Homeಅಂಕಣಗಳುತಾಯಿ ಮತ್ತು ಪಿಶಾಚಿ: ಒಂದು ಸಿನಿಮಾ ಕಥೆ...

ತಾಯಿ ಮತ್ತು ಪಿಶಾಚಿ: ಒಂದು ಸಿನಿಮಾ ಕಥೆ…

- Advertisement -
- Advertisement -

 ಗೌರಿ ಲಂಕೇಶ್
14 ಮಾರ್ಚ್, 2007 (`ಕಂಡಹಾಗೆ’ ಸಂಪಾದಕೀಯದಿಂದ)
ತಮ್ಮ ತಂದೆಯ ಹೆಸರಲ್ಲಿ ನೀಡಲಾಗುವ `ಲಂಕೇಶ್ ಚಿತ್ರ ಪ್ರಶಸ್ತಿಗೆ ಆಯ್ಕೆಯಾಗಿದ್ದ ಸಿನಿಮಾ ಕುರಿತು…. |

ಆಕೆಯನ್ನು ಊರಿನವರೆಲ್ಲ ಶವಭಕ್ಷಕ ಪಿಶಾಚಿ ಎಂದು ಕರೆಯುತ್ತಾರೆ. ಅವಳ ಕಣ್ಣು ತಮ್ಮ ಮಕ್ಕಳ ಮೇಲೆ ಬೀಳಬಾರದೆಂದು ದೇವರಲ್ಲಿ ಪ್ರಾರ್ಥಿಸುತ್ತಾರೆ. ಊರಿನಿಂದ ದೂರದಲ್ಲಿ ಏಕಾಂಗಿಯಾಗಿ, ಅರೆಹುಚ್ಚಿಯಾಗಿ ಆಕೆ ಜೀವಿಸುತ್ತಿದ್ದಾಳೆ.
ಒಮ್ಮೆ ಹತ್ತು ವರ್ಷದ ಹುಡುಗನನ್ನು ಆಕೆ ನೋಡುತ್ತಾಳೆ. ಆಕೆಯ ಕಣ್ಣು ತನ್ನ ಮೇಲೆ ಬಿತ್ತೆಂದು ಹೆದರುವ ಹುಡುಗ ತನ್ನ ತಂದೆಗೆ ಹೇಳುತ್ತಾನೆ. ಆದರೆ ತಂದೆ “ಆಕೆ ನಿನಗೆ ಏನನ್ನೂ ಮಾಡುವುದಿಲ್ಲ, ಹೆದರಬೇಡ” ಅಂತ ಹೇಳುತ್ತಾನೆ. “ಯಾಕೆ ನನಗೇನೂ ಆಗುವುದಿಲ್ಲ. ಆಕೆ ಮಕ್ಕಳ ಶವಗಳನ್ನು ತಿನ್ನುವ ಪಿಶಾಚಿ ಅಲ್ಲವೇ?” ಎಂದು ಕೇಳಿದಾಗ “ಯಾಕೆ ನಿನಗೇನು ಮಾಡುವುದಿಲ್ಲ ಯಾಕೆಂದರೆ ಆಕೆ ನಿನ್ನ ತಾಯಿ, ಅದಕ್ಕೆ” ಅಂತ ಉತ್ತರಿಸುತ್ತಾನೆ. ಆ ಹುಡುಗನಿಗೆ ಶಾಕ್ ಆಗುತ್ತೆ. ತಂದೆ ಹಳೆಯ ಕತೆ ಹೇಳುತ್ತಾ ಹೋದಂತೆ ನಮ್ಮ ಸಮಾಜದಲ್ಲಿನ ಜಾತಿ ವ್ಯವಸ್ಥೆ, ಮೂಢನಂಬಿಕೆ, ಮಹಿಳೆಯರ ಶೋಷಣೆ ಎಲ್ಲವೂ ಅನಾವರಣಗೊಳ್ಳುತ್ತಾ ಹೋಗುತ್ತವೆ.
ಆಕೆಯ ಹೆಸರು ಚಂಡಿ. ಸುಂದರಿಯೂ, ದಿಟ್ಟೆಯೂಆದ ಚಂಡಿ ಊರಿನ ಸ್ಮಶಾನ ಕಾಯುವವನ ಏಕೈಕ ಪುತ್ರಿ. ತಮಗದು ಸತ್ಯ ಹರಿಶ್ಚಂದ್ರನಿಂದಲೇ ಬಳುವಳಿಯಾಗಿ ಬಂದ ದೈವಕಾರ್ಯವೆಂದು ನಂಬಿದವಳು. ಈ ದಲಿತ ಮಹಿಳೆ ನೋಡಿಕೊಳ್ಳುತ್ತಿದ್ದುದು ಮಕ್ಕಳ ಸ್ಮಶಾನವನ್ನು. ಓದು ಬರಹ ಬಲ್ಲ, ಸರ್ಕಾರಿ ನೌಕರನೂ ಆಗಿರುವ ನರಸುಗೆ ಚಂಡಿ ಮೇಲೆ ಪ್ರೇಮಾಂಕುರವಾಗಿ ಮದುವೆಯಾಗುತ್ತಾನೆ. ಒಂದು ಗಂಡು ಮಗುವೂ ಜನಿಸುತ್ತದೆ.
ಚಂಡಿಯ ಸಮಸ್ಯೆಗಳು ಆರಂಭವಾಗುವುದೇ ಅಲ್ಲಿಂದ. ಹಸುಗೂಸಿನ ತಾಯಿಯಾಗಿ, ಮಕ್ಕಳ ಶವಗಳನ್ನು ಹೂಳುವುದು ಆಕೆಗೆ ಅಸಾಧ್ಯವಾಗುತ್ತದೆ. ತನ್ನ ಮಗುವನ್ನೇ ಹೂಳುತ್ತಿರುವನೇ ಎಂಬ ಭ್ರಮೆ ಕಾಡುತ್ತದೆ. ಈ ವೃತ್ತಿ ಇನ್ನು ತನಗೆ ಬೇಕಿಲ್ಲ ಅನ್ನಿಸುತ್ತೆ. ಆದರೆ ಇದು ವಂಶಪಾರಂಪರ್ಯ ದೇವರ ಕಾರ್ಯ; ತ್ಯಜಿಸುವುದಾದರೂ ಹೇಗೆ? ಈ ತಳಮಳವನ್ನು ಗಂಡನೊಂದಿಗೆ ಹಂಚಿಕೊಳ್ಳಲು ಯತ್ನಿಸಿದರೆ, ಅವನೂ ಕಿವಿಗೊಡುವುದಿಲ್ಲ.
ಈ ಮಧ್ಯೆ ಚಂಡಿ ತುಂಬಾ ಪ್ರೀತಿಸುತ್ತಿದ್ದ ಸಂಬಂಧಿಕರ ಮಗಳನ್ನು ಚಂಡಿಯೇ ಕೊಂದಳೆಂದೂ, ಆ ಬಾಲಕಿಯ ಶವಕ್ಕೆ ತನ್ನ ಎದೆಯಿಂದ ತೊಟ್ಟಿಕ್ಕುತ್ತಿದ್ದ ಹಾಲನ್ನು ಕುಡಿಸಿದಳೆಂದೂ ಜನ ಆರೋಪಿಸುತ್ತಾರೆ. ಆಕೆಗೆ ಭೂತ ಹಿಡಿದಿದೆ ಎಂದೂ, ಆಕೆ ಮಕ್ಕಳನ್ನು ಜೀವಂತ ಭಕ್ಷಿಸು ತ್ತಾಳೆಂದೂ ಸುಳ್ಳುಗಳು ಊರಲ್ಲಿ ಹಬ್ಬುತ್ತವೆ. “ನಾನು ಹಸಿ ಬಾಣಂತಿ. ನನ್ನ ಮಗುವಿಗೆ ಕುಡಿಸಬೇಕಿರುವ ಹಾಲನ್ನು ಮಕ್ಕಳ ಶವಗಳಿಗೆ ಯಾಕೆ ನೀಡಲಿ? ಯಾರಿಗೂ ನೋವು ಕೂಡ ಮಾಡದ ನಾನು ಹಸುಗೂಸುಗಳನ್ನೇಗೆ ಬಲಿ ಪಡೆಯಲಿ” ಎಂದು ಚಂಡಿ ಗೋಗರೆದರು ಜನ ಕೇಳುವುದಿಲ್ಲ. ನರಸು ಕೂಡ ಹೆಂಡತಿಯ ಬಗ್ಗೆ ಸಂಶಯಪಡಲಾರಂಭಿಸುತ್ತಾನೆ.
ಒಂದು ರಾತ್ರಿ ಚಂಡಿ ಸ್ಮಶಾನದಲ್ಲಿದ್ದಾಗ ಅಲ್ಲಿಗೆ ಆಗಮಿಸುವ ಹಳ್ಳಿಯ ಜನ ಆಕೆ ಶವಗಳನ್ನು ಹೊರತೆಗೆದು ತಿನ್ನುತ್ತಿದ್ದಳು ಎಂದು ಆರೋಪಿಸಿ `ಶವಭಕ್ಷಕ ಪಿಶಾಚಿ’ ಎಂದು ಕೂಗಲಾರಂಭಿಸುತ್ತಾರೆ. “ಇಲ್ಲಿ ನರಿಗಳು ಬಂದು ಗುಂಡಿಯನ್ನು ತೋಡಿದ್ದವು. ಅವುಗಳನ್ನು ಓಡಿಸುತ್ತಿದ್ದೆ. ನರಸು ನೀನಾದರೂ ಹೇಳು ನಾನು ಪಿಶಾಚಿ ಅಲ್ಲ” ಎಂದು ಚಂಡಿ ಬೇಡುತ್ತಾಳೆ. ಆದರೆ ಅವಳಿಂದಾಗಿ ಸಮಾಜದಲ್ಲಿ ತನಗಿದ್ದ ಕಿಂಚಿತ್ತು ಮರ್ಯಾದೆಯೂ ಕರಗುತ್ತದೆ ಎಂದು ಭಾವಿಸುವ ನಸ್ರು “ನೀನು ಪಿಶಾಚಿ” ಎಂದು ಹೇಳಿ ತನ್ನ ಹೆಂಡತಿಯನ್ನೇ ಜೀವಂತ ನರಕಕ್ಕೆ ದೂಕುತ್ತಾನೆ.
ಅಂದಿನಿಂದ ಚಂಡಿ ಯಾರಿಗೂ ಬೇಡವಾದ ಸಾಮಾಜಿಕ ಬಹಿಷ್ಕಾರದ ಬದುಕು ಸಾಗಿಸುತ್ತಿದ್ದಾಳೆ.
ತನ್ನ ತಾಯಿ ಕಥೆ ಕೇಳಿದ ಹುಡುಗ ಮರುಗುತ್ತಾನೆ, ಸಂಕಟಪಡುತ್ತಾನೆ. ಅಮ್ಮನಿಗೆ ಹಪಹಪಿಸುತ್ತಾನೆ. ಆದರೆ ಈ ಸಮಾಜ ಆಕೆಯನ್ನು ಅವನಿಂದ ಬಹಳ ದೂರಕ್ಕೆ ತಳ್ಳಿಯಾಗಿರುತ್ತೆ. ಅದೊಮ್ಮೆ ರೈಲಿನ ಹಳಿ ಮೇಲೆ ಢಕಾಯಿತರು ಮರಗಳನ್ನು ಪೇರಿಸಿಟ್ಟು ಟ್ರೈನಿನಲ್ಲಿರುವ ಹಣವನ್ನು ದೋಚಲು ಸಜ್ಜಾಗಿರುತ್ತಾರೆ. ಅಕಸ್ಮಾತ್ತಾಗಿ ಅಲ್ಲಿಗೆ ಬರುವ `ಶವಭಕ್ಷಕ ಪಿಶಾಚಿ’ ಚಂಡಿಯನ್ನು ಕಂಡು ಅವರೆಲ್ಲ ಓಡಿ ಹೋಗುತ್ತಾರೆ. ಅಪಘಾತ ತಪ್ಪಿಸಲು ಪೇರಿಸಿಟ್ಟ ದಿಮ್ಮಿಗಳನ್ನು ಆಕೆ ಸರಿಸುತ್ತಿರುವಾಗ ರೈಲು ಆಗಮಿಸುತ್ತದೆ. ಟ್ರೈನ್ ಚಾಲಕನಿಗೆ ಗಾಡಿಯನ್ನು ನಿಲ್ಲಿಸುವಂತೆ ಸೂಚಿಸಲು ಆಕೆ ಟ್ರೈನಿನತ್ತ ಓಡುತ್ತಾಳೆ. ಆದರೆ ಚಾಲಕನಿಗೆ ಆಕೆ ಕಾಣದೆ ಚಂಡಿ ಟ್ರೈನಿನಡಿ ಸಿಕ್ಕು ಸತ್ತು ಹೋಗುತ್ತಾಳೆ.
ಢಕಾಯಿತರಿಂದ ಟ್ರೈನನ್ನು ರಕ್ಷಿಸಿದ್ದಕ್ಕೆ ಸರ್ಕಾರ ಅವಳ ಸಂಸಾರಕ್ಕೆ ಪರಿಹಾರ ಧನ ನೀಡಲು ಮುಂದಾಗುತ್ತದೆ. “ಈ ಊರಿನಲ್ಲಿ ಅವಳ ಸಂಬಂಧಿಕರು ಯಾರಾದರೂ ಇದ್ದಾರೆಯೇ?” ಎಂದು ಅಧಿಕಾರಿ ಕೇಳಿದಾಗ, ಎಲ್ಲರೂ ಸುಮ್ಮನಿರುತ್ತಾರೆ. ಹುಡುಗ ತನ್ನ ತಂದೆಯತ್ತ ನೋಡುತ್ತಾನೆ; ಸಾವಿನಲ್ಲಾದರೂ ಆಕೆ ತನ್ನ ಹೆಂಡತಿಯಾಗಿದ್ದಳು ಎಂದು ಒಪ್ಪಿಕೊಳ್ಳಲಿ ತನ್ನ ತಂದೆ ಎಂಬ ಆಶೆಯಿಂದ. ಆದರೆ ನರಸು ಕೂಡ ತುಟಿಪಿಟಿಕ್ ಅನ್ನುವುದಿಲ್ಲ. ಕೊನೆಗೆ ಹುಡುಗನೇ ಬಾಯಿಬಿಟ್ಟು ಕೂಗುತ್ತಾನೆ “ಆಕೆ ನನ್ನ ತಾಯಿ”
ಇದು `ಮಾತಿ ಮಾಯ್’ (ನನ್ನ ತಾಯಿ) ಎಂಬ ಮರಾಠಿ ಚಿತ್ರದ ಕತೆ. ಇದು ಪ್ರಖ್ಯಾತ ಬೆಂಗಾಲಿ ಲೇಖಕಿ ಮಹಾಶ್ವೇತಾ ದೇವಿ ಅವರು ಬರೆದಿರುವ ಕತೆಯನ್ನು ಆಧರಿಸಿ ಚಿತ್ರಾ ಪಾಳೇಕರ್ ನಿರ್ದೇಶಿಸಿರುವ ಚಿತ್ರ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಾಲ್ಡಾ ನ್ಯಾಯಾಂಗ ಅಧಿಕಾರಿಗಳ ಘೇರಾವ್ ಪ್ರಕರಣದಲ್ಲಿ 17 ಜನರ ಬಂಧನ: ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ಇಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಏಳು ನ್ಯಾಯಾಂಗ ಅಧಿಕಾರಿಗಳ ಘೇರಾವ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಚುನಾವಣಾ ಅಭ್ಯರ್ಥಿ ಸೇರಿದಂತೆ ಕನಿಷ್ಠ 17 ಜನರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು...

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...