Homeಮುಖಪುಟಸೆ.5 ಕ್ಕೆ ಗೌರಿ ಲಂಕೇಶ್ ನೆನಪಿನಲ್ಲಿ ಮೊಳಗಲಿದೆ 'ನಾವೆದ್ದು ನಿಲ್ಲದಿದ್ದರೆ…' ಧ್ವನಿ

ಸೆ.5 ಕ್ಕೆ ಗೌರಿ ಲಂಕೇಶ್ ನೆನಪಿನಲ್ಲಿ ಮೊಳಗಲಿದೆ ‘ನಾವೆದ್ದು ನಿಲ್ಲದಿದ್ದರೆ…’ ಧ್ವನಿ

ಅಭಿಯಾನವು ಭಾರತದ ಜನತೆಯ ಸಂವಿಧಾನಾತ್ಮಕ ಹಕ್ಕುಗಳ ವಿರುದ್ಧ ನಡೆಯುತ್ತಿರುವ ಗುರುತರ ದಾಳಿಯನ್ನು ಪ್ರತಿರೋಧಿಸುವ ಧ್ವನಿಗಳನ್ನು ಒಗ್ಗೊಡಿಸುವ ಧ್ಯೇಯವನ್ನು ಹೊಂದಿದೆ.

- Advertisement -
- Advertisement -

ಸೆಪ್ಟೆಂಬರ್ 05, 2017…. ಯಾರಿಗೆ ತಾನೇ ನೆನಪಿಲ್ಲ ಹೇಳಿ ಒಬ್ಬ ನಿರ್ಭಿತ, ದಿಟ್ಟ ಪತ್ರಕರ್ತೆಯನ್ನು ದೇಶ ಕಳೆದುಕೊಂಡ ದಿನ. ಪತ್ರಕರ್ತೆ ಎನ್ನುವುದಕ್ಕಿಂತ ಮಾತೃಹೃದಯಿ ನಮ್ಮನ್ನಗಲಿದ ದಿನ. ಅಭಿವ್ಯಕ್ತಿ ಸ್ವಾತಂತ್ರಕ್ಕೆ ಪೆಟ್ಟು ಬಿದ್ದ ದಿನ. ಮಹಿಳೆಯರ ಹಕ್ಕುಗಳ ಮೇಲೆ, ಸತ್ಯದ ಮೇಲೆ ಬರೆ ಬಿದ್ದ ದಿನ.. ಆ ದುರಂತಕ್ಕೆ 3 ವರ್ಷಗಳಾಗುತ್ತಾ ಬಂತು.

ರಾಜಕೀಯ ಮತ್ತು ಸಾರ್ವಜನಿಕ ಜೀವನದಲ್ಲಿ ಬೆಳೆಯುತ್ತಿರುವ ಪ್ಯಾಸಿಸ್ಟ್ ಶಕ್ತಿಗಳ ವಿರುದ್ಧ ಎದೆಗುಂದದೆ ಹೋರಾಡಿದ ಅಪ್ರತಿಮ ಮಹಿಳೆ ಗೌರಿ ಲಂಕೇಶ್. ಜನರಲ್ಲಿ ಬದುಕುವ ಹಕ್ಕು, ಭಿನ್ನಾಭಿಪ್ರಾಯಗಳನ್ನು ಹೊಂದುವ ಸ್ವತಂತ್ರ ಮನೋಭಾವವನ್ನು ಬೆಳೆಸಿಕೊಳ್ಳುವ ಹಕ್ಕುಗಳನ್ನು ಒಪ್ಪಿ, ಅಪ್ಪಿಕೊಂಡಿದ್ದ ಅವರು ತನ್ನ ಜೀವವನ್ನೇ ಪಣಕ್ಕಿಟ್ಟು ಮನುಷ್ಯ ಬದುಕಿನ ಸಂಕೇತವಾದರು. ಇವರ ನಿರ್ಭಿತ ಚೈತನ್ಯ ಮತ್ತು ಗಾಢ ನಂಬಿಕೆಗಳಿಂದ ಉತ್ತೇಜಿತವಾಗಿ, ಸಂವಿಧಾನ ಮತ್ತು ಜನರ ಮೇಲಿನ ಹಲ್ಲೆಗಳನ್ನು ಖಂಡಿಸಿ ಅವುಗಳ ವಿರುದ್ಧ ಧ್ವನಿ ಎತ್ತಲು ಇದೇ ಸೆಪ್ಟಂಬರ್ 5ರಂದೇ “ನಾವೆದ್ದು ನಿಲ್ಲದಿದ್ದರೆ”… ಆಂದೋಲನ ನಡೆಯುತ್ತಿದೆ.

ಅಂದು ರಾಷ್ಟ್ರಮಟ್ಟದಲ್ಲಿ ಮಹಿಳಾ ಪರ ಹೋರಾಟಗಾರರು, ಚಿಂತಕರು, ಲೈಂಗಿಕ ಅಲ್ಪ ಸಂಖ್ಯಾತ LGBTQIA ಸಮುದಾಯಗಳು ಮತ್ತು ಮಾನವ ಹಕ್ಕುಗಳ ಸಂಘಟನೆಗಳು “ನಾವೆದ್ದು ನಿಲ್ಲದಿದ್ದರೆ” ಎಂಬ ಪ್ರಚಾರಾಂದೋಲನ ಹಮ್ಮಿಕೊಂಡಿವೆ. ಅಭಿಯಾನವು ಭಾರತದ ಜನತೆಯ ಸಂವಿಧಾನಾತ್ಮಕ ಹಕ್ಕುಗಳ ವಿರುದ್ಧ ನಡೆಯುತ್ತಿರುವ ಗುರುತರ ದಾಳಿಯನ್ನು ಪ್ರತಿರೋಧಿಸುವ ಧ್ವನಿಗಳನ್ನು ಒಗ್ಗೊಡಿಸುವ ಧ್ಯೇಯವನ್ನು ಹೊಂದಿದೆ. ಈ ಅಭಿಯಾನದಲ್ಲಿ ಜಾತಿ, ಮತ, ಧರ್ಮಗಳ ಕಟ್ಟಳೆಗಳಿಂದ ಹೊರ ಬಂದು ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುವ ಕೆಲಸ ನಡೆಯಲಿದೆ.

ದೇಶದಲ್ಲಿನ ಪ್ಯಾಸಿಸ್ಟ್ ಶಕ್ತಿಗಳ ಬೆಳವಣಿಗೆಯಿಂದ ಮಹಿಳೆಯರು, ಮಕ್ಕಳು ಮತ್ತು ಲೈಂಗಿಕ ಅಲ್ಪಸಂಖ್ಯಾತರು ತಮ್ಮ ಹಕ್ಕುಗಳಿಗಾಗಿ ಪರದಾಡುವಂತಾಗಿದೆ. ಅವರ ಜೀವನದ ಮೇಲೆ ಅಗಾಧ ಪರಿಣಾಮ ಉಂಟಾಗಿದೆ. ಅಭಿಯಾನದ ಮೂಲಕ ಅವರಲ್ಲಿ ಆತ್ಮಸ್ಥೈರ್ಯ ತುಂಬಲಾಗುತ್ತದೆ. ಈ ಮೂಲಕ ಸಂವಿಧಾನ ನೀಡಿರುವ ಹಕ್ಕುಗಳನ್ನು ಪಡೆಯಲು ಧ್ವನಿ ಎತ್ತಲಾಗುತ್ತಿದೆ ಎಂದು ಸುದ್ದಿಗೊಷ್ಟಿಯಲ್ಲಿ ಹೋರಾಟಗಾರ್ತಿಯರು ತಿಳಿಸಿದ್ದಾರೆ.

ಕೊರೊನಾ ಸಂಕಷ್ಟದ ಸಮಯದಲ್ಲಿ ಆಶಾ ಕಾರ್ಯಕರ್ತೆಯರು, ಪೌರ  ಕಾರ್ಮಿಕರು, ದಲಿತರ ಮೇಲೆ ಅತ್ಯಾಚಾರದ ಪ್ರಕರಣಗಳು ಹೆಚ್ಚಾಗಿದ್ದು, ಇವುಗಳನ್ನು ಪ್ರಚಾರಾಂದೋಲನದಲ್ಲಿ ಚರ್ಚಿಸಿ, ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲು ಅಭಿಯಾನದ ಸಂಯೋಜಕರು ನಿರ್ಧರಿಸಿದ್ದಾರೆ.

ದೇಶದಲ್ಲಿ ನ್ಯಾಯಕ್ಕಾಗಿ ನಡೆಯುವ ಶಾಂತಿಯುತ ಪ್ರತಿಭಟನೆಗಳನ್ನು ಆಳುವ ಪಕ್ಷ ತಡೆಯುತ್ತಿದ್ದು, ದ್ವೇಷ ಕೆರಳಿಸುವ ಭಾಷಣ ಮಾಡುವ ನಾಯಕರನ್ನು ಬಂಧಿಸುವ ಬದಲು ಐಕ್ಯತೆ, ಶಾಂತಿ ಮತ್ತು ಸಂವಿಧಾನಕ್ಕೆ ಹೊರಾಡುತ್ತಿದ್ದವರನ್ನು ಬಂಧಿಸಿ ಜೈಲಿಗಟ್ಟಿದ್ದಾರೆ, ಅವರುಗಳ ಬಿಡುಗಡೆಯಾಗಬೇಕು. ಮಾಹಿತಿ ಹಕ್ಕು ಕಾಯ್ದೆಯನ್ನು ದುರ್ಬಲಗೊಳಿಸಲಾಗಿದೆ. ಕಠಿಣ ಲಾಕ್‌ಡೌನ್‌ನಲ್ಲಿ ವಲಸೆ ಕಾರ್ಮಿಕರು, ಬಡವರ ಬಗ್ಗೆ ಸರ್ಕಾರ ನಿರ್ಲಕ್ಷ್ಯ ತೋರಿದೆ ಎಂದು ಅಭಿಯಾನದ ಭಿತ್ತಿಪತ್ರಗಳು ಸಾರುತ್ತಿವೆ.

ಇನ್ನು ಅಭಿಯಾನದ ಮೂಲಕ ನಿರ್ದಿಷ್ಟ ಬೇಡಿಕೆಗಳಿರುವ ಮನವಿ ಪತ್ರವನ್ನು ಮುಖ್ಯಮಂತ್ರಿಗಳಿಗೆ ಸಲ್ಲಿಸಲಾಗುತ್ತದೆ. ಸ್ಥಳೀಯವಾದ ಬೇಡಿಕೆಗಳನ್ನು ಸ್ಥಳೀಯ ಮುಖಂಡರಿಗೆ ಸಲ್ಲಿಸಲು ನಿರ್ಧರಿಸಲಾಗಿದೆ. ಆನ್‌ಲೈನ್‌ ಮೂಲಕ ವಿವಿಧ ವಲಯಗಳ ಮಹಿಳೆಯರ, ರೈತರ, ದಿನಗೂಲಿ ಕಾರ್ಮಿಕರ, ಲೈಂಗಿಕ ಕಾರ್ಯಕರ್ತೆಯರ ಹೋರಾಟದ ಮಾಹಿತಿಗಳಿರುವ ವಿಡಿಯೋ ಬಿಡುಗಡೆ ಮಾಡಲಾಗುತ್ತದೆ. ಜೊತೆಗೆ ಅಂದು ವಿದ್ಯಾರ್ಥಿಗಳು, ವೃತ್ತಿಪರರು, ಚಿಂತಕರು, ಸಾಹಿತಿಗಳು, ಕಾರ್ಯಕರ್ತರು ಫೇಸ್‌ಬುಕ್ ಲೈವ್ ಬರಲಿದ್ದಾರೆ.

ರಾಷ್ಟ್ರವ್ಯಾಪಿ ನಡೆಯಲಿರುವ ಈ ಅಭಿಯಾನಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಬೆಂಬಲ ವ್ಯಕ್ತವಾಗುತ್ತಿದೆ. ನಿರ್ದೇಶಕಿ ಕವಿತಾ ಲಂಕೇಶ್, ನಿರ್ದೇಶಕ ಬಿ.ಸುರೇಶ್, ಗುಜರಾತ್ ರಾಜಕಾರಣಿ ಜಿಗ್ನೇಶ್ ಮೇವಾನಿ, ನಟಿ ಅನಿತಾ ಭಟ್, ನೀತು, ಹೋರಾಟಗಾರರು, ಮಹಿಳಾ ಪರ ಚಿಂತಕರು ಚಲನಚಿತ್ರ ನಟ, ನಟಿಯರು ಈ ಅಭಿಯಾನದ ಮಹತ್ವವನ್ನು ಸೂಚಿಸಿ ತಮ್ಮ ಬೆಂಬಲ ನೀಡಿ ಆನ್‌ಲೈನ್ ಕ್ಯಾಂಪೇನ್‌ನಲ್ಲಿ ಭಾಗವಹಿಸಿ ಅಭಿಯಾನದ ಭಾಗವಾಗಲು ಜನರಲ್ಲಿ ಮನವಿ ಮಾಡಿದ್ದಾರೆ.

ಇದನ್ನೂ ಓದಿ:ಗಟ್ಟಿ ಗಿತ್ತಿಯಾಗಿ ಜೀವಂತವಾಗಿರುವ ಗೌರಿ ಲಂಕೇಶ್ ಹಾಗೂ ಮಂತ್ರಿ ರಾಜಶೇಖರ ಪಾಟೀಲರೂ…

ಅಭಿಯಾನ ಆಯೋಜಕರಲ್ಲಿ ಒಬ್ಬರಾದ ವಿದ್ಯಾ ದಿನಕರ್‌ ನಾನು ಗೌರಿ.ಕಾಂ ಜೊತೆ ಮಾತನಾಡುತ್ತಾ,  ಈ ಕ್ಯಾಂಪೇನ್ ಮಹಿಳಾಪರ, ಲೈಂಗಿಕ ಅಲ್ಪಸಂಖ್ಯಾತರು, ದಮನಿತರ ಪರ ಇದೆ. ಆನ್ಲೈನ್ ಮತ್ತು ಆಫ್‌ಲೈನ್ ಎರಡು ಕಡೆ ಹೋರಾಟ ನಡೆಯಲಿದೆ. ಜಿಲ್ಲೆಗಳಲ್ಲಿ ಮಹಿಳೆಯರು ನಮ್ಮ ಹಕ್ಕೋತ್ತಾಯಗಳನ್ನು ಸಲ್ಲಿಸಲಿದ್ದಾರೆ. ಸಾಂಸ್ಕೃತಿಕ ಪ್ರತಿರೋಧ ಕೂಡ ಇದೆ. ಕೋಲಾಟ, ಹಾಡುಗಳು, ನೃತ್ಯದ ಮೂಲಕ ಪ್ರತಿರೋಧ ಒಡ್ಡಲಿದ್ದಾರೆ. ಕೊರೋನಾ ಸಮಯದಲ್ಲಿ ಸುಮ್ಮನೆ ಕೂರುವುದಲ್ಲ. ಸಾಮಾಜಿಕ ಅಂತರ ಪಾಲಿಸಿಕೊಂಡೆ ನಮ್ಮ ಹಕ್ಕುಗಳ ಬಗ್ಗೆ ಹೋರಾಟ ಮಾಡಬೇಕಿದೆ. ಜೊತೆಗೆ ಹೆಚ್ಚು ಜನ ಸೇರಲು ಆಗದ ಹಿನ್ನೆಲೆ ಆನ್‌ಲೈನ್‌ನಲ್ಲೂ ಕೂಡ ಕ್ಯಾಂಪೇನ್ ಮಾಡಲಾಗುತ್ತದೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ.

ಮತ್ತೊಬ್ಬ ಸಾಮಾಜಿಕ ಕಾರ್ಯಕರ್ತೆ ಕಾವ್ಯ ಅಚ್ಯುತ್ ಮಾತನಾಡಿ “ಇಂದಿನ ಕೋಮುವಾದೀಕರಣ, ಆರ್ಥಿಕ ಕುಸಿತ, ಮಹಿಳೆ, ಮಕ್ಕಳು, ಕಾರ್ಮಿಕ ವಿರೋಧಿ ನೀತಿಗಳು ಮಹಿಳೆ, ಮಕ್ಕಳು, ಲೈಂಗಿಕ ಅಲ್ಪಸಂಖ್ಯಾತರ ಮೇಲೆ ಕೆಟ್ಟ ಪರಿಣಾಮ ಬೀರಿವೆ. ಹಾಗಂತ ಈ ಪರಿಸ್ಥಿತಿಯನ್ನು ಎದುರಿಸಲು ಮಹಿಳಾ ವಿಷಯಾಧಾರಿತ ಹೋರಾಟವೊಂದೇ ಸಾಕಾಗುವುದಿಲ್ಲ.. ಹಾಗಾಗಿ ಎಲ್ಲಾ ವರ್ಗದ ಹೋರಾಟಗಾರರು ಸೇರಿಕೊಂಡು ಸೆಪ್ಟೆಂಬರ್ 05 ರಂದು ರಾಷ್ಟ್ರಮಟ್ಟದಲ್ಲಿ ಅಭಿಯಾನ ಮಾಡುತ್ತಿದ್ದೆವೆ. ಸಾಮಾಜಿಕ ಜಾಲತಾಣದಲ್ಲಿ ನಡೆಯುವ ಈ ಪ್ರತಿರೋಧಕ್ಕೆ ಎಲ್ಲಾ ವರ್ಗಗಳಿಂದ ಬೆಂಬಲ ವ್ಯಕ್ತವಾಗಿದ್ದು ನಿರೀಕ್ಷೆಗೂ ಮೀರಿ ಯಶಸ್ವಿಯಾಗುತ್ತದೆ ಎಂಬ ನಂಬಿಕೆ ಇದೆ ಎಂದು ಹೇಳಿದರು.

ಚಿತ್ರ ನಟಿ ಅನಿತಾ ಭಟ್ ರವರು ಸೆಪ್ಟೆಂಬರ್ 05 ರಂದು ನಡೆಯುವ ಮಹಿಳಾ ಮತ್ತು ಮಕ್ಕಳ ಹಕ್ಕುಗಳ ಬಗೆಗಿನ ಆನ್ ಲೈನ್ ಕ್ಯಾಂಪೇನ್ ಗೆ ಜೊತೆಯಾಗಿದ್ದಾರೆ.. ✊#IfWeDoNotRise#IfWeDoNotRiseKarnataka#ನಾವೆದ್ದು_ನಿಲ್ಲದಿದ್ದರೆ

Posted by Kavya Achuth on Tuesday, September 1, 2020

ಅಭಿಯಾನದ ಕುರಿತು ಜನಪರ ಸಾಹಿತಿ ಜನಾರ್ಧನ ಕೆಸರಗದ್ದೆಯವರು ಅಭಿಯಾನದ ಥೀಮ್ ಸಾಂಗ್ ಬರೆದಿದ್ದು ಎಲ್ಲೆಡೆ ವೈರಲ್ ಆಗಿದೆ.

ಒಟ್ಟಾರೆ, ಕೊರೊನಾ, ಲಾಕ್‌ಡೌನ್  ಮಧ್ಯೆ ಯಾವ ದೌರ್ಜನ್ಯಗಳು ನಿಂತಿಲ್ಲ. ಇನ್ನು ಅಂತಹ ಪ್ರಕರಣಗಳು ಹೆಚ್ಚಾಗುತ್ತಿವೆ ಹೀಗಾಗಿ ಅವುಗಳ ವಿರುದ್ಧದ ಪ್ರತಿಭಟನೆಗಳು, ಪ್ರತಿರೋಧ ಕೂಡ ನಿಲ್ಲಬಾರದು ಎಂಬುದು ಅಭಿಯಾನ ಸಂಯೋಜಕರ ಅಭಿಪ್ರಾಯವಾಗಿದೆ.


ಇದನ್ನೂ ಓದಿ: ಸತ್ಯವ ನುಡಿಯುವ ದಿಟ್ಟತೆಗೆ ಪ್ರತೀಕವಾದ ಗೌರಿ ಲಂಕೇಶ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...