Homeಅಂಕಣಗಳುತಾಯಿ ಮತ್ತು ಪಿಶಾಚಿ: ಒಂದು ಸಿನಿಮಾ ಕಥೆ...

ತಾಯಿ ಮತ್ತು ಪಿಶಾಚಿ: ಒಂದು ಸಿನಿಮಾ ಕಥೆ…

- Advertisement -
- Advertisement -

 ಗೌರಿ ಲಂಕೇಶ್
14 ಮಾರ್ಚ್, 2007 (`ಕಂಡಹಾಗೆ’ ಸಂಪಾದಕೀಯದಿಂದ)
ತಮ್ಮ ತಂದೆಯ ಹೆಸರಲ್ಲಿ ನೀಡಲಾಗುವ `ಲಂಕೇಶ್ ಚಿತ್ರ ಪ್ರಶಸ್ತಿಗೆ ಆಯ್ಕೆಯಾಗಿದ್ದ ಸಿನಿಮಾ ಕುರಿತು…. |

ಆಕೆಯನ್ನು ಊರಿನವರೆಲ್ಲ ಶವಭಕ್ಷಕ ಪಿಶಾಚಿ ಎಂದು ಕರೆಯುತ್ತಾರೆ. ಅವಳ ಕಣ್ಣು ತಮ್ಮ ಮಕ್ಕಳ ಮೇಲೆ ಬೀಳಬಾರದೆಂದು ದೇವರಲ್ಲಿ ಪ್ರಾರ್ಥಿಸುತ್ತಾರೆ. ಊರಿನಿಂದ ದೂರದಲ್ಲಿ ಏಕಾಂಗಿಯಾಗಿ, ಅರೆಹುಚ್ಚಿಯಾಗಿ ಆಕೆ ಜೀವಿಸುತ್ತಿದ್ದಾಳೆ.
ಒಮ್ಮೆ ಹತ್ತು ವರ್ಷದ ಹುಡುಗನನ್ನು ಆಕೆ ನೋಡುತ್ತಾಳೆ. ಆಕೆಯ ಕಣ್ಣು ತನ್ನ ಮೇಲೆ ಬಿತ್ತೆಂದು ಹೆದರುವ ಹುಡುಗ ತನ್ನ ತಂದೆಗೆ ಹೇಳುತ್ತಾನೆ. ಆದರೆ ತಂದೆ “ಆಕೆ ನಿನಗೆ ಏನನ್ನೂ ಮಾಡುವುದಿಲ್ಲ, ಹೆದರಬೇಡ” ಅಂತ ಹೇಳುತ್ತಾನೆ. “ಯಾಕೆ ನನಗೇನೂ ಆಗುವುದಿಲ್ಲ. ಆಕೆ ಮಕ್ಕಳ ಶವಗಳನ್ನು ತಿನ್ನುವ ಪಿಶಾಚಿ ಅಲ್ಲವೇ?” ಎಂದು ಕೇಳಿದಾಗ “ಯಾಕೆ ನಿನಗೇನು ಮಾಡುವುದಿಲ್ಲ ಯಾಕೆಂದರೆ ಆಕೆ ನಿನ್ನ ತಾಯಿ, ಅದಕ್ಕೆ” ಅಂತ ಉತ್ತರಿಸುತ್ತಾನೆ. ಆ ಹುಡುಗನಿಗೆ ಶಾಕ್ ಆಗುತ್ತೆ. ತಂದೆ ಹಳೆಯ ಕತೆ ಹೇಳುತ್ತಾ ಹೋದಂತೆ ನಮ್ಮ ಸಮಾಜದಲ್ಲಿನ ಜಾತಿ ವ್ಯವಸ್ಥೆ, ಮೂಢನಂಬಿಕೆ, ಮಹಿಳೆಯರ ಶೋಷಣೆ ಎಲ್ಲವೂ ಅನಾವರಣಗೊಳ್ಳುತ್ತಾ ಹೋಗುತ್ತವೆ.
ಆಕೆಯ ಹೆಸರು ಚಂಡಿ. ಸುಂದರಿಯೂ, ದಿಟ್ಟೆಯೂಆದ ಚಂಡಿ ಊರಿನ ಸ್ಮಶಾನ ಕಾಯುವವನ ಏಕೈಕ ಪುತ್ರಿ. ತಮಗದು ಸತ್ಯ ಹರಿಶ್ಚಂದ್ರನಿಂದಲೇ ಬಳುವಳಿಯಾಗಿ ಬಂದ ದೈವಕಾರ್ಯವೆಂದು ನಂಬಿದವಳು. ಈ ದಲಿತ ಮಹಿಳೆ ನೋಡಿಕೊಳ್ಳುತ್ತಿದ್ದುದು ಮಕ್ಕಳ ಸ್ಮಶಾನವನ್ನು. ಓದು ಬರಹ ಬಲ್ಲ, ಸರ್ಕಾರಿ ನೌಕರನೂ ಆಗಿರುವ ನರಸುಗೆ ಚಂಡಿ ಮೇಲೆ ಪ್ರೇಮಾಂಕುರವಾಗಿ ಮದುವೆಯಾಗುತ್ತಾನೆ. ಒಂದು ಗಂಡು ಮಗುವೂ ಜನಿಸುತ್ತದೆ.
ಚಂಡಿಯ ಸಮಸ್ಯೆಗಳು ಆರಂಭವಾಗುವುದೇ ಅಲ್ಲಿಂದ. ಹಸುಗೂಸಿನ ತಾಯಿಯಾಗಿ, ಮಕ್ಕಳ ಶವಗಳನ್ನು ಹೂಳುವುದು ಆಕೆಗೆ ಅಸಾಧ್ಯವಾಗುತ್ತದೆ. ತನ್ನ ಮಗುವನ್ನೇ ಹೂಳುತ್ತಿರುವನೇ ಎಂಬ ಭ್ರಮೆ ಕಾಡುತ್ತದೆ. ಈ ವೃತ್ತಿ ಇನ್ನು ತನಗೆ ಬೇಕಿಲ್ಲ ಅನ್ನಿಸುತ್ತೆ. ಆದರೆ ಇದು ವಂಶಪಾರಂಪರ್ಯ ದೇವರ ಕಾರ್ಯ; ತ್ಯಜಿಸುವುದಾದರೂ ಹೇಗೆ? ಈ ತಳಮಳವನ್ನು ಗಂಡನೊಂದಿಗೆ ಹಂಚಿಕೊಳ್ಳಲು ಯತ್ನಿಸಿದರೆ, ಅವನೂ ಕಿವಿಗೊಡುವುದಿಲ್ಲ.
ಈ ಮಧ್ಯೆ ಚಂಡಿ ತುಂಬಾ ಪ್ರೀತಿಸುತ್ತಿದ್ದ ಸಂಬಂಧಿಕರ ಮಗಳನ್ನು ಚಂಡಿಯೇ ಕೊಂದಳೆಂದೂ, ಆ ಬಾಲಕಿಯ ಶವಕ್ಕೆ ತನ್ನ ಎದೆಯಿಂದ ತೊಟ್ಟಿಕ್ಕುತ್ತಿದ್ದ ಹಾಲನ್ನು ಕುಡಿಸಿದಳೆಂದೂ ಜನ ಆರೋಪಿಸುತ್ತಾರೆ. ಆಕೆಗೆ ಭೂತ ಹಿಡಿದಿದೆ ಎಂದೂ, ಆಕೆ ಮಕ್ಕಳನ್ನು ಜೀವಂತ ಭಕ್ಷಿಸು ತ್ತಾಳೆಂದೂ ಸುಳ್ಳುಗಳು ಊರಲ್ಲಿ ಹಬ್ಬುತ್ತವೆ. “ನಾನು ಹಸಿ ಬಾಣಂತಿ. ನನ್ನ ಮಗುವಿಗೆ ಕುಡಿಸಬೇಕಿರುವ ಹಾಲನ್ನು ಮಕ್ಕಳ ಶವಗಳಿಗೆ ಯಾಕೆ ನೀಡಲಿ? ಯಾರಿಗೂ ನೋವು ಕೂಡ ಮಾಡದ ನಾನು ಹಸುಗೂಸುಗಳನ್ನೇಗೆ ಬಲಿ ಪಡೆಯಲಿ” ಎಂದು ಚಂಡಿ ಗೋಗರೆದರು ಜನ ಕೇಳುವುದಿಲ್ಲ. ನರಸು ಕೂಡ ಹೆಂಡತಿಯ ಬಗ್ಗೆ ಸಂಶಯಪಡಲಾರಂಭಿಸುತ್ತಾನೆ.
ಒಂದು ರಾತ್ರಿ ಚಂಡಿ ಸ್ಮಶಾನದಲ್ಲಿದ್ದಾಗ ಅಲ್ಲಿಗೆ ಆಗಮಿಸುವ ಹಳ್ಳಿಯ ಜನ ಆಕೆ ಶವಗಳನ್ನು ಹೊರತೆಗೆದು ತಿನ್ನುತ್ತಿದ್ದಳು ಎಂದು ಆರೋಪಿಸಿ `ಶವಭಕ್ಷಕ ಪಿಶಾಚಿ’ ಎಂದು ಕೂಗಲಾರಂಭಿಸುತ್ತಾರೆ. “ಇಲ್ಲಿ ನರಿಗಳು ಬಂದು ಗುಂಡಿಯನ್ನು ತೋಡಿದ್ದವು. ಅವುಗಳನ್ನು ಓಡಿಸುತ್ತಿದ್ದೆ. ನರಸು ನೀನಾದರೂ ಹೇಳು ನಾನು ಪಿಶಾಚಿ ಅಲ್ಲ” ಎಂದು ಚಂಡಿ ಬೇಡುತ್ತಾಳೆ. ಆದರೆ ಅವಳಿಂದಾಗಿ ಸಮಾಜದಲ್ಲಿ ತನಗಿದ್ದ ಕಿಂಚಿತ್ತು ಮರ್ಯಾದೆಯೂ ಕರಗುತ್ತದೆ ಎಂದು ಭಾವಿಸುವ ನಸ್ರು “ನೀನು ಪಿಶಾಚಿ” ಎಂದು ಹೇಳಿ ತನ್ನ ಹೆಂಡತಿಯನ್ನೇ ಜೀವಂತ ನರಕಕ್ಕೆ ದೂಕುತ್ತಾನೆ.
ಅಂದಿನಿಂದ ಚಂಡಿ ಯಾರಿಗೂ ಬೇಡವಾದ ಸಾಮಾಜಿಕ ಬಹಿಷ್ಕಾರದ ಬದುಕು ಸಾಗಿಸುತ್ತಿದ್ದಾಳೆ.
ತನ್ನ ತಾಯಿ ಕಥೆ ಕೇಳಿದ ಹುಡುಗ ಮರುಗುತ್ತಾನೆ, ಸಂಕಟಪಡುತ್ತಾನೆ. ಅಮ್ಮನಿಗೆ ಹಪಹಪಿಸುತ್ತಾನೆ. ಆದರೆ ಈ ಸಮಾಜ ಆಕೆಯನ್ನು ಅವನಿಂದ ಬಹಳ ದೂರಕ್ಕೆ ತಳ್ಳಿಯಾಗಿರುತ್ತೆ. ಅದೊಮ್ಮೆ ರೈಲಿನ ಹಳಿ ಮೇಲೆ ಢಕಾಯಿತರು ಮರಗಳನ್ನು ಪೇರಿಸಿಟ್ಟು ಟ್ರೈನಿನಲ್ಲಿರುವ ಹಣವನ್ನು ದೋಚಲು ಸಜ್ಜಾಗಿರುತ್ತಾರೆ. ಅಕಸ್ಮಾತ್ತಾಗಿ ಅಲ್ಲಿಗೆ ಬರುವ `ಶವಭಕ್ಷಕ ಪಿಶಾಚಿ’ ಚಂಡಿಯನ್ನು ಕಂಡು ಅವರೆಲ್ಲ ಓಡಿ ಹೋಗುತ್ತಾರೆ. ಅಪಘಾತ ತಪ್ಪಿಸಲು ಪೇರಿಸಿಟ್ಟ ದಿಮ್ಮಿಗಳನ್ನು ಆಕೆ ಸರಿಸುತ್ತಿರುವಾಗ ರೈಲು ಆಗಮಿಸುತ್ತದೆ. ಟ್ರೈನ್ ಚಾಲಕನಿಗೆ ಗಾಡಿಯನ್ನು ನಿಲ್ಲಿಸುವಂತೆ ಸೂಚಿಸಲು ಆಕೆ ಟ್ರೈನಿನತ್ತ ಓಡುತ್ತಾಳೆ. ಆದರೆ ಚಾಲಕನಿಗೆ ಆಕೆ ಕಾಣದೆ ಚಂಡಿ ಟ್ರೈನಿನಡಿ ಸಿಕ್ಕು ಸತ್ತು ಹೋಗುತ್ತಾಳೆ.
ಢಕಾಯಿತರಿಂದ ಟ್ರೈನನ್ನು ರಕ್ಷಿಸಿದ್ದಕ್ಕೆ ಸರ್ಕಾರ ಅವಳ ಸಂಸಾರಕ್ಕೆ ಪರಿಹಾರ ಧನ ನೀಡಲು ಮುಂದಾಗುತ್ತದೆ. “ಈ ಊರಿನಲ್ಲಿ ಅವಳ ಸಂಬಂಧಿಕರು ಯಾರಾದರೂ ಇದ್ದಾರೆಯೇ?” ಎಂದು ಅಧಿಕಾರಿ ಕೇಳಿದಾಗ, ಎಲ್ಲರೂ ಸುಮ್ಮನಿರುತ್ತಾರೆ. ಹುಡುಗ ತನ್ನ ತಂದೆಯತ್ತ ನೋಡುತ್ತಾನೆ; ಸಾವಿನಲ್ಲಾದರೂ ಆಕೆ ತನ್ನ ಹೆಂಡತಿಯಾಗಿದ್ದಳು ಎಂದು ಒಪ್ಪಿಕೊಳ್ಳಲಿ ತನ್ನ ತಂದೆ ಎಂಬ ಆಶೆಯಿಂದ. ಆದರೆ ನರಸು ಕೂಡ ತುಟಿಪಿಟಿಕ್ ಅನ್ನುವುದಿಲ್ಲ. ಕೊನೆಗೆ ಹುಡುಗನೇ ಬಾಯಿಬಿಟ್ಟು ಕೂಗುತ್ತಾನೆ “ಆಕೆ ನನ್ನ ತಾಯಿ”
ಇದು `ಮಾತಿ ಮಾಯ್’ (ನನ್ನ ತಾಯಿ) ಎಂಬ ಮರಾಠಿ ಚಿತ್ರದ ಕತೆ. ಇದು ಪ್ರಖ್ಯಾತ ಬೆಂಗಾಲಿ ಲೇಖಕಿ ಮಹಾಶ್ವೇತಾ ದೇವಿ ಅವರು ಬರೆದಿರುವ ಕತೆಯನ್ನು ಆಧರಿಸಿ ಚಿತ್ರಾ ಪಾಳೇಕರ್ ನಿರ್ದೇಶಿಸಿರುವ ಚಿತ್ರ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...