Homeಅಂಕಣಗಳುತಾಯಿ ಮತ್ತು ಪಿಶಾಚಿ: ಒಂದು ಸಿನಿಮಾ ಕಥೆ...

ತಾಯಿ ಮತ್ತು ಪಿಶಾಚಿ: ಒಂದು ಸಿನಿಮಾ ಕಥೆ…

- Advertisement -
- Advertisement -

 ಗೌರಿ ಲಂಕೇಶ್
14 ಮಾರ್ಚ್, 2007 (`ಕಂಡಹಾಗೆ’ ಸಂಪಾದಕೀಯದಿಂದ)
ತಮ್ಮ ತಂದೆಯ ಹೆಸರಲ್ಲಿ ನೀಡಲಾಗುವ `ಲಂಕೇಶ್ ಚಿತ್ರ ಪ್ರಶಸ್ತಿಗೆ ಆಯ್ಕೆಯಾಗಿದ್ದ ಸಿನಿಮಾ ಕುರಿತು…. |

ಆಕೆಯನ್ನು ಊರಿನವರೆಲ್ಲ ಶವಭಕ್ಷಕ ಪಿಶಾಚಿ ಎಂದು ಕರೆಯುತ್ತಾರೆ. ಅವಳ ಕಣ್ಣು ತಮ್ಮ ಮಕ್ಕಳ ಮೇಲೆ ಬೀಳಬಾರದೆಂದು ದೇವರಲ್ಲಿ ಪ್ರಾರ್ಥಿಸುತ್ತಾರೆ. ಊರಿನಿಂದ ದೂರದಲ್ಲಿ ಏಕಾಂಗಿಯಾಗಿ, ಅರೆಹುಚ್ಚಿಯಾಗಿ ಆಕೆ ಜೀವಿಸುತ್ತಿದ್ದಾಳೆ.
ಒಮ್ಮೆ ಹತ್ತು ವರ್ಷದ ಹುಡುಗನನ್ನು ಆಕೆ ನೋಡುತ್ತಾಳೆ. ಆಕೆಯ ಕಣ್ಣು ತನ್ನ ಮೇಲೆ ಬಿತ್ತೆಂದು ಹೆದರುವ ಹುಡುಗ ತನ್ನ ತಂದೆಗೆ ಹೇಳುತ್ತಾನೆ. ಆದರೆ ತಂದೆ “ಆಕೆ ನಿನಗೆ ಏನನ್ನೂ ಮಾಡುವುದಿಲ್ಲ, ಹೆದರಬೇಡ” ಅಂತ ಹೇಳುತ್ತಾನೆ. “ಯಾಕೆ ನನಗೇನೂ ಆಗುವುದಿಲ್ಲ. ಆಕೆ ಮಕ್ಕಳ ಶವಗಳನ್ನು ತಿನ್ನುವ ಪಿಶಾಚಿ ಅಲ್ಲವೇ?” ಎಂದು ಕೇಳಿದಾಗ “ಯಾಕೆ ನಿನಗೇನು ಮಾಡುವುದಿಲ್ಲ ಯಾಕೆಂದರೆ ಆಕೆ ನಿನ್ನ ತಾಯಿ, ಅದಕ್ಕೆ” ಅಂತ ಉತ್ತರಿಸುತ್ತಾನೆ. ಆ ಹುಡುಗನಿಗೆ ಶಾಕ್ ಆಗುತ್ತೆ. ತಂದೆ ಹಳೆಯ ಕತೆ ಹೇಳುತ್ತಾ ಹೋದಂತೆ ನಮ್ಮ ಸಮಾಜದಲ್ಲಿನ ಜಾತಿ ವ್ಯವಸ್ಥೆ, ಮೂಢನಂಬಿಕೆ, ಮಹಿಳೆಯರ ಶೋಷಣೆ ಎಲ್ಲವೂ ಅನಾವರಣಗೊಳ್ಳುತ್ತಾ ಹೋಗುತ್ತವೆ.
ಆಕೆಯ ಹೆಸರು ಚಂಡಿ. ಸುಂದರಿಯೂ, ದಿಟ್ಟೆಯೂಆದ ಚಂಡಿ ಊರಿನ ಸ್ಮಶಾನ ಕಾಯುವವನ ಏಕೈಕ ಪುತ್ರಿ. ತಮಗದು ಸತ್ಯ ಹರಿಶ್ಚಂದ್ರನಿಂದಲೇ ಬಳುವಳಿಯಾಗಿ ಬಂದ ದೈವಕಾರ್ಯವೆಂದು ನಂಬಿದವಳು. ಈ ದಲಿತ ಮಹಿಳೆ ನೋಡಿಕೊಳ್ಳುತ್ತಿದ್ದುದು ಮಕ್ಕಳ ಸ್ಮಶಾನವನ್ನು. ಓದು ಬರಹ ಬಲ್ಲ, ಸರ್ಕಾರಿ ನೌಕರನೂ ಆಗಿರುವ ನರಸುಗೆ ಚಂಡಿ ಮೇಲೆ ಪ್ರೇಮಾಂಕುರವಾಗಿ ಮದುವೆಯಾಗುತ್ತಾನೆ. ಒಂದು ಗಂಡು ಮಗುವೂ ಜನಿಸುತ್ತದೆ.
ಚಂಡಿಯ ಸಮಸ್ಯೆಗಳು ಆರಂಭವಾಗುವುದೇ ಅಲ್ಲಿಂದ. ಹಸುಗೂಸಿನ ತಾಯಿಯಾಗಿ, ಮಕ್ಕಳ ಶವಗಳನ್ನು ಹೂಳುವುದು ಆಕೆಗೆ ಅಸಾಧ್ಯವಾಗುತ್ತದೆ. ತನ್ನ ಮಗುವನ್ನೇ ಹೂಳುತ್ತಿರುವನೇ ಎಂಬ ಭ್ರಮೆ ಕಾಡುತ್ತದೆ. ಈ ವೃತ್ತಿ ಇನ್ನು ತನಗೆ ಬೇಕಿಲ್ಲ ಅನ್ನಿಸುತ್ತೆ. ಆದರೆ ಇದು ವಂಶಪಾರಂಪರ್ಯ ದೇವರ ಕಾರ್ಯ; ತ್ಯಜಿಸುವುದಾದರೂ ಹೇಗೆ? ಈ ತಳಮಳವನ್ನು ಗಂಡನೊಂದಿಗೆ ಹಂಚಿಕೊಳ್ಳಲು ಯತ್ನಿಸಿದರೆ, ಅವನೂ ಕಿವಿಗೊಡುವುದಿಲ್ಲ.
ಈ ಮಧ್ಯೆ ಚಂಡಿ ತುಂಬಾ ಪ್ರೀತಿಸುತ್ತಿದ್ದ ಸಂಬಂಧಿಕರ ಮಗಳನ್ನು ಚಂಡಿಯೇ ಕೊಂದಳೆಂದೂ, ಆ ಬಾಲಕಿಯ ಶವಕ್ಕೆ ತನ್ನ ಎದೆಯಿಂದ ತೊಟ್ಟಿಕ್ಕುತ್ತಿದ್ದ ಹಾಲನ್ನು ಕುಡಿಸಿದಳೆಂದೂ ಜನ ಆರೋಪಿಸುತ್ತಾರೆ. ಆಕೆಗೆ ಭೂತ ಹಿಡಿದಿದೆ ಎಂದೂ, ಆಕೆ ಮಕ್ಕಳನ್ನು ಜೀವಂತ ಭಕ್ಷಿಸು ತ್ತಾಳೆಂದೂ ಸುಳ್ಳುಗಳು ಊರಲ್ಲಿ ಹಬ್ಬುತ್ತವೆ. “ನಾನು ಹಸಿ ಬಾಣಂತಿ. ನನ್ನ ಮಗುವಿಗೆ ಕುಡಿಸಬೇಕಿರುವ ಹಾಲನ್ನು ಮಕ್ಕಳ ಶವಗಳಿಗೆ ಯಾಕೆ ನೀಡಲಿ? ಯಾರಿಗೂ ನೋವು ಕೂಡ ಮಾಡದ ನಾನು ಹಸುಗೂಸುಗಳನ್ನೇಗೆ ಬಲಿ ಪಡೆಯಲಿ” ಎಂದು ಚಂಡಿ ಗೋಗರೆದರು ಜನ ಕೇಳುವುದಿಲ್ಲ. ನರಸು ಕೂಡ ಹೆಂಡತಿಯ ಬಗ್ಗೆ ಸಂಶಯಪಡಲಾರಂಭಿಸುತ್ತಾನೆ.
ಒಂದು ರಾತ್ರಿ ಚಂಡಿ ಸ್ಮಶಾನದಲ್ಲಿದ್ದಾಗ ಅಲ್ಲಿಗೆ ಆಗಮಿಸುವ ಹಳ್ಳಿಯ ಜನ ಆಕೆ ಶವಗಳನ್ನು ಹೊರತೆಗೆದು ತಿನ್ನುತ್ತಿದ್ದಳು ಎಂದು ಆರೋಪಿಸಿ `ಶವಭಕ್ಷಕ ಪಿಶಾಚಿ’ ಎಂದು ಕೂಗಲಾರಂಭಿಸುತ್ತಾರೆ. “ಇಲ್ಲಿ ನರಿಗಳು ಬಂದು ಗುಂಡಿಯನ್ನು ತೋಡಿದ್ದವು. ಅವುಗಳನ್ನು ಓಡಿಸುತ್ತಿದ್ದೆ. ನರಸು ನೀನಾದರೂ ಹೇಳು ನಾನು ಪಿಶಾಚಿ ಅಲ್ಲ” ಎಂದು ಚಂಡಿ ಬೇಡುತ್ತಾಳೆ. ಆದರೆ ಅವಳಿಂದಾಗಿ ಸಮಾಜದಲ್ಲಿ ತನಗಿದ್ದ ಕಿಂಚಿತ್ತು ಮರ್ಯಾದೆಯೂ ಕರಗುತ್ತದೆ ಎಂದು ಭಾವಿಸುವ ನಸ್ರು “ನೀನು ಪಿಶಾಚಿ” ಎಂದು ಹೇಳಿ ತನ್ನ ಹೆಂಡತಿಯನ್ನೇ ಜೀವಂತ ನರಕಕ್ಕೆ ದೂಕುತ್ತಾನೆ.
ಅಂದಿನಿಂದ ಚಂಡಿ ಯಾರಿಗೂ ಬೇಡವಾದ ಸಾಮಾಜಿಕ ಬಹಿಷ್ಕಾರದ ಬದುಕು ಸಾಗಿಸುತ್ತಿದ್ದಾಳೆ.
ತನ್ನ ತಾಯಿ ಕಥೆ ಕೇಳಿದ ಹುಡುಗ ಮರುಗುತ್ತಾನೆ, ಸಂಕಟಪಡುತ್ತಾನೆ. ಅಮ್ಮನಿಗೆ ಹಪಹಪಿಸುತ್ತಾನೆ. ಆದರೆ ಈ ಸಮಾಜ ಆಕೆಯನ್ನು ಅವನಿಂದ ಬಹಳ ದೂರಕ್ಕೆ ತಳ್ಳಿಯಾಗಿರುತ್ತೆ. ಅದೊಮ್ಮೆ ರೈಲಿನ ಹಳಿ ಮೇಲೆ ಢಕಾಯಿತರು ಮರಗಳನ್ನು ಪೇರಿಸಿಟ್ಟು ಟ್ರೈನಿನಲ್ಲಿರುವ ಹಣವನ್ನು ದೋಚಲು ಸಜ್ಜಾಗಿರುತ್ತಾರೆ. ಅಕಸ್ಮಾತ್ತಾಗಿ ಅಲ್ಲಿಗೆ ಬರುವ `ಶವಭಕ್ಷಕ ಪಿಶಾಚಿ’ ಚಂಡಿಯನ್ನು ಕಂಡು ಅವರೆಲ್ಲ ಓಡಿ ಹೋಗುತ್ತಾರೆ. ಅಪಘಾತ ತಪ್ಪಿಸಲು ಪೇರಿಸಿಟ್ಟ ದಿಮ್ಮಿಗಳನ್ನು ಆಕೆ ಸರಿಸುತ್ತಿರುವಾಗ ರೈಲು ಆಗಮಿಸುತ್ತದೆ. ಟ್ರೈನ್ ಚಾಲಕನಿಗೆ ಗಾಡಿಯನ್ನು ನಿಲ್ಲಿಸುವಂತೆ ಸೂಚಿಸಲು ಆಕೆ ಟ್ರೈನಿನತ್ತ ಓಡುತ್ತಾಳೆ. ಆದರೆ ಚಾಲಕನಿಗೆ ಆಕೆ ಕಾಣದೆ ಚಂಡಿ ಟ್ರೈನಿನಡಿ ಸಿಕ್ಕು ಸತ್ತು ಹೋಗುತ್ತಾಳೆ.
ಢಕಾಯಿತರಿಂದ ಟ್ರೈನನ್ನು ರಕ್ಷಿಸಿದ್ದಕ್ಕೆ ಸರ್ಕಾರ ಅವಳ ಸಂಸಾರಕ್ಕೆ ಪರಿಹಾರ ಧನ ನೀಡಲು ಮುಂದಾಗುತ್ತದೆ. “ಈ ಊರಿನಲ್ಲಿ ಅವಳ ಸಂಬಂಧಿಕರು ಯಾರಾದರೂ ಇದ್ದಾರೆಯೇ?” ಎಂದು ಅಧಿಕಾರಿ ಕೇಳಿದಾಗ, ಎಲ್ಲರೂ ಸುಮ್ಮನಿರುತ್ತಾರೆ. ಹುಡುಗ ತನ್ನ ತಂದೆಯತ್ತ ನೋಡುತ್ತಾನೆ; ಸಾವಿನಲ್ಲಾದರೂ ಆಕೆ ತನ್ನ ಹೆಂಡತಿಯಾಗಿದ್ದಳು ಎಂದು ಒಪ್ಪಿಕೊಳ್ಳಲಿ ತನ್ನ ತಂದೆ ಎಂಬ ಆಶೆಯಿಂದ. ಆದರೆ ನರಸು ಕೂಡ ತುಟಿಪಿಟಿಕ್ ಅನ್ನುವುದಿಲ್ಲ. ಕೊನೆಗೆ ಹುಡುಗನೇ ಬಾಯಿಬಿಟ್ಟು ಕೂಗುತ್ತಾನೆ “ಆಕೆ ನನ್ನ ತಾಯಿ”
ಇದು `ಮಾತಿ ಮಾಯ್’ (ನನ್ನ ತಾಯಿ) ಎಂಬ ಮರಾಠಿ ಚಿತ್ರದ ಕತೆ. ಇದು ಪ್ರಖ್ಯಾತ ಬೆಂಗಾಲಿ ಲೇಖಕಿ ಮಹಾಶ್ವೇತಾ ದೇವಿ ಅವರು ಬರೆದಿರುವ ಕತೆಯನ್ನು ಆಧರಿಸಿ ಚಿತ್ರಾ ಪಾಳೇಕರ್ ನಿರ್ದೇಶಿಸಿರುವ ಚಿತ್ರ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...