Homeಕರ್ನಾಟಕಗೌರಿ ಲಂಕೇಶ್ ನೆನಪು: ಹಲವರಿಂದ 'ಕಾವ್ಯ ನಮನ'

ಗೌರಿ ಲಂಕೇಶ್ ನೆನಪು: ಹಲವರಿಂದ ‘ಕಾವ್ಯ ನಮನ’

- Advertisement -
- Advertisement -

ಗೌರಿ ದಾರಿ

ತಮಂಧದ ಘನವು
ಜಗವ ಆವರಿಸುವಾಗ
ಲೋಕದುರಿಗೆ ತೆತ್ತುಕೊಂಡು..

ಬೇಯುತ್ತಾ ಬೇಯುತ್ತಾ
ಬೆಳಕಾದವಳಲ್ಲವೇ ಗೌರಿ…?

ಬಹಿರಂಗದ ಬೆಂಕಿಯಲ್ಲಿ
ಅಂತರಂಗದ ಹಿಮಕರಗಿದಾಗ
ಉಕ್ಕಿಹರಿದ ಮಮಕಾರದಲ್ಲಿ
ರೂಪುಗೊಂಡ
ರೂಹಲ್ಲವೇ ಗೌರಿ…?

ಹೊರಗಿನ ಬಿರುಗಾಳಿಗೆ
ಒಳಗಿನ ಸುಳಿಗಾಳಿಗೆ..

ಒಡಲ ಸೊಡರು ಆರದಂತೆ
ದೀಕ್ಷೆತೊಟ್ಟ
ದೀವಟಿಗೆಯಲ್ಲವೇ ಗೌರಿ?

ಸಿದ್ಧತೆಗೆ ತಕ್ಕಂತೆ
ಸಿದ್ಧಾಂತ ಹೊಸೆಯದೇ..

ಬೀದಿಯ ಜೊತೆ
ಬೆಸಗೊಂಡು
ಬೀದಿದೀಪವಾಗಿದ್ದಲ್ಲವೇ ಗೌರಿ?

ನಾನೆಂಬ ನಾಗರಕೆ
ಒಳದನಿಯ
ಪಿಸುಪುಂಗಿಯ ಕಾವಲಿಟ್ಟು…

ನಾನಳಿದು ತಾನುರಿದು
ನಮ್ಮೊಳಗೇ ನಾವಾಗಿ
ಸಿಕ್ಕವಳಲ್ಲವೇ ಗೌರಿ…?

ಕೆಂಪೊಳಗಿನ ನೀಲಿಯನ್ನು
ನೀಲಿಯೊಳಗಿನ ಕೆಂಪನ್ನು..

ಕಪ್ಪೊಳಗಿನ ಕೆಚ್ಚನ್ನು
ಬಿಳಿಯೊಳಗಿನ ಬಯಲನ್ನು..

ಅರಿತು ಕಲಿತು ಕಲೆತು
ಕಾಮನಬಿಲ್ಲಾದವಳಲ್ಲವೇ ಗೌರಿ…?

-ಶಿವಸುಂದರ್

——————————-

ಮೊನ್ನೆ ಮೊನ್ನೆಯಪ್ಪೇ
ನಮ್ಮ ಜೊತೆಯಿದ್ದ ಸಣಕಲು
ಗಟ್ಟಿಗಿತ್ತಿಯೊಬ್ಬಳನ್ನು
ಆಕೆ
ಬಡವರ, ಆದಿವಾಸಿಗಳ
ಅಲ್ಪಸಂಖ್ಯಾತರ, ಹಿಂದುಳಿದವರ
ದಲಿತರ ಪರವಾಗಿ ಮಾತನಾಡುತ್ತಾಳೆ
ಎನ್ನುವ ಕಾರಣಕ್ಕಾಗಿ ಕೊಲ್ಲಲಾಯಿತು
ಗುಂಡು ಹೊಡೆದು.

ಕೊಲೆಗಾರ ಅರೆಸ್ಟ್‌ ಆದಾಗ
ಅವನ ಮೋಬೈಲ್‌ ನಲ್ಲಿ ಸಿಕ್ಕವು
ಆಕೆಯ ಮೂರು ಸೆಲ್ಫಿಗಳು.

ಒಂದರಲ್ಲಿ ಆಕೆ,
ಬಡವರೊಂದಿಗೆ ಧರಣಿ ಕೂತಿದ್ದಳು
ಮನುಷ್ಯರ ಆಹಾರದ ಹಕ್ಕಿಗಾಗಿ,
ಇನ್ನೊಂದರಲ್ಲಿ, ಸ್ವಚ್ಛ ಮಾಡುತ್ತಿದ್ದಳು
ಬುಡನ್‌ ಸೂಫಿಯ ಹಾದಿಯಲ್ಲಿ ಹಾಕಲಾಗಿದ್ದ
ಕಲ್ಲು ಮುಳ್ಳುಗಳನ್ನು ಕಿತ್ತು,

ಮೂರನೇಯದರಲ್ಲಿ
ಟಾರ್ಚ್‌ ಹಿಡಿದುಕೊಂಡು ನಿಂತಿದ್ದಳು
ಮುಚ್ಚಿದ ದೇವರ ಮನೆಯ ಬಾಗಿಲಲ್ಲಿ,

ಹಟಮಾರಿ ಹೆಂಗಸು
ಸುಮ್ಮನಿರಬೇಕಿತ್ತು ಮಮ್ಮಲ ಮರುಗಿದರು
ಕೆಲವು ಸಂತ ಗಂಡಸರು,

ಆದರೆ ಹೆಣ್ಣು ಮನಸ್ಸಿಗೆ
ಇದೆಲ್ಲ ಎಷ್ಟು ಅಸಹನೀಯ ಎನ್ನುವುದಕ್ಕೆ
ಸತ್ಯ ಪ್ರಮಾಣದಂತಿವೆ
ಅವಳ ಉದ್ದಿಗ್ನ ಸಿಗರೇಟಿನ
ಅಶಾಂತ ಬೂದಿಯಲ್ಲಿ
ಇನ್ನೂ ಉರಿಯುತ್ತಿರುವ, ಆರುತ್ತಿರುವ
ಸ್ಪಷ್ಟ, ಅಸ್ಪಷ್ಟ ದನಿಗಳು.

-ಚಿದಂಬರ ನರೇಂದ್ರ

————————————–

ಗೌರಿ ಎಂಬ ಬೆಳಕು

ಆಗಾಗ ಅಂದುಕೊಳ್ಳುತ್ತೇನೆ
“ನಾನು ಮೊದಲು ಹೀಗಿರಲಿಲ್ಲ”
ಭಯವಿತ್ತು, ಭವಿಷ್ಯದ ಅಳುಕಿತ್ತು.
“ಜೋಕೆ, ಪ್ರಭುತ್ವ ನಿನ್ನ ಮುಕ್ಕಿ ತಿನ್ನುತ್ತೆ
ನೀನು ಬೆಳೆಯದಂತೆ ತುಳಿತಾರೆ,
ಜೈಲಿಗೆ ಹಾಕಿಸ್ತಾರೆ, ಕೊಲ್ತಾರೆ,
ಕಿರುಕುಳ ಕೊಡ್ತಾರೆ..ʼ
ತರಹೇವಾರಿ ಜನ ಹೇಳಿದ್ದು ಬುದ್ಧಿಮಾತೋ
ಬೆದರಿಸಿ ಬಾಯಿ ಮುಚ್ಚಿಸುವ ಸಂಚೋ-
ಎರಡೂ ಹೌದು.
ನಾನಂತೂ ಬಾಯಿ ತೆರೆಯದೆ ಇದ್ದೆ-
“ಮೊದಲು ನಾನು ಹೀಗಿರಲಿಲ್ಲ”
“ನೀನು ಪತ್ರಕರ್ತ
ಭಟ್ಟಂಗಿಗಳು, ಭಕ್ತರೇ ತುಂಬಿರುವ ವೃತ್ತಿಯಲ್ಲಿ
ನೀನು ಶೋಷಿತರ ಹುಡುಗ.
ದಲಿತ, ಮುಸ್ಲಿಂ, ಒಬಿಸಿ, ಆದಿವಾಸಿ ಎನ್ನಬೇಡ,
ಸಂಘಿಗಳ ಟೀಕಿಸಬೇಡ,
ನಿನ್ನ ಮೇಲೆ ಕಣ್ಣಿಡ್ತಾರೆ,
ತಳಿಯುತ್ತಾರೆ”
-ಅಬ್ಬಾ, ಎಷ್ಟೊಂದು ಮಾತು!
ಒಡಲಕಿಚ್ಚು ದಹಿಸುವಾಗ
ಹೊಟ್ಟೆಪಾಡಿಗೆ ಮುಚ್ಚಿಟ್ಟುಕೊಂಡೆ.
ಹೀಗೊಂದು ದಿನ ಗೌರಿಯಮ್ಮ ಸಿಕ್ಕಳು
ಅವಳಿಗೆ ತಾಕಿದ ಗುಂಡು
ನನ್ನೆದೆಯ ಹೊಕ್ಕು ನಾನು ಸಾಯಲಿಲ್ಲ
ಹುಟ್ಟಿದೆ, ಸಿಡಿದೆ,
ಚಿಮ್ಮಿದ ರಕ್ತ ಶಾಹಿಯಾಗಿ ಹೊಮ್ಮಿತ್ತು
ಗಟಾರದ ಕೊಚ್ಚೆ ನೀರ
ಭಾರೀ ಮಳೆಯೊಂದು ಕೊಚ್ಚಿತ್ತು
‘ನಾನುಗೌರಿ’ಯಾದೆ.
ಭವಿಷ್ಯದ ಭಯವೇ? ಯಾರ ಭವಿಷ್ಯ?
ದೇಶವಿರದೆ, ಪ್ರೀತಿಯಿರದೆ ಭವಿಷ್ಯವುಂಟೆ?
ಇರದುದ ಉಳಿಸಲು, ಆತಂಕ ಕರಗಿ
ಸತ್ಯದ ದಾರಿಯೊಂದು ತೆರೆದಿತ್ತು.
ಅರೆಹೊಟ್ಟೆ ಅಳುಕಲಿಲ್ಲ
ಅದಕೇಕೆ ಅಂಜಲಿ?
ನುಡಿ ಸತ್ಯ ನುಡಿ
ಹೊರಡು ನಿನ್ನ ಹಾದಿ ಇದುವೆ.
ಗೌರಿ ಎಂಬ ಬೆಳಕು ತೆರೆದಿತ್ತು
‘ನಾನುಗೌರಿ’ಯಾದಾಗ
ಎಷ್ಟೊಂದು ಧೈರ್ಯ!
ನಾನು ಏನೆಂದು ತಿಳಿದಾಯ್ತು.
ಬೆದರಿಸಿದವರು ಬೆಚ್ಚಿದರು
ಚುಚ್ಚಿದವರು ಕೊಚ್ಚಿ ಹೋದರು
ಗೌರಿ ಎಂದರೆ ಪ್ರೇಮದ ಸುಡುಸುಡು ಪಂಜು
ಗೌರಿ ಎಂದರೆ ಪ್ರಭುತ್ವಕ್ಕೆ ಸಿಡಿಮದ್ದು
ಗೌರಿ ಎಂದರೆ ನಿರ್ಭೀತ ಮಮತೆ
ಗೌರಿ ಸಾಯಲಿಲ್ಲ
ಕೊಂದವರೆದುರು ಹುಟ್ಟಿದಳು
ನಮ್ಮೆಲ್ಲರೆದೆರಲಿ.
ಆಲವ ಕಡಿಯ ಬಂದವರೆದುರು
ಸಹಸ್ರಾರು ಬೇರು
ಕಾಂಡ ಲಯವಾಗಿ ಹಬ್ಬಿದ ಬಿಳಲ ಕಂಡು
ಕೊಡಲಿಗಳಿಗೆ ಕಂಪನ.
‘ನಾನುಗೌರಿ’.
ಬೆಳಕು ತೆರೆದಾಗ
ಭಯವೇಕೆ?
‘ನಾವೆಲ್ಲ ಗೌರಿ’
ನೊಂದುಬೆಂದು ತಂಗಾಳಿ.

– ಯತಿರಾಜ್ ಬ್ಯಾಲಹಳ್ಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...

ಕ್ಷುಲ್ಲಕ ಕಾರಣಕ್ಕೆ ಮೂವರು ಮುಸ್ಲಿಮರ ಮೇಲೆ ಹಲ್ಲೆ ನಡೆಸಿದ ದುಷ್ಕರ್ಮಿ

ಕ್ಷುಲ್ಲಕ ಕಾರಣಕ್ಕೆ ಇಬ್ಬರು ಹಿರಿಯ ವಯಸ್ಕರು ಸೇರಿದಂತೆ ಮೂವರು ಮುಸ್ಲಿಂ ವ್ಯಕ್ತಿಗಳ ಮೇಲೆ ದುಷ್ಕರ್ಮಿಯೊಬ್ಬ ಅಮಾನವೀಯವಾಗಿ ಹಲ್ಲೆ ನಡೆಸಿರುವ ಘಟನೆ ಉತ್ತರ ಪ್ರದೇಶದ ಬದೌನ್ ಜಿಲ್ಲೆಯಲ್ಲಿ ನಡೆದಿದೆ. ಫೆಬ್ರವರಿ 15ರಂದು ಜಿಲ್ಲೆಯ ರುದಾಯನ್ ಪಟ್ಟಣದಲ್ಲಿ...

ಎಸ್‌ಐಆರ್ ಬಳಿಕ 9 ರಾಜ್ಯ, ಕೇಂದ್ರಾಡಳಿತ ಪ್ರದೇಶಗಳ ಮತದಾರರ ಸಂಖ್ಯೆ 1.70 ಕೋಟಿ ಇಳಿಕೆ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ 9 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮತದಾರರ ಒಟ್ಟು ಸಂಖ್ಯೆಯಲ್ಲಿ 1.70 ಕೋಟಿ ಇಳಿಕೆ ಕಂಡಿದೆ. ಗುಜರಾತ್, ಪುದುಚೇರಿ, ಲಕ್ಷದ್ವೀಪ, ರಾಜಸ್ಥಾನ, ಛತ್ತೀಸ್‌ಗಢ, ಅಂಡಮಾನ್...

ಅಫ್ಘಾನ್ ಗಡಿಯಲ್ಲಿ ಪಾಕಿಸ್ತಾನ ವೈಮಾನಿಕ ದಾಳಿ : 20ಕ್ಕೂ ಹೆಚ್ಚು ಜನರು ಸಾವನ್ನಪ್ಪಿರುವ ಶಂಕೆ

ಅಫ್ಘಾನಿಸ್ತಾನದ ಗಡಿ ಪ್ರದೇಶಗಳಲ್ಲಿ ಪಾಕಿಸ್ತಾನ ಭಾನುವಾರ (ಫೆ.22) ಭಾರೀ ವೈಮಾನಿಕ ದಾಳಿ ನಡೆಸಿರುವುದಾಗಿ ವರದಿಯಾಗಿದೆ. ಪಾಕಿಸ್ತಾನದ ವಾಯುಪಡೆಯು ಅಫ್ಘಾನಿಸ್ತಾನದ ಪಕ್ತಿಕಾ ಮತ್ತು ನಂಗರ್ಹಾರ್ ಪ್ರಾಂತ್ಯಗಳಲ್ಲಿರುವ ಏಳು ಸಶಸ್ತ್ರ ಗುಂಪುಗಳ ಅಡಗುತಾಣಗಳ ಮೇಲೆ ದಾಳಿ ನಡೆಸಿದೆ...

ಹೊಸ ಜಾಗತಿಕ ಸುಂಕವನ್ನು ಶೇ.15ಕ್ಕೆ ಏರಿಸಿದ ಟ್ರಂಪ್

ಪ್ರತಿ ಸುಂಕ ನೀತಿಯನ್ನು ರದ್ದುಗೊಳಿಸಿದ್ದ ಸುಪ್ರೀಂ ಕೋರ್ಟ್ ಆದೇಶಕ್ಕೆ ಸೆಡ್ಡು ಹೊಡೆದು, ಎಲ್ಲಾ ದೇಶಗಳ ಆಮದಿನ ಮೇಲೆ ಹೊಸದಾಗಿ 10 ಶೇಕಡ ಜಾಗತಿಕ ಸುಂಕ ಘೋಷಿಸಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಶನಿವಾರ...

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...