Homeಮುಖಪುಟಸೆ.5 ಕ್ಕೆ ಗೌರಿ ಲಂಕೇಶ್ ನೆನಪಿನಲ್ಲಿ ಮೊಳಗಲಿದೆ 'ನಾವೆದ್ದು ನಿಲ್ಲದಿದ್ದರೆ…' ಧ್ವನಿ

ಸೆ.5 ಕ್ಕೆ ಗೌರಿ ಲಂಕೇಶ್ ನೆನಪಿನಲ್ಲಿ ಮೊಳಗಲಿದೆ ‘ನಾವೆದ್ದು ನಿಲ್ಲದಿದ್ದರೆ…’ ಧ್ವನಿ

ಅಭಿಯಾನವು ಭಾರತದ ಜನತೆಯ ಸಂವಿಧಾನಾತ್ಮಕ ಹಕ್ಕುಗಳ ವಿರುದ್ಧ ನಡೆಯುತ್ತಿರುವ ಗುರುತರ ದಾಳಿಯನ್ನು ಪ್ರತಿರೋಧಿಸುವ ಧ್ವನಿಗಳನ್ನು ಒಗ್ಗೊಡಿಸುವ ಧ್ಯೇಯವನ್ನು ಹೊಂದಿದೆ.

- Advertisement -
- Advertisement -

ಸೆಪ್ಟೆಂಬರ್ 05, 2017…. ಯಾರಿಗೆ ತಾನೇ ನೆನಪಿಲ್ಲ ಹೇಳಿ ಒಬ್ಬ ನಿರ್ಭಿತ, ದಿಟ್ಟ ಪತ್ರಕರ್ತೆಯನ್ನು ದೇಶ ಕಳೆದುಕೊಂಡ ದಿನ. ಪತ್ರಕರ್ತೆ ಎನ್ನುವುದಕ್ಕಿಂತ ಮಾತೃಹೃದಯಿ ನಮ್ಮನ್ನಗಲಿದ ದಿನ. ಅಭಿವ್ಯಕ್ತಿ ಸ್ವಾತಂತ್ರಕ್ಕೆ ಪೆಟ್ಟು ಬಿದ್ದ ದಿನ. ಮಹಿಳೆಯರ ಹಕ್ಕುಗಳ ಮೇಲೆ, ಸತ್ಯದ ಮೇಲೆ ಬರೆ ಬಿದ್ದ ದಿನ.. ಆ ದುರಂತಕ್ಕೆ 3 ವರ್ಷಗಳಾಗುತ್ತಾ ಬಂತು.

ರಾಜಕೀಯ ಮತ್ತು ಸಾರ್ವಜನಿಕ ಜೀವನದಲ್ಲಿ ಬೆಳೆಯುತ್ತಿರುವ ಪ್ಯಾಸಿಸ್ಟ್ ಶಕ್ತಿಗಳ ವಿರುದ್ಧ ಎದೆಗುಂದದೆ ಹೋರಾಡಿದ ಅಪ್ರತಿಮ ಮಹಿಳೆ ಗೌರಿ ಲಂಕೇಶ್. ಜನರಲ್ಲಿ ಬದುಕುವ ಹಕ್ಕು, ಭಿನ್ನಾಭಿಪ್ರಾಯಗಳನ್ನು ಹೊಂದುವ ಸ್ವತಂತ್ರ ಮನೋಭಾವವನ್ನು ಬೆಳೆಸಿಕೊಳ್ಳುವ ಹಕ್ಕುಗಳನ್ನು ಒಪ್ಪಿ, ಅಪ್ಪಿಕೊಂಡಿದ್ದ ಅವರು ತನ್ನ ಜೀವವನ್ನೇ ಪಣಕ್ಕಿಟ್ಟು ಮನುಷ್ಯ ಬದುಕಿನ ಸಂಕೇತವಾದರು. ಇವರ ನಿರ್ಭಿತ ಚೈತನ್ಯ ಮತ್ತು ಗಾಢ ನಂಬಿಕೆಗಳಿಂದ ಉತ್ತೇಜಿತವಾಗಿ, ಸಂವಿಧಾನ ಮತ್ತು ಜನರ ಮೇಲಿನ ಹಲ್ಲೆಗಳನ್ನು ಖಂಡಿಸಿ ಅವುಗಳ ವಿರುದ್ಧ ಧ್ವನಿ ಎತ್ತಲು ಇದೇ ಸೆಪ್ಟಂಬರ್ 5ರಂದೇ “ನಾವೆದ್ದು ನಿಲ್ಲದಿದ್ದರೆ”… ಆಂದೋಲನ ನಡೆಯುತ್ತಿದೆ.

ಅಂದು ರಾಷ್ಟ್ರಮಟ್ಟದಲ್ಲಿ ಮಹಿಳಾ ಪರ ಹೋರಾಟಗಾರರು, ಚಿಂತಕರು, ಲೈಂಗಿಕ ಅಲ್ಪ ಸಂಖ್ಯಾತ LGBTQIA ಸಮುದಾಯಗಳು ಮತ್ತು ಮಾನವ ಹಕ್ಕುಗಳ ಸಂಘಟನೆಗಳು “ನಾವೆದ್ದು ನಿಲ್ಲದಿದ್ದರೆ” ಎಂಬ ಪ್ರಚಾರಾಂದೋಲನ ಹಮ್ಮಿಕೊಂಡಿವೆ. ಅಭಿಯಾನವು ಭಾರತದ ಜನತೆಯ ಸಂವಿಧಾನಾತ್ಮಕ ಹಕ್ಕುಗಳ ವಿರುದ್ಧ ನಡೆಯುತ್ತಿರುವ ಗುರುತರ ದಾಳಿಯನ್ನು ಪ್ರತಿರೋಧಿಸುವ ಧ್ವನಿಗಳನ್ನು ಒಗ್ಗೊಡಿಸುವ ಧ್ಯೇಯವನ್ನು ಹೊಂದಿದೆ. ಈ ಅಭಿಯಾನದಲ್ಲಿ ಜಾತಿ, ಮತ, ಧರ್ಮಗಳ ಕಟ್ಟಳೆಗಳಿಂದ ಹೊರ ಬಂದು ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುವ ಕೆಲಸ ನಡೆಯಲಿದೆ.

ದೇಶದಲ್ಲಿನ ಪ್ಯಾಸಿಸ್ಟ್ ಶಕ್ತಿಗಳ ಬೆಳವಣಿಗೆಯಿಂದ ಮಹಿಳೆಯರು, ಮಕ್ಕಳು ಮತ್ತು ಲೈಂಗಿಕ ಅಲ್ಪಸಂಖ್ಯಾತರು ತಮ್ಮ ಹಕ್ಕುಗಳಿಗಾಗಿ ಪರದಾಡುವಂತಾಗಿದೆ. ಅವರ ಜೀವನದ ಮೇಲೆ ಅಗಾಧ ಪರಿಣಾಮ ಉಂಟಾಗಿದೆ. ಅಭಿಯಾನದ ಮೂಲಕ ಅವರಲ್ಲಿ ಆತ್ಮಸ್ಥೈರ್ಯ ತುಂಬಲಾಗುತ್ತದೆ. ಈ ಮೂಲಕ ಸಂವಿಧಾನ ನೀಡಿರುವ ಹಕ್ಕುಗಳನ್ನು ಪಡೆಯಲು ಧ್ವನಿ ಎತ್ತಲಾಗುತ್ತಿದೆ ಎಂದು ಸುದ್ದಿಗೊಷ್ಟಿಯಲ್ಲಿ ಹೋರಾಟಗಾರ್ತಿಯರು ತಿಳಿಸಿದ್ದಾರೆ.

ಕೊರೊನಾ ಸಂಕಷ್ಟದ ಸಮಯದಲ್ಲಿ ಆಶಾ ಕಾರ್ಯಕರ್ತೆಯರು, ಪೌರ  ಕಾರ್ಮಿಕರು, ದಲಿತರ ಮೇಲೆ ಅತ್ಯಾಚಾರದ ಪ್ರಕರಣಗಳು ಹೆಚ್ಚಾಗಿದ್ದು, ಇವುಗಳನ್ನು ಪ್ರಚಾರಾಂದೋಲನದಲ್ಲಿ ಚರ್ಚಿಸಿ, ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲು ಅಭಿಯಾನದ ಸಂಯೋಜಕರು ನಿರ್ಧರಿಸಿದ್ದಾರೆ.

ದೇಶದಲ್ಲಿ ನ್ಯಾಯಕ್ಕಾಗಿ ನಡೆಯುವ ಶಾಂತಿಯುತ ಪ್ರತಿಭಟನೆಗಳನ್ನು ಆಳುವ ಪಕ್ಷ ತಡೆಯುತ್ತಿದ್ದು, ದ್ವೇಷ ಕೆರಳಿಸುವ ಭಾಷಣ ಮಾಡುವ ನಾಯಕರನ್ನು ಬಂಧಿಸುವ ಬದಲು ಐಕ್ಯತೆ, ಶಾಂತಿ ಮತ್ತು ಸಂವಿಧಾನಕ್ಕೆ ಹೊರಾಡುತ್ತಿದ್ದವರನ್ನು ಬಂಧಿಸಿ ಜೈಲಿಗಟ್ಟಿದ್ದಾರೆ, ಅವರುಗಳ ಬಿಡುಗಡೆಯಾಗಬೇಕು. ಮಾಹಿತಿ ಹಕ್ಕು ಕಾಯ್ದೆಯನ್ನು ದುರ್ಬಲಗೊಳಿಸಲಾಗಿದೆ. ಕಠಿಣ ಲಾಕ್‌ಡೌನ್‌ನಲ್ಲಿ ವಲಸೆ ಕಾರ್ಮಿಕರು, ಬಡವರ ಬಗ್ಗೆ ಸರ್ಕಾರ ನಿರ್ಲಕ್ಷ್ಯ ತೋರಿದೆ ಎಂದು ಅಭಿಯಾನದ ಭಿತ್ತಿಪತ್ರಗಳು ಸಾರುತ್ತಿವೆ.

ಇನ್ನು ಅಭಿಯಾನದ ಮೂಲಕ ನಿರ್ದಿಷ್ಟ ಬೇಡಿಕೆಗಳಿರುವ ಮನವಿ ಪತ್ರವನ್ನು ಮುಖ್ಯಮಂತ್ರಿಗಳಿಗೆ ಸಲ್ಲಿಸಲಾಗುತ್ತದೆ. ಸ್ಥಳೀಯವಾದ ಬೇಡಿಕೆಗಳನ್ನು ಸ್ಥಳೀಯ ಮುಖಂಡರಿಗೆ ಸಲ್ಲಿಸಲು ನಿರ್ಧರಿಸಲಾಗಿದೆ. ಆನ್‌ಲೈನ್‌ ಮೂಲಕ ವಿವಿಧ ವಲಯಗಳ ಮಹಿಳೆಯರ, ರೈತರ, ದಿನಗೂಲಿ ಕಾರ್ಮಿಕರ, ಲೈಂಗಿಕ ಕಾರ್ಯಕರ್ತೆಯರ ಹೋರಾಟದ ಮಾಹಿತಿಗಳಿರುವ ವಿಡಿಯೋ ಬಿಡುಗಡೆ ಮಾಡಲಾಗುತ್ತದೆ. ಜೊತೆಗೆ ಅಂದು ವಿದ್ಯಾರ್ಥಿಗಳು, ವೃತ್ತಿಪರರು, ಚಿಂತಕರು, ಸಾಹಿತಿಗಳು, ಕಾರ್ಯಕರ್ತರು ಫೇಸ್‌ಬುಕ್ ಲೈವ್ ಬರಲಿದ್ದಾರೆ.

ರಾಷ್ಟ್ರವ್ಯಾಪಿ ನಡೆಯಲಿರುವ ಈ ಅಭಿಯಾನಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಬೆಂಬಲ ವ್ಯಕ್ತವಾಗುತ್ತಿದೆ. ನಿರ್ದೇಶಕಿ ಕವಿತಾ ಲಂಕೇಶ್, ನಿರ್ದೇಶಕ ಬಿ.ಸುರೇಶ್, ಗುಜರಾತ್ ರಾಜಕಾರಣಿ ಜಿಗ್ನೇಶ್ ಮೇವಾನಿ, ನಟಿ ಅನಿತಾ ಭಟ್, ನೀತು, ಹೋರಾಟಗಾರರು, ಮಹಿಳಾ ಪರ ಚಿಂತಕರು ಚಲನಚಿತ್ರ ನಟ, ನಟಿಯರು ಈ ಅಭಿಯಾನದ ಮಹತ್ವವನ್ನು ಸೂಚಿಸಿ ತಮ್ಮ ಬೆಂಬಲ ನೀಡಿ ಆನ್‌ಲೈನ್ ಕ್ಯಾಂಪೇನ್‌ನಲ್ಲಿ ಭಾಗವಹಿಸಿ ಅಭಿಯಾನದ ಭಾಗವಾಗಲು ಜನರಲ್ಲಿ ಮನವಿ ಮಾಡಿದ್ದಾರೆ.

ಇದನ್ನೂ ಓದಿ:ಗಟ್ಟಿ ಗಿತ್ತಿಯಾಗಿ ಜೀವಂತವಾಗಿರುವ ಗೌರಿ ಲಂಕೇಶ್ ಹಾಗೂ ಮಂತ್ರಿ ರಾಜಶೇಖರ ಪಾಟೀಲರೂ…

ಅಭಿಯಾನ ಆಯೋಜಕರಲ್ಲಿ ಒಬ್ಬರಾದ ವಿದ್ಯಾ ದಿನಕರ್‌ ನಾನು ಗೌರಿ.ಕಾಂ ಜೊತೆ ಮಾತನಾಡುತ್ತಾ,  ಈ ಕ್ಯಾಂಪೇನ್ ಮಹಿಳಾಪರ, ಲೈಂಗಿಕ ಅಲ್ಪಸಂಖ್ಯಾತರು, ದಮನಿತರ ಪರ ಇದೆ. ಆನ್ಲೈನ್ ಮತ್ತು ಆಫ್‌ಲೈನ್ ಎರಡು ಕಡೆ ಹೋರಾಟ ನಡೆಯಲಿದೆ. ಜಿಲ್ಲೆಗಳಲ್ಲಿ ಮಹಿಳೆಯರು ನಮ್ಮ ಹಕ್ಕೋತ್ತಾಯಗಳನ್ನು ಸಲ್ಲಿಸಲಿದ್ದಾರೆ. ಸಾಂಸ್ಕೃತಿಕ ಪ್ರತಿರೋಧ ಕೂಡ ಇದೆ. ಕೋಲಾಟ, ಹಾಡುಗಳು, ನೃತ್ಯದ ಮೂಲಕ ಪ್ರತಿರೋಧ ಒಡ್ಡಲಿದ್ದಾರೆ. ಕೊರೋನಾ ಸಮಯದಲ್ಲಿ ಸುಮ್ಮನೆ ಕೂರುವುದಲ್ಲ. ಸಾಮಾಜಿಕ ಅಂತರ ಪಾಲಿಸಿಕೊಂಡೆ ನಮ್ಮ ಹಕ್ಕುಗಳ ಬಗ್ಗೆ ಹೋರಾಟ ಮಾಡಬೇಕಿದೆ. ಜೊತೆಗೆ ಹೆಚ್ಚು ಜನ ಸೇರಲು ಆಗದ ಹಿನ್ನೆಲೆ ಆನ್‌ಲೈನ್‌ನಲ್ಲೂ ಕೂಡ ಕ್ಯಾಂಪೇನ್ ಮಾಡಲಾಗುತ್ತದೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ.

ಮತ್ತೊಬ್ಬ ಸಾಮಾಜಿಕ ಕಾರ್ಯಕರ್ತೆ ಕಾವ್ಯ ಅಚ್ಯುತ್ ಮಾತನಾಡಿ “ಇಂದಿನ ಕೋಮುವಾದೀಕರಣ, ಆರ್ಥಿಕ ಕುಸಿತ, ಮಹಿಳೆ, ಮಕ್ಕಳು, ಕಾರ್ಮಿಕ ವಿರೋಧಿ ನೀತಿಗಳು ಮಹಿಳೆ, ಮಕ್ಕಳು, ಲೈಂಗಿಕ ಅಲ್ಪಸಂಖ್ಯಾತರ ಮೇಲೆ ಕೆಟ್ಟ ಪರಿಣಾಮ ಬೀರಿವೆ. ಹಾಗಂತ ಈ ಪರಿಸ್ಥಿತಿಯನ್ನು ಎದುರಿಸಲು ಮಹಿಳಾ ವಿಷಯಾಧಾರಿತ ಹೋರಾಟವೊಂದೇ ಸಾಕಾಗುವುದಿಲ್ಲ.. ಹಾಗಾಗಿ ಎಲ್ಲಾ ವರ್ಗದ ಹೋರಾಟಗಾರರು ಸೇರಿಕೊಂಡು ಸೆಪ್ಟೆಂಬರ್ 05 ರಂದು ರಾಷ್ಟ್ರಮಟ್ಟದಲ್ಲಿ ಅಭಿಯಾನ ಮಾಡುತ್ತಿದ್ದೆವೆ. ಸಾಮಾಜಿಕ ಜಾಲತಾಣದಲ್ಲಿ ನಡೆಯುವ ಈ ಪ್ರತಿರೋಧಕ್ಕೆ ಎಲ್ಲಾ ವರ್ಗಗಳಿಂದ ಬೆಂಬಲ ವ್ಯಕ್ತವಾಗಿದ್ದು ನಿರೀಕ್ಷೆಗೂ ಮೀರಿ ಯಶಸ್ವಿಯಾಗುತ್ತದೆ ಎಂಬ ನಂಬಿಕೆ ಇದೆ ಎಂದು ಹೇಳಿದರು.

ಚಿತ್ರ ನಟಿ ಅನಿತಾ ಭಟ್ ರವರು ಸೆಪ್ಟೆಂಬರ್ 05 ರಂದು ನಡೆಯುವ ಮಹಿಳಾ ಮತ್ತು ಮಕ್ಕಳ ಹಕ್ಕುಗಳ ಬಗೆಗಿನ ಆನ್ ಲೈನ್ ಕ್ಯಾಂಪೇನ್ ಗೆ ಜೊತೆಯಾಗಿದ್ದಾರೆ.. ✊#IfWeDoNotRise#IfWeDoNotRiseKarnataka#ನಾವೆದ್ದು_ನಿಲ್ಲದಿದ್ದರೆ

Posted by Kavya Achuth on Tuesday, September 1, 2020

ಅಭಿಯಾನದ ಕುರಿತು ಜನಪರ ಸಾಹಿತಿ ಜನಾರ್ಧನ ಕೆಸರಗದ್ದೆಯವರು ಅಭಿಯಾನದ ಥೀಮ್ ಸಾಂಗ್ ಬರೆದಿದ್ದು ಎಲ್ಲೆಡೆ ವೈರಲ್ ಆಗಿದೆ.

ಒಟ್ಟಾರೆ, ಕೊರೊನಾ, ಲಾಕ್‌ಡೌನ್  ಮಧ್ಯೆ ಯಾವ ದೌರ್ಜನ್ಯಗಳು ನಿಂತಿಲ್ಲ. ಇನ್ನು ಅಂತಹ ಪ್ರಕರಣಗಳು ಹೆಚ್ಚಾಗುತ್ತಿವೆ ಹೀಗಾಗಿ ಅವುಗಳ ವಿರುದ್ಧದ ಪ್ರತಿಭಟನೆಗಳು, ಪ್ರತಿರೋಧ ಕೂಡ ನಿಲ್ಲಬಾರದು ಎಂಬುದು ಅಭಿಯಾನ ಸಂಯೋಜಕರ ಅಭಿಪ್ರಾಯವಾಗಿದೆ.


ಇದನ್ನೂ ಓದಿ: ಸತ್ಯವ ನುಡಿಯುವ ದಿಟ್ಟತೆಗೆ ಪ್ರತೀಕವಾದ ಗೌರಿ ಲಂಕೇಶ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...