Homeಚಳವಳಿಹುತಾತ್ಮ ಪತ್ರಕರ್ತೆ ಗೌರಿ ಲಂಕೇಶ್ ಸ್ಮರಣೆ: ನಾಳೆ 'ಗೌರಿ ನೆನಹು' ಕಾರ್ಯಕ್ರಮ

ಹುತಾತ್ಮ ಪತ್ರಕರ್ತೆ ಗೌರಿ ಲಂಕೇಶ್ ಸ್ಮರಣೆ: ನಾಳೆ ‘ಗೌರಿ ನೆನಹು’ ಕಾರ್ಯಕ್ರಮ

- Advertisement -
- Advertisement -

ಹಿಂದೂತ್ವವಾದಿಗಳ ಗುಂಡಿಗೆ ಎದೆಯೊಡ್ಡಿ ಹುತಾತ್ಮರಾದ ದಿಟ್ಟ ಪತ್ರಕರ್ತೆ ಗೌರಿ ಲಂಕೇಶ್‌ರವರ ನೆನಪಿನಲ್ಲಿ ಸೆಪ್ಟಂಬರ್ 05 ರಂದು ಗೌರಿ ಮೆಮೋರಿಯಲ್ ಟ್ರಸ್ಟ್‌ನಿಂದ ‘ಗೌರಿ ನೆನಹು’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಸೆಪ್ಟಂಬರ್ 05ಕ್ಕೆ ಗೌರಿ ಲಂಕೇಶ್‌ರವರ ಹತ್ಯೆಯಾಗಿ 4 ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಅಂದು ಬೆಳಿಗ್ಗೆ 8.30ಕ್ಕೆ ಚಾಮರಾಜಪೇಟೆಯಲ್ಲಿರುವ ಗೌರಿ ಲಂಕೇಶ್‌ರವರ ಸಮಾಧಿ ಬಳಿ ಗೌರವ ಸಲ್ಲಿಸಲಾಗುತ್ತದೆ ಎಂದು ಟ್ರಸ್ಟ್ ಸದಸ್ಯರಾದ ನೂರ್ ಶ್ರೀಧರ್ ತಿಳಿಸಿದ್ದಾರೆ.

ಗೌರಿ ಲಂಕೇಶ್‌ರವರ ನಮ್ಮನ್ನು ಅಗಲಿ ನಾಲ್ಕು ವರ್ಷಗಳಾಗಿವೆ. ಬನ್ನಿ ಸೇರೋಣ, ಗೌರಿ ಹಾದಿಯಲ್ಲಿ ಮುನ್ನೆಡೆಯೋಣ ಎಂದು ಅವರು ಕರೆ ನೀಡಿದ್ದಾರೆ.

ಅಂದು ಸಂಜೆಗೆ 5 ಗಂಟೆಗೆ ಗೌರಿ ಮೆಮೋರಿಯಲ್ ಟ್ರಸ್ಟ್ ಮತ್ತು ಸಿಟಿಜನ್ ಫಾರ್‌ ಜಸ್ಟೀಸ್ ಅಂಡ್ ಪೀಸ್ ಸಹಯೋಗದಲ್ಲಿzoom ವೇದಿಕೆಯಲ್ಲಿ ಮೃತ ಫಾದರ್‌ ಸ್ಟಾನ್ ಸ್ವಾಮಿ ಪ್ರಕರಣದಲ್ಲಿ ಪ್ರಮುಖರಾಗಿದ್ದ ಹಿರಿಯ ವಕೀಲ ಮಿಹೀರ್ ದೇಸಾಯಿ ಅವರಿಂದ “ಟೆರರ್ ಲಾ ಅಂಡರ್ ಪ್ರೋಟೋ ಫ್ಯಾಸಿಸ್ಟ್ ರೆಜಿಮ್” (ಫ್ಯಾಸಿಸ್ಟ್ ಆಡಳಿತದ ಅಡಿಯಲ್ಲಿ ಭಯೋತ್ಪಾದನಾ ಕಾನೂನುಗಳು) ಎಂಬ ವಿಷಯದ ಬಗ್ಗೆ ವಿಶೇಷ ಉಪನ್ಯಾಸ ನಡೆಯಲಿದೆ. ಈ ವೇದಿಕೆಯಲ್ಲಿ ಯುವ ಹೋರಾಟಗಾರರಾದ ನತಾಶಾ ನರ್ವಾಲ್, ದೇವಂಗಾನಾ ಕಾಲಿತಾ ಮತ್ತು ಆಸಿಫ್ ಇಕ್ಬಾಲ್ ತನ್ಹಾ ಮಾತನಾಡಲಿದ್ದಾರೆ. ಗೌರಿ ಲಂಕೇಶ್ ಅವರಿಗೆ ಗೌರವ ನಮನ ಸಲ್ಲಿಸಲಿದ್ದಾರೆ.

ಸೆಪ್ಟಂಬರ್ 05ರ ಭಾನುವಾರ ಸಂಜೆ 6 ಗಂಟೆಯಿಂದ ‘ಗೌರಿ ಹತ್ಯೆ ಪ್ರಕರಣ ಮತ್ತು ಹಿಂಸೆಯನ್ನು ಎದುರುಗೊಳ್ಳುವ ಅಗತ್ಯ’ ಎಂಬ ವಿಷಯದ ಕುರಿತು ನಾನುಗೌರಿ.ಕಾಂ । ನ್ಯಾಯಪಥ – ಕ್ಲಬ್ ಹೌಸ್ ಸಂವಾದ ನಡೆಯಲಿದೆ. ಚಿಂತಕ ಶಿವಸುಂದರ್ ಮತ್ತು ಪತ್ರಕರ್ತ ಆದಿತ್ಯ ಭಾರದ್ವಾಜ್ ಮಾತನಾಡಲಿದ್ದಾರೆ.

ಇನ್ನೊಂದೆಡೆ ಗೌರಿ ದಿನದ ಅಂಗವಾಗಿ ’ಸಹಮತ’ ತಂಡ “ಗಾಂಧಿ ಕೊಂದವರೇ ಕಲ್ಬುರ್ಗಿ ಕೊಂದರು; ಗೌರಿಯನ್ನೂ ಕೊಂದರು” ಎಂಬ ಚರ್ಚೆ ಆಯೋಜಿಸಿದೆ. ಚರ್ಚೆಯಲ್ಲಿ ನಿವೃತ್ತ ಪೊಲೀಸ್ ಅಧಿಕಾರಿ ಬಿ.ಕೆ.ಶಿವರಾಂ, ಹೋರಾಟಗಾರ್ತಿ ಕೆ.ನೀಲಾ ಮತ್ತು ಪತ್ರಕರ್ತ ನವೀನ್ ಸೂರಿಂಜೆ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಳ್ಳಲಿದ್ದಾರೆ. ಸೆ.5 ರ ಸಂಜೆ 4 ಗಂಟೆಗೆ ಚರ್ಚೆ ಆರಂಭವಾಗಲಿದೆ.


ಇದನ್ನೂ ಓದಿ: ಜನಪ್ರಿಯ ಚಾನೆಲ್‌ ಪ್ಯಾಕ್‌ನಿಂದ NDTV ಹೊರಗಿಟ್ಟು ವಿವಾದ ಸೃಷ್ಟಿಸಿದ ಹಾತ್‌ವೇ ಕೇಬಲ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

ದಾವಣಗೆರೆ ದಕ್ಷಿಣ ಉಪ-ಸಮರ: ಶಾಮನೂರು ಸಾಮ್ರಾಜ್ಯದಲ್ಲಿ ಅಹಿಂದ ಬಂಡಾಯ!

ತುಂಗಭದ್ರಾ ನದಿ ಪರ‍್ವಕ್ಕೆ ಎತ್ತರದ ಪ್ರದೇಶದಲ್ಲಿರುವ ದಾವಣಗೆರೆ ಮಧ್ಯ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ. ಬೆಣ್ಣೆ ದೋಸೆಯ ಘಮಲಿನ ದಾವಣಗೆರೆಯ ರಾಜಕಾರಣ ಮಾತ್ರ ಮಿರ್ಚಿ-ಮಂಡಕ್ಕಿಯ ಖಡಕ್ ಖಾರಾ ಕುರುಕುಲಿನಂತೆ! ದಾವಣಗೆರೆ ಮತ್ತದರ ಸುತಮುತ್ತಲಿನ...

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...