Homeಚಳವಳಿಹುತಾತ್ಮ ಪತ್ರಕರ್ತೆ ಗೌರಿ ಲಂಕೇಶ್ ಸ್ಮರಣೆ: ನಾಳೆ 'ಗೌರಿ ನೆನಹು' ಕಾರ್ಯಕ್ರಮ

ಹುತಾತ್ಮ ಪತ್ರಕರ್ತೆ ಗೌರಿ ಲಂಕೇಶ್ ಸ್ಮರಣೆ: ನಾಳೆ ‘ಗೌರಿ ನೆನಹು’ ಕಾರ್ಯಕ್ರಮ

- Advertisement -
- Advertisement -

ಹಿಂದೂತ್ವವಾದಿಗಳ ಗುಂಡಿಗೆ ಎದೆಯೊಡ್ಡಿ ಹುತಾತ್ಮರಾದ ದಿಟ್ಟ ಪತ್ರಕರ್ತೆ ಗೌರಿ ಲಂಕೇಶ್‌ರವರ ನೆನಪಿನಲ್ಲಿ ಸೆಪ್ಟಂಬರ್ 05 ರಂದು ಗೌರಿ ಮೆಮೋರಿಯಲ್ ಟ್ರಸ್ಟ್‌ನಿಂದ ‘ಗೌರಿ ನೆನಹು’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಸೆಪ್ಟಂಬರ್ 05ಕ್ಕೆ ಗೌರಿ ಲಂಕೇಶ್‌ರವರ ಹತ್ಯೆಯಾಗಿ 4 ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಅಂದು ಬೆಳಿಗ್ಗೆ 8.30ಕ್ಕೆ ಚಾಮರಾಜಪೇಟೆಯಲ್ಲಿರುವ ಗೌರಿ ಲಂಕೇಶ್‌ರವರ ಸಮಾಧಿ ಬಳಿ ಗೌರವ ಸಲ್ಲಿಸಲಾಗುತ್ತದೆ ಎಂದು ಟ್ರಸ್ಟ್ ಸದಸ್ಯರಾದ ನೂರ್ ಶ್ರೀಧರ್ ತಿಳಿಸಿದ್ದಾರೆ.

ಗೌರಿ ಲಂಕೇಶ್‌ರವರ ನಮ್ಮನ್ನು ಅಗಲಿ ನಾಲ್ಕು ವರ್ಷಗಳಾಗಿವೆ. ಬನ್ನಿ ಸೇರೋಣ, ಗೌರಿ ಹಾದಿಯಲ್ಲಿ ಮುನ್ನೆಡೆಯೋಣ ಎಂದು ಅವರು ಕರೆ ನೀಡಿದ್ದಾರೆ.

ಅಂದು ಸಂಜೆಗೆ 5 ಗಂಟೆಗೆ ಗೌರಿ ಮೆಮೋರಿಯಲ್ ಟ್ರಸ್ಟ್ ಮತ್ತು ಸಿಟಿಜನ್ ಫಾರ್‌ ಜಸ್ಟೀಸ್ ಅಂಡ್ ಪೀಸ್ ಸಹಯೋಗದಲ್ಲಿzoom ವೇದಿಕೆಯಲ್ಲಿ ಮೃತ ಫಾದರ್‌ ಸ್ಟಾನ್ ಸ್ವಾಮಿ ಪ್ರಕರಣದಲ್ಲಿ ಪ್ರಮುಖರಾಗಿದ್ದ ಹಿರಿಯ ವಕೀಲ ಮಿಹೀರ್ ದೇಸಾಯಿ ಅವರಿಂದ “ಟೆರರ್ ಲಾ ಅಂಡರ್ ಪ್ರೋಟೋ ಫ್ಯಾಸಿಸ್ಟ್ ರೆಜಿಮ್” (ಫ್ಯಾಸಿಸ್ಟ್ ಆಡಳಿತದ ಅಡಿಯಲ್ಲಿ ಭಯೋತ್ಪಾದನಾ ಕಾನೂನುಗಳು) ಎಂಬ ವಿಷಯದ ಬಗ್ಗೆ ವಿಶೇಷ ಉಪನ್ಯಾಸ ನಡೆಯಲಿದೆ. ಈ ವೇದಿಕೆಯಲ್ಲಿ ಯುವ ಹೋರಾಟಗಾರರಾದ ನತಾಶಾ ನರ್ವಾಲ್, ದೇವಂಗಾನಾ ಕಾಲಿತಾ ಮತ್ತು ಆಸಿಫ್ ಇಕ್ಬಾಲ್ ತನ್ಹಾ ಮಾತನಾಡಲಿದ್ದಾರೆ. ಗೌರಿ ಲಂಕೇಶ್ ಅವರಿಗೆ ಗೌರವ ನಮನ ಸಲ್ಲಿಸಲಿದ್ದಾರೆ.

ಸೆಪ್ಟಂಬರ್ 05ರ ಭಾನುವಾರ ಸಂಜೆ 6 ಗಂಟೆಯಿಂದ ‘ಗೌರಿ ಹತ್ಯೆ ಪ್ರಕರಣ ಮತ್ತು ಹಿಂಸೆಯನ್ನು ಎದುರುಗೊಳ್ಳುವ ಅಗತ್ಯ’ ಎಂಬ ವಿಷಯದ ಕುರಿತು ನಾನುಗೌರಿ.ಕಾಂ । ನ್ಯಾಯಪಥ – ಕ್ಲಬ್ ಹೌಸ್ ಸಂವಾದ ನಡೆಯಲಿದೆ. ಚಿಂತಕ ಶಿವಸುಂದರ್ ಮತ್ತು ಪತ್ರಕರ್ತ ಆದಿತ್ಯ ಭಾರದ್ವಾಜ್ ಮಾತನಾಡಲಿದ್ದಾರೆ.

ಇನ್ನೊಂದೆಡೆ ಗೌರಿ ದಿನದ ಅಂಗವಾಗಿ ’ಸಹಮತ’ ತಂಡ “ಗಾಂಧಿ ಕೊಂದವರೇ ಕಲ್ಬುರ್ಗಿ ಕೊಂದರು; ಗೌರಿಯನ್ನೂ ಕೊಂದರು” ಎಂಬ ಚರ್ಚೆ ಆಯೋಜಿಸಿದೆ. ಚರ್ಚೆಯಲ್ಲಿ ನಿವೃತ್ತ ಪೊಲೀಸ್ ಅಧಿಕಾರಿ ಬಿ.ಕೆ.ಶಿವರಾಂ, ಹೋರಾಟಗಾರ್ತಿ ಕೆ.ನೀಲಾ ಮತ್ತು ಪತ್ರಕರ್ತ ನವೀನ್ ಸೂರಿಂಜೆ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಳ್ಳಲಿದ್ದಾರೆ. ಸೆ.5 ರ ಸಂಜೆ 4 ಗಂಟೆಗೆ ಚರ್ಚೆ ಆರಂಭವಾಗಲಿದೆ.


ಇದನ್ನೂ ಓದಿ: ಜನಪ್ರಿಯ ಚಾನೆಲ್‌ ಪ್ಯಾಕ್‌ನಿಂದ NDTV ಹೊರಗಿಟ್ಟು ವಿವಾದ ಸೃಷ್ಟಿಸಿದ ಹಾತ್‌ವೇ ಕೇಬಲ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೋಲ್ಕತ್ತಾ| ಮತದಾರರ ಪಟ್ಟಿಯಿಂದ ಹೆಸರು ಅಳಿಸುವಿಕೆ ವಿರೋಧಿಸಿ ಅಹೋರಾತ್ರಿ ಧರಣಿ ಮುಂದುವರೆಸಿದ ಮಮತಾ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಶನಿವಾರ ಸತತ ಎರಡನೇ ದಿನವಾದ ಶನಿವಾರವೂ ತಮ್ಮ ಪ್ರತಿಭಟನೆಯನ್ನು ಮುಂದುವರೆಸಿದ್ದಾರೆ, ಅವರು ಅಹೋರಾತ್ರಿ ಧರಣಿ ಸ್ಥಳದಲ್ಲಿ ರಾತ್ರಿ ಕಳೆದರು. ಮುಂಬರುವ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ "ಬಂಗಾಳದ ಮತದಾರರ...

ಇಂಡೋನೇಷ್ಯಾ | ನಾಲ್ವರು ಪ್ರಮುಖ ಹೋರಾಟಗಾರರು ಖುಲಾಸೆ : ಪ್ರತಿಭಟನೆಯ ಹಕ್ಕಿಗೆ ಹೊಸ ಭರವಸೆ ಎಂದ ಆಮ್ನೆಸ್ಟಿ

2025ರ ಆಗಸ್ಟ್ ಮತ್ತು ಸೆಪ್ಟೆಂಬರ್‌ನಲ್ಲಿ ನಡೆದ ಹಿಂಸಾತ್ಮಕ ವಿದ್ಯಾರ್ಥಿ ಪ್ರತಿಭಟನೆಗಳಿಗೆ ಪ್ರಚೋದನೆ ನೀಡಿದ ಆರೋಪ ಎದುರಿಸುತ್ತಿದ್ದ ನಾಲ್ವರು ಪ್ರಮುಖ ಹೋರಾಟಗಾರರನ್ನು ಇಂಡೋನೇಷ್ಯಾದ ಕೇಂದ್ರ ಜಕಾರ್ತಾ ಜಿಲ್ಲಾ ನ್ಯಾಯಾಲಯವು ಶುಕ್ರವಾರ (ಮಾ.6) ಖುಲಾಸೆಗೊಳಿಸಿದೆ. ದೇಶದಲ್ಲಿ ನಾಗರಿಕ ಸ್ವಾತಂತ್ರ್ಯಕ್ಕೆ...

‘ಆಕ್ರಮಣ ಮಾಡುವ ಉದ್ದೇಶವಿಲ್ಲ..’; ಗಲ್ಫ್ ರಾಷ್ಟ್ರಗಳ ಮೇಲಿನ ದಾಳಿಗೆ ಕ್ಷಮೆಯಾಚಿಸಿದ ಇರಾನ್ ಅಧ್ಯಕ್ಷರು

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ನೆರೆಯ ರಾಷ್ಟ್ರಗಳಿಗೆ ಶನಿವಾರ ಕ್ಷಮೆಯಾಚಿಸಿದ್ದಾರೆ. ಉಲ್ಬಣಗೊಳ್ಳುತ್ತಿರುವ ಪ್ರಾದೇಶಿಕ ಸಂಘರ್ಷಕ್ಕೆ ಸಂಬಂಧಿಸಿದ ಇತ್ತೀಚಿನ ದಾಳಿಗಳಿಗೆ ಟೆಹ್ರಾನ್ ಇತರ ರಾಷ್ಟ್ರಗಳನ್ನು ಆಕ್ರಮಿಸುವ ಉದ್ದೇಶವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ. ಇರಾನ್ ಸಾರ್ವಜನಿಕರನ್ನು...

ತೈಲ ಆಮದು ವಿಚಾರದಲ್ಲಿ ಅಮೆರಿಕದ ಒಪ್ಪಿಗೆ ಪಡೆಯುವುದು ‘ಅತಿರೇಕದ’ ಸಂಗತಿ: ಪಿಣರಾಯಿ ವಿಜಯನ್

ತೈಲ ಆಮದುಗಳಂತಹ ನಿರ್ಧಾರಗಳಿಗೆ ಭಾರತವು ಅಮೆರಿಕದ ಅನುಮೋದನೆಯನ್ನು ಪಡೆಯುವಂತೆ ಬಿಂಬಿತವಾಗುತ್ತಿರುವುದು 'ಅತಿರೇಕದ' ಸಂಗತಿ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಶುಕ್ರವಾರ ಹೇಳಿದ್ದಾರೆ. ಭಾರತದ ಸಾರ್ವಭೌಮತ್ವವು ವಿದೇಶಿ ಅನುಮತಿಗೆ ಒಳಪಡುವುದಿಲ್ಲ ಎಂದು ವಿಜಯನ್ ಸಾಮಾಜಿಕ...

ಪತ್ರಕರ್ತನ ಹತ್ಯೆ ಪ್ರಕರಣ : ಡೇರಾ ಮುಖ್ಯಸ್ಥ ರಾಮ್ ರಹೀಂ ಸಿಂಗ್ ಖುಲಾಸೆ

ಪತ್ರಕರ್ತ ಛತ್ರಪತಿ ಹತ್ಯೆ ಪ್ರಕರಣದಲ್ಲಿ ಸಿರ್ಸಾದ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಂ ಸಿಂಗ್ ಅನ್ನು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಶನಿವಾರ (ಮಾ.7) ಖುಲಾಸೆಗೊಳಿಸಿರುವುದಾಗಿ livelaw.in ಎಂದು ವರದಿ...

ಗೃಹ ಬಳಕೆಯ ಎಲ್‌ಪಿಜಿ ದರ 60 ರೂ. ಹೆಚ್ಚಳ : 11 ತಿಂಗಳಲ್ಲಿ ಎರಡನೇ ಬಾರಿ ಬೆಲೆ ಏರಿಕೆ

ತೈಲ ಮಾರುಕಟ್ಟೆ ಕಂಪನಿಗಳು ಶನಿವಾರ (ಮಾ.7) ದೇಶದಲ್ಲಿ ಗೃಹ ಬಳಕೆಯ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಕ್ರಮವಾಗಿ ರೂ. 60 ಮತ್ತು ರೂ. 115 ಹೆಚ್ಚಿಸಿವೆ. ಈ ಹೆಚ್ಚಳದ ನಂತರ ರಾಷ್ಟ್ರ ರಾಜಧಾನಿ...

ಟಿವಿ ನ್ಯೂಸ್ ಚಾನೆಲ್‌ಗಳಲ್ಲಿ ಅನಗತ್ಯ ಯುದ್ಧೋನ್ಮಾದ, ಸುಳ್ಳು ವರದಿ : ನಾಲ್ಕು ವಾರ TRP ಸ್ಥಗಿತಕ್ಕೆ ಕೇಂದ್ರ ಆದೇಶ

ಅಮೆರಿಕ, ಇಸ್ರೇಲ್, ಇರಾನ್ ಮತ್ತು ಗಲ್ಫ್ ರಾಷ್ಟ್ರಗಳ ಸಂಘರ್ಷದ ಕುರಿತು ಟಿವಿ ನ್ಯೂಸ್‌ ಚಾನೆಲ್‌ಗಳು ಅನಗತ್ಯ ಯುದ್ಧೋನ್ಮಾದ ಸೃಷ್ಟಿಸುತ್ತಿರುವ ಹಾಗೂ ಸುಳ್ಳು ವರದಿಗಳನ್ನು ಪ್ರಸಾರ ಮಾಡುತ್ತಿರುವ ಹಿನ್ನೆಲೆ, ಮುಂದಿನ ನಾಲ್ಕು ವಾರಗಳ ಕಾಲ...

‘ಮಿಯಾ ಮುಸ್ಲಿಮರು ನಮ್ಮ ಶತ್ರುಗಳಲ್ಲ..’; ಚುನಾವಣೆ ಸನಿಹದಲ್ಲಿ ಮಾತು ಬದಲಿಸಿದ ಅಸ್ಸಾಂ ಸಿಎಂ

ಭಾರತೀಯ ಜನತಾ ಪಕ್ಷವು (ಬಿಜೆಪಿ) ಅಸ್ಸಾಂನಲ್ಲಿರುವ ಬಂಗಾಳಿ ಮೂಲದ ಮುಸ್ಲಿಂ ಸಮುದಾಯವಾದ ಮಿಯಾ ಮುಸ್ಲಿಮರನ್ನು ತನ್ನ ಶತ್ರುಗಳೆಂದು ಪರಿಗಣಿಸುವುದಿಲ್ಲ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಗುರುವಾರ ಹೇಳಿದ್ದಾರೆ. ಇದೇ ವರ್ಷದ...

ಜೈಲಿನಲ್ಲಿರುವ ಪಿಎಫ್‌ಐ ನಾಯಕ ಇ ಅಬೂಬಕರ್ ಆರೋಗ್ಯ ಸ್ಥಿತಿ ಗಂಭೀರ

ಸುಮಾರು ನಾಲ್ಕು ವರ್ಷಗಳ ಕಾಲ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿರುವ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಸ್ಥಾಪಕ ಅಧ್ಯಕ್ಷ ಎರಪ್ಪುಂಗಲ್ ಅಬೂಬಕರ್ ಅವರ ಆರೋಗ್ಯ ಹದಗೆಟ್ಟ ನಂತರ ಬುಧವಾರದಿಂದ ಆಸ್ಪತ್ರೆಯಲ್ಲಿ ತೀವ್ರ ನಿಗಾ...

‘ಭಾರತ ನಮ್ಮನ್ನು ಹಿಂದುಕ್ಕುವುದಕ್ಕೆ ಬಿಡಲ್ಲ; ಅಮೆರಿಕದ ಹಿತಾಸಕ್ತಿಗಳಿಗೆ ಮೊದಲ ಆದ್ಯತೆ..’; ಕ್ರಿಸ್ಟೋಫರ್ ಲ್ಯಾಂಡೌ

ನಮ್ಮ ಪ್ರಮುಖ ಪ್ರತಿಸ್ಪರ್ಧಿಯಾಗಿ ಹೊರಹೊಮ್ಮಲು ಚೀನಾಗೆ ಮಾಡಿಕೊಟ್ಟ ಆರ್ಥಿಕ ಅನುಕೂಲಗಳನ್ನು ನಾವು ಭಾರತಕ್ಕೆ ನೀಡುವುದಿಲ್ಲ ಎಂದು ಯುನೈಟೆಡ್ ಸ್ಟೇಟ್ಸ್‌ (ಯುಎಸ್‌) ಉಪ ಕಾರ್ಯದರ್ಶಿ ಕ್ರಿಸ್ಟೋಫರ್ ಲ್ಯಾಂಡೌ ಗುರುವಾರ ಹೇಳಿದ್ದಾರೆ. ಅಮೆರಿಕ ಮತ್ತು ಭಾರತ...