Homeಚಳವಳಿಹುತಾತ್ಮ ಪತ್ರಕರ್ತೆ ಗೌರಿ ಲಂಕೇಶ್ ಸ್ಮರಣೆ: ನಾಳೆ 'ಗೌರಿ ನೆನಹು' ಕಾರ್ಯಕ್ರಮ

ಹುತಾತ್ಮ ಪತ್ರಕರ್ತೆ ಗೌರಿ ಲಂಕೇಶ್ ಸ್ಮರಣೆ: ನಾಳೆ ‘ಗೌರಿ ನೆನಹು’ ಕಾರ್ಯಕ್ರಮ

- Advertisement -
- Advertisement -

ಹಿಂದೂತ್ವವಾದಿಗಳ ಗುಂಡಿಗೆ ಎದೆಯೊಡ್ಡಿ ಹುತಾತ್ಮರಾದ ದಿಟ್ಟ ಪತ್ರಕರ್ತೆ ಗೌರಿ ಲಂಕೇಶ್‌ರವರ ನೆನಪಿನಲ್ಲಿ ಸೆಪ್ಟಂಬರ್ 05 ರಂದು ಗೌರಿ ಮೆಮೋರಿಯಲ್ ಟ್ರಸ್ಟ್‌ನಿಂದ ‘ಗೌರಿ ನೆನಹು’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಸೆಪ್ಟಂಬರ್ 05ಕ್ಕೆ ಗೌರಿ ಲಂಕೇಶ್‌ರವರ ಹತ್ಯೆಯಾಗಿ 4 ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಅಂದು ಬೆಳಿಗ್ಗೆ 8.30ಕ್ಕೆ ಚಾಮರಾಜಪೇಟೆಯಲ್ಲಿರುವ ಗೌರಿ ಲಂಕೇಶ್‌ರವರ ಸಮಾಧಿ ಬಳಿ ಗೌರವ ಸಲ್ಲಿಸಲಾಗುತ್ತದೆ ಎಂದು ಟ್ರಸ್ಟ್ ಸದಸ್ಯರಾದ ನೂರ್ ಶ್ರೀಧರ್ ತಿಳಿಸಿದ್ದಾರೆ.

ಗೌರಿ ಲಂಕೇಶ್‌ರವರ ನಮ್ಮನ್ನು ಅಗಲಿ ನಾಲ್ಕು ವರ್ಷಗಳಾಗಿವೆ. ಬನ್ನಿ ಸೇರೋಣ, ಗೌರಿ ಹಾದಿಯಲ್ಲಿ ಮುನ್ನೆಡೆಯೋಣ ಎಂದು ಅವರು ಕರೆ ನೀಡಿದ್ದಾರೆ.

ಅಂದು ಸಂಜೆಗೆ 5 ಗಂಟೆಗೆ ಗೌರಿ ಮೆಮೋರಿಯಲ್ ಟ್ರಸ್ಟ್ ಮತ್ತು ಸಿಟಿಜನ್ ಫಾರ್‌ ಜಸ್ಟೀಸ್ ಅಂಡ್ ಪೀಸ್ ಸಹಯೋಗದಲ್ಲಿzoom ವೇದಿಕೆಯಲ್ಲಿ ಮೃತ ಫಾದರ್‌ ಸ್ಟಾನ್ ಸ್ವಾಮಿ ಪ್ರಕರಣದಲ್ಲಿ ಪ್ರಮುಖರಾಗಿದ್ದ ಹಿರಿಯ ವಕೀಲ ಮಿಹೀರ್ ದೇಸಾಯಿ ಅವರಿಂದ “ಟೆರರ್ ಲಾ ಅಂಡರ್ ಪ್ರೋಟೋ ಫ್ಯಾಸಿಸ್ಟ್ ರೆಜಿಮ್” (ಫ್ಯಾಸಿಸ್ಟ್ ಆಡಳಿತದ ಅಡಿಯಲ್ಲಿ ಭಯೋತ್ಪಾದನಾ ಕಾನೂನುಗಳು) ಎಂಬ ವಿಷಯದ ಬಗ್ಗೆ ವಿಶೇಷ ಉಪನ್ಯಾಸ ನಡೆಯಲಿದೆ. ಈ ವೇದಿಕೆಯಲ್ಲಿ ಯುವ ಹೋರಾಟಗಾರರಾದ ನತಾಶಾ ನರ್ವಾಲ್, ದೇವಂಗಾನಾ ಕಾಲಿತಾ ಮತ್ತು ಆಸಿಫ್ ಇಕ್ಬಾಲ್ ತನ್ಹಾ ಮಾತನಾಡಲಿದ್ದಾರೆ. ಗೌರಿ ಲಂಕೇಶ್ ಅವರಿಗೆ ಗೌರವ ನಮನ ಸಲ್ಲಿಸಲಿದ್ದಾರೆ.

ಸೆಪ್ಟಂಬರ್ 05ರ ಭಾನುವಾರ ಸಂಜೆ 6 ಗಂಟೆಯಿಂದ ‘ಗೌರಿ ಹತ್ಯೆ ಪ್ರಕರಣ ಮತ್ತು ಹಿಂಸೆಯನ್ನು ಎದುರುಗೊಳ್ಳುವ ಅಗತ್ಯ’ ಎಂಬ ವಿಷಯದ ಕುರಿತು ನಾನುಗೌರಿ.ಕಾಂ । ನ್ಯಾಯಪಥ – ಕ್ಲಬ್ ಹೌಸ್ ಸಂವಾದ ನಡೆಯಲಿದೆ. ಚಿಂತಕ ಶಿವಸುಂದರ್ ಮತ್ತು ಪತ್ರಕರ್ತ ಆದಿತ್ಯ ಭಾರದ್ವಾಜ್ ಮಾತನಾಡಲಿದ್ದಾರೆ.

ಇನ್ನೊಂದೆಡೆ ಗೌರಿ ದಿನದ ಅಂಗವಾಗಿ ’ಸಹಮತ’ ತಂಡ “ಗಾಂಧಿ ಕೊಂದವರೇ ಕಲ್ಬುರ್ಗಿ ಕೊಂದರು; ಗೌರಿಯನ್ನೂ ಕೊಂದರು” ಎಂಬ ಚರ್ಚೆ ಆಯೋಜಿಸಿದೆ. ಚರ್ಚೆಯಲ್ಲಿ ನಿವೃತ್ತ ಪೊಲೀಸ್ ಅಧಿಕಾರಿ ಬಿ.ಕೆ.ಶಿವರಾಂ, ಹೋರಾಟಗಾರ್ತಿ ಕೆ.ನೀಲಾ ಮತ್ತು ಪತ್ರಕರ್ತ ನವೀನ್ ಸೂರಿಂಜೆ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಳ್ಳಲಿದ್ದಾರೆ. ಸೆ.5 ರ ಸಂಜೆ 4 ಗಂಟೆಗೆ ಚರ್ಚೆ ಆರಂಭವಾಗಲಿದೆ.


ಇದನ್ನೂ ಓದಿ: ಜನಪ್ರಿಯ ಚಾನೆಲ್‌ ಪ್ಯಾಕ್‌ನಿಂದ NDTV ಹೊರಗಿಟ್ಟು ವಿವಾದ ಸೃಷ್ಟಿಸಿದ ಹಾತ್‌ವೇ ಕೇಬಲ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾವೇರಿ: ರೈತರ ಹಿತ ಕಾಯುವುದು ನನ್ನ ಮೊದಲ ಕರ್ತವ್ಯ ಡಿ.ಕೆ.ಶಿವಕುಮಾರ್

ರಾಜ್ಯದ ಜಲಾಶಯಗಳಲ್ಲಿ ನೀರಿನ ಲಭ್ಯತೆ ಕಡಿಮೆಯಿರುವಾಗ ನಮ್ಮ ರೈತರನ್ನು ಬದುಕಿಸುವ ಸವಾಲಿನ ಜೊತೆಗೆ ಕಾನೂನನ್ನೂ ಕಾಪಾಡಬೇಕಾದ ಹೊಣೆಗಾರಿಕೆ ಇದೆ. ಕಾವೇರಿ ವಿಚಾರದಲ್ಲಿ ನಮ್ಮ ರೈತರ ಹಿತ ಕಾಯುವುದು ನನ್ನ ಮೊದಲ ಕರ್ತವ್ಯ ಎಂದು...

‘ಅಸ್ತಿತ್ವದ ಸಮಸ್ಯೆಯಲ್ಲ, ಹೊಣೆಗಾರಿಕೆಯೇ ಮುಖ್ಯ’: ಆರ್‌ಎಸ್‌ಎಸ್ ನೋಂದಣಿ ಕುರಿತು ಬಿ.ಎಲ್. ಸಂತೋಷ್ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ನೋಂದಣಿ ಹಾಗೂ ಅದರ ಕಾನೂನಾತ್ಮಕ ಅಸ್ತಿತ್ವಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಬಿ.ಎಲ್. ಸಂತೋಷ್ ಹಾಗೂ ಕರ್ನಾಟಕದ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್...

ನಾನು ‘ದಿಮಾಗಿ ನಕ್ಸಲ್’ ಆಗಿದ್ದರೆ ಅದಕ್ಕೆ ಹೆಮ್ಮೆ ಇದೆ: ಮೋದಿ-ರಿಜಿಜು ವಿರುದ್ಧ ಚಿದಂಬರಂ ತಿರುಗೇಟು

ಸ್ವಾತಂತ್ರ್ಯ ದಿನಾಚರಣೆಯ ಭಾಷಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಬಳಸಿದ್ದ ‘ದಿಮಾಗಿ ನಕ್ಸಲರು’ (ವೈಚಾರಿಕ ನಕ್ಸಲರು) ಎಂಬ ಪದ ಬಳಕೆ ದೇಶದ ರಾಜಕೀಯ ವಲಯದಲ್ಲಿ ಹೊಸ ಸಂಚಲನ ಸೃಷ್ಟಿಸಿದೆ. ಪ್ರಧಾನಿಯವರ ಈ...

CAA ವಿರೋಧಿ ಪ್ರತಿಭಟನೆಗೆ ಕಾರಣವಾಗಿದ್ದ ಪ್ರಶ್ನೆಗಳು ಮತ್ತೆ ಜನಗಣತಿಯಲ್ಲಿ-ವರದಿ

ಶೀಘ್ರದಲ್ಲೇ ಪ್ರಾರಂಭವಾಗಲಿರುವ ಜನಗಣತಿಯ ಜನಸಂಖ್ಯಾ ಎಣಿಕೆ ಹಂತವು, 2011ರ ಜನಗಣತಿಗೆ ಹೋಲಿಸಿದರೆ 14 ಹೊಸ ಅಥವಾ ಮಾರ್ಪಡಿಸಿದ ಪ್ರಶ್ನೆಗಳನ್ನು ಒಳಗೊಂಡಿರುತ್ತದೆ. ಈ ಪೈಕಿ ಹಲವು ಪ್ರಶ್ನೆಗಳು 2020ರಲ್ಲಿ ಅಧಿಸೂಚನೆ ಹೊರಡಿಸಲಾಗಿದ್ದ ರಾಷ್ಟ್ರೀಯ ಜನಸಂಖ್ಯಾ ನೋಂದಣಿ...

ಹಿಂಗೋಲಿ ಶಾಲೆಯಲ್ಲಿ ಪ್ರಾಂಶುಪಾಲರ ಮದ್ಯಪಾನ, ಶಿಕ್ಷಕರ ಅಭಾವ: ಕ್ರಮ ಕೈಗೊಳ್ಳದಿದ್ದರೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ಅಭಿಜೀತ್ ದೀಪ್ಕೆ

ಮಹಾರಾಷ್ಟ್ರದ ಹಿಂಗೋಲಿ ಜಿಲ್ಲೆಯ ಲಿಂಬಾಲಾ ಗ್ರಾಮದ ಸರ್ಕಾರಿ ಶಾಲೆಯೊಂದರಲ್ಲಿ ಶೈಕ್ಷಣಿಕ ವಾತಾವರಣ ಸಂಪೂರ್ಣವಾಗಿ ಕುಸಿದಿದ್ದು, ಶಾಲಾ ಪ್ರಾಂಶುಪಾಲರ ಹೊಣೆಗೇಡಿತನ ಮತ್ತು ಆಡಳಿತ ಮಂಡಳಿಯ ನಿರ್ಲಕ್ಷ್ಯದ ವಿರುದ್ಧ ಗ್ರಾಮಸ್ಥರ ಆಕ್ರೋಶ ಮುಗಿಲುಮುಟ್ಟಿದೆ. ಶಾಲೆಯ ಪ್ರಾಂಶುಪಾಲರು...

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ? CAG ವರದಿ

ದೇಶಾದ್ಯಂತ ನೆರೆ, ಬರ, ಭೂಕುಸಿತದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ ಭಾರಿ ಪ್ರಮಾಣದ ಕಡಿತವಾಗುತ್ತಿರುವುದು ಈಗ ನಿರೂಪಿತವಾಗಿದೆ. ರಾಷ್ಟ್ರೀಯ ವಿಪತ್ತು ಸ್ಪಂದನಾ ನಿಧಿ...

EFLU ವಿದ್ಯಾರ್ಥಿ ಸಂಘದ ಮುಖಂಡರು, NSUI ಸದಸ್ಯರ ಮೇಲೆ ರಾಡ್ ಮತ್ತು ಬಿಯರ್ ಬಾಟಲಿಗಳಿಂದ ಹಲ್ಲೆ; ABVP ಸದಸ್ಯರ ವಿರುದ್ಧ ಪ್ರಕರಣ ದಾಖಲು

ಹೈದರಾಬಾದ್‌ನ ಪ್ರತಿಷ್ಠಿತ ಇಂಗ್ಲಿಷ್ ಮತ್ತು ವಿದೇಶಿ ಭಾಷಾ ವಿಶ್ವವಿದ್ಯಾಲಯ (ಇಎಫ್‌ಎಲ್‌ಯು - EFLU) ಕ್ಯಾಂಪಸ್‌ನಲ್ಲಿ ಭೀಕರ ಹಿಂಸಾಚಾರ ಸಂಭವಿಸಿದ್ದು, ವಿದ್ಯಾರ್ಥಿ ಸಂಘದ ಮುಖಂಡರು ಹಾಗೂ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ (NSUI) ಸದಸ್ಯರ ಮೇಲೆ...

NALSAR ವಿವಾದ : ಕಾನೂನು ವಿದ್ಯಾರ್ಥಿಗಳಲ್ಲಿ ಕ್ಷಮೆಯಾಚಿಸಿದ ಬಿಸಿಐ ಅಧ್ಯಕ್ಷ ಮನನ್ ಕುಮಾರ್ ಮಿಶ್ರಾ

ನಲ್ಸಾರ್ (NALSAR) ಕಾನೂನು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ವಿರುದ್ಧ ಹೊರಡಿಸಿದ್ದ ನಿರ್ದೇಶನಗಳ ಕುರಿತು ತೀವ್ರ ಟೀಕೆಗಳು ವ್ಯಕ್ತವಾದ ಹಿನ್ನೆಲೆಯಲ್ಲಿ, ಬಾರ್ ಕೌನ್ಸಿಲ್ ಆಫ್ ಇಂಡಿಯಾ (ಬಿಸಿಥ) ಅಧ್ಯಕ್ಷ ಮನನ್ ಕುಮಾರ್ ಮಿಶ್ರಾ ಕ್ಷಮೆಯಾಚಿಸಿದ್ದಾರೆ. ಹೈದರಾಬಾದ್‌ನ ನಲ್ಸಾರ್...

ವಿಮಲ್ ‘ಏಲೈಚಿ’ ಜಾಹೀರಾತು ವಿವಾದ: ಶಾರುಖ್ ಖಾನ್, ಅಜಯ್ ದೇವಗನ್ ಮತ್ತು ಟೈಗರ್ ಶ್ರಾಫ್‌ಗೆ ಮಹಾರಾಷ್ಟ್ರ ಎಫ್‌ಡಿಎ ಶೋಕಾಸ್ ನೋಟಿಸ್

ಬಾಲಿವುಡ್‌ನ ಖ್ಯಾತ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರುಗಳು ಇದೀಗ ಕಾನೂನು ಸಂಕಷ್ಟಕ್ಕೆ ಸಿಲುಕಿದ್ದಾರೆ. 'ವಿಮಲ್ ಏಲೈಚಿ' ಜಾಹೀರಾತಿನಲ್ಲಿ ಕಾಣಿಸಿಕೊಂಡಿದ್ದಕ್ಕಾಗಿ ಮಹಾರಾಷ್ಟ್ರದ ಆಹಾರ ಮತ್ತು ಔಷಧ ಆಡಳಿತ...

ಹನೂರು ಶೂಟೌಟ್ ಪ್ರಕರಣ: ಅರಣ್ಯ ಇಲಾಖೆ ಸಿಬ್ಬಂದಿ ವಿರುದ್ಧ ಎಫ್‌ಐಆರ್‌ ದಾಖಲು

ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಶಾಗ್ಯ ಗ್ರಾಮ ಪಂಚಾಯತ್ ವಾಪ್ತಿಯ ಅರಣ್ಯ ಪ್ರದೇಶದಲ್ಲಿ ಮೂವರು ಗುಂಡೇಟಿಗೆ ಬಲಿಯಾದ ಪ್ರಕರಣ ಸಂಬಂಧ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಎಫ್​​​​ಐಆರ್ ದಾಖಲಾಗಿದೆ. ಅರಣ್ಯ ಸಿಬ್ಬಂದಿಯ ಗುಂಡೇಟಿಗೆ ಹನೂರು...