Homeಕರ್ನಾಟಕಗೌರಿ ಲಂಕೇಶ್‌ ಹುತಾತ್ಮ ದಿನ: ದೇಶಾದ್ಯಂತ ನೆನಪಿನ‌ ಕಾರ್ಯಕ್ರಮಗಳು

ಗೌರಿ ಲಂಕೇಶ್‌ ಹುತಾತ್ಮ ದಿನ: ದೇಶಾದ್ಯಂತ ನೆನಪಿನ‌ ಕಾರ್ಯಕ್ರಮಗಳು

ತಮಿಳುನಾಡಿನಲ್ಲಿ ’ತಮಿಳಗ ಮಕ್ಕಳ್ ಪನ್ಬಾಟ್ಟು ಕಳಗಂ’, ನರೇದ್ರ ಧಾಬೋಲ್ಕರ್‌, ಗೋವಿಂದ ಪನ್ಸಾರೆ, ಎಂ.ಎಂ. ಕಲ್ಬುರ್ಗಿ ಹಾಗೂ ಗೌರಿ ಲಂಕೇಶ್ ಸ್ಮರಣಾರ್ಥ ಸಭೆಯನ್ನು ನಡೆಸುತ್ತಿದೆ.

- Advertisement -
- Advertisement -

ದಿಟ್ಟ ಪತ್ರಕರ್ತೆ ಗೌರಿ ಲಂಕೇಶ್‌ ಅವರನ್ನು ದುಷ್ಕಮಿಗಳು ಹತ್ಯೆ ಮಾಡಿ ಇಂದಿಗೆ ಮೂರು ವರ್ಷವಾಗಿದ್ದು, ದೇಶಾದ್ಯಂತ ಗೌರಿ ಲಂಕೇಶ್ ನೆನಪಿನ ಕಾರ್ಯಕ್ರಮಗಳು ನಡೆಯುತ್ತಿದೆ.

ಇಂದು ಮುಂಜಾನೆ ಒಂಬತ್ತು ಗಂಟೆಗೆ ಗೌರಿ ಲಂಕೇಶ್‌ ಸಮಾಧಿಗೆ ಭೇಟಿ ಮಾಡಿದ ಗೌರಿ ಲಂಕೇಶ್ ಸ್ನೇಹಿತ ಬಳಗ ಶ್ರದ್ದಾಂಜಲಿ ಸಲ್ಲಿಸಿದರು. ಈ ಸಂದರ್ಭ ಮಾತನಾಡಿದ ಹೋರಾಟಗಾರ ನೂರ್‌ ಶ್ರೀಧರ್‌, “ಪಿ ಲಂಕೇಶ್ ಸಾವಿನ ನಂತರ ಧೀಮಂತ ಪತ್ರಿಕೆಯ ಜವಾಬ್ದಾರಿ ಗೌರಿ ಲಂಕೇಶ್ ಮೇಲೆ ಬಿತ್ತು. ಅಪ್ಪನ ಜವಾಬ್ದಾರಿ ಹೊತ್ತುಕೊಂಡು ಕಷ್ಟಪಟ್ಟು ಪತ್ರಿಕೆ ಮುನ್ನಡೆಸಿದ ಅವರದು ಬಹುಪಾಲು ಪ್ರವಾಹದ ವಿರುದ್ಧದ ಈಜು. ‌ಪತ್ರಕರ್ತೆ ಮಾತ್ರವಾಗಿಯಲ್ಲದೇ ಜನಪರ ಚಳವಳಿಗಳ ಸಂಗಾತಿಯಾಗಿ ಗೌರಿ ಲಂಕೇಶ್ ಬೆಳೆದ ಪರಿ ಅನನ್ಯ” ಎಂದರು.

ಗೌರಿ ಲಂಕೇಶ್‌ರವರನ್ನು ಮುಗಿಸುವ ಮೂಲಕ ದನಿ ಅಡಗಿಸಲು ಬಲಪಂಥೀಯರು ಪ್ರಯತ್ನಿಸಿದರು. ಆದರೆ ಅವರ ಪತ್ರಿಕೆಯನ್ನು ಮುನ್ನಡುಸುವ ಮೂಲಕ ಅವರ ಆಶಯಗಳನ್ನು ಮುಂದುವರೆಸಲು ನಾವೆಲ್ಲರೂ ಪ್ರಯತ್ನಿಸುತ್ತಿದ್ದೇವೆ. ಆದರೆ ಲಂಕೇಶ್ ಇದ್ದಾಗಿನ ಪ್ರವಾಹ, ಗೌರಿ ಇದ್ದಾಗಿನ ಪ್ರವಾಹ ಮತ್ತು ಇಂದಿನ ಪ್ರವಾಹ ಬೇರೆ ಬೇರೆಯಾಗಿವೆ. ಪ್ರವಾಹದ ತೀವ್ರತೆ ಹೆಚ್ಚಾಗಿದೆ. ಇಂತಹ ಸಂದರ್ಭದಲ್ಲಿ ಕಚ್ಚಿಕೊಂಡು ನಿಂತುಕೊಂಡು ಅದರ ವಿರುದ್ಧ ಸಂಘರ್ಷ ನಡೆಸುವ ಜವಾಬ್ದಾರಿ ನಮ್ಮದಾಗಿದೆ ಎಂದರು.

ದಿಟ್ಟ ಪತ್ರಕರ್ತೆ, ಹೋರಾಟಗಾರ್ತಿ ಗೌರಿ ಲಂಕೇಶ್ ರವರ ಸ್ಮರಣೆ..

Posted by Naanu Gauri on Friday, September 4, 2020

ಗೌರಿ ಲಂಕೇಶ್ ನೆನಪಿನ ಕಾರ್ಯಕ್ರಮವು ನಿನ್ನೆಯಿಂದಲೇ ಪ್ರಾರಂಭವಾಗಿದ್ದು, ಗೌರಿ ಮೀಡಿಯಾ ಟ್ರಸ್ಟ್ ವತಿಯಿಂದ ನಿನ್ನೆ ’ಗೌರಿ ನೆನಹು’ ಆಯೋಜನೆಯಾಗಿತ್ತು. ಕಾರ್ಯಕ್ರಮದಲ್ಲಿ ಹಿರಿಯ ಸ್ವಾತಂತ್ಯ್ರ ಹೋರಾಟಗಾರ ದೊರೆಸ್ವಾಮಿ ಮಾತನಾಡಿ, ಕೋಮುವಾದಿಗಳು ಗೌರಿಯನ್ನು ಕೊಂದಿರಬಹುದು ಆದರೆ ಅವರ ಚಿಂತನೆಗಳು ಸದಾ ಇರುತ್ತದೆ, ಅವರು ಹಾಕಿಕೊಟ್ಟ ಮೌಲ್ಯಗಳ ಅಡಿಯಲ್ಲಿ ಸಾಗಿ ಧೈರ್ಯದಿಂದ ಕೋಮುವಾದಿಗಳನ್ನು ಎದುರಿಸಬೇಕಾಗಿದೆ ಎಂದು ಹೇಳಿದ್ದರು. ಕಾರ್ಯಕ್ರಮದಲ್ಲಿ ಕವಿತಾ ಲಂಕೇಶ್, ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್, ಗೌರಿ ಮೀಡಿಯಾ ಟ್ರಸ್ಟ್‌‌ನ ದೊಡ್ಡಿಪಾಳ್ಯ ನರಸಿಂಹ ಮೂರ್ತಿ‌ ಸೇರಿದಂತೆ ಹಲವಾರು ಭಾಗಿಯಾಗಿದ್ದರು.

ನೆನಪುಗಳಲ್ಲಿ ನಮ್ಮ ಗೌರಿ – ವೆಬಿನಾರ್…

ನೆನಪುಗಳಲ್ಲಿ ನಮ್ಮ ಗೌರಿ – ವೆಬಿನಾರ್ಮಾತನಾಡುವವರುಎಚ್.ಎಸ್.ದೊರೆಸ್ವಾಮಿ, ಚಂದ್ರಶೇಖರ್‌ ಆಜಾದ್‌ ರಾವಣ್‌, ತೀಸ್ತಾ ಸೆಟ್ಲ್‌ವಾದ್‌, ನೂರ್‌ ಶ್ರೀಧರ್‌, ಕವಿತಾ ಲಂಕೇಶ್

Posted by Naanu Gauri on Friday, September 4, 2020

ಅಷ್ಟೇ ಅಲ್ಲದೆ, ಪಿಯುಸಿಎಲ್ ಕರೆಯಂತೆ ದೇಶದಾದ್ಯಂತ ಆಗಸ್ಟ್ 28 ರಿಂದ ಸೆಪ್ಟೆಂಬರ್‌ 5 ರ ವರೆಗೆ ಒಂದು ವಾರ ಪ್ರತಿಭಟನೆ ನಡೆಸಲು ಕರೆ ನೀಡಿದ್ದು, 70 ಕ್ಕೂ ಹೆಚ್ಚು ಸಂಘಟನೆಗಳು ಬೆಂಬಲ ನೀಡಿದೆ.

ಇದನ್ನೂ ಓದಿ: ಬದುಕಿದ್ದರೆ ಗೌರಿ ಮೇಡಂ ಹೀಗನ್ನುತ್ತಿದ್ದರೇನೋ

ತಮಿಳುನಾಡಿನಲ್ಲಿ ’ತಮಿಳಗ ಮಕ್ಕಳ್ ಪನ್ಬಾಟ್ಟು ಕಳಗಂ’, ನರೇದ್ರ ಧಾಬೋಲ್ಕರ್‌, ಗೋವಿಂದ ಪನ್ಸಾರೆ, ಎಂ.ಎಂ. ಕಲ್ಬುರ್ಗಿ ಹಾಗೂ ಗೌರಿ ಲಂಕೇಶ್ ಸ್ಮರಣಾರ್ಥ ಸಭೆಯನ್ನು ನಡೆಸುತ್ತಿದೆ.

ದೆಹಲಿ ಗಲಭೆಯ ನೈಜ ಅಪರಾಧಿಗಳನ್ನು ಬಂಧಿಸುವಂತೆ, ಎಲ್ಲಾ ರಾಜಕೀಯ ಖೈದಿಗಳನ್ನು ಬಿಡುಗಡೆಗೊಳಿಸುವಂತೆ, ಸಿಎಎ-ಎನ್‌ಆರ್‌ಸಿ-ಎನ್‌ಆರ್‌ಪಿ ಮತ್ತು ಯುಎಪಿಎಯನ್ನು ರದ್ದುಗೊಳಿಸುವಂತೆ ಹಾಗೂ ಪ್ರಜಾಪ್ರಭುತ್ವ ಹಕ್ಕಿನ ಮೇಲೆ ನಡೆಯುತ್ತಿರುವ ಹಲ್ಲೆಯನ್ನು ವಿರೋಧಿಸಿ ಗೌರಿ ಲಂಕೇಶ್ ಹುತಾತ್ಮ ದಿನದ ಅಂಗವಾಗಿ ಜಂಶೆಡ್‌ಪುರದ ಡಿಸಿ ಕಚೇರಿಯ ಮುಂದೆ ಪ್ರತಿಭಟನಾ ಸಭೆ ನಡೆಯಲಿದೆ.

ಗೌರಿ ಲಂಕೇಶ್‌ ಅವರ ನಿರ್ಭಿತ ಚೈತನ್ಯ ಮತ್ತು ಗಾಢ ನಂಬಿಕೆಗಳಿಂದ ಉತ್ತೇಜಿತವಾಗಿ, ಸಂವಿಧಾನ ಮತ್ತು ಜನರ ಮೇಲಿನ ಹಲ್ಲೆಗಳನ್ನು ಖಂಡಿಸಿ ಅವುಗಳ ವಿರುದ್ಧ ಧ್ವನಿ ಎತ್ತಲು ರಾಷ್ಟ್ರಮಟ್ಟದಲ್ಲಿ ಮಹಿಳಾ ಪರ ಹೋರಾಟಗಾರರು, ಚಿಂತಕರು, ಲೈಂಗಿಕ ಅಲ್ಪ ಸಂಖ್ಯಾತ LGBTQIA ಸಮುದಾಯಗಳು ಮತ್ತು ಮಾನವ ಹಕ್ಕುಗಳ ಸಂಘಟನೆಗಳು “ನಾವೆದ್ದು ನಿಲ್ಲದಿದ್ದರೆ” ಎಂಬ ಪ್ರಚಾರಾಂದೋಲನ ಹಮ್ಮಿಕೊಂಡಿವೆ.

ಮೂಲ ಕವಿತೆ :Kavitha Lankeshಕನ್ನಡಕ್ಕೆ : Shiva Sundarಪ್ರಸ್ತುತಿ:Najma Nazeer Chikkaneraleಸಂಕಲನ:Viewlivetv Irshad Kalkatta#ifwedonotrise #ifwedonotrisekarnataka #ನಾವೆದ್ದುನಿಲ್ಲದಿದ್ದರೆ‌ #GauriLankesh #poetry ಮಹಿಳಾ ಮತ್ತು ಮಕ್ಕಳ ಹಕ್ಕುಗಳಿಗಾಗಿ ಮಾತಾಡೋಣ ಸೆಪ್ಟೆಂಬರ್ ೫ರಂದು.

Posted by Najma Nazeer Chikkanerale on Tuesday, September 1, 2020

’ನಾವೆದ್ದು ನಿಲ್ಲದಿದ್ದರೆ’ ಅಭಿಯಾನವನ್ನು ಬೆಂಬಲಿಸಿರುವ ’ಸೃಜನಿ ಧಾರವಾಡ’ ತಂಡವು, ’ಗೌರಿ ನೆನಪಿಗೊಂದು ಹೂ’ ಎಂಬ ಗೌರಿ ಲಂಕೇಶರ ಸ್ಮರಣೆಯ ಕಾರ್ಯಕ್ರಮವನ್ನು ಆಯೋಜಿಸಿದ್ದಾರೆ. ಕಾರ್ಯಕ್ರಮದಲ್ಲಿ ರಜನಿ ಗರುಡ, ಡಾ. ಸುರೇಖಾ ದೇವಿ, ಡಾ. ವಿನಯಾ ಒಕ್ಕುಂದ, ಡಾ. ಸಿದ್ದನಗೌಡ ಪಾಟಿಲ,ಡಾ. ಮಾಲತಿ ಪಟ್ಟಣಶೆಟ್ಟಿ ಸೇರಿದಂತೆ ಹಲವಾರು ಜನರು ಭಾಗವಹಿಸಿಲಿದ್ದಾರೆ.

ಇಷ್ಟೇ ಅಲ್ಲದೆ ದೇಶದ ಹಲವಾರು ವಿದ್ಯಾರ್ಥಿ ಸಂಘಟನೆಗಳು, ಸಾಮಾಜಿಕ ಸಂಘಟನೆಗಳು, ಸಾಮಾಜಿಕ ಕಾರ್ಯಕರ್ತರು, ಹೋರಾಟಗಾರರು, ಪತ್ರಕರ್ತರು ಹುತಾತ್ಮ ಗೌರಿ ಲಂಕೇಶ್‌ ಅವರನ್ನು ನೆನಪಿಸಿಕೊಂಡಿದ್ದಾರೆ.


ಇದನ್ನೂ ಓದಿ: ಸೆ.5 ಕ್ಕೆ ಗೌರಿ ಲಂಕೇಶ್ ನೆನಪಿನಲ್ಲಿ ಮೊಳಗಲಿದೆ ‘ನಾವೆದ್ದು ನಿಲ್ಲದಿದ್ದರೆ…’ ಧ್ವನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...