Homeಮುಖಪುಟಸೆ.5 ಕ್ಕೆ ಗೌರಿ ಲಂಕೇಶ್ ನೆನಪಿನಲ್ಲಿ ಮೊಳಗಲಿದೆ 'ನಾವೆದ್ದು ನಿಲ್ಲದಿದ್ದರೆ…' ಧ್ವನಿ

ಸೆ.5 ಕ್ಕೆ ಗೌರಿ ಲಂಕೇಶ್ ನೆನಪಿನಲ್ಲಿ ಮೊಳಗಲಿದೆ ‘ನಾವೆದ್ದು ನಿಲ್ಲದಿದ್ದರೆ…’ ಧ್ವನಿ

ಅಭಿಯಾನವು ಭಾರತದ ಜನತೆಯ ಸಂವಿಧಾನಾತ್ಮಕ ಹಕ್ಕುಗಳ ವಿರುದ್ಧ ನಡೆಯುತ್ತಿರುವ ಗುರುತರ ದಾಳಿಯನ್ನು ಪ್ರತಿರೋಧಿಸುವ ಧ್ವನಿಗಳನ್ನು ಒಗ್ಗೊಡಿಸುವ ಧ್ಯೇಯವನ್ನು ಹೊಂದಿದೆ.

- Advertisement -
- Advertisement -

ಸೆಪ್ಟೆಂಬರ್ 05, 2017…. ಯಾರಿಗೆ ತಾನೇ ನೆನಪಿಲ್ಲ ಹೇಳಿ ಒಬ್ಬ ನಿರ್ಭಿತ, ದಿಟ್ಟ ಪತ್ರಕರ್ತೆಯನ್ನು ದೇಶ ಕಳೆದುಕೊಂಡ ದಿನ. ಪತ್ರಕರ್ತೆ ಎನ್ನುವುದಕ್ಕಿಂತ ಮಾತೃಹೃದಯಿ ನಮ್ಮನ್ನಗಲಿದ ದಿನ. ಅಭಿವ್ಯಕ್ತಿ ಸ್ವಾತಂತ್ರಕ್ಕೆ ಪೆಟ್ಟು ಬಿದ್ದ ದಿನ. ಮಹಿಳೆಯರ ಹಕ್ಕುಗಳ ಮೇಲೆ, ಸತ್ಯದ ಮೇಲೆ ಬರೆ ಬಿದ್ದ ದಿನ.. ಆ ದುರಂತಕ್ಕೆ 3 ವರ್ಷಗಳಾಗುತ್ತಾ ಬಂತು.

ರಾಜಕೀಯ ಮತ್ತು ಸಾರ್ವಜನಿಕ ಜೀವನದಲ್ಲಿ ಬೆಳೆಯುತ್ತಿರುವ ಪ್ಯಾಸಿಸ್ಟ್ ಶಕ್ತಿಗಳ ವಿರುದ್ಧ ಎದೆಗುಂದದೆ ಹೋರಾಡಿದ ಅಪ್ರತಿಮ ಮಹಿಳೆ ಗೌರಿ ಲಂಕೇಶ್. ಜನರಲ್ಲಿ ಬದುಕುವ ಹಕ್ಕು, ಭಿನ್ನಾಭಿಪ್ರಾಯಗಳನ್ನು ಹೊಂದುವ ಸ್ವತಂತ್ರ ಮನೋಭಾವವನ್ನು ಬೆಳೆಸಿಕೊಳ್ಳುವ ಹಕ್ಕುಗಳನ್ನು ಒಪ್ಪಿ, ಅಪ್ಪಿಕೊಂಡಿದ್ದ ಅವರು ತನ್ನ ಜೀವವನ್ನೇ ಪಣಕ್ಕಿಟ್ಟು ಮನುಷ್ಯ ಬದುಕಿನ ಸಂಕೇತವಾದರು. ಇವರ ನಿರ್ಭಿತ ಚೈತನ್ಯ ಮತ್ತು ಗಾಢ ನಂಬಿಕೆಗಳಿಂದ ಉತ್ತೇಜಿತವಾಗಿ, ಸಂವಿಧಾನ ಮತ್ತು ಜನರ ಮೇಲಿನ ಹಲ್ಲೆಗಳನ್ನು ಖಂಡಿಸಿ ಅವುಗಳ ವಿರುದ್ಧ ಧ್ವನಿ ಎತ್ತಲು ಇದೇ ಸೆಪ್ಟಂಬರ್ 5ರಂದೇ “ನಾವೆದ್ದು ನಿಲ್ಲದಿದ್ದರೆ”… ಆಂದೋಲನ ನಡೆಯುತ್ತಿದೆ.

ಅಂದು ರಾಷ್ಟ್ರಮಟ್ಟದಲ್ಲಿ ಮಹಿಳಾ ಪರ ಹೋರಾಟಗಾರರು, ಚಿಂತಕರು, ಲೈಂಗಿಕ ಅಲ್ಪ ಸಂಖ್ಯಾತ LGBTQIA ಸಮುದಾಯಗಳು ಮತ್ತು ಮಾನವ ಹಕ್ಕುಗಳ ಸಂಘಟನೆಗಳು “ನಾವೆದ್ದು ನಿಲ್ಲದಿದ್ದರೆ” ಎಂಬ ಪ್ರಚಾರಾಂದೋಲನ ಹಮ್ಮಿಕೊಂಡಿವೆ. ಅಭಿಯಾನವು ಭಾರತದ ಜನತೆಯ ಸಂವಿಧಾನಾತ್ಮಕ ಹಕ್ಕುಗಳ ವಿರುದ್ಧ ನಡೆಯುತ್ತಿರುವ ಗುರುತರ ದಾಳಿಯನ್ನು ಪ್ರತಿರೋಧಿಸುವ ಧ್ವನಿಗಳನ್ನು ಒಗ್ಗೊಡಿಸುವ ಧ್ಯೇಯವನ್ನು ಹೊಂದಿದೆ. ಈ ಅಭಿಯಾನದಲ್ಲಿ ಜಾತಿ, ಮತ, ಧರ್ಮಗಳ ಕಟ್ಟಳೆಗಳಿಂದ ಹೊರ ಬಂದು ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುವ ಕೆಲಸ ನಡೆಯಲಿದೆ.

ದೇಶದಲ್ಲಿನ ಪ್ಯಾಸಿಸ್ಟ್ ಶಕ್ತಿಗಳ ಬೆಳವಣಿಗೆಯಿಂದ ಮಹಿಳೆಯರು, ಮಕ್ಕಳು ಮತ್ತು ಲೈಂಗಿಕ ಅಲ್ಪಸಂಖ್ಯಾತರು ತಮ್ಮ ಹಕ್ಕುಗಳಿಗಾಗಿ ಪರದಾಡುವಂತಾಗಿದೆ. ಅವರ ಜೀವನದ ಮೇಲೆ ಅಗಾಧ ಪರಿಣಾಮ ಉಂಟಾಗಿದೆ. ಅಭಿಯಾನದ ಮೂಲಕ ಅವರಲ್ಲಿ ಆತ್ಮಸ್ಥೈರ್ಯ ತುಂಬಲಾಗುತ್ತದೆ. ಈ ಮೂಲಕ ಸಂವಿಧಾನ ನೀಡಿರುವ ಹಕ್ಕುಗಳನ್ನು ಪಡೆಯಲು ಧ್ವನಿ ಎತ್ತಲಾಗುತ್ತಿದೆ ಎಂದು ಸುದ್ದಿಗೊಷ್ಟಿಯಲ್ಲಿ ಹೋರಾಟಗಾರ್ತಿಯರು ತಿಳಿಸಿದ್ದಾರೆ.

ಕೊರೊನಾ ಸಂಕಷ್ಟದ ಸಮಯದಲ್ಲಿ ಆಶಾ ಕಾರ್ಯಕರ್ತೆಯರು, ಪೌರ  ಕಾರ್ಮಿಕರು, ದಲಿತರ ಮೇಲೆ ಅತ್ಯಾಚಾರದ ಪ್ರಕರಣಗಳು ಹೆಚ್ಚಾಗಿದ್ದು, ಇವುಗಳನ್ನು ಪ್ರಚಾರಾಂದೋಲನದಲ್ಲಿ ಚರ್ಚಿಸಿ, ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲು ಅಭಿಯಾನದ ಸಂಯೋಜಕರು ನಿರ್ಧರಿಸಿದ್ದಾರೆ.

ದೇಶದಲ್ಲಿ ನ್ಯಾಯಕ್ಕಾಗಿ ನಡೆಯುವ ಶಾಂತಿಯುತ ಪ್ರತಿಭಟನೆಗಳನ್ನು ಆಳುವ ಪಕ್ಷ ತಡೆಯುತ್ತಿದ್ದು, ದ್ವೇಷ ಕೆರಳಿಸುವ ಭಾಷಣ ಮಾಡುವ ನಾಯಕರನ್ನು ಬಂಧಿಸುವ ಬದಲು ಐಕ್ಯತೆ, ಶಾಂತಿ ಮತ್ತು ಸಂವಿಧಾನಕ್ಕೆ ಹೊರಾಡುತ್ತಿದ್ದವರನ್ನು ಬಂಧಿಸಿ ಜೈಲಿಗಟ್ಟಿದ್ದಾರೆ, ಅವರುಗಳ ಬಿಡುಗಡೆಯಾಗಬೇಕು. ಮಾಹಿತಿ ಹಕ್ಕು ಕಾಯ್ದೆಯನ್ನು ದುರ್ಬಲಗೊಳಿಸಲಾಗಿದೆ. ಕಠಿಣ ಲಾಕ್‌ಡೌನ್‌ನಲ್ಲಿ ವಲಸೆ ಕಾರ್ಮಿಕರು, ಬಡವರ ಬಗ್ಗೆ ಸರ್ಕಾರ ನಿರ್ಲಕ್ಷ್ಯ ತೋರಿದೆ ಎಂದು ಅಭಿಯಾನದ ಭಿತ್ತಿಪತ್ರಗಳು ಸಾರುತ್ತಿವೆ.

ಇನ್ನು ಅಭಿಯಾನದ ಮೂಲಕ ನಿರ್ದಿಷ್ಟ ಬೇಡಿಕೆಗಳಿರುವ ಮನವಿ ಪತ್ರವನ್ನು ಮುಖ್ಯಮಂತ್ರಿಗಳಿಗೆ ಸಲ್ಲಿಸಲಾಗುತ್ತದೆ. ಸ್ಥಳೀಯವಾದ ಬೇಡಿಕೆಗಳನ್ನು ಸ್ಥಳೀಯ ಮುಖಂಡರಿಗೆ ಸಲ್ಲಿಸಲು ನಿರ್ಧರಿಸಲಾಗಿದೆ. ಆನ್‌ಲೈನ್‌ ಮೂಲಕ ವಿವಿಧ ವಲಯಗಳ ಮಹಿಳೆಯರ, ರೈತರ, ದಿನಗೂಲಿ ಕಾರ್ಮಿಕರ, ಲೈಂಗಿಕ ಕಾರ್ಯಕರ್ತೆಯರ ಹೋರಾಟದ ಮಾಹಿತಿಗಳಿರುವ ವಿಡಿಯೋ ಬಿಡುಗಡೆ ಮಾಡಲಾಗುತ್ತದೆ. ಜೊತೆಗೆ ಅಂದು ವಿದ್ಯಾರ್ಥಿಗಳು, ವೃತ್ತಿಪರರು, ಚಿಂತಕರು, ಸಾಹಿತಿಗಳು, ಕಾರ್ಯಕರ್ತರು ಫೇಸ್‌ಬುಕ್ ಲೈವ್ ಬರಲಿದ್ದಾರೆ.

ರಾಷ್ಟ್ರವ್ಯಾಪಿ ನಡೆಯಲಿರುವ ಈ ಅಭಿಯಾನಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಬೆಂಬಲ ವ್ಯಕ್ತವಾಗುತ್ತಿದೆ. ನಿರ್ದೇಶಕಿ ಕವಿತಾ ಲಂಕೇಶ್, ನಿರ್ದೇಶಕ ಬಿ.ಸುರೇಶ್, ಗುಜರಾತ್ ರಾಜಕಾರಣಿ ಜಿಗ್ನೇಶ್ ಮೇವಾನಿ, ನಟಿ ಅನಿತಾ ಭಟ್, ನೀತು, ಹೋರಾಟಗಾರರು, ಮಹಿಳಾ ಪರ ಚಿಂತಕರು ಚಲನಚಿತ್ರ ನಟ, ನಟಿಯರು ಈ ಅಭಿಯಾನದ ಮಹತ್ವವನ್ನು ಸೂಚಿಸಿ ತಮ್ಮ ಬೆಂಬಲ ನೀಡಿ ಆನ್‌ಲೈನ್ ಕ್ಯಾಂಪೇನ್‌ನಲ್ಲಿ ಭಾಗವಹಿಸಿ ಅಭಿಯಾನದ ಭಾಗವಾಗಲು ಜನರಲ್ಲಿ ಮನವಿ ಮಾಡಿದ್ದಾರೆ.

ಇದನ್ನೂ ಓದಿ:ಗಟ್ಟಿ ಗಿತ್ತಿಯಾಗಿ ಜೀವಂತವಾಗಿರುವ ಗೌರಿ ಲಂಕೇಶ್ ಹಾಗೂ ಮಂತ್ರಿ ರಾಜಶೇಖರ ಪಾಟೀಲರೂ…

ಅಭಿಯಾನ ಆಯೋಜಕರಲ್ಲಿ ಒಬ್ಬರಾದ ವಿದ್ಯಾ ದಿನಕರ್‌ ನಾನು ಗೌರಿ.ಕಾಂ ಜೊತೆ ಮಾತನಾಡುತ್ತಾ,  ಈ ಕ್ಯಾಂಪೇನ್ ಮಹಿಳಾಪರ, ಲೈಂಗಿಕ ಅಲ್ಪಸಂಖ್ಯಾತರು, ದಮನಿತರ ಪರ ಇದೆ. ಆನ್ಲೈನ್ ಮತ್ತು ಆಫ್‌ಲೈನ್ ಎರಡು ಕಡೆ ಹೋರಾಟ ನಡೆಯಲಿದೆ. ಜಿಲ್ಲೆಗಳಲ್ಲಿ ಮಹಿಳೆಯರು ನಮ್ಮ ಹಕ್ಕೋತ್ತಾಯಗಳನ್ನು ಸಲ್ಲಿಸಲಿದ್ದಾರೆ. ಸಾಂಸ್ಕೃತಿಕ ಪ್ರತಿರೋಧ ಕೂಡ ಇದೆ. ಕೋಲಾಟ, ಹಾಡುಗಳು, ನೃತ್ಯದ ಮೂಲಕ ಪ್ರತಿರೋಧ ಒಡ್ಡಲಿದ್ದಾರೆ. ಕೊರೋನಾ ಸಮಯದಲ್ಲಿ ಸುಮ್ಮನೆ ಕೂರುವುದಲ್ಲ. ಸಾಮಾಜಿಕ ಅಂತರ ಪಾಲಿಸಿಕೊಂಡೆ ನಮ್ಮ ಹಕ್ಕುಗಳ ಬಗ್ಗೆ ಹೋರಾಟ ಮಾಡಬೇಕಿದೆ. ಜೊತೆಗೆ ಹೆಚ್ಚು ಜನ ಸೇರಲು ಆಗದ ಹಿನ್ನೆಲೆ ಆನ್‌ಲೈನ್‌ನಲ್ಲೂ ಕೂಡ ಕ್ಯಾಂಪೇನ್ ಮಾಡಲಾಗುತ್ತದೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ.

ಮತ್ತೊಬ್ಬ ಸಾಮಾಜಿಕ ಕಾರ್ಯಕರ್ತೆ ಕಾವ್ಯ ಅಚ್ಯುತ್ ಮಾತನಾಡಿ “ಇಂದಿನ ಕೋಮುವಾದೀಕರಣ, ಆರ್ಥಿಕ ಕುಸಿತ, ಮಹಿಳೆ, ಮಕ್ಕಳು, ಕಾರ್ಮಿಕ ವಿರೋಧಿ ನೀತಿಗಳು ಮಹಿಳೆ, ಮಕ್ಕಳು, ಲೈಂಗಿಕ ಅಲ್ಪಸಂಖ್ಯಾತರ ಮೇಲೆ ಕೆಟ್ಟ ಪರಿಣಾಮ ಬೀರಿವೆ. ಹಾಗಂತ ಈ ಪರಿಸ್ಥಿತಿಯನ್ನು ಎದುರಿಸಲು ಮಹಿಳಾ ವಿಷಯಾಧಾರಿತ ಹೋರಾಟವೊಂದೇ ಸಾಕಾಗುವುದಿಲ್ಲ.. ಹಾಗಾಗಿ ಎಲ್ಲಾ ವರ್ಗದ ಹೋರಾಟಗಾರರು ಸೇರಿಕೊಂಡು ಸೆಪ್ಟೆಂಬರ್ 05 ರಂದು ರಾಷ್ಟ್ರಮಟ್ಟದಲ್ಲಿ ಅಭಿಯಾನ ಮಾಡುತ್ತಿದ್ದೆವೆ. ಸಾಮಾಜಿಕ ಜಾಲತಾಣದಲ್ಲಿ ನಡೆಯುವ ಈ ಪ್ರತಿರೋಧಕ್ಕೆ ಎಲ್ಲಾ ವರ್ಗಗಳಿಂದ ಬೆಂಬಲ ವ್ಯಕ್ತವಾಗಿದ್ದು ನಿರೀಕ್ಷೆಗೂ ಮೀರಿ ಯಶಸ್ವಿಯಾಗುತ್ತದೆ ಎಂಬ ನಂಬಿಕೆ ಇದೆ ಎಂದು ಹೇಳಿದರು.

ಚಿತ್ರ ನಟಿ ಅನಿತಾ ಭಟ್ ರವರು ಸೆಪ್ಟೆಂಬರ್ 05 ರಂದು ನಡೆಯುವ ಮಹಿಳಾ ಮತ್ತು ಮಕ್ಕಳ ಹಕ್ಕುಗಳ ಬಗೆಗಿನ ಆನ್ ಲೈನ್ ಕ್ಯಾಂಪೇನ್ ಗೆ ಜೊತೆಯಾಗಿದ್ದಾರೆ.. ✊#IfWeDoNotRise#IfWeDoNotRiseKarnataka#ನಾವೆದ್ದು_ನಿಲ್ಲದಿದ್ದರೆ

Posted by Kavya Achuth on Tuesday, September 1, 2020

ಅಭಿಯಾನದ ಕುರಿತು ಜನಪರ ಸಾಹಿತಿ ಜನಾರ್ಧನ ಕೆಸರಗದ್ದೆಯವರು ಅಭಿಯಾನದ ಥೀಮ್ ಸಾಂಗ್ ಬರೆದಿದ್ದು ಎಲ್ಲೆಡೆ ವೈರಲ್ ಆಗಿದೆ.

ಒಟ್ಟಾರೆ, ಕೊರೊನಾ, ಲಾಕ್‌ಡೌನ್  ಮಧ್ಯೆ ಯಾವ ದೌರ್ಜನ್ಯಗಳು ನಿಂತಿಲ್ಲ. ಇನ್ನು ಅಂತಹ ಪ್ರಕರಣಗಳು ಹೆಚ್ಚಾಗುತ್ತಿವೆ ಹೀಗಾಗಿ ಅವುಗಳ ವಿರುದ್ಧದ ಪ್ರತಿಭಟನೆಗಳು, ಪ್ರತಿರೋಧ ಕೂಡ ನಿಲ್ಲಬಾರದು ಎಂಬುದು ಅಭಿಯಾನ ಸಂಯೋಜಕರ ಅಭಿಪ್ರಾಯವಾಗಿದೆ.


ಇದನ್ನೂ ಓದಿ: ಸತ್ಯವ ನುಡಿಯುವ ದಿಟ್ಟತೆಗೆ ಪ್ರತೀಕವಾದ ಗೌರಿ ಲಂಕೇಶ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...