Homeಚಳವಳಿಹುತಾತ್ಮ ಪತ್ರಕರ್ತೆ ಗೌರಿ ಲಂಕೇಶ್ ಸ್ಮರಣೆ: ನಾಳೆ 'ಗೌರಿ ನೆನಹು' ಕಾರ್ಯಕ್ರಮ

ಹುತಾತ್ಮ ಪತ್ರಕರ್ತೆ ಗೌರಿ ಲಂಕೇಶ್ ಸ್ಮರಣೆ: ನಾಳೆ ‘ಗೌರಿ ನೆನಹು’ ಕಾರ್ಯಕ್ರಮ

- Advertisement -
- Advertisement -

ಹಿಂದೂತ್ವವಾದಿಗಳ ಗುಂಡಿಗೆ ಎದೆಯೊಡ್ಡಿ ಹುತಾತ್ಮರಾದ ದಿಟ್ಟ ಪತ್ರಕರ್ತೆ ಗೌರಿ ಲಂಕೇಶ್‌ರವರ ನೆನಪಿನಲ್ಲಿ ಸೆಪ್ಟಂಬರ್ 05 ರಂದು ಗೌರಿ ಮೆಮೋರಿಯಲ್ ಟ್ರಸ್ಟ್‌ನಿಂದ ‘ಗೌರಿ ನೆನಹು’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಸೆಪ್ಟಂಬರ್ 05ಕ್ಕೆ ಗೌರಿ ಲಂಕೇಶ್‌ರವರ ಹತ್ಯೆಯಾಗಿ 4 ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಅಂದು ಬೆಳಿಗ್ಗೆ 8.30ಕ್ಕೆ ಚಾಮರಾಜಪೇಟೆಯಲ್ಲಿರುವ ಗೌರಿ ಲಂಕೇಶ್‌ರವರ ಸಮಾಧಿ ಬಳಿ ಗೌರವ ಸಲ್ಲಿಸಲಾಗುತ್ತದೆ ಎಂದು ಟ್ರಸ್ಟ್ ಸದಸ್ಯರಾದ ನೂರ್ ಶ್ರೀಧರ್ ತಿಳಿಸಿದ್ದಾರೆ.

ಗೌರಿ ಲಂಕೇಶ್‌ರವರ ನಮ್ಮನ್ನು ಅಗಲಿ ನಾಲ್ಕು ವರ್ಷಗಳಾಗಿವೆ. ಬನ್ನಿ ಸೇರೋಣ, ಗೌರಿ ಹಾದಿಯಲ್ಲಿ ಮುನ್ನೆಡೆಯೋಣ ಎಂದು ಅವರು ಕರೆ ನೀಡಿದ್ದಾರೆ.

ಅಂದು ಸಂಜೆಗೆ 5 ಗಂಟೆಗೆ ಗೌರಿ ಮೆಮೋರಿಯಲ್ ಟ್ರಸ್ಟ್ ಮತ್ತು ಸಿಟಿಜನ್ ಫಾರ್‌ ಜಸ್ಟೀಸ್ ಅಂಡ್ ಪೀಸ್ ಸಹಯೋಗದಲ್ಲಿzoom ವೇದಿಕೆಯಲ್ಲಿ ಮೃತ ಫಾದರ್‌ ಸ್ಟಾನ್ ಸ್ವಾಮಿ ಪ್ರಕರಣದಲ್ಲಿ ಪ್ರಮುಖರಾಗಿದ್ದ ಹಿರಿಯ ವಕೀಲ ಮಿಹೀರ್ ದೇಸಾಯಿ ಅವರಿಂದ “ಟೆರರ್ ಲಾ ಅಂಡರ್ ಪ್ರೋಟೋ ಫ್ಯಾಸಿಸ್ಟ್ ರೆಜಿಮ್” (ಫ್ಯಾಸಿಸ್ಟ್ ಆಡಳಿತದ ಅಡಿಯಲ್ಲಿ ಭಯೋತ್ಪಾದನಾ ಕಾನೂನುಗಳು) ಎಂಬ ವಿಷಯದ ಬಗ್ಗೆ ವಿಶೇಷ ಉಪನ್ಯಾಸ ನಡೆಯಲಿದೆ. ಈ ವೇದಿಕೆಯಲ್ಲಿ ಯುವ ಹೋರಾಟಗಾರರಾದ ನತಾಶಾ ನರ್ವಾಲ್, ದೇವಂಗಾನಾ ಕಾಲಿತಾ ಮತ್ತು ಆಸಿಫ್ ಇಕ್ಬಾಲ್ ತನ್ಹಾ ಮಾತನಾಡಲಿದ್ದಾರೆ. ಗೌರಿ ಲಂಕೇಶ್ ಅವರಿಗೆ ಗೌರವ ನಮನ ಸಲ್ಲಿಸಲಿದ್ದಾರೆ.

ಸೆಪ್ಟಂಬರ್ 05ರ ಭಾನುವಾರ ಸಂಜೆ 6 ಗಂಟೆಯಿಂದ ‘ಗೌರಿ ಹತ್ಯೆ ಪ್ರಕರಣ ಮತ್ತು ಹಿಂಸೆಯನ್ನು ಎದುರುಗೊಳ್ಳುವ ಅಗತ್ಯ’ ಎಂಬ ವಿಷಯದ ಕುರಿತು ನಾನುಗೌರಿ.ಕಾಂ । ನ್ಯಾಯಪಥ – ಕ್ಲಬ್ ಹೌಸ್ ಸಂವಾದ ನಡೆಯಲಿದೆ. ಚಿಂತಕ ಶಿವಸುಂದರ್ ಮತ್ತು ಪತ್ರಕರ್ತ ಆದಿತ್ಯ ಭಾರದ್ವಾಜ್ ಮಾತನಾಡಲಿದ್ದಾರೆ.

ಇನ್ನೊಂದೆಡೆ ಗೌರಿ ದಿನದ ಅಂಗವಾಗಿ ’ಸಹಮತ’ ತಂಡ “ಗಾಂಧಿ ಕೊಂದವರೇ ಕಲ್ಬುರ್ಗಿ ಕೊಂದರು; ಗೌರಿಯನ್ನೂ ಕೊಂದರು” ಎಂಬ ಚರ್ಚೆ ಆಯೋಜಿಸಿದೆ. ಚರ್ಚೆಯಲ್ಲಿ ನಿವೃತ್ತ ಪೊಲೀಸ್ ಅಧಿಕಾರಿ ಬಿ.ಕೆ.ಶಿವರಾಂ, ಹೋರಾಟಗಾರ್ತಿ ಕೆ.ನೀಲಾ ಮತ್ತು ಪತ್ರಕರ್ತ ನವೀನ್ ಸೂರಿಂಜೆ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಳ್ಳಲಿದ್ದಾರೆ. ಸೆ.5 ರ ಸಂಜೆ 4 ಗಂಟೆಗೆ ಚರ್ಚೆ ಆರಂಭವಾಗಲಿದೆ.


ಇದನ್ನೂ ಓದಿ: ಜನಪ್ರಿಯ ಚಾನೆಲ್‌ ಪ್ಯಾಕ್‌ನಿಂದ NDTV ಹೊರಗಿಟ್ಟು ವಿವಾದ ಸೃಷ್ಟಿಸಿದ ಹಾತ್‌ವೇ ಕೇಬಲ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ದೆಹಲಿ ಖಾಲಿಸ್ತಾನವಾಗಲಿದೆ’: 10 ಶಾಲೆಗಳು, ಸಂಸತ್ತಿಗೆ ಬಾಂಬ್ ಬೆದರಿಕೆ ಇಮೇಲ್ ಬಂದ ನಂತರ ವಿದ್ಯಾರ್ಥಿಗಳ ಸ್ಥಳಾಂತರ

ಸೋಮವಾರ ರಾಷ್ಟ್ರ ರಾಜಧಾನಿ ಮತ್ತು ಸಂಸತ್ತಿನ ಕನಿಷ್ಠ 10 ಶಾಲೆಗಳಿಗೆ ಬಾಂಬ್ ಬೆದರಿಕೆ ಇಮೇಲ್‌ಗಳು ಬಂದಿದ್ದು, ಭಾರಿ ಭದ್ರತಾ ಪ್ರತಿಕ್ರಿಯೆ ನೀಡಲಾಗಿದೆ ಎಂದು ದೆಹಲಿ ಅಗ್ನಿಶಾಮಕ ಸೇವೆಗಳು (ಡಿಎಫ್‌ಎಸ್) ತಿಳಿಸಿವೆ. ಡಿಎಫ್‌ಎಸ್ ಪ್ರಕಾರ, ಬೆಳಿಗ್ಗೆ...

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ ರೈತರ ಪಾಲಿಗೆ ಮರಣಶಾಸನ: ಸಿಎಂ ಸಿದ್ದರಾಮಯ್ಯ

ಭಾರತ ಮತ್ತು ಅಮೆರಿಕ ನಡುವಿನ ಮಧ್ಯಂತರ ವ್ಯಾಪಾರ ಒಪ್ಪಂದವನ್ನು ಒಪ್ಪಿಕೊಂಡು ಸ್ವಾಗತಿಸುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅಮೆರಿಕಕ್ಕೆ ಸಂಪೂರ್ಣ ಶರಣಾಗಿದ್ದಾರೆ. ಮುಂದಿನ ದಿನಗಳಲ್ಲಿ ಈ ಒಪ್ಪಂದ 140 ಕೋಟಿ ಭಾರತೀಯರಿಗೆ, ಅದರಲ್ಲಿಯೂ...

ಉತ್ತರ ಪ್ರದೇಶ| ಜಾತಿ ನಿಂದನೆ-ಹಲ್ಲೆ; ದೃಷ್ಟಿ ಕಳೆದುಕೊಂಡ ದಲಿತ ಯುವಕ

ಕಾಲುವೆ ಬಳಿ ಮಲವಿಸರ್ಜನೆ ಮಾಡುತ್ತಿದ್ದ ದಲಿತ ಯುವಕನ ಜೊತೆಗೆ ನಡೆದ ಜಗಳ ತೀವ್ರಗೊಂಡು, ದಾಳಿಕೋರನೊಬ್ಬ ಮೋಟಾರ್ ಸೈಕಲ್ ಕೀಲಿಯಿಂದ ಚುಚ್ಚಿದ ಪರಿಣಾಮ ಆತ ಒಂದು ಕಣ್ಣಿನ ದೃಷ್ಠಿ ಕಳೆದುಕೊಂಡಿದ್ದಾರೆ. 20 ರ ಹರೆಯದ...

ಮಣಿಪುರದ ಉಖ್ರುಲ್‌ನಲ್ಲಿ ಬುಡಕಟ್ಟು ಸಮುದಾಯಗಳ ನಡುವೆ ಉದ್ವಿಗ್ನತೆ: ಸಶಸ್ತ್ರ ಗುಂಪುಗಳಿಂದ ನಾಗಾ, ಕುಕಿ ಮನೆಗಳಿಗೆ ಬೆಂಕಿ

ಮಣಿಪುರದ ತಂಗ್ಖುಲ್ ನಾಗಾ ಮತ್ತು ಕುಕಿ ಸಮುದಾಯಗಳ ನಡುವೆ ಉದ್ವಿಗ್ನತೆ ಹೆಚ್ಚುತ್ತಿರುವ ನಡುವೆಯೇ, ಸೋಮವಾರ ಉಖ್ರುಲ್ ಜಿಲ್ಲೆಯಲ್ಲಿ ಹಲವಾರು ಸಶಸ್ತ್ರ ಉಗ್ರಗಾಮಿಗಳು ಮನೆಗಳಿಗೆ ಬೆಂಕಿ ಹಚ್ಚಿದ್ದಾರೆ. ಮಧ್ಯರಾತ್ರಿಯ ಸುಮಾರಿಗೆ ಲಿಟಾನ್ ಸರೈಖಾಂಗ್ ಗ್ರಾಮದಲ್ಲಿ ಎರಡೂ...

ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ಹೈಕೋರ್ಟ್ ನೋಟಿಸ್ : ಏನಿದು ಹೊಸ ಬೆಳವಣಿಗೆ?

ಧರ್ಮಸ್ಥಳದ ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ವಿಶೇಷ ಸಿಬಿಐ ನ್ಯಾಯಾಲಯ ಹೊರಡಿಸಿದ ನಿರ್ದೇಶನಗಳನ್ನು ಜಾರಿಗೆ ತರುವಂತೆ ಕೋರಿ ಸಲ್ಲಿಸಲಾದ ಅರ್ಜಿಗೆ ಸಂಬಂಧಿಸಿದಂತೆ, ಕರ್ನಾಟಕ ಹೈಕೋರ್ಟ್ ಕೇಂದ್ರ ತನಿಖಾ ದಳ (ಸಿಬಿಐ)...

‘ಭಾರತ-ಅಮೆರಿಕ ವ್ಯಾಪಾರ ಒಪ್ಪಂದವು ದೇಶದ ಸಾರ್ವಭೌಮತ್ವದ ಮೇಲಿನ ದಾಳಿ’: ಸಿಪಿಎಂ

ಭಾರತ-ಅಮೆರಿಕ ವ್ಯಾಪಾರ ಒಪ್ಪಂದವು ದೇಶದ ಸಾರ್ವಭೌಮತ್ವದ ಮೇಲಿನ ದಾಳಿಯಾಗಿದೆ ಎಂದು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ-ಮಾರ್ಕ್ಸಿಸ್ಟ್ (ಸಿಪಿಎಂ) ಭಾನುವಾರ ಹೇಳಿದೆ. ಕೇಂದ್ರವನ್ನು ಟೀಕಿಸಿದ ಪಕ್ಷವು, ಅಮೆರಿಕದೊಂದಿಗಿನ ಒಪ್ಪಂದವು "ಬಿಜೆಪಿ ನೇತೃತ್ವದ ಸರ್ಕಾರದ ನಾಚಿಕೆಗೇಡಿನ ಶರಣಾಗತಿ"...

ತೆಲಂಗಾಣ ಎಫ್‌ಎಸ್‌ಎಲ್‌ನಲ್ಲಿ ಬೆಂಕಿ : ಸಾಕ್ಷ್ಯ ನಾಶದ ಶಂಕೆ ವ್ಯಕ್ತಪಡಿಸಿದ ಬಿಆರ್‌ಎಸ್‌

ಹೈದರಾಬಾದ್‌ನ ನಾಂಪಲ್ಲಿಯಲ್ಲಿರುವ ತೆಲಂಗಾಣ ರಾಜ್ಯ ವಿಧಿ ವಿಜ್ಞಾನ ಪ್ರಯೋಗಾಲಯದಲ್ಲಿ (ಟಿಎಸ್‌ಎಫ್‌ಎಸ್‌ಎಲ್‌) ಶನಿವಾರ (ಫೆ.7) ಬೆಂಕಿ ಅವಘಡ ಸಂಭವಿಸಿದ್ದು, ಪ್ರತಿಪಕ್ಷ ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್‌) ಪ್ರಮುಖ ಪ್ರಕರಣಗಳ ಸಾಕ್ಷ್ಯ ನಾಶದ ಶಂಕೆ ವ್ಯಕ್ತಪಡಿಸಿದೆ....

ಬಿಹಾರದ ದರ್ಭಾಂಗದಲ್ಲಿ ಆರು ವರ್ಷದ ಬಾಲಕಿಯ ಹತ್ಯೆ: ಅತ್ಯಾಚಾರ ನಡೆಸಿ ಕೊಲೆ ಮಾಡಿರುವ ಶಂಕೆ 

ಪಾಟ್ನಾ: ಬಿಹಾರದ ದರ್ಭಾಂಗಾ ಪಟ್ಟಣದ ವಿಶ್ವವಿದ್ಯಾಲಯ ಪೊಲೀಸ್ ಠಾಣೆ ವ್ಯಾಪ್ತಿಯ ಕೊಳದ ಬಳಿ ಭಾನುವಾರ ಆರು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಮೂಲಗಳ ಪ್ರಕಾರ, ಶನಿವಾರ ಸಂಜೆ...

‘ರಾಜಕೀಯ ಪ್ರೇರಿತ’: ಪೌರತ್ವಕ್ಕೂ ಮುನ್ನವೇ ಮತದಾರರ ಪಟ್ಟಿಯಲ್ಲಿ ಹೆಸರಿತ್ತು ಎಂಬ ಆರೋಪ ನಿರಾಕರಿಸಿದ ಸೋನಿಯಾ ಗಾಂಧಿ

ಭಾರತದ ನಾಗರಿಕತ್ವ ಪಡೆಯುವ ಮೂರು ವರ್ಷಗಳ ಮೊದಲೇ ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಲಾಗಿತ್ತು ಎಂಬ ಆರೋಪದ ಮೇಲೆ ತನ್ನ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಕೋರಿರುವ ಅರ್ಜಿಯು 'ಸಂಪೂರ್ಣ ರಾಜಕೀಯ ಪ್ರೇರಿತ, ಕಾನೂನು ಪ್ರಕ್ರಿಯೆಯ...

ರಾಜ್ಯದಲ್ಲಿ ಮಂಜೂರಾದ ಯೋಜನೆಗಳಿಗೆ ಹಣ ಬಿಡುಗಡೆ ಮಾಡುವಂತೆ, ರೈಲು ಯೋಜನೆ ತ್ವರಿತಗೊಳಿಸುವಂತೆ ಪ್ರಧಾನಿ ಮೋದಿಗೆ ಪತ್ರ ಬರೆದ ಸ್ಟಾಲಿನ್

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಭಾನುವಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ರಾಜ್ಯದಲ್ಲಿ ಮಂಜೂರಾದ ಯೋಜನೆಗಳಿಗೆ ಅಗತ್ಯವಿರುವ ಹಣವನ್ನು ಬಿಡುಗಡೆ ಮಾಡುವ ಮೂಲಕ ಮತ್ತು ಸ್ಥಗಿತಗೊಂಡಿರುವ ಯೋಜನೆಗಳನ್ನು ಪುನರುಜ್ಜೀವನಗೊಳಿಸುವ...