Homeಕರ್ನಾಟಕಗೌರಿ ಲಂಕೇಶ್ ನೆನಪು: ಹಲವರಿಂದ 'ಕಾವ್ಯ ನಮನ'

ಗೌರಿ ಲಂಕೇಶ್ ನೆನಪು: ಹಲವರಿಂದ ‘ಕಾವ್ಯ ನಮನ’

- Advertisement -
- Advertisement -

ಗೌರಿ ದಾರಿ

ತಮಂಧದ ಘನವು
ಜಗವ ಆವರಿಸುವಾಗ
ಲೋಕದುರಿಗೆ ತೆತ್ತುಕೊಂಡು..

ಬೇಯುತ್ತಾ ಬೇಯುತ್ತಾ
ಬೆಳಕಾದವಳಲ್ಲವೇ ಗೌರಿ…?

ಬಹಿರಂಗದ ಬೆಂಕಿಯಲ್ಲಿ
ಅಂತರಂಗದ ಹಿಮಕರಗಿದಾಗ
ಉಕ್ಕಿಹರಿದ ಮಮಕಾರದಲ್ಲಿ
ರೂಪುಗೊಂಡ
ರೂಹಲ್ಲವೇ ಗೌರಿ…?

ಹೊರಗಿನ ಬಿರುಗಾಳಿಗೆ
ಒಳಗಿನ ಸುಳಿಗಾಳಿಗೆ..

ಒಡಲ ಸೊಡರು ಆರದಂತೆ
ದೀಕ್ಷೆತೊಟ್ಟ
ದೀವಟಿಗೆಯಲ್ಲವೇ ಗೌರಿ?

ಸಿದ್ಧತೆಗೆ ತಕ್ಕಂತೆ
ಸಿದ್ಧಾಂತ ಹೊಸೆಯದೇ..

ಬೀದಿಯ ಜೊತೆ
ಬೆಸಗೊಂಡು
ಬೀದಿದೀಪವಾಗಿದ್ದಲ್ಲವೇ ಗೌರಿ?

ನಾನೆಂಬ ನಾಗರಕೆ
ಒಳದನಿಯ
ಪಿಸುಪುಂಗಿಯ ಕಾವಲಿಟ್ಟು…

ನಾನಳಿದು ತಾನುರಿದು
ನಮ್ಮೊಳಗೇ ನಾವಾಗಿ
ಸಿಕ್ಕವಳಲ್ಲವೇ ಗೌರಿ…?

ಕೆಂಪೊಳಗಿನ ನೀಲಿಯನ್ನು
ನೀಲಿಯೊಳಗಿನ ಕೆಂಪನ್ನು..

ಕಪ್ಪೊಳಗಿನ ಕೆಚ್ಚನ್ನು
ಬಿಳಿಯೊಳಗಿನ ಬಯಲನ್ನು..

ಅರಿತು ಕಲಿತು ಕಲೆತು
ಕಾಮನಬಿಲ್ಲಾದವಳಲ್ಲವೇ ಗೌರಿ…?

-ಶಿವಸುಂದರ್

——————————-

ಮೊನ್ನೆ ಮೊನ್ನೆಯಪ್ಪೇ
ನಮ್ಮ ಜೊತೆಯಿದ್ದ ಸಣಕಲು
ಗಟ್ಟಿಗಿತ್ತಿಯೊಬ್ಬಳನ್ನು
ಆಕೆ
ಬಡವರ, ಆದಿವಾಸಿಗಳ
ಅಲ್ಪಸಂಖ್ಯಾತರ, ಹಿಂದುಳಿದವರ
ದಲಿತರ ಪರವಾಗಿ ಮಾತನಾಡುತ್ತಾಳೆ
ಎನ್ನುವ ಕಾರಣಕ್ಕಾಗಿ ಕೊಲ್ಲಲಾಯಿತು
ಗುಂಡು ಹೊಡೆದು.

ಕೊಲೆಗಾರ ಅರೆಸ್ಟ್‌ ಆದಾಗ
ಅವನ ಮೋಬೈಲ್‌ ನಲ್ಲಿ ಸಿಕ್ಕವು
ಆಕೆಯ ಮೂರು ಸೆಲ್ಫಿಗಳು.

ಒಂದರಲ್ಲಿ ಆಕೆ,
ಬಡವರೊಂದಿಗೆ ಧರಣಿ ಕೂತಿದ್ದಳು
ಮನುಷ್ಯರ ಆಹಾರದ ಹಕ್ಕಿಗಾಗಿ,
ಇನ್ನೊಂದರಲ್ಲಿ, ಸ್ವಚ್ಛ ಮಾಡುತ್ತಿದ್ದಳು
ಬುಡನ್‌ ಸೂಫಿಯ ಹಾದಿಯಲ್ಲಿ ಹಾಕಲಾಗಿದ್ದ
ಕಲ್ಲು ಮುಳ್ಳುಗಳನ್ನು ಕಿತ್ತು,

ಮೂರನೇಯದರಲ್ಲಿ
ಟಾರ್ಚ್‌ ಹಿಡಿದುಕೊಂಡು ನಿಂತಿದ್ದಳು
ಮುಚ್ಚಿದ ದೇವರ ಮನೆಯ ಬಾಗಿಲಲ್ಲಿ,

ಹಟಮಾರಿ ಹೆಂಗಸು
ಸುಮ್ಮನಿರಬೇಕಿತ್ತು ಮಮ್ಮಲ ಮರುಗಿದರು
ಕೆಲವು ಸಂತ ಗಂಡಸರು,

ಆದರೆ ಹೆಣ್ಣು ಮನಸ್ಸಿಗೆ
ಇದೆಲ್ಲ ಎಷ್ಟು ಅಸಹನೀಯ ಎನ್ನುವುದಕ್ಕೆ
ಸತ್ಯ ಪ್ರಮಾಣದಂತಿವೆ
ಅವಳ ಉದ್ದಿಗ್ನ ಸಿಗರೇಟಿನ
ಅಶಾಂತ ಬೂದಿಯಲ್ಲಿ
ಇನ್ನೂ ಉರಿಯುತ್ತಿರುವ, ಆರುತ್ತಿರುವ
ಸ್ಪಷ್ಟ, ಅಸ್ಪಷ್ಟ ದನಿಗಳು.

-ಚಿದಂಬರ ನರೇಂದ್ರ

————————————–

ಗೌರಿ ಎಂಬ ಬೆಳಕು

ಆಗಾಗ ಅಂದುಕೊಳ್ಳುತ್ತೇನೆ
“ನಾನು ಮೊದಲು ಹೀಗಿರಲಿಲ್ಲ”
ಭಯವಿತ್ತು, ಭವಿಷ್ಯದ ಅಳುಕಿತ್ತು.
“ಜೋಕೆ, ಪ್ರಭುತ್ವ ನಿನ್ನ ಮುಕ್ಕಿ ತಿನ್ನುತ್ತೆ
ನೀನು ಬೆಳೆಯದಂತೆ ತುಳಿತಾರೆ,
ಜೈಲಿಗೆ ಹಾಕಿಸ್ತಾರೆ, ಕೊಲ್ತಾರೆ,
ಕಿರುಕುಳ ಕೊಡ್ತಾರೆ..ʼ
ತರಹೇವಾರಿ ಜನ ಹೇಳಿದ್ದು ಬುದ್ಧಿಮಾತೋ
ಬೆದರಿಸಿ ಬಾಯಿ ಮುಚ್ಚಿಸುವ ಸಂಚೋ-
ಎರಡೂ ಹೌದು.
ನಾನಂತೂ ಬಾಯಿ ತೆರೆಯದೆ ಇದ್ದೆ-
“ಮೊದಲು ನಾನು ಹೀಗಿರಲಿಲ್ಲ”
“ನೀನು ಪತ್ರಕರ್ತ
ಭಟ್ಟಂಗಿಗಳು, ಭಕ್ತರೇ ತುಂಬಿರುವ ವೃತ್ತಿಯಲ್ಲಿ
ನೀನು ಶೋಷಿತರ ಹುಡುಗ.
ದಲಿತ, ಮುಸ್ಲಿಂ, ಒಬಿಸಿ, ಆದಿವಾಸಿ ಎನ್ನಬೇಡ,
ಸಂಘಿಗಳ ಟೀಕಿಸಬೇಡ,
ನಿನ್ನ ಮೇಲೆ ಕಣ್ಣಿಡ್ತಾರೆ,
ತಳಿಯುತ್ತಾರೆ”
-ಅಬ್ಬಾ, ಎಷ್ಟೊಂದು ಮಾತು!
ಒಡಲಕಿಚ್ಚು ದಹಿಸುವಾಗ
ಹೊಟ್ಟೆಪಾಡಿಗೆ ಮುಚ್ಚಿಟ್ಟುಕೊಂಡೆ.
ಹೀಗೊಂದು ದಿನ ಗೌರಿಯಮ್ಮ ಸಿಕ್ಕಳು
ಅವಳಿಗೆ ತಾಕಿದ ಗುಂಡು
ನನ್ನೆದೆಯ ಹೊಕ್ಕು ನಾನು ಸಾಯಲಿಲ್ಲ
ಹುಟ್ಟಿದೆ, ಸಿಡಿದೆ,
ಚಿಮ್ಮಿದ ರಕ್ತ ಶಾಹಿಯಾಗಿ ಹೊಮ್ಮಿತ್ತು
ಗಟಾರದ ಕೊಚ್ಚೆ ನೀರ
ಭಾರೀ ಮಳೆಯೊಂದು ಕೊಚ್ಚಿತ್ತು
‘ನಾನುಗೌರಿ’ಯಾದೆ.
ಭವಿಷ್ಯದ ಭಯವೇ? ಯಾರ ಭವಿಷ್ಯ?
ದೇಶವಿರದೆ, ಪ್ರೀತಿಯಿರದೆ ಭವಿಷ್ಯವುಂಟೆ?
ಇರದುದ ಉಳಿಸಲು, ಆತಂಕ ಕರಗಿ
ಸತ್ಯದ ದಾರಿಯೊಂದು ತೆರೆದಿತ್ತು.
ಅರೆಹೊಟ್ಟೆ ಅಳುಕಲಿಲ್ಲ
ಅದಕೇಕೆ ಅಂಜಲಿ?
ನುಡಿ ಸತ್ಯ ನುಡಿ
ಹೊರಡು ನಿನ್ನ ಹಾದಿ ಇದುವೆ.
ಗೌರಿ ಎಂಬ ಬೆಳಕು ತೆರೆದಿತ್ತು
‘ನಾನುಗೌರಿ’ಯಾದಾಗ
ಎಷ್ಟೊಂದು ಧೈರ್ಯ!
ನಾನು ಏನೆಂದು ತಿಳಿದಾಯ್ತು.
ಬೆದರಿಸಿದವರು ಬೆಚ್ಚಿದರು
ಚುಚ್ಚಿದವರು ಕೊಚ್ಚಿ ಹೋದರು
ಗೌರಿ ಎಂದರೆ ಪ್ರೇಮದ ಸುಡುಸುಡು ಪಂಜು
ಗೌರಿ ಎಂದರೆ ಪ್ರಭುತ್ವಕ್ಕೆ ಸಿಡಿಮದ್ದು
ಗೌರಿ ಎಂದರೆ ನಿರ್ಭೀತ ಮಮತೆ
ಗೌರಿ ಸಾಯಲಿಲ್ಲ
ಕೊಂದವರೆದುರು ಹುಟ್ಟಿದಳು
ನಮ್ಮೆಲ್ಲರೆದೆರಲಿ.
ಆಲವ ಕಡಿಯ ಬಂದವರೆದುರು
ಸಹಸ್ರಾರು ಬೇರು
ಕಾಂಡ ಲಯವಾಗಿ ಹಬ್ಬಿದ ಬಿಳಲ ಕಂಡು
ಕೊಡಲಿಗಳಿಗೆ ಕಂಪನ.
‘ನಾನುಗೌರಿ’.
ಬೆಳಕು ತೆರೆದಾಗ
ಭಯವೇಕೆ?
‘ನಾವೆಲ್ಲ ಗೌರಿ’
ನೊಂದುಬೆಂದು ತಂಗಾಳಿ.

– ಯತಿರಾಜ್ ಬ್ಯಾಲಹಳ್ಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...