Homeಅಂಕಣಗಳುತಾಯಿ ಮತ್ತು ಪಿಶಾಚಿ: ಒಂದು ಸಿನಿಮಾ ಕಥೆ...

ತಾಯಿ ಮತ್ತು ಪಿಶಾಚಿ: ಒಂದು ಸಿನಿಮಾ ಕಥೆ…

- Advertisement -
- Advertisement -

 ಗೌರಿ ಲಂಕೇಶ್
14 ಮಾರ್ಚ್, 2007 (`ಕಂಡಹಾಗೆ’ ಸಂಪಾದಕೀಯದಿಂದ)
ತಮ್ಮ ತಂದೆಯ ಹೆಸರಲ್ಲಿ ನೀಡಲಾಗುವ `ಲಂಕೇಶ್ ಚಿತ್ರ ಪ್ರಶಸ್ತಿಗೆ ಆಯ್ಕೆಯಾಗಿದ್ದ ಸಿನಿಮಾ ಕುರಿತು…. |

ಆಕೆಯನ್ನು ಊರಿನವರೆಲ್ಲ ಶವಭಕ್ಷಕ ಪಿಶಾಚಿ ಎಂದು ಕರೆಯುತ್ತಾರೆ. ಅವಳ ಕಣ್ಣು ತಮ್ಮ ಮಕ್ಕಳ ಮೇಲೆ ಬೀಳಬಾರದೆಂದು ದೇವರಲ್ಲಿ ಪ್ರಾರ್ಥಿಸುತ್ತಾರೆ. ಊರಿನಿಂದ ದೂರದಲ್ಲಿ ಏಕಾಂಗಿಯಾಗಿ, ಅರೆಹುಚ್ಚಿಯಾಗಿ ಆಕೆ ಜೀವಿಸುತ್ತಿದ್ದಾಳೆ.
ಒಮ್ಮೆ ಹತ್ತು ವರ್ಷದ ಹುಡುಗನನ್ನು ಆಕೆ ನೋಡುತ್ತಾಳೆ. ಆಕೆಯ ಕಣ್ಣು ತನ್ನ ಮೇಲೆ ಬಿತ್ತೆಂದು ಹೆದರುವ ಹುಡುಗ ತನ್ನ ತಂದೆಗೆ ಹೇಳುತ್ತಾನೆ. ಆದರೆ ತಂದೆ “ಆಕೆ ನಿನಗೆ ಏನನ್ನೂ ಮಾಡುವುದಿಲ್ಲ, ಹೆದರಬೇಡ” ಅಂತ ಹೇಳುತ್ತಾನೆ. “ಯಾಕೆ ನನಗೇನೂ ಆಗುವುದಿಲ್ಲ. ಆಕೆ ಮಕ್ಕಳ ಶವಗಳನ್ನು ತಿನ್ನುವ ಪಿಶಾಚಿ ಅಲ್ಲವೇ?” ಎಂದು ಕೇಳಿದಾಗ “ಯಾಕೆ ನಿನಗೇನು ಮಾಡುವುದಿಲ್ಲ ಯಾಕೆಂದರೆ ಆಕೆ ನಿನ್ನ ತಾಯಿ, ಅದಕ್ಕೆ” ಅಂತ ಉತ್ತರಿಸುತ್ತಾನೆ. ಆ ಹುಡುಗನಿಗೆ ಶಾಕ್ ಆಗುತ್ತೆ. ತಂದೆ ಹಳೆಯ ಕತೆ ಹೇಳುತ್ತಾ ಹೋದಂತೆ ನಮ್ಮ ಸಮಾಜದಲ್ಲಿನ ಜಾತಿ ವ್ಯವಸ್ಥೆ, ಮೂಢನಂಬಿಕೆ, ಮಹಿಳೆಯರ ಶೋಷಣೆ ಎಲ್ಲವೂ ಅನಾವರಣಗೊಳ್ಳುತ್ತಾ ಹೋಗುತ್ತವೆ.
ಆಕೆಯ ಹೆಸರು ಚಂಡಿ. ಸುಂದರಿಯೂ, ದಿಟ್ಟೆಯೂಆದ ಚಂಡಿ ಊರಿನ ಸ್ಮಶಾನ ಕಾಯುವವನ ಏಕೈಕ ಪುತ್ರಿ. ತಮಗದು ಸತ್ಯ ಹರಿಶ್ಚಂದ್ರನಿಂದಲೇ ಬಳುವಳಿಯಾಗಿ ಬಂದ ದೈವಕಾರ್ಯವೆಂದು ನಂಬಿದವಳು. ಈ ದಲಿತ ಮಹಿಳೆ ನೋಡಿಕೊಳ್ಳುತ್ತಿದ್ದುದು ಮಕ್ಕಳ ಸ್ಮಶಾನವನ್ನು. ಓದು ಬರಹ ಬಲ್ಲ, ಸರ್ಕಾರಿ ನೌಕರನೂ ಆಗಿರುವ ನರಸುಗೆ ಚಂಡಿ ಮೇಲೆ ಪ್ರೇಮಾಂಕುರವಾಗಿ ಮದುವೆಯಾಗುತ್ತಾನೆ. ಒಂದು ಗಂಡು ಮಗುವೂ ಜನಿಸುತ್ತದೆ.
ಚಂಡಿಯ ಸಮಸ್ಯೆಗಳು ಆರಂಭವಾಗುವುದೇ ಅಲ್ಲಿಂದ. ಹಸುಗೂಸಿನ ತಾಯಿಯಾಗಿ, ಮಕ್ಕಳ ಶವಗಳನ್ನು ಹೂಳುವುದು ಆಕೆಗೆ ಅಸಾಧ್ಯವಾಗುತ್ತದೆ. ತನ್ನ ಮಗುವನ್ನೇ ಹೂಳುತ್ತಿರುವನೇ ಎಂಬ ಭ್ರಮೆ ಕಾಡುತ್ತದೆ. ಈ ವೃತ್ತಿ ಇನ್ನು ತನಗೆ ಬೇಕಿಲ್ಲ ಅನ್ನಿಸುತ್ತೆ. ಆದರೆ ಇದು ವಂಶಪಾರಂಪರ್ಯ ದೇವರ ಕಾರ್ಯ; ತ್ಯಜಿಸುವುದಾದರೂ ಹೇಗೆ? ಈ ತಳಮಳವನ್ನು ಗಂಡನೊಂದಿಗೆ ಹಂಚಿಕೊಳ್ಳಲು ಯತ್ನಿಸಿದರೆ, ಅವನೂ ಕಿವಿಗೊಡುವುದಿಲ್ಲ.
ಈ ಮಧ್ಯೆ ಚಂಡಿ ತುಂಬಾ ಪ್ರೀತಿಸುತ್ತಿದ್ದ ಸಂಬಂಧಿಕರ ಮಗಳನ್ನು ಚಂಡಿಯೇ ಕೊಂದಳೆಂದೂ, ಆ ಬಾಲಕಿಯ ಶವಕ್ಕೆ ತನ್ನ ಎದೆಯಿಂದ ತೊಟ್ಟಿಕ್ಕುತ್ತಿದ್ದ ಹಾಲನ್ನು ಕುಡಿಸಿದಳೆಂದೂ ಜನ ಆರೋಪಿಸುತ್ತಾರೆ. ಆಕೆಗೆ ಭೂತ ಹಿಡಿದಿದೆ ಎಂದೂ, ಆಕೆ ಮಕ್ಕಳನ್ನು ಜೀವಂತ ಭಕ್ಷಿಸು ತ್ತಾಳೆಂದೂ ಸುಳ್ಳುಗಳು ಊರಲ್ಲಿ ಹಬ್ಬುತ್ತವೆ. “ನಾನು ಹಸಿ ಬಾಣಂತಿ. ನನ್ನ ಮಗುವಿಗೆ ಕುಡಿಸಬೇಕಿರುವ ಹಾಲನ್ನು ಮಕ್ಕಳ ಶವಗಳಿಗೆ ಯಾಕೆ ನೀಡಲಿ? ಯಾರಿಗೂ ನೋವು ಕೂಡ ಮಾಡದ ನಾನು ಹಸುಗೂಸುಗಳನ್ನೇಗೆ ಬಲಿ ಪಡೆಯಲಿ” ಎಂದು ಚಂಡಿ ಗೋಗರೆದರು ಜನ ಕೇಳುವುದಿಲ್ಲ. ನರಸು ಕೂಡ ಹೆಂಡತಿಯ ಬಗ್ಗೆ ಸಂಶಯಪಡಲಾರಂಭಿಸುತ್ತಾನೆ.
ಒಂದು ರಾತ್ರಿ ಚಂಡಿ ಸ್ಮಶಾನದಲ್ಲಿದ್ದಾಗ ಅಲ್ಲಿಗೆ ಆಗಮಿಸುವ ಹಳ್ಳಿಯ ಜನ ಆಕೆ ಶವಗಳನ್ನು ಹೊರತೆಗೆದು ತಿನ್ನುತ್ತಿದ್ದಳು ಎಂದು ಆರೋಪಿಸಿ `ಶವಭಕ್ಷಕ ಪಿಶಾಚಿ’ ಎಂದು ಕೂಗಲಾರಂಭಿಸುತ್ತಾರೆ. “ಇಲ್ಲಿ ನರಿಗಳು ಬಂದು ಗುಂಡಿಯನ್ನು ತೋಡಿದ್ದವು. ಅವುಗಳನ್ನು ಓಡಿಸುತ್ತಿದ್ದೆ. ನರಸು ನೀನಾದರೂ ಹೇಳು ನಾನು ಪಿಶಾಚಿ ಅಲ್ಲ” ಎಂದು ಚಂಡಿ ಬೇಡುತ್ತಾಳೆ. ಆದರೆ ಅವಳಿಂದಾಗಿ ಸಮಾಜದಲ್ಲಿ ತನಗಿದ್ದ ಕಿಂಚಿತ್ತು ಮರ್ಯಾದೆಯೂ ಕರಗುತ್ತದೆ ಎಂದು ಭಾವಿಸುವ ನಸ್ರು “ನೀನು ಪಿಶಾಚಿ” ಎಂದು ಹೇಳಿ ತನ್ನ ಹೆಂಡತಿಯನ್ನೇ ಜೀವಂತ ನರಕಕ್ಕೆ ದೂಕುತ್ತಾನೆ.
ಅಂದಿನಿಂದ ಚಂಡಿ ಯಾರಿಗೂ ಬೇಡವಾದ ಸಾಮಾಜಿಕ ಬಹಿಷ್ಕಾರದ ಬದುಕು ಸಾಗಿಸುತ್ತಿದ್ದಾಳೆ.
ತನ್ನ ತಾಯಿ ಕಥೆ ಕೇಳಿದ ಹುಡುಗ ಮರುಗುತ್ತಾನೆ, ಸಂಕಟಪಡುತ್ತಾನೆ. ಅಮ್ಮನಿಗೆ ಹಪಹಪಿಸುತ್ತಾನೆ. ಆದರೆ ಈ ಸಮಾಜ ಆಕೆಯನ್ನು ಅವನಿಂದ ಬಹಳ ದೂರಕ್ಕೆ ತಳ್ಳಿಯಾಗಿರುತ್ತೆ. ಅದೊಮ್ಮೆ ರೈಲಿನ ಹಳಿ ಮೇಲೆ ಢಕಾಯಿತರು ಮರಗಳನ್ನು ಪೇರಿಸಿಟ್ಟು ಟ್ರೈನಿನಲ್ಲಿರುವ ಹಣವನ್ನು ದೋಚಲು ಸಜ್ಜಾಗಿರುತ್ತಾರೆ. ಅಕಸ್ಮಾತ್ತಾಗಿ ಅಲ್ಲಿಗೆ ಬರುವ `ಶವಭಕ್ಷಕ ಪಿಶಾಚಿ’ ಚಂಡಿಯನ್ನು ಕಂಡು ಅವರೆಲ್ಲ ಓಡಿ ಹೋಗುತ್ತಾರೆ. ಅಪಘಾತ ತಪ್ಪಿಸಲು ಪೇರಿಸಿಟ್ಟ ದಿಮ್ಮಿಗಳನ್ನು ಆಕೆ ಸರಿಸುತ್ತಿರುವಾಗ ರೈಲು ಆಗಮಿಸುತ್ತದೆ. ಟ್ರೈನ್ ಚಾಲಕನಿಗೆ ಗಾಡಿಯನ್ನು ನಿಲ್ಲಿಸುವಂತೆ ಸೂಚಿಸಲು ಆಕೆ ಟ್ರೈನಿನತ್ತ ಓಡುತ್ತಾಳೆ. ಆದರೆ ಚಾಲಕನಿಗೆ ಆಕೆ ಕಾಣದೆ ಚಂಡಿ ಟ್ರೈನಿನಡಿ ಸಿಕ್ಕು ಸತ್ತು ಹೋಗುತ್ತಾಳೆ.
ಢಕಾಯಿತರಿಂದ ಟ್ರೈನನ್ನು ರಕ್ಷಿಸಿದ್ದಕ್ಕೆ ಸರ್ಕಾರ ಅವಳ ಸಂಸಾರಕ್ಕೆ ಪರಿಹಾರ ಧನ ನೀಡಲು ಮುಂದಾಗುತ್ತದೆ. “ಈ ಊರಿನಲ್ಲಿ ಅವಳ ಸಂಬಂಧಿಕರು ಯಾರಾದರೂ ಇದ್ದಾರೆಯೇ?” ಎಂದು ಅಧಿಕಾರಿ ಕೇಳಿದಾಗ, ಎಲ್ಲರೂ ಸುಮ್ಮನಿರುತ್ತಾರೆ. ಹುಡುಗ ತನ್ನ ತಂದೆಯತ್ತ ನೋಡುತ್ತಾನೆ; ಸಾವಿನಲ್ಲಾದರೂ ಆಕೆ ತನ್ನ ಹೆಂಡತಿಯಾಗಿದ್ದಳು ಎಂದು ಒಪ್ಪಿಕೊಳ್ಳಲಿ ತನ್ನ ತಂದೆ ಎಂಬ ಆಶೆಯಿಂದ. ಆದರೆ ನರಸು ಕೂಡ ತುಟಿಪಿಟಿಕ್ ಅನ್ನುವುದಿಲ್ಲ. ಕೊನೆಗೆ ಹುಡುಗನೇ ಬಾಯಿಬಿಟ್ಟು ಕೂಗುತ್ತಾನೆ “ಆಕೆ ನನ್ನ ತಾಯಿ”
ಇದು `ಮಾತಿ ಮಾಯ್’ (ನನ್ನ ತಾಯಿ) ಎಂಬ ಮರಾಠಿ ಚಿತ್ರದ ಕತೆ. ಇದು ಪ್ರಖ್ಯಾತ ಬೆಂಗಾಲಿ ಲೇಖಕಿ ಮಹಾಶ್ವೇತಾ ದೇವಿ ಅವರು ಬರೆದಿರುವ ಕತೆಯನ್ನು ಆಧರಿಸಿ ಚಿತ್ರಾ ಪಾಳೇಕರ್ ನಿರ್ದೇಶಿಸಿರುವ ಚಿತ್ರ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...