Homeಕರ್ನಾಟಕಗೌರಿ ಲಂಕೇಶ್ ನೆನಪು: ಹಲವರಿಂದ 'ಕಾವ್ಯ ನಮನ'

ಗೌರಿ ಲಂಕೇಶ್ ನೆನಪು: ಹಲವರಿಂದ ‘ಕಾವ್ಯ ನಮನ’

- Advertisement -
- Advertisement -

ಗೌರಿ ದಾರಿ

ತಮಂಧದ ಘನವು
ಜಗವ ಆವರಿಸುವಾಗ
ಲೋಕದುರಿಗೆ ತೆತ್ತುಕೊಂಡು..

ಬೇಯುತ್ತಾ ಬೇಯುತ್ತಾ
ಬೆಳಕಾದವಳಲ್ಲವೇ ಗೌರಿ…?

ಬಹಿರಂಗದ ಬೆಂಕಿಯಲ್ಲಿ
ಅಂತರಂಗದ ಹಿಮಕರಗಿದಾಗ
ಉಕ್ಕಿಹರಿದ ಮಮಕಾರದಲ್ಲಿ
ರೂಪುಗೊಂಡ
ರೂಹಲ್ಲವೇ ಗೌರಿ…?

ಹೊರಗಿನ ಬಿರುಗಾಳಿಗೆ
ಒಳಗಿನ ಸುಳಿಗಾಳಿಗೆ..

ಒಡಲ ಸೊಡರು ಆರದಂತೆ
ದೀಕ್ಷೆತೊಟ್ಟ
ದೀವಟಿಗೆಯಲ್ಲವೇ ಗೌರಿ?

ಸಿದ್ಧತೆಗೆ ತಕ್ಕಂತೆ
ಸಿದ್ಧಾಂತ ಹೊಸೆಯದೇ..

ಬೀದಿಯ ಜೊತೆ
ಬೆಸಗೊಂಡು
ಬೀದಿದೀಪವಾಗಿದ್ದಲ್ಲವೇ ಗೌರಿ?

ನಾನೆಂಬ ನಾಗರಕೆ
ಒಳದನಿಯ
ಪಿಸುಪುಂಗಿಯ ಕಾವಲಿಟ್ಟು…

ನಾನಳಿದು ತಾನುರಿದು
ನಮ್ಮೊಳಗೇ ನಾವಾಗಿ
ಸಿಕ್ಕವಳಲ್ಲವೇ ಗೌರಿ…?

ಕೆಂಪೊಳಗಿನ ನೀಲಿಯನ್ನು
ನೀಲಿಯೊಳಗಿನ ಕೆಂಪನ್ನು..

ಕಪ್ಪೊಳಗಿನ ಕೆಚ್ಚನ್ನು
ಬಿಳಿಯೊಳಗಿನ ಬಯಲನ್ನು..

ಅರಿತು ಕಲಿತು ಕಲೆತು
ಕಾಮನಬಿಲ್ಲಾದವಳಲ್ಲವೇ ಗೌರಿ…?

-ಶಿವಸುಂದರ್

——————————-

ಮೊನ್ನೆ ಮೊನ್ನೆಯಪ್ಪೇ
ನಮ್ಮ ಜೊತೆಯಿದ್ದ ಸಣಕಲು
ಗಟ್ಟಿಗಿತ್ತಿಯೊಬ್ಬಳನ್ನು
ಆಕೆ
ಬಡವರ, ಆದಿವಾಸಿಗಳ
ಅಲ್ಪಸಂಖ್ಯಾತರ, ಹಿಂದುಳಿದವರ
ದಲಿತರ ಪರವಾಗಿ ಮಾತನಾಡುತ್ತಾಳೆ
ಎನ್ನುವ ಕಾರಣಕ್ಕಾಗಿ ಕೊಲ್ಲಲಾಯಿತು
ಗುಂಡು ಹೊಡೆದು.

ಕೊಲೆಗಾರ ಅರೆಸ್ಟ್‌ ಆದಾಗ
ಅವನ ಮೋಬೈಲ್‌ ನಲ್ಲಿ ಸಿಕ್ಕವು
ಆಕೆಯ ಮೂರು ಸೆಲ್ಫಿಗಳು.

ಒಂದರಲ್ಲಿ ಆಕೆ,
ಬಡವರೊಂದಿಗೆ ಧರಣಿ ಕೂತಿದ್ದಳು
ಮನುಷ್ಯರ ಆಹಾರದ ಹಕ್ಕಿಗಾಗಿ,
ಇನ್ನೊಂದರಲ್ಲಿ, ಸ್ವಚ್ಛ ಮಾಡುತ್ತಿದ್ದಳು
ಬುಡನ್‌ ಸೂಫಿಯ ಹಾದಿಯಲ್ಲಿ ಹಾಕಲಾಗಿದ್ದ
ಕಲ್ಲು ಮುಳ್ಳುಗಳನ್ನು ಕಿತ್ತು,

ಮೂರನೇಯದರಲ್ಲಿ
ಟಾರ್ಚ್‌ ಹಿಡಿದುಕೊಂಡು ನಿಂತಿದ್ದಳು
ಮುಚ್ಚಿದ ದೇವರ ಮನೆಯ ಬಾಗಿಲಲ್ಲಿ,

ಹಟಮಾರಿ ಹೆಂಗಸು
ಸುಮ್ಮನಿರಬೇಕಿತ್ತು ಮಮ್ಮಲ ಮರುಗಿದರು
ಕೆಲವು ಸಂತ ಗಂಡಸರು,

ಆದರೆ ಹೆಣ್ಣು ಮನಸ್ಸಿಗೆ
ಇದೆಲ್ಲ ಎಷ್ಟು ಅಸಹನೀಯ ಎನ್ನುವುದಕ್ಕೆ
ಸತ್ಯ ಪ್ರಮಾಣದಂತಿವೆ
ಅವಳ ಉದ್ದಿಗ್ನ ಸಿಗರೇಟಿನ
ಅಶಾಂತ ಬೂದಿಯಲ್ಲಿ
ಇನ್ನೂ ಉರಿಯುತ್ತಿರುವ, ಆರುತ್ತಿರುವ
ಸ್ಪಷ್ಟ, ಅಸ್ಪಷ್ಟ ದನಿಗಳು.

-ಚಿದಂಬರ ನರೇಂದ್ರ

————————————–

ಗೌರಿ ಎಂಬ ಬೆಳಕು

ಆಗಾಗ ಅಂದುಕೊಳ್ಳುತ್ತೇನೆ
“ನಾನು ಮೊದಲು ಹೀಗಿರಲಿಲ್ಲ”
ಭಯವಿತ್ತು, ಭವಿಷ್ಯದ ಅಳುಕಿತ್ತು.
“ಜೋಕೆ, ಪ್ರಭುತ್ವ ನಿನ್ನ ಮುಕ್ಕಿ ತಿನ್ನುತ್ತೆ
ನೀನು ಬೆಳೆಯದಂತೆ ತುಳಿತಾರೆ,
ಜೈಲಿಗೆ ಹಾಕಿಸ್ತಾರೆ, ಕೊಲ್ತಾರೆ,
ಕಿರುಕುಳ ಕೊಡ್ತಾರೆ..ʼ
ತರಹೇವಾರಿ ಜನ ಹೇಳಿದ್ದು ಬುದ್ಧಿಮಾತೋ
ಬೆದರಿಸಿ ಬಾಯಿ ಮುಚ್ಚಿಸುವ ಸಂಚೋ-
ಎರಡೂ ಹೌದು.
ನಾನಂತೂ ಬಾಯಿ ತೆರೆಯದೆ ಇದ್ದೆ-
“ಮೊದಲು ನಾನು ಹೀಗಿರಲಿಲ್ಲ”
“ನೀನು ಪತ್ರಕರ್ತ
ಭಟ್ಟಂಗಿಗಳು, ಭಕ್ತರೇ ತುಂಬಿರುವ ವೃತ್ತಿಯಲ್ಲಿ
ನೀನು ಶೋಷಿತರ ಹುಡುಗ.
ದಲಿತ, ಮುಸ್ಲಿಂ, ಒಬಿಸಿ, ಆದಿವಾಸಿ ಎನ್ನಬೇಡ,
ಸಂಘಿಗಳ ಟೀಕಿಸಬೇಡ,
ನಿನ್ನ ಮೇಲೆ ಕಣ್ಣಿಡ್ತಾರೆ,
ತಳಿಯುತ್ತಾರೆ”
-ಅಬ್ಬಾ, ಎಷ್ಟೊಂದು ಮಾತು!
ಒಡಲಕಿಚ್ಚು ದಹಿಸುವಾಗ
ಹೊಟ್ಟೆಪಾಡಿಗೆ ಮುಚ್ಚಿಟ್ಟುಕೊಂಡೆ.
ಹೀಗೊಂದು ದಿನ ಗೌರಿಯಮ್ಮ ಸಿಕ್ಕಳು
ಅವಳಿಗೆ ತಾಕಿದ ಗುಂಡು
ನನ್ನೆದೆಯ ಹೊಕ್ಕು ನಾನು ಸಾಯಲಿಲ್ಲ
ಹುಟ್ಟಿದೆ, ಸಿಡಿದೆ,
ಚಿಮ್ಮಿದ ರಕ್ತ ಶಾಹಿಯಾಗಿ ಹೊಮ್ಮಿತ್ತು
ಗಟಾರದ ಕೊಚ್ಚೆ ನೀರ
ಭಾರೀ ಮಳೆಯೊಂದು ಕೊಚ್ಚಿತ್ತು
‘ನಾನುಗೌರಿ’ಯಾದೆ.
ಭವಿಷ್ಯದ ಭಯವೇ? ಯಾರ ಭವಿಷ್ಯ?
ದೇಶವಿರದೆ, ಪ್ರೀತಿಯಿರದೆ ಭವಿಷ್ಯವುಂಟೆ?
ಇರದುದ ಉಳಿಸಲು, ಆತಂಕ ಕರಗಿ
ಸತ್ಯದ ದಾರಿಯೊಂದು ತೆರೆದಿತ್ತು.
ಅರೆಹೊಟ್ಟೆ ಅಳುಕಲಿಲ್ಲ
ಅದಕೇಕೆ ಅಂಜಲಿ?
ನುಡಿ ಸತ್ಯ ನುಡಿ
ಹೊರಡು ನಿನ್ನ ಹಾದಿ ಇದುವೆ.
ಗೌರಿ ಎಂಬ ಬೆಳಕು ತೆರೆದಿತ್ತು
‘ನಾನುಗೌರಿ’ಯಾದಾಗ
ಎಷ್ಟೊಂದು ಧೈರ್ಯ!
ನಾನು ಏನೆಂದು ತಿಳಿದಾಯ್ತು.
ಬೆದರಿಸಿದವರು ಬೆಚ್ಚಿದರು
ಚುಚ್ಚಿದವರು ಕೊಚ್ಚಿ ಹೋದರು
ಗೌರಿ ಎಂದರೆ ಪ್ರೇಮದ ಸುಡುಸುಡು ಪಂಜು
ಗೌರಿ ಎಂದರೆ ಪ್ರಭುತ್ವಕ್ಕೆ ಸಿಡಿಮದ್ದು
ಗೌರಿ ಎಂದರೆ ನಿರ್ಭೀತ ಮಮತೆ
ಗೌರಿ ಸಾಯಲಿಲ್ಲ
ಕೊಂದವರೆದುರು ಹುಟ್ಟಿದಳು
ನಮ್ಮೆಲ್ಲರೆದೆರಲಿ.
ಆಲವ ಕಡಿಯ ಬಂದವರೆದುರು
ಸಹಸ್ರಾರು ಬೇರು
ಕಾಂಡ ಲಯವಾಗಿ ಹಬ್ಬಿದ ಬಿಳಲ ಕಂಡು
ಕೊಡಲಿಗಳಿಗೆ ಕಂಪನ.
‘ನಾನುಗೌರಿ’.
ಬೆಳಕು ತೆರೆದಾಗ
ಭಯವೇಕೆ?
‘ನಾವೆಲ್ಲ ಗೌರಿ’
ನೊಂದುಬೆಂದು ತಂಗಾಳಿ.

– ಯತಿರಾಜ್ ಬ್ಯಾಲಹಳ್ಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...