Homeಅಂಕಣಗಳುತಾಯಿ ಮತ್ತು ಪಿಶಾಚಿ: ಒಂದು ಸಿನಿಮಾ ಕಥೆ...

ತಾಯಿ ಮತ್ತು ಪಿಶಾಚಿ: ಒಂದು ಸಿನಿಮಾ ಕಥೆ…

- Advertisement -
- Advertisement -

 ಗೌರಿ ಲಂಕೇಶ್
14 ಮಾರ್ಚ್, 2007 (`ಕಂಡಹಾಗೆ’ ಸಂಪಾದಕೀಯದಿಂದ)
ತಮ್ಮ ತಂದೆಯ ಹೆಸರಲ್ಲಿ ನೀಡಲಾಗುವ `ಲಂಕೇಶ್ ಚಿತ್ರ ಪ್ರಶಸ್ತಿಗೆ ಆಯ್ಕೆಯಾಗಿದ್ದ ಸಿನಿಮಾ ಕುರಿತು…. |

ಆಕೆಯನ್ನು ಊರಿನವರೆಲ್ಲ ಶವಭಕ್ಷಕ ಪಿಶಾಚಿ ಎಂದು ಕರೆಯುತ್ತಾರೆ. ಅವಳ ಕಣ್ಣು ತಮ್ಮ ಮಕ್ಕಳ ಮೇಲೆ ಬೀಳಬಾರದೆಂದು ದೇವರಲ್ಲಿ ಪ್ರಾರ್ಥಿಸುತ್ತಾರೆ. ಊರಿನಿಂದ ದೂರದಲ್ಲಿ ಏಕಾಂಗಿಯಾಗಿ, ಅರೆಹುಚ್ಚಿಯಾಗಿ ಆಕೆ ಜೀವಿಸುತ್ತಿದ್ದಾಳೆ.
ಒಮ್ಮೆ ಹತ್ತು ವರ್ಷದ ಹುಡುಗನನ್ನು ಆಕೆ ನೋಡುತ್ತಾಳೆ. ಆಕೆಯ ಕಣ್ಣು ತನ್ನ ಮೇಲೆ ಬಿತ್ತೆಂದು ಹೆದರುವ ಹುಡುಗ ತನ್ನ ತಂದೆಗೆ ಹೇಳುತ್ತಾನೆ. ಆದರೆ ತಂದೆ “ಆಕೆ ನಿನಗೆ ಏನನ್ನೂ ಮಾಡುವುದಿಲ್ಲ, ಹೆದರಬೇಡ” ಅಂತ ಹೇಳುತ್ತಾನೆ. “ಯಾಕೆ ನನಗೇನೂ ಆಗುವುದಿಲ್ಲ. ಆಕೆ ಮಕ್ಕಳ ಶವಗಳನ್ನು ತಿನ್ನುವ ಪಿಶಾಚಿ ಅಲ್ಲವೇ?” ಎಂದು ಕೇಳಿದಾಗ “ಯಾಕೆ ನಿನಗೇನು ಮಾಡುವುದಿಲ್ಲ ಯಾಕೆಂದರೆ ಆಕೆ ನಿನ್ನ ತಾಯಿ, ಅದಕ್ಕೆ” ಅಂತ ಉತ್ತರಿಸುತ್ತಾನೆ. ಆ ಹುಡುಗನಿಗೆ ಶಾಕ್ ಆಗುತ್ತೆ. ತಂದೆ ಹಳೆಯ ಕತೆ ಹೇಳುತ್ತಾ ಹೋದಂತೆ ನಮ್ಮ ಸಮಾಜದಲ್ಲಿನ ಜಾತಿ ವ್ಯವಸ್ಥೆ, ಮೂಢನಂಬಿಕೆ, ಮಹಿಳೆಯರ ಶೋಷಣೆ ಎಲ್ಲವೂ ಅನಾವರಣಗೊಳ್ಳುತ್ತಾ ಹೋಗುತ್ತವೆ.
ಆಕೆಯ ಹೆಸರು ಚಂಡಿ. ಸುಂದರಿಯೂ, ದಿಟ್ಟೆಯೂಆದ ಚಂಡಿ ಊರಿನ ಸ್ಮಶಾನ ಕಾಯುವವನ ಏಕೈಕ ಪುತ್ರಿ. ತಮಗದು ಸತ್ಯ ಹರಿಶ್ಚಂದ್ರನಿಂದಲೇ ಬಳುವಳಿಯಾಗಿ ಬಂದ ದೈವಕಾರ್ಯವೆಂದು ನಂಬಿದವಳು. ಈ ದಲಿತ ಮಹಿಳೆ ನೋಡಿಕೊಳ್ಳುತ್ತಿದ್ದುದು ಮಕ್ಕಳ ಸ್ಮಶಾನವನ್ನು. ಓದು ಬರಹ ಬಲ್ಲ, ಸರ್ಕಾರಿ ನೌಕರನೂ ಆಗಿರುವ ನರಸುಗೆ ಚಂಡಿ ಮೇಲೆ ಪ್ರೇಮಾಂಕುರವಾಗಿ ಮದುವೆಯಾಗುತ್ತಾನೆ. ಒಂದು ಗಂಡು ಮಗುವೂ ಜನಿಸುತ್ತದೆ.
ಚಂಡಿಯ ಸಮಸ್ಯೆಗಳು ಆರಂಭವಾಗುವುದೇ ಅಲ್ಲಿಂದ. ಹಸುಗೂಸಿನ ತಾಯಿಯಾಗಿ, ಮಕ್ಕಳ ಶವಗಳನ್ನು ಹೂಳುವುದು ಆಕೆಗೆ ಅಸಾಧ್ಯವಾಗುತ್ತದೆ. ತನ್ನ ಮಗುವನ್ನೇ ಹೂಳುತ್ತಿರುವನೇ ಎಂಬ ಭ್ರಮೆ ಕಾಡುತ್ತದೆ. ಈ ವೃತ್ತಿ ಇನ್ನು ತನಗೆ ಬೇಕಿಲ್ಲ ಅನ್ನಿಸುತ್ತೆ. ಆದರೆ ಇದು ವಂಶಪಾರಂಪರ್ಯ ದೇವರ ಕಾರ್ಯ; ತ್ಯಜಿಸುವುದಾದರೂ ಹೇಗೆ? ಈ ತಳಮಳವನ್ನು ಗಂಡನೊಂದಿಗೆ ಹಂಚಿಕೊಳ್ಳಲು ಯತ್ನಿಸಿದರೆ, ಅವನೂ ಕಿವಿಗೊಡುವುದಿಲ್ಲ.
ಈ ಮಧ್ಯೆ ಚಂಡಿ ತುಂಬಾ ಪ್ರೀತಿಸುತ್ತಿದ್ದ ಸಂಬಂಧಿಕರ ಮಗಳನ್ನು ಚಂಡಿಯೇ ಕೊಂದಳೆಂದೂ, ಆ ಬಾಲಕಿಯ ಶವಕ್ಕೆ ತನ್ನ ಎದೆಯಿಂದ ತೊಟ್ಟಿಕ್ಕುತ್ತಿದ್ದ ಹಾಲನ್ನು ಕುಡಿಸಿದಳೆಂದೂ ಜನ ಆರೋಪಿಸುತ್ತಾರೆ. ಆಕೆಗೆ ಭೂತ ಹಿಡಿದಿದೆ ಎಂದೂ, ಆಕೆ ಮಕ್ಕಳನ್ನು ಜೀವಂತ ಭಕ್ಷಿಸು ತ್ತಾಳೆಂದೂ ಸುಳ್ಳುಗಳು ಊರಲ್ಲಿ ಹಬ್ಬುತ್ತವೆ. “ನಾನು ಹಸಿ ಬಾಣಂತಿ. ನನ್ನ ಮಗುವಿಗೆ ಕುಡಿಸಬೇಕಿರುವ ಹಾಲನ್ನು ಮಕ್ಕಳ ಶವಗಳಿಗೆ ಯಾಕೆ ನೀಡಲಿ? ಯಾರಿಗೂ ನೋವು ಕೂಡ ಮಾಡದ ನಾನು ಹಸುಗೂಸುಗಳನ್ನೇಗೆ ಬಲಿ ಪಡೆಯಲಿ” ಎಂದು ಚಂಡಿ ಗೋಗರೆದರು ಜನ ಕೇಳುವುದಿಲ್ಲ. ನರಸು ಕೂಡ ಹೆಂಡತಿಯ ಬಗ್ಗೆ ಸಂಶಯಪಡಲಾರಂಭಿಸುತ್ತಾನೆ.
ಒಂದು ರಾತ್ರಿ ಚಂಡಿ ಸ್ಮಶಾನದಲ್ಲಿದ್ದಾಗ ಅಲ್ಲಿಗೆ ಆಗಮಿಸುವ ಹಳ್ಳಿಯ ಜನ ಆಕೆ ಶವಗಳನ್ನು ಹೊರತೆಗೆದು ತಿನ್ನುತ್ತಿದ್ದಳು ಎಂದು ಆರೋಪಿಸಿ `ಶವಭಕ್ಷಕ ಪಿಶಾಚಿ’ ಎಂದು ಕೂಗಲಾರಂಭಿಸುತ್ತಾರೆ. “ಇಲ್ಲಿ ನರಿಗಳು ಬಂದು ಗುಂಡಿಯನ್ನು ತೋಡಿದ್ದವು. ಅವುಗಳನ್ನು ಓಡಿಸುತ್ತಿದ್ದೆ. ನರಸು ನೀನಾದರೂ ಹೇಳು ನಾನು ಪಿಶಾಚಿ ಅಲ್ಲ” ಎಂದು ಚಂಡಿ ಬೇಡುತ್ತಾಳೆ. ಆದರೆ ಅವಳಿಂದಾಗಿ ಸಮಾಜದಲ್ಲಿ ತನಗಿದ್ದ ಕಿಂಚಿತ್ತು ಮರ್ಯಾದೆಯೂ ಕರಗುತ್ತದೆ ಎಂದು ಭಾವಿಸುವ ನಸ್ರು “ನೀನು ಪಿಶಾಚಿ” ಎಂದು ಹೇಳಿ ತನ್ನ ಹೆಂಡತಿಯನ್ನೇ ಜೀವಂತ ನರಕಕ್ಕೆ ದೂಕುತ್ತಾನೆ.
ಅಂದಿನಿಂದ ಚಂಡಿ ಯಾರಿಗೂ ಬೇಡವಾದ ಸಾಮಾಜಿಕ ಬಹಿಷ್ಕಾರದ ಬದುಕು ಸಾಗಿಸುತ್ತಿದ್ದಾಳೆ.
ತನ್ನ ತಾಯಿ ಕಥೆ ಕೇಳಿದ ಹುಡುಗ ಮರುಗುತ್ತಾನೆ, ಸಂಕಟಪಡುತ್ತಾನೆ. ಅಮ್ಮನಿಗೆ ಹಪಹಪಿಸುತ್ತಾನೆ. ಆದರೆ ಈ ಸಮಾಜ ಆಕೆಯನ್ನು ಅವನಿಂದ ಬಹಳ ದೂರಕ್ಕೆ ತಳ್ಳಿಯಾಗಿರುತ್ತೆ. ಅದೊಮ್ಮೆ ರೈಲಿನ ಹಳಿ ಮೇಲೆ ಢಕಾಯಿತರು ಮರಗಳನ್ನು ಪೇರಿಸಿಟ್ಟು ಟ್ರೈನಿನಲ್ಲಿರುವ ಹಣವನ್ನು ದೋಚಲು ಸಜ್ಜಾಗಿರುತ್ತಾರೆ. ಅಕಸ್ಮಾತ್ತಾಗಿ ಅಲ್ಲಿಗೆ ಬರುವ `ಶವಭಕ್ಷಕ ಪಿಶಾಚಿ’ ಚಂಡಿಯನ್ನು ಕಂಡು ಅವರೆಲ್ಲ ಓಡಿ ಹೋಗುತ್ತಾರೆ. ಅಪಘಾತ ತಪ್ಪಿಸಲು ಪೇರಿಸಿಟ್ಟ ದಿಮ್ಮಿಗಳನ್ನು ಆಕೆ ಸರಿಸುತ್ತಿರುವಾಗ ರೈಲು ಆಗಮಿಸುತ್ತದೆ. ಟ್ರೈನ್ ಚಾಲಕನಿಗೆ ಗಾಡಿಯನ್ನು ನಿಲ್ಲಿಸುವಂತೆ ಸೂಚಿಸಲು ಆಕೆ ಟ್ರೈನಿನತ್ತ ಓಡುತ್ತಾಳೆ. ಆದರೆ ಚಾಲಕನಿಗೆ ಆಕೆ ಕಾಣದೆ ಚಂಡಿ ಟ್ರೈನಿನಡಿ ಸಿಕ್ಕು ಸತ್ತು ಹೋಗುತ್ತಾಳೆ.
ಢಕಾಯಿತರಿಂದ ಟ್ರೈನನ್ನು ರಕ್ಷಿಸಿದ್ದಕ್ಕೆ ಸರ್ಕಾರ ಅವಳ ಸಂಸಾರಕ್ಕೆ ಪರಿಹಾರ ಧನ ನೀಡಲು ಮುಂದಾಗುತ್ತದೆ. “ಈ ಊರಿನಲ್ಲಿ ಅವಳ ಸಂಬಂಧಿಕರು ಯಾರಾದರೂ ಇದ್ದಾರೆಯೇ?” ಎಂದು ಅಧಿಕಾರಿ ಕೇಳಿದಾಗ, ಎಲ್ಲರೂ ಸುಮ್ಮನಿರುತ್ತಾರೆ. ಹುಡುಗ ತನ್ನ ತಂದೆಯತ್ತ ನೋಡುತ್ತಾನೆ; ಸಾವಿನಲ್ಲಾದರೂ ಆಕೆ ತನ್ನ ಹೆಂಡತಿಯಾಗಿದ್ದಳು ಎಂದು ಒಪ್ಪಿಕೊಳ್ಳಲಿ ತನ್ನ ತಂದೆ ಎಂಬ ಆಶೆಯಿಂದ. ಆದರೆ ನರಸು ಕೂಡ ತುಟಿಪಿಟಿಕ್ ಅನ್ನುವುದಿಲ್ಲ. ಕೊನೆಗೆ ಹುಡುಗನೇ ಬಾಯಿಬಿಟ್ಟು ಕೂಗುತ್ತಾನೆ “ಆಕೆ ನನ್ನ ತಾಯಿ”
ಇದು `ಮಾತಿ ಮಾಯ್’ (ನನ್ನ ತಾಯಿ) ಎಂಬ ಮರಾಠಿ ಚಿತ್ರದ ಕತೆ. ಇದು ಪ್ರಖ್ಯಾತ ಬೆಂಗಾಲಿ ಲೇಖಕಿ ಮಹಾಶ್ವೇತಾ ದೇವಿ ಅವರು ಬರೆದಿರುವ ಕತೆಯನ್ನು ಆಧರಿಸಿ ಚಿತ್ರಾ ಪಾಳೇಕರ್ ನಿರ್ದೇಶಿಸಿರುವ ಚಿತ್ರ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...