Homeಕರ್ನಾಟಕಗೌರಿ ಲಂಕೇಶ್ ನೆನಪು: ಗೌರವ ನಮನ, ಸಂವಾದ ಕಾರ್ಯಕ್ರಮ - ಸಿಎಂ ಸಿದ್ದರಾಮಯ್ಯ ಭಾಗಿ

ಗೌರಿ ಲಂಕೇಶ್ ನೆನಪು: ಗೌರವ ನಮನ, ಸಂವಾದ ಕಾರ್ಯಕ್ರಮ – ಸಿಎಂ ಸಿದ್ದರಾಮಯ್ಯ ಭಾಗಿ

- Advertisement -
- Advertisement -

ಪತ್ರಕರ್ತೆ ಗೌರಿಲಂಕೇಶ್ ಅವರು ಹತ್ಯೆಯಾಗಿ ನಾಳೆ(ಸೆ.5)ಗೆ ಆರು ವರ್ಷ ಕಳೆಯುತ್ತಿದೆ. ಈ ಹಿನ್ನೆಲೆಯಲ್ಲಿ ನಾಳೆ (ಸೆ.05) ಬೆಳಿಗ್ಗೆ 8ಗಂಟೆ ಸುಮಾರಿಗೆ ಚಾಮರಾಜಪೇಟೆಯಲ್ಲಿನ ಗೌರಿ ಸಮಾಧಿ ಬಳಿ ಗೌರವನಮನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ನಾಳೆ ಸಂಜೆ 5 ಗಂಟೆಗೆ ಟೌನ್‌ ಹಾಲ್‌ನಲ್ಲಿ ಗೌರಿ ನೆನಪು ಕಾರ್ಯಕ್ರಮವನ್ನೂ ಹಮ್ಮಿಕೊಳ್ಳಲಾಗಿದೆ.

‘ಇಲ್ಲಿ ಬಿತ್ತಿಹ ಬೀಜ ಜಗದೆಲ್ಲೆಡೆ ಚಿಗುರಿದೆ ನೋಡ’ ಎನ್ನುವ ನುಡಿನಮನ ಕಾರ್ಯಕ್ರಮದಲ್ಲಿ ಸಿನಿಮಾ ನಟ ದುನಿಯಾ ವಿಜಯ್, ಕವಯಿತ್ರಿ ಮಮತಾ ಜಿ ಸಾಗರ್, ಫಾದರ್ ಜೆರಾಲ್ಡ್ ಡಿಸೋಜಾ (ಸಂತ ಜೋಸೆಫ್‌ ಲಾ ಕಾಲೇಜು) ಹಾಗೂ ಮುಸ್ಲಿಮ್ ಮುಖಂಡರಾದ ಅಮ್ಮದ್ ಪಾಷಾ ಅವರು ಭಾಗಿಯಾಗಲಿದ್ದಾರೆ.

ಕಾವ್ಯ ನಮನ ಕಾರ್ಯಕ್ರಮದಲ್ಲಿ ಪ್ರಖ್ಯಾತ ಗಾಯಕರಾದ ಪಿಚ್ಚಳ್ಳಿ ಶ್ರೀನಿವಾಸ್, ಜನಾರ್ಧನ್ ಚಿನ್ನಿ, ಗೊಲ್ಲಳ್ಳಿ ಶಿವಪ್ರಸಾದ್ ಹಾಗೂ ಚಿಂತನ್ ವಿಕಾಸ್ ಭಾಗವಹಿಸಲಿದ್ದಾರೆ.

ಗೌರಿ ನೆನಪು ಕಾರ್ಯಕ್ರಮ: ಸಂಜೆ 5ಗಂಟೆಗೆ

ನಮ್ಮೆಲ್ಲರ ನಲ್ಮೆಯ ಗೌರಿ ನಮ್ಮನ್ನು ಅಗಲಿ ಆರು ವರ್ಷಗಳು ಕಳೆದವು. ಅವರ ನೆನಪಿನಲ್ಲಿ ನಾಳೆ ಸಂಜೆ 5 ಗಂಟೆಗೆ ಟೌನ್‌ ಹಾಲ್‌ನಲ್ಲಿ ಗೌರಿ ಸ್ಮಾರಕ ಟ್ರಸ್ಟ್‌ನಿಂದ ಸಂವಾದ ಕಾರ್ಯಕ್ರಮ ನಡೆಯಲಿದೆ.

ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಹಿರಿಯ ರೈತ ಮುಖಂಡ ರಾಕೇಶ್ ಟಿಕಾಯತ್, ರಾಜಕೀಯ ಕಾರ್ಯಕರ್ತೆ ಏಂಜಿಲಾ ರಂಗದ್, ಖ್ಯಾತ ಬಹುಭಾಷಾ ನಟ ಪ್ರಕಾಶ್ ರೈ, ಕೇರಳದ ಮಾಜಿ ಸಚಿವೆ, ಶಾಸಕಿ ಶೈಲಜ ಟೀಚರ್, ಖ್ಯಾತ ಪತ್ರಕರ್ತೆ (ದೆಹಲಿ) ಸುಪ್ರಿಯಾ ಶ್ರೀನಾಟೆ ಹಾಗೂ ಮುಸ್ಲಿಮ್ ಒಕ್ಕೂಟದ ಮುಖಂಡರಾದ ಯಾಸೀನ್ ಮಲ್ಫೆ ಭಾಗವಹಿಸಲಿದ್ದಾರೆ.

ಕಾರ್ಯಕ್ರಮದ ಕುರಿತು ಮಾಹಿತಿಗಾಗಿ ವಿಎಸ್‌ ಶ್ರೀಧರ್ 9448127571, ಕೆಎಲ್ ಅಶೋಕ್ 9448256816, ದೀಪು 7353770203 ಇವರನ್ನು ಸಂಪರ್ಕಿಸಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...