Homeಕರ್ನಾಟಕಗೌರಿ ಲಂಕೇಶ್ ನೆನಪು: ಹಲವರಿಂದ 'ಕಾವ್ಯ ನಮನ'

ಗೌರಿ ಲಂಕೇಶ್ ನೆನಪು: ಹಲವರಿಂದ ‘ಕಾವ್ಯ ನಮನ’

- Advertisement -
- Advertisement -

ಗೌರಿ ದಾರಿ

ತಮಂಧದ ಘನವು
ಜಗವ ಆವರಿಸುವಾಗ
ಲೋಕದುರಿಗೆ ತೆತ್ತುಕೊಂಡು..

ಬೇಯುತ್ತಾ ಬೇಯುತ್ತಾ
ಬೆಳಕಾದವಳಲ್ಲವೇ ಗೌರಿ…?

ಬಹಿರಂಗದ ಬೆಂಕಿಯಲ್ಲಿ
ಅಂತರಂಗದ ಹಿಮಕರಗಿದಾಗ
ಉಕ್ಕಿಹರಿದ ಮಮಕಾರದಲ್ಲಿ
ರೂಪುಗೊಂಡ
ರೂಹಲ್ಲವೇ ಗೌರಿ…?

ಹೊರಗಿನ ಬಿರುಗಾಳಿಗೆ
ಒಳಗಿನ ಸುಳಿಗಾಳಿಗೆ..

ಒಡಲ ಸೊಡರು ಆರದಂತೆ
ದೀಕ್ಷೆತೊಟ್ಟ
ದೀವಟಿಗೆಯಲ್ಲವೇ ಗೌರಿ?

ಸಿದ್ಧತೆಗೆ ತಕ್ಕಂತೆ
ಸಿದ್ಧಾಂತ ಹೊಸೆಯದೇ..

ಬೀದಿಯ ಜೊತೆ
ಬೆಸಗೊಂಡು
ಬೀದಿದೀಪವಾಗಿದ್ದಲ್ಲವೇ ಗೌರಿ?

ನಾನೆಂಬ ನಾಗರಕೆ
ಒಳದನಿಯ
ಪಿಸುಪುಂಗಿಯ ಕಾವಲಿಟ್ಟು…

ನಾನಳಿದು ತಾನುರಿದು
ನಮ್ಮೊಳಗೇ ನಾವಾಗಿ
ಸಿಕ್ಕವಳಲ್ಲವೇ ಗೌರಿ…?

ಕೆಂಪೊಳಗಿನ ನೀಲಿಯನ್ನು
ನೀಲಿಯೊಳಗಿನ ಕೆಂಪನ್ನು..

ಕಪ್ಪೊಳಗಿನ ಕೆಚ್ಚನ್ನು
ಬಿಳಿಯೊಳಗಿನ ಬಯಲನ್ನು..

ಅರಿತು ಕಲಿತು ಕಲೆತು
ಕಾಮನಬಿಲ್ಲಾದವಳಲ್ಲವೇ ಗೌರಿ…?

-ಶಿವಸುಂದರ್

——————————-

ಮೊನ್ನೆ ಮೊನ್ನೆಯಪ್ಪೇ
ನಮ್ಮ ಜೊತೆಯಿದ್ದ ಸಣಕಲು
ಗಟ್ಟಿಗಿತ್ತಿಯೊಬ್ಬಳನ್ನು
ಆಕೆ
ಬಡವರ, ಆದಿವಾಸಿಗಳ
ಅಲ್ಪಸಂಖ್ಯಾತರ, ಹಿಂದುಳಿದವರ
ದಲಿತರ ಪರವಾಗಿ ಮಾತನಾಡುತ್ತಾಳೆ
ಎನ್ನುವ ಕಾರಣಕ್ಕಾಗಿ ಕೊಲ್ಲಲಾಯಿತು
ಗುಂಡು ಹೊಡೆದು.

ಕೊಲೆಗಾರ ಅರೆಸ್ಟ್‌ ಆದಾಗ
ಅವನ ಮೋಬೈಲ್‌ ನಲ್ಲಿ ಸಿಕ್ಕವು
ಆಕೆಯ ಮೂರು ಸೆಲ್ಫಿಗಳು.

ಒಂದರಲ್ಲಿ ಆಕೆ,
ಬಡವರೊಂದಿಗೆ ಧರಣಿ ಕೂತಿದ್ದಳು
ಮನುಷ್ಯರ ಆಹಾರದ ಹಕ್ಕಿಗಾಗಿ,
ಇನ್ನೊಂದರಲ್ಲಿ, ಸ್ವಚ್ಛ ಮಾಡುತ್ತಿದ್ದಳು
ಬುಡನ್‌ ಸೂಫಿಯ ಹಾದಿಯಲ್ಲಿ ಹಾಕಲಾಗಿದ್ದ
ಕಲ್ಲು ಮುಳ್ಳುಗಳನ್ನು ಕಿತ್ತು,

ಮೂರನೇಯದರಲ್ಲಿ
ಟಾರ್ಚ್‌ ಹಿಡಿದುಕೊಂಡು ನಿಂತಿದ್ದಳು
ಮುಚ್ಚಿದ ದೇವರ ಮನೆಯ ಬಾಗಿಲಲ್ಲಿ,

ಹಟಮಾರಿ ಹೆಂಗಸು
ಸುಮ್ಮನಿರಬೇಕಿತ್ತು ಮಮ್ಮಲ ಮರುಗಿದರು
ಕೆಲವು ಸಂತ ಗಂಡಸರು,

ಆದರೆ ಹೆಣ್ಣು ಮನಸ್ಸಿಗೆ
ಇದೆಲ್ಲ ಎಷ್ಟು ಅಸಹನೀಯ ಎನ್ನುವುದಕ್ಕೆ
ಸತ್ಯ ಪ್ರಮಾಣದಂತಿವೆ
ಅವಳ ಉದ್ದಿಗ್ನ ಸಿಗರೇಟಿನ
ಅಶಾಂತ ಬೂದಿಯಲ್ಲಿ
ಇನ್ನೂ ಉರಿಯುತ್ತಿರುವ, ಆರುತ್ತಿರುವ
ಸ್ಪಷ್ಟ, ಅಸ್ಪಷ್ಟ ದನಿಗಳು.

-ಚಿದಂಬರ ನರೇಂದ್ರ

————————————–

ಗೌರಿ ಎಂಬ ಬೆಳಕು

ಆಗಾಗ ಅಂದುಕೊಳ್ಳುತ್ತೇನೆ
“ನಾನು ಮೊದಲು ಹೀಗಿರಲಿಲ್ಲ”
ಭಯವಿತ್ತು, ಭವಿಷ್ಯದ ಅಳುಕಿತ್ತು.
“ಜೋಕೆ, ಪ್ರಭುತ್ವ ನಿನ್ನ ಮುಕ್ಕಿ ತಿನ್ನುತ್ತೆ
ನೀನು ಬೆಳೆಯದಂತೆ ತುಳಿತಾರೆ,
ಜೈಲಿಗೆ ಹಾಕಿಸ್ತಾರೆ, ಕೊಲ್ತಾರೆ,
ಕಿರುಕುಳ ಕೊಡ್ತಾರೆ..ʼ
ತರಹೇವಾರಿ ಜನ ಹೇಳಿದ್ದು ಬುದ್ಧಿಮಾತೋ
ಬೆದರಿಸಿ ಬಾಯಿ ಮುಚ್ಚಿಸುವ ಸಂಚೋ-
ಎರಡೂ ಹೌದು.
ನಾನಂತೂ ಬಾಯಿ ತೆರೆಯದೆ ಇದ್ದೆ-
“ಮೊದಲು ನಾನು ಹೀಗಿರಲಿಲ್ಲ”
“ನೀನು ಪತ್ರಕರ್ತ
ಭಟ್ಟಂಗಿಗಳು, ಭಕ್ತರೇ ತುಂಬಿರುವ ವೃತ್ತಿಯಲ್ಲಿ
ನೀನು ಶೋಷಿತರ ಹುಡುಗ.
ದಲಿತ, ಮುಸ್ಲಿಂ, ಒಬಿಸಿ, ಆದಿವಾಸಿ ಎನ್ನಬೇಡ,
ಸಂಘಿಗಳ ಟೀಕಿಸಬೇಡ,
ನಿನ್ನ ಮೇಲೆ ಕಣ್ಣಿಡ್ತಾರೆ,
ತಳಿಯುತ್ತಾರೆ”
-ಅಬ್ಬಾ, ಎಷ್ಟೊಂದು ಮಾತು!
ಒಡಲಕಿಚ್ಚು ದಹಿಸುವಾಗ
ಹೊಟ್ಟೆಪಾಡಿಗೆ ಮುಚ್ಚಿಟ್ಟುಕೊಂಡೆ.
ಹೀಗೊಂದು ದಿನ ಗೌರಿಯಮ್ಮ ಸಿಕ್ಕಳು
ಅವಳಿಗೆ ತಾಕಿದ ಗುಂಡು
ನನ್ನೆದೆಯ ಹೊಕ್ಕು ನಾನು ಸಾಯಲಿಲ್ಲ
ಹುಟ್ಟಿದೆ, ಸಿಡಿದೆ,
ಚಿಮ್ಮಿದ ರಕ್ತ ಶಾಹಿಯಾಗಿ ಹೊಮ್ಮಿತ್ತು
ಗಟಾರದ ಕೊಚ್ಚೆ ನೀರ
ಭಾರೀ ಮಳೆಯೊಂದು ಕೊಚ್ಚಿತ್ತು
‘ನಾನುಗೌರಿ’ಯಾದೆ.
ಭವಿಷ್ಯದ ಭಯವೇ? ಯಾರ ಭವಿಷ್ಯ?
ದೇಶವಿರದೆ, ಪ್ರೀತಿಯಿರದೆ ಭವಿಷ್ಯವುಂಟೆ?
ಇರದುದ ಉಳಿಸಲು, ಆತಂಕ ಕರಗಿ
ಸತ್ಯದ ದಾರಿಯೊಂದು ತೆರೆದಿತ್ತು.
ಅರೆಹೊಟ್ಟೆ ಅಳುಕಲಿಲ್ಲ
ಅದಕೇಕೆ ಅಂಜಲಿ?
ನುಡಿ ಸತ್ಯ ನುಡಿ
ಹೊರಡು ನಿನ್ನ ಹಾದಿ ಇದುವೆ.
ಗೌರಿ ಎಂಬ ಬೆಳಕು ತೆರೆದಿತ್ತು
‘ನಾನುಗೌರಿ’ಯಾದಾಗ
ಎಷ್ಟೊಂದು ಧೈರ್ಯ!
ನಾನು ಏನೆಂದು ತಿಳಿದಾಯ್ತು.
ಬೆದರಿಸಿದವರು ಬೆಚ್ಚಿದರು
ಚುಚ್ಚಿದವರು ಕೊಚ್ಚಿ ಹೋದರು
ಗೌರಿ ಎಂದರೆ ಪ್ರೇಮದ ಸುಡುಸುಡು ಪಂಜು
ಗೌರಿ ಎಂದರೆ ಪ್ರಭುತ್ವಕ್ಕೆ ಸಿಡಿಮದ್ದು
ಗೌರಿ ಎಂದರೆ ನಿರ್ಭೀತ ಮಮತೆ
ಗೌರಿ ಸಾಯಲಿಲ್ಲ
ಕೊಂದವರೆದುರು ಹುಟ್ಟಿದಳು
ನಮ್ಮೆಲ್ಲರೆದೆರಲಿ.
ಆಲವ ಕಡಿಯ ಬಂದವರೆದುರು
ಸಹಸ್ರಾರು ಬೇರು
ಕಾಂಡ ಲಯವಾಗಿ ಹಬ್ಬಿದ ಬಿಳಲ ಕಂಡು
ಕೊಡಲಿಗಳಿಗೆ ಕಂಪನ.
‘ನಾನುಗೌರಿ’.
ಬೆಳಕು ತೆರೆದಾಗ
ಭಯವೇಕೆ?
‘ನಾವೆಲ್ಲ ಗೌರಿ’
ನೊಂದುಬೆಂದು ತಂಗಾಳಿ.

– ಯತಿರಾಜ್ ಬ್ಯಾಲಹಳ್ಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...

ಹೋರಾಟಗಾರ ಸೋನಮ್ ವಾಂಗ್ಚುಕ್ ಬಂಧನ ರದ್ದುಗೊಳಿಸಿದ ಕೇಂದ್ರ

ಲಡಾಖ್‌ನಲ್ಲಿ ಶಾಂತಿಯನ್ನು ಮರುಸ್ಥಾಪಿಸಲು ಮತ್ತು ಮಾತುಕತೆಗೆ ಪೂರಕವಾದ ವಾತಾವರಣವನ್ನು ನಿರ್ಮಿಸುವ ಉದ್ದೇಶದಿಂದ, ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (ಎನ್‌ಎಸ್‌ಎ) ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಬಂಧನವನ್ನು ಕೇಂದ್ರ ಸರ್ಕಾರ ಹಿಂಪಡೆದಿದೆ ಎಂದು ವರದಿಯಾಗಿದೆ. ಸರ್ಕಾರ...