಿ ಬಹುತೇಕ ಎಲ್ಲಾ ಪತ್ರಿಕೆಗಳೂ ಕಾಪೆರ್ರೇಟ್ ಮತ್ತು ರಾಜಕಾರಣಿಗಳ ಹಂಗಿನಲ್ಲಿರುತ್ತವೆ. ಅಂತಹವರಿಂದ ಸಮಾಜಿಕ ಬದ್ಧತೆ, ಜನಪರ ಕಾಳಜಿಗಳನ್ನು ನಿರೀಕ್ಷಿಸುವುದು ಅಸಾಧ್ಯ. ಇದಕ್ಕೆ ಒಂದು ಉದಾಹರಣೆ ಕೊಡಬಹುದು. ಬೆಂಗಳೂರು ಜಿಲ್ಲೆಯ ದೊಡ್ಡಬಳ್ಳಾಪುರ, ನೆಲಮಂಗಲ ಸುತ್ತಮುತ್ತ ಅರ್ಕಾವತಿ, ದಕ್ಷಿಣ ಪಿನಾಕಿನಿ ನದಿಗಳಿವೆ. ಇವುಗಳ ಅಂತರ್ಜಲ ಬತ್ತಿ ಹೋಗುತ್ತಿರುವಾಗಲೇ ಖಾಸಗಿ ಕಾರ್ಖಾನೆಗಳು ತಮ್ಮtoxic wasteಗಳನ್ನು ಈ ನದಿಗಳಿಗೇ ಹರಿಸಿ ಜಲಮಾಲಿನ್ಯ ಮಾಡುತ್ತಿವೆ. ಇದರ ವಿರುದ್ಧ ಹೋರಾಟ ಪ್ರಾರಂಭಿಸಿರುವ ವಕೀಲ ಜಯರಾಂ ಮತ್ತು ಸ್ನೇಹಿತರು ಪತ್ರಕರ್ತರನ್ನು ಕರೆದು ಕೊಂಡು ಪೆಪ್ಸಿಯ ಘಟಕವೊಂದು ಹೀಗೆ ಜಲಮಾಲಿನ್ಯ ಮಾಡುತ್ತಿರುವುದನ್ನು ತೋರಿಸಿ ದರು. ಆದರೆ ಅದು ಯಾವ ಪತ್ರಿಕೆಗಳಲ್ಲೂ ಪ್ರಕಟವಾಗಲಿಲ್ಲ. ಇದಕ್ಕೆ ಕಾರಣವೇನೆಂದು ಜಯರಾಂರವರು ವಿಚಾರಿಸಿದಾಗ ಪತ್ರಿಕೆಯ ಮಾಲೀಕರು ಪೆಪ್ಸಿಯ ಜಾಹೀರಾತುಗಳು ಸಿಗುವುದಿಲ್ಲವೆಂದು ಹೆದರಿ ಅದನ್ನು ಪ್ರಕಟಿಸದಿರಲು ನಿರ್ಧರಿಸಿದ್ದು ಗೊತ್ತಾಯಿತು. ಅಂದರೆ ಪತ್ರಿಕಾ ಮಾಲೀಕರಿಗೆ ಪೆಪ್ಸಿಯ ಹಣ ಬೇಕೆ ಹೊರತು ಬೆಂಗಳೂರಿಗೆ ಶೇ. 30ರಷ್ಟು ಕುಡಿಯುವ ನೀರನ್ನು ನೀಡುತ್ತಿರುವ ನದಿಗಳ ಸ್ವಚ್ಛತೆ ಅಲ್ಲ!
ಇತ್ತೀಚೆಗೆ ಎಲ್ಲ ಪತ್ರಿಕೆಗಳಲ್ಲಿ ವಾಚಕರು “ಪ್ರತಿಭಟನೆಗಳಿಂದಾಗಿ ಸಾರ್ವಜನಿಕರಾದ ನಮಗೆ ಅನಾನುಕೂಲವಾಗುತ್ತಿದೆ” ಎಂದು ಬರೆದಿರುವ ಪತ್ರಗಳನ್ನೇ ಗಮನಿಸಿ. ಈ ವಾಚಕರಿಗೆ ಬೀದಿಗೆ ಬಿದ್ದು ಪ್ರತಿಭಟಿಸುತ್ತಿರುವವರೂ ಸಾರ್ವಜನಿಕರು ಎಂದು ಯಾಕೆ ಅರ್ಥವಾಗುತ್ತಿಲ್ಲ; ಅಥವಾ ಪತ್ರಿಕೆಗಳು ಯಾಕೆ ಅರ್ಥ ಮಾಡಿಕೊಡುತ್ತಿಲ್ಲ. ಇವತ್ತು ಅಂದರೆ ಭಾನುವಾರದ ಪತ್ರಿಕೆಗಳು ಕೆಎಸ್‍ಆರ್‍ಟಿಸಿ ಹಾಗೂ ಬಿಎಂಟಿಸಿ ಕಾರ್ಮಿಕರಿಂದ ನಡೆದ ರ್ಯಾಲಿಯಿಂದಾಗಿ ಎಲ್ಲೆಡೆ ಸಂಚಾರ ಅಸ್ತವ್ಯಸ್ಥ ಗೊಂಡಿತು ಎಂದೇ ವರದಿ ಮಾಡಿವೆ. ಆದರೆ ಅದೇ ಕೆಎಸ್‍ಆರ್‍ಟಿಸಿ ಮತ್ತು ಬಿಎಂಟಿಸಿಗಳಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ ಹಾಗೂ ಕಾರ್ಮಿಕರ ಶೋಷಣೆ ಬಗ್ಗೆ ಮಾತ್ರ ಯಾರೂ ಬರೆದಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...