Homeಅಂಕಣಗಳುತಾಯಿ ಮತ್ತು ಪಿಶಾಚಿ: ಒಂದು ಸಿನಿಮಾ ಕಥೆ...

ತಾಯಿ ಮತ್ತು ಪಿಶಾಚಿ: ಒಂದು ಸಿನಿಮಾ ಕಥೆ…

- Advertisement -
- Advertisement -

 ಗೌರಿ ಲಂಕೇಶ್
14 ಮಾರ್ಚ್, 2007 (`ಕಂಡಹಾಗೆ’ ಸಂಪಾದಕೀಯದಿಂದ)
ತಮ್ಮ ತಂದೆಯ ಹೆಸರಲ್ಲಿ ನೀಡಲಾಗುವ `ಲಂಕೇಶ್ ಚಿತ್ರ ಪ್ರಶಸ್ತಿಗೆ ಆಯ್ಕೆಯಾಗಿದ್ದ ಸಿನಿಮಾ ಕುರಿತು…. |

ಆಕೆಯನ್ನು ಊರಿನವರೆಲ್ಲ ಶವಭಕ್ಷಕ ಪಿಶಾಚಿ ಎಂದು ಕರೆಯುತ್ತಾರೆ. ಅವಳ ಕಣ್ಣು ತಮ್ಮ ಮಕ್ಕಳ ಮೇಲೆ ಬೀಳಬಾರದೆಂದು ದೇವರಲ್ಲಿ ಪ್ರಾರ್ಥಿಸುತ್ತಾರೆ. ಊರಿನಿಂದ ದೂರದಲ್ಲಿ ಏಕಾಂಗಿಯಾಗಿ, ಅರೆಹುಚ್ಚಿಯಾಗಿ ಆಕೆ ಜೀವಿಸುತ್ತಿದ್ದಾಳೆ.
ಒಮ್ಮೆ ಹತ್ತು ವರ್ಷದ ಹುಡುಗನನ್ನು ಆಕೆ ನೋಡುತ್ತಾಳೆ. ಆಕೆಯ ಕಣ್ಣು ತನ್ನ ಮೇಲೆ ಬಿತ್ತೆಂದು ಹೆದರುವ ಹುಡುಗ ತನ್ನ ತಂದೆಗೆ ಹೇಳುತ್ತಾನೆ. ಆದರೆ ತಂದೆ “ಆಕೆ ನಿನಗೆ ಏನನ್ನೂ ಮಾಡುವುದಿಲ್ಲ, ಹೆದರಬೇಡ” ಅಂತ ಹೇಳುತ್ತಾನೆ. “ಯಾಕೆ ನನಗೇನೂ ಆಗುವುದಿಲ್ಲ. ಆಕೆ ಮಕ್ಕಳ ಶವಗಳನ್ನು ತಿನ್ನುವ ಪಿಶಾಚಿ ಅಲ್ಲವೇ?” ಎಂದು ಕೇಳಿದಾಗ “ಯಾಕೆ ನಿನಗೇನು ಮಾಡುವುದಿಲ್ಲ ಯಾಕೆಂದರೆ ಆಕೆ ನಿನ್ನ ತಾಯಿ, ಅದಕ್ಕೆ” ಅಂತ ಉತ್ತರಿಸುತ್ತಾನೆ. ಆ ಹುಡುಗನಿಗೆ ಶಾಕ್ ಆಗುತ್ತೆ. ತಂದೆ ಹಳೆಯ ಕತೆ ಹೇಳುತ್ತಾ ಹೋದಂತೆ ನಮ್ಮ ಸಮಾಜದಲ್ಲಿನ ಜಾತಿ ವ್ಯವಸ್ಥೆ, ಮೂಢನಂಬಿಕೆ, ಮಹಿಳೆಯರ ಶೋಷಣೆ ಎಲ್ಲವೂ ಅನಾವರಣಗೊಳ್ಳುತ್ತಾ ಹೋಗುತ್ತವೆ.
ಆಕೆಯ ಹೆಸರು ಚಂಡಿ. ಸುಂದರಿಯೂ, ದಿಟ್ಟೆಯೂಆದ ಚಂಡಿ ಊರಿನ ಸ್ಮಶಾನ ಕಾಯುವವನ ಏಕೈಕ ಪುತ್ರಿ. ತಮಗದು ಸತ್ಯ ಹರಿಶ್ಚಂದ್ರನಿಂದಲೇ ಬಳುವಳಿಯಾಗಿ ಬಂದ ದೈವಕಾರ್ಯವೆಂದು ನಂಬಿದವಳು. ಈ ದಲಿತ ಮಹಿಳೆ ನೋಡಿಕೊಳ್ಳುತ್ತಿದ್ದುದು ಮಕ್ಕಳ ಸ್ಮಶಾನವನ್ನು. ಓದು ಬರಹ ಬಲ್ಲ, ಸರ್ಕಾರಿ ನೌಕರನೂ ಆಗಿರುವ ನರಸುಗೆ ಚಂಡಿ ಮೇಲೆ ಪ್ರೇಮಾಂಕುರವಾಗಿ ಮದುವೆಯಾಗುತ್ತಾನೆ. ಒಂದು ಗಂಡು ಮಗುವೂ ಜನಿಸುತ್ತದೆ.
ಚಂಡಿಯ ಸಮಸ್ಯೆಗಳು ಆರಂಭವಾಗುವುದೇ ಅಲ್ಲಿಂದ. ಹಸುಗೂಸಿನ ತಾಯಿಯಾಗಿ, ಮಕ್ಕಳ ಶವಗಳನ್ನು ಹೂಳುವುದು ಆಕೆಗೆ ಅಸಾಧ್ಯವಾಗುತ್ತದೆ. ತನ್ನ ಮಗುವನ್ನೇ ಹೂಳುತ್ತಿರುವನೇ ಎಂಬ ಭ್ರಮೆ ಕಾಡುತ್ತದೆ. ಈ ವೃತ್ತಿ ಇನ್ನು ತನಗೆ ಬೇಕಿಲ್ಲ ಅನ್ನಿಸುತ್ತೆ. ಆದರೆ ಇದು ವಂಶಪಾರಂಪರ್ಯ ದೇವರ ಕಾರ್ಯ; ತ್ಯಜಿಸುವುದಾದರೂ ಹೇಗೆ? ಈ ತಳಮಳವನ್ನು ಗಂಡನೊಂದಿಗೆ ಹಂಚಿಕೊಳ್ಳಲು ಯತ್ನಿಸಿದರೆ, ಅವನೂ ಕಿವಿಗೊಡುವುದಿಲ್ಲ.
ಈ ಮಧ್ಯೆ ಚಂಡಿ ತುಂಬಾ ಪ್ರೀತಿಸುತ್ತಿದ್ದ ಸಂಬಂಧಿಕರ ಮಗಳನ್ನು ಚಂಡಿಯೇ ಕೊಂದಳೆಂದೂ, ಆ ಬಾಲಕಿಯ ಶವಕ್ಕೆ ತನ್ನ ಎದೆಯಿಂದ ತೊಟ್ಟಿಕ್ಕುತ್ತಿದ್ದ ಹಾಲನ್ನು ಕುಡಿಸಿದಳೆಂದೂ ಜನ ಆರೋಪಿಸುತ್ತಾರೆ. ಆಕೆಗೆ ಭೂತ ಹಿಡಿದಿದೆ ಎಂದೂ, ಆಕೆ ಮಕ್ಕಳನ್ನು ಜೀವಂತ ಭಕ್ಷಿಸು ತ್ತಾಳೆಂದೂ ಸುಳ್ಳುಗಳು ಊರಲ್ಲಿ ಹಬ್ಬುತ್ತವೆ. “ನಾನು ಹಸಿ ಬಾಣಂತಿ. ನನ್ನ ಮಗುವಿಗೆ ಕುಡಿಸಬೇಕಿರುವ ಹಾಲನ್ನು ಮಕ್ಕಳ ಶವಗಳಿಗೆ ಯಾಕೆ ನೀಡಲಿ? ಯಾರಿಗೂ ನೋವು ಕೂಡ ಮಾಡದ ನಾನು ಹಸುಗೂಸುಗಳನ್ನೇಗೆ ಬಲಿ ಪಡೆಯಲಿ” ಎಂದು ಚಂಡಿ ಗೋಗರೆದರು ಜನ ಕೇಳುವುದಿಲ್ಲ. ನರಸು ಕೂಡ ಹೆಂಡತಿಯ ಬಗ್ಗೆ ಸಂಶಯಪಡಲಾರಂಭಿಸುತ್ತಾನೆ.
ಒಂದು ರಾತ್ರಿ ಚಂಡಿ ಸ್ಮಶಾನದಲ್ಲಿದ್ದಾಗ ಅಲ್ಲಿಗೆ ಆಗಮಿಸುವ ಹಳ್ಳಿಯ ಜನ ಆಕೆ ಶವಗಳನ್ನು ಹೊರತೆಗೆದು ತಿನ್ನುತ್ತಿದ್ದಳು ಎಂದು ಆರೋಪಿಸಿ `ಶವಭಕ್ಷಕ ಪಿಶಾಚಿ’ ಎಂದು ಕೂಗಲಾರಂಭಿಸುತ್ತಾರೆ. “ಇಲ್ಲಿ ನರಿಗಳು ಬಂದು ಗುಂಡಿಯನ್ನು ತೋಡಿದ್ದವು. ಅವುಗಳನ್ನು ಓಡಿಸುತ್ತಿದ್ದೆ. ನರಸು ನೀನಾದರೂ ಹೇಳು ನಾನು ಪಿಶಾಚಿ ಅಲ್ಲ” ಎಂದು ಚಂಡಿ ಬೇಡುತ್ತಾಳೆ. ಆದರೆ ಅವಳಿಂದಾಗಿ ಸಮಾಜದಲ್ಲಿ ತನಗಿದ್ದ ಕಿಂಚಿತ್ತು ಮರ್ಯಾದೆಯೂ ಕರಗುತ್ತದೆ ಎಂದು ಭಾವಿಸುವ ನಸ್ರು “ನೀನು ಪಿಶಾಚಿ” ಎಂದು ಹೇಳಿ ತನ್ನ ಹೆಂಡತಿಯನ್ನೇ ಜೀವಂತ ನರಕಕ್ಕೆ ದೂಕುತ್ತಾನೆ.
ಅಂದಿನಿಂದ ಚಂಡಿ ಯಾರಿಗೂ ಬೇಡವಾದ ಸಾಮಾಜಿಕ ಬಹಿಷ್ಕಾರದ ಬದುಕು ಸಾಗಿಸುತ್ತಿದ್ದಾಳೆ.
ತನ್ನ ತಾಯಿ ಕಥೆ ಕೇಳಿದ ಹುಡುಗ ಮರುಗುತ್ತಾನೆ, ಸಂಕಟಪಡುತ್ತಾನೆ. ಅಮ್ಮನಿಗೆ ಹಪಹಪಿಸುತ್ತಾನೆ. ಆದರೆ ಈ ಸಮಾಜ ಆಕೆಯನ್ನು ಅವನಿಂದ ಬಹಳ ದೂರಕ್ಕೆ ತಳ್ಳಿಯಾಗಿರುತ್ತೆ. ಅದೊಮ್ಮೆ ರೈಲಿನ ಹಳಿ ಮೇಲೆ ಢಕಾಯಿತರು ಮರಗಳನ್ನು ಪೇರಿಸಿಟ್ಟು ಟ್ರೈನಿನಲ್ಲಿರುವ ಹಣವನ್ನು ದೋಚಲು ಸಜ್ಜಾಗಿರುತ್ತಾರೆ. ಅಕಸ್ಮಾತ್ತಾಗಿ ಅಲ್ಲಿಗೆ ಬರುವ `ಶವಭಕ್ಷಕ ಪಿಶಾಚಿ’ ಚಂಡಿಯನ್ನು ಕಂಡು ಅವರೆಲ್ಲ ಓಡಿ ಹೋಗುತ್ತಾರೆ. ಅಪಘಾತ ತಪ್ಪಿಸಲು ಪೇರಿಸಿಟ್ಟ ದಿಮ್ಮಿಗಳನ್ನು ಆಕೆ ಸರಿಸುತ್ತಿರುವಾಗ ರೈಲು ಆಗಮಿಸುತ್ತದೆ. ಟ್ರೈನ್ ಚಾಲಕನಿಗೆ ಗಾಡಿಯನ್ನು ನಿಲ್ಲಿಸುವಂತೆ ಸೂಚಿಸಲು ಆಕೆ ಟ್ರೈನಿನತ್ತ ಓಡುತ್ತಾಳೆ. ಆದರೆ ಚಾಲಕನಿಗೆ ಆಕೆ ಕಾಣದೆ ಚಂಡಿ ಟ್ರೈನಿನಡಿ ಸಿಕ್ಕು ಸತ್ತು ಹೋಗುತ್ತಾಳೆ.
ಢಕಾಯಿತರಿಂದ ಟ್ರೈನನ್ನು ರಕ್ಷಿಸಿದ್ದಕ್ಕೆ ಸರ್ಕಾರ ಅವಳ ಸಂಸಾರಕ್ಕೆ ಪರಿಹಾರ ಧನ ನೀಡಲು ಮುಂದಾಗುತ್ತದೆ. “ಈ ಊರಿನಲ್ಲಿ ಅವಳ ಸಂಬಂಧಿಕರು ಯಾರಾದರೂ ಇದ್ದಾರೆಯೇ?” ಎಂದು ಅಧಿಕಾರಿ ಕೇಳಿದಾಗ, ಎಲ್ಲರೂ ಸುಮ್ಮನಿರುತ್ತಾರೆ. ಹುಡುಗ ತನ್ನ ತಂದೆಯತ್ತ ನೋಡುತ್ತಾನೆ; ಸಾವಿನಲ್ಲಾದರೂ ಆಕೆ ತನ್ನ ಹೆಂಡತಿಯಾಗಿದ್ದಳು ಎಂದು ಒಪ್ಪಿಕೊಳ್ಳಲಿ ತನ್ನ ತಂದೆ ಎಂಬ ಆಶೆಯಿಂದ. ಆದರೆ ನರಸು ಕೂಡ ತುಟಿಪಿಟಿಕ್ ಅನ್ನುವುದಿಲ್ಲ. ಕೊನೆಗೆ ಹುಡುಗನೇ ಬಾಯಿಬಿಟ್ಟು ಕೂಗುತ್ತಾನೆ “ಆಕೆ ನನ್ನ ತಾಯಿ”
ಇದು `ಮಾತಿ ಮಾಯ್’ (ನನ್ನ ತಾಯಿ) ಎಂಬ ಮರಾಠಿ ಚಿತ್ರದ ಕತೆ. ಇದು ಪ್ರಖ್ಯಾತ ಬೆಂಗಾಲಿ ಲೇಖಕಿ ಮಹಾಶ್ವೇತಾ ದೇವಿ ಅವರು ಬರೆದಿರುವ ಕತೆಯನ್ನು ಆಧರಿಸಿ ಚಿತ್ರಾ ಪಾಳೇಕರ್ ನಿರ್ದೇಶಿಸಿರುವ ಚಿತ್ರ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಸರ್ವೆಗೆ ರೈತರ ತೀವ್ರ ವಿರೋಧ: ಅಧಿಕಾರಿಗಳಿಗೆ ಪೊರಕೆ ಏಟು, ಕಾರುಗಳು ಜಖಂ

ರಾಮನಗರ: ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಯನ್ನು ವಿರೋಧಿಸಿ ಸ್ಥಳೀಯ ರೈತರು ನಡೆಸುತ್ತಿರುವ ಹೋರಾಟ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಸೋಮವಾರ (ಜುಲೈ 13) ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲೂಕಿನ ಮಂಡಲಹಳ್ಳಿ...

ಮನೆಕೆಲಸದಾಕೆ ಮೇಲಿನ ದೌರ್ಜನ್ಯ ಆರೋಪ ಪ್ರಕರಣ : ಜೆಡಿಎಸ್ ಶಾಸಕ ಹೆಚ್​​​.ಡಿ. ರೇವಣ್ಣಗೆ ಸುಪ್ರೀಂ ಕೋರ್ಟ್​ ನೋಟಿಸ್​

ಮಹಿಳೆಯ ಘನತೆಗೆ ಧಕ್ಕೆ ಹಾಗೂ ಲೈಂಗಿಕ ಕಿರುಕುಳ ಆರೋಪಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್‌ ನೀಡಿದ್ದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ಮೇಲ್ಮನವಿಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್‌ ಸೋಮವಾರ (ಜು.13) ಜೆಡಿಎಸ್‌...

ದಲಿತ ಯುವಕರಿಗೆ ವಿದ್ಯುತ್ ಶಾಕ್‌ ಶಿಕ್ಷೆ: ಕಳ್ಳತನ ಆರೋಪದ ಮೇಲೆ ಇಬ್ಬರಿಗೆ ಚಿತ್ರಹಿಂಸೆ

ದಲಿತ ಯುವಕರ ಮೇಲೆ ಮಧ್ಯಪ್ರದೇಶದಲ್ಲಿ ನಡೆದಿರುವ ಅಮಾನವೀಯ ಕೃತ್ಯವೊಂದರ ವಿಡಿಯೋ ಇದೀಗ ನಾಗರಿಕ ಸಮಾಜವನ್ನೇ ಆಘಾತಕ್ಕೀಡು ಮಾಡಿದೆ. ನೀರಿನ ಪಂಪ್ ಮೋಟಾರ್ ಕದ್ದಿದ್ದಾರೆ ಎಂಬ ಶಂಕೆಯ ಮೇಲೆ ಇಬ್ಬರು ದಲಿತ ಯುವಕರನ್ನು ಕಂಬಕ್ಕೆ...

ರಾಮಮಂದಿರ ಹಗರಣ: ಕೇಂದ್ರ ಸರ್ಕಾರ, ಟ್ರಸ್ಟ್, ಉತ್ತರ ಪ್ರದೇಶ ಸರ್ಕಾರಕ್ಕೆ ‘ಸುಪ್ರೀಂ’ ನೋಟಿಸ್ 

ನವದೆಹಲಿ: ವಿಶ್ವಪ್ರಸಿದ್ಧ ಅಯೋಧ್ಯೆಯ ಶ್ರೀ ರಾಮಮಂದಿರಕ್ಕೆ ಸಾರ್ವಜನಿಕ ಭಕ್ತಾದಿಗಳಿಂದ ಹರಿದುಬಂದಿರುವ ಕೋಟ್ಯಂತರ ರೂಪಾಯಿ ದೇಣಿಗೆ ನಿಧಿಯ ಕಳ್ಳತನ, ದುರುಪಯೋಗ ಮತ್ತು ಆಡಳಿತಾತ್ಮಕ ಅಕ್ರಮಗಳ ಆರೋಪ ಇದೀಗ ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದೆ. ಈ...

ಜಮ್ಮು-ಕಾಶ್ಮೀರ: ಪ್ರತ್ಯೇಕತಾವಾದಿಗಳು, ಉಗ್ರಗಾಮಿಗಳನ್ನು ವೈಭವೀಕರಿಸಿದ ಆರೋಪ: ಮೂವರು ಪ್ರಕಾಶಕರ ಬಂಧನ

ಜಮ್ಮು/ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿ ಹಾಗೂ ಭಯೋತ್ಪಾದಕ ನಾಯಕರನ್ನು ವೈಭವೀಕರಿಸುವ ಪುಸ್ತಕಗಳನ್ನು ಪ್ರಕಟಿಸಿ, ವಿತರಿಸಿದ ಗಂಭೀರ ಆರೋಪದ ಮೇಲೆ ಪ್ರತಿ-ಗುಪ್ತಚರ ವಿಭಾಗದ (ಸಿಐಜೆಕೆ) ಪೊಲೀಸರು ಭಾನುವಾರ ಇಬ್ಬರು ಪ್ರಮುಖ ಪ್ರಕಾಶನ ಸಂಸ್ಥೆಗಳಿಗೆ...

ಕರ್ನಾಟಕ ಎಸ್‍ಐಆರ್: ಮತದಾರರ ಸೌಲಭ್ಯ ಕೇಂದ್ರಗಳ ಕೊರತೆ, ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕೆ ಅಡ್ಡಿ: ವರದಿ

ಬೆಂಗಳೂರು: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಆರಂಭವಾಗಿ ಸುಮಾರು ಎರಡು ವಾರಗಳು ಕಳೆಯುತ್ತಾ ಬಂದಿದ್ದರೂ, ಚುನಾವಣಾ ಆಯೋಗವು ಸಾರ್ವಜನಿಕರ ಅನುಕೂಲಕ್ಕಾಗಿ ರಾಜ್ಯಾದ್ಯಂತ ಅಗತ್ಯವಿರುವಷ್ಟು ಮತದಾರರ ಸೌಲಭ್ಯ ಕೇಂದ್ರಗಳನ್ನು...

27 ಮಂದಿಯನ್ನು ‘ವಿದೇಶಿಯರು’ ಎಂದಿದ್ದ ಅಸ್ಸಾಂ ನ್ಯಾಯಮಂಡಳಿಗಳ ಆದೇಶ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಒಬ್ಬ ವ್ಯಕ್ತಿಯ ಪೌರತ್ವ ಮತ್ತು ವಿದೇಶಿಯರ ಸ್ಥಾನಮಾನವನ್ನು ನಿರ್ಧರಿಸುವಾಗ ಕೇವಲ ಯಾಂತ್ರಿಕವಾಗಿ ತೀರ್ಪು ನೀಡಲಾಗದು, ಬದಲಿಗೆ ಅತ್ಯಂತ ನ್ಯಾಯಯುತ, ಕಾನೂನುಬದ್ಧ ಹಾಗೂ ಸಮಂಜಸವಾದ ಪ್ರಕ್ರಿಯೆಯನ್ನು ಕಡ್ಡಾಯವಾಗಿ ಪಾಲಿಸಲೇಬೇಕು ಎಂದು ಸುಪ್ರೀಂ ಕೋರ್ಟ್ ಸೋಮವಾರ...

ಶಿಕ್ಷಕ ‘ಖಾನ್ ಸರ್‌’ಗೆ ಪಟ್ನಾ ಕೋರ್ಟ್‌ನಲ್ಲಿ ಜಯ: ಕೋಚಿಂಗ್ ಸೆಂಟರ್ ದಾಳಿ ಪ್ರಕರಣದಲ್ಲಿ ಮುಂಗಡ ಜಾಮೀನು ಮಂಜೂರು

ಬಿಹಾರದ ಖ್ಯಾತ ಶಿಕ್ಷಕ ಫೈಸಲ್ ಖಾನ್ (ಜನಪ್ರಿಯವಾಗಿ ಖಾನ್ ಸರ್ ಎಂದು ಕರೆಯಲ್ಪಡುವ) ಅವರಿಗೆ ಪಟ್ನಾ ನ್ಯಾಯಾಲಯವು ಸೋಮವಾರ ಮುಂಗಡ ಜಾಮೀನು ಮಂಜೂರು ಮಾಡಿದೆ. ಈ ತಿಂಗಳ ಆರಂಭದಲ್ಲಿ ಅವರ ಕೋಚಿಂಗ್ ಇನ್ಸ್ಟಿಟ್ಯೂಟ್...

ಗುಜರಾತ್‌| ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಚಾಲಕನನ್ನು ಬೆದರಿಸಿದ ನಕಲಿ ಗೋರಕ್ಷಕರು

ಗುಜರಾತ್‌ನ ವಲ್ಸಾದ್ ಜಿಲ್ಲೆಯಲ್ಲಿ ಸ್ವಘೋಷಿತ ಗೋರಕ್ಷಕರ ಗುಂಪೊಂದು ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಅನ್ನು ಸುಮಾರು 100 ಕಿಲೋಮೀಟರ್‌ಗಳವರೆಗೆ ಬೆನ್ನಟ್ಟಿ, ವಾಹನವನ್ನು ತಡೆದು ಗುಂಪು ಮುಸ್ಲಿಂ ಚಾಲಕನನ್ನು ನಿಂದಿಸಿ ಬೆದರಿಸಿದ್ದಾರೆ. 'ಕ್ಲಾರಿಯನ್ ಇಂಡಿಯಾ' ವರದಿ ಪ್ರಕಾರ,...

ವಿಜಯ್ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಜಯ: ತಮಿಳುನಾಡು ಗೋಹತ್ಯೆ ನಿಷೇಧದ ಹೈಕೋರ್ಟ್ ಆದೇಶಕ್ಕೆ ತಡೆ

ತಮಿಳುನಾಡಿನಲ್ಲಿ ಹಸು ಮತ್ತು ಕರುಗಳ ಹತ್ಯೆಯನ್ನು ರಾಜ್ಯಾದ್ಯಂತ ಸಂಪೂರ್ಣವಾಗಿ ನಿಷೇಧಿಸಿ ಮದ್ರಾಸ್ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ತಡೆ ನೀಡಿದೆ. ಮುಖ್ಯಮಂತ್ರಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK)...