Homeಮುಖಪುಟಸೆ.5 ಕ್ಕೆ ಗೌರಿ ಲಂಕೇಶ್ ನೆನಪಿನಲ್ಲಿ ಮೊಳಗಲಿದೆ 'ನಾವೆದ್ದು ನಿಲ್ಲದಿದ್ದರೆ…' ಧ್ವನಿ

ಸೆ.5 ಕ್ಕೆ ಗೌರಿ ಲಂಕೇಶ್ ನೆನಪಿನಲ್ಲಿ ಮೊಳಗಲಿದೆ ‘ನಾವೆದ್ದು ನಿಲ್ಲದಿದ್ದರೆ…’ ಧ್ವನಿ

ಅಭಿಯಾನವು ಭಾರತದ ಜನತೆಯ ಸಂವಿಧಾನಾತ್ಮಕ ಹಕ್ಕುಗಳ ವಿರುದ್ಧ ನಡೆಯುತ್ತಿರುವ ಗುರುತರ ದಾಳಿಯನ್ನು ಪ್ರತಿರೋಧಿಸುವ ಧ್ವನಿಗಳನ್ನು ಒಗ್ಗೊಡಿಸುವ ಧ್ಯೇಯವನ್ನು ಹೊಂದಿದೆ.

- Advertisement -
- Advertisement -

ಸೆಪ್ಟೆಂಬರ್ 05, 2017…. ಯಾರಿಗೆ ತಾನೇ ನೆನಪಿಲ್ಲ ಹೇಳಿ ಒಬ್ಬ ನಿರ್ಭಿತ, ದಿಟ್ಟ ಪತ್ರಕರ್ತೆಯನ್ನು ದೇಶ ಕಳೆದುಕೊಂಡ ದಿನ. ಪತ್ರಕರ್ತೆ ಎನ್ನುವುದಕ್ಕಿಂತ ಮಾತೃಹೃದಯಿ ನಮ್ಮನ್ನಗಲಿದ ದಿನ. ಅಭಿವ್ಯಕ್ತಿ ಸ್ವಾತಂತ್ರಕ್ಕೆ ಪೆಟ್ಟು ಬಿದ್ದ ದಿನ. ಮಹಿಳೆಯರ ಹಕ್ಕುಗಳ ಮೇಲೆ, ಸತ್ಯದ ಮೇಲೆ ಬರೆ ಬಿದ್ದ ದಿನ.. ಆ ದುರಂತಕ್ಕೆ 3 ವರ್ಷಗಳಾಗುತ್ತಾ ಬಂತು.

ರಾಜಕೀಯ ಮತ್ತು ಸಾರ್ವಜನಿಕ ಜೀವನದಲ್ಲಿ ಬೆಳೆಯುತ್ತಿರುವ ಪ್ಯಾಸಿಸ್ಟ್ ಶಕ್ತಿಗಳ ವಿರುದ್ಧ ಎದೆಗುಂದದೆ ಹೋರಾಡಿದ ಅಪ್ರತಿಮ ಮಹಿಳೆ ಗೌರಿ ಲಂಕೇಶ್. ಜನರಲ್ಲಿ ಬದುಕುವ ಹಕ್ಕು, ಭಿನ್ನಾಭಿಪ್ರಾಯಗಳನ್ನು ಹೊಂದುವ ಸ್ವತಂತ್ರ ಮನೋಭಾವವನ್ನು ಬೆಳೆಸಿಕೊಳ್ಳುವ ಹಕ್ಕುಗಳನ್ನು ಒಪ್ಪಿ, ಅಪ್ಪಿಕೊಂಡಿದ್ದ ಅವರು ತನ್ನ ಜೀವವನ್ನೇ ಪಣಕ್ಕಿಟ್ಟು ಮನುಷ್ಯ ಬದುಕಿನ ಸಂಕೇತವಾದರು. ಇವರ ನಿರ್ಭಿತ ಚೈತನ್ಯ ಮತ್ತು ಗಾಢ ನಂಬಿಕೆಗಳಿಂದ ಉತ್ತೇಜಿತವಾಗಿ, ಸಂವಿಧಾನ ಮತ್ತು ಜನರ ಮೇಲಿನ ಹಲ್ಲೆಗಳನ್ನು ಖಂಡಿಸಿ ಅವುಗಳ ವಿರುದ್ಧ ಧ್ವನಿ ಎತ್ತಲು ಇದೇ ಸೆಪ್ಟಂಬರ್ 5ರಂದೇ “ನಾವೆದ್ದು ನಿಲ್ಲದಿದ್ದರೆ”… ಆಂದೋಲನ ನಡೆಯುತ್ತಿದೆ.

ಅಂದು ರಾಷ್ಟ್ರಮಟ್ಟದಲ್ಲಿ ಮಹಿಳಾ ಪರ ಹೋರಾಟಗಾರರು, ಚಿಂತಕರು, ಲೈಂಗಿಕ ಅಲ್ಪ ಸಂಖ್ಯಾತ LGBTQIA ಸಮುದಾಯಗಳು ಮತ್ತು ಮಾನವ ಹಕ್ಕುಗಳ ಸಂಘಟನೆಗಳು “ನಾವೆದ್ದು ನಿಲ್ಲದಿದ್ದರೆ” ಎಂಬ ಪ್ರಚಾರಾಂದೋಲನ ಹಮ್ಮಿಕೊಂಡಿವೆ. ಅಭಿಯಾನವು ಭಾರತದ ಜನತೆಯ ಸಂವಿಧಾನಾತ್ಮಕ ಹಕ್ಕುಗಳ ವಿರುದ್ಧ ನಡೆಯುತ್ತಿರುವ ಗುರುತರ ದಾಳಿಯನ್ನು ಪ್ರತಿರೋಧಿಸುವ ಧ್ವನಿಗಳನ್ನು ಒಗ್ಗೊಡಿಸುವ ಧ್ಯೇಯವನ್ನು ಹೊಂದಿದೆ. ಈ ಅಭಿಯಾನದಲ್ಲಿ ಜಾತಿ, ಮತ, ಧರ್ಮಗಳ ಕಟ್ಟಳೆಗಳಿಂದ ಹೊರ ಬಂದು ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುವ ಕೆಲಸ ನಡೆಯಲಿದೆ.

ದೇಶದಲ್ಲಿನ ಪ್ಯಾಸಿಸ್ಟ್ ಶಕ್ತಿಗಳ ಬೆಳವಣಿಗೆಯಿಂದ ಮಹಿಳೆಯರು, ಮಕ್ಕಳು ಮತ್ತು ಲೈಂಗಿಕ ಅಲ್ಪಸಂಖ್ಯಾತರು ತಮ್ಮ ಹಕ್ಕುಗಳಿಗಾಗಿ ಪರದಾಡುವಂತಾಗಿದೆ. ಅವರ ಜೀವನದ ಮೇಲೆ ಅಗಾಧ ಪರಿಣಾಮ ಉಂಟಾಗಿದೆ. ಅಭಿಯಾನದ ಮೂಲಕ ಅವರಲ್ಲಿ ಆತ್ಮಸ್ಥೈರ್ಯ ತುಂಬಲಾಗುತ್ತದೆ. ಈ ಮೂಲಕ ಸಂವಿಧಾನ ನೀಡಿರುವ ಹಕ್ಕುಗಳನ್ನು ಪಡೆಯಲು ಧ್ವನಿ ಎತ್ತಲಾಗುತ್ತಿದೆ ಎಂದು ಸುದ್ದಿಗೊಷ್ಟಿಯಲ್ಲಿ ಹೋರಾಟಗಾರ್ತಿಯರು ತಿಳಿಸಿದ್ದಾರೆ.

ಕೊರೊನಾ ಸಂಕಷ್ಟದ ಸಮಯದಲ್ಲಿ ಆಶಾ ಕಾರ್ಯಕರ್ತೆಯರು, ಪೌರ  ಕಾರ್ಮಿಕರು, ದಲಿತರ ಮೇಲೆ ಅತ್ಯಾಚಾರದ ಪ್ರಕರಣಗಳು ಹೆಚ್ಚಾಗಿದ್ದು, ಇವುಗಳನ್ನು ಪ್ರಚಾರಾಂದೋಲನದಲ್ಲಿ ಚರ್ಚಿಸಿ, ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲು ಅಭಿಯಾನದ ಸಂಯೋಜಕರು ನಿರ್ಧರಿಸಿದ್ದಾರೆ.

ದೇಶದಲ್ಲಿ ನ್ಯಾಯಕ್ಕಾಗಿ ನಡೆಯುವ ಶಾಂತಿಯುತ ಪ್ರತಿಭಟನೆಗಳನ್ನು ಆಳುವ ಪಕ್ಷ ತಡೆಯುತ್ತಿದ್ದು, ದ್ವೇಷ ಕೆರಳಿಸುವ ಭಾಷಣ ಮಾಡುವ ನಾಯಕರನ್ನು ಬಂಧಿಸುವ ಬದಲು ಐಕ್ಯತೆ, ಶಾಂತಿ ಮತ್ತು ಸಂವಿಧಾನಕ್ಕೆ ಹೊರಾಡುತ್ತಿದ್ದವರನ್ನು ಬಂಧಿಸಿ ಜೈಲಿಗಟ್ಟಿದ್ದಾರೆ, ಅವರುಗಳ ಬಿಡುಗಡೆಯಾಗಬೇಕು. ಮಾಹಿತಿ ಹಕ್ಕು ಕಾಯ್ದೆಯನ್ನು ದುರ್ಬಲಗೊಳಿಸಲಾಗಿದೆ. ಕಠಿಣ ಲಾಕ್‌ಡೌನ್‌ನಲ್ಲಿ ವಲಸೆ ಕಾರ್ಮಿಕರು, ಬಡವರ ಬಗ್ಗೆ ಸರ್ಕಾರ ನಿರ್ಲಕ್ಷ್ಯ ತೋರಿದೆ ಎಂದು ಅಭಿಯಾನದ ಭಿತ್ತಿಪತ್ರಗಳು ಸಾರುತ್ತಿವೆ.

ಇನ್ನು ಅಭಿಯಾನದ ಮೂಲಕ ನಿರ್ದಿಷ್ಟ ಬೇಡಿಕೆಗಳಿರುವ ಮನವಿ ಪತ್ರವನ್ನು ಮುಖ್ಯಮಂತ್ರಿಗಳಿಗೆ ಸಲ್ಲಿಸಲಾಗುತ್ತದೆ. ಸ್ಥಳೀಯವಾದ ಬೇಡಿಕೆಗಳನ್ನು ಸ್ಥಳೀಯ ಮುಖಂಡರಿಗೆ ಸಲ್ಲಿಸಲು ನಿರ್ಧರಿಸಲಾಗಿದೆ. ಆನ್‌ಲೈನ್‌ ಮೂಲಕ ವಿವಿಧ ವಲಯಗಳ ಮಹಿಳೆಯರ, ರೈತರ, ದಿನಗೂಲಿ ಕಾರ್ಮಿಕರ, ಲೈಂಗಿಕ ಕಾರ್ಯಕರ್ತೆಯರ ಹೋರಾಟದ ಮಾಹಿತಿಗಳಿರುವ ವಿಡಿಯೋ ಬಿಡುಗಡೆ ಮಾಡಲಾಗುತ್ತದೆ. ಜೊತೆಗೆ ಅಂದು ವಿದ್ಯಾರ್ಥಿಗಳು, ವೃತ್ತಿಪರರು, ಚಿಂತಕರು, ಸಾಹಿತಿಗಳು, ಕಾರ್ಯಕರ್ತರು ಫೇಸ್‌ಬುಕ್ ಲೈವ್ ಬರಲಿದ್ದಾರೆ.

ರಾಷ್ಟ್ರವ್ಯಾಪಿ ನಡೆಯಲಿರುವ ಈ ಅಭಿಯಾನಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಬೆಂಬಲ ವ್ಯಕ್ತವಾಗುತ್ತಿದೆ. ನಿರ್ದೇಶಕಿ ಕವಿತಾ ಲಂಕೇಶ್, ನಿರ್ದೇಶಕ ಬಿ.ಸುರೇಶ್, ಗುಜರಾತ್ ರಾಜಕಾರಣಿ ಜಿಗ್ನೇಶ್ ಮೇವಾನಿ, ನಟಿ ಅನಿತಾ ಭಟ್, ನೀತು, ಹೋರಾಟಗಾರರು, ಮಹಿಳಾ ಪರ ಚಿಂತಕರು ಚಲನಚಿತ್ರ ನಟ, ನಟಿಯರು ಈ ಅಭಿಯಾನದ ಮಹತ್ವವನ್ನು ಸೂಚಿಸಿ ತಮ್ಮ ಬೆಂಬಲ ನೀಡಿ ಆನ್‌ಲೈನ್ ಕ್ಯಾಂಪೇನ್‌ನಲ್ಲಿ ಭಾಗವಹಿಸಿ ಅಭಿಯಾನದ ಭಾಗವಾಗಲು ಜನರಲ್ಲಿ ಮನವಿ ಮಾಡಿದ್ದಾರೆ.

ಇದನ್ನೂ ಓದಿ:ಗಟ್ಟಿ ಗಿತ್ತಿಯಾಗಿ ಜೀವಂತವಾಗಿರುವ ಗೌರಿ ಲಂಕೇಶ್ ಹಾಗೂ ಮಂತ್ರಿ ರಾಜಶೇಖರ ಪಾಟೀಲರೂ…

ಅಭಿಯಾನ ಆಯೋಜಕರಲ್ಲಿ ಒಬ್ಬರಾದ ವಿದ್ಯಾ ದಿನಕರ್‌ ನಾನು ಗೌರಿ.ಕಾಂ ಜೊತೆ ಮಾತನಾಡುತ್ತಾ,  ಈ ಕ್ಯಾಂಪೇನ್ ಮಹಿಳಾಪರ, ಲೈಂಗಿಕ ಅಲ್ಪಸಂಖ್ಯಾತರು, ದಮನಿತರ ಪರ ಇದೆ. ಆನ್ಲೈನ್ ಮತ್ತು ಆಫ್‌ಲೈನ್ ಎರಡು ಕಡೆ ಹೋರಾಟ ನಡೆಯಲಿದೆ. ಜಿಲ್ಲೆಗಳಲ್ಲಿ ಮಹಿಳೆಯರು ನಮ್ಮ ಹಕ್ಕೋತ್ತಾಯಗಳನ್ನು ಸಲ್ಲಿಸಲಿದ್ದಾರೆ. ಸಾಂಸ್ಕೃತಿಕ ಪ್ರತಿರೋಧ ಕೂಡ ಇದೆ. ಕೋಲಾಟ, ಹಾಡುಗಳು, ನೃತ್ಯದ ಮೂಲಕ ಪ್ರತಿರೋಧ ಒಡ್ಡಲಿದ್ದಾರೆ. ಕೊರೋನಾ ಸಮಯದಲ್ಲಿ ಸುಮ್ಮನೆ ಕೂರುವುದಲ್ಲ. ಸಾಮಾಜಿಕ ಅಂತರ ಪಾಲಿಸಿಕೊಂಡೆ ನಮ್ಮ ಹಕ್ಕುಗಳ ಬಗ್ಗೆ ಹೋರಾಟ ಮಾಡಬೇಕಿದೆ. ಜೊತೆಗೆ ಹೆಚ್ಚು ಜನ ಸೇರಲು ಆಗದ ಹಿನ್ನೆಲೆ ಆನ್‌ಲೈನ್‌ನಲ್ಲೂ ಕೂಡ ಕ್ಯಾಂಪೇನ್ ಮಾಡಲಾಗುತ್ತದೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ.

ಮತ್ತೊಬ್ಬ ಸಾಮಾಜಿಕ ಕಾರ್ಯಕರ್ತೆ ಕಾವ್ಯ ಅಚ್ಯುತ್ ಮಾತನಾಡಿ “ಇಂದಿನ ಕೋಮುವಾದೀಕರಣ, ಆರ್ಥಿಕ ಕುಸಿತ, ಮಹಿಳೆ, ಮಕ್ಕಳು, ಕಾರ್ಮಿಕ ವಿರೋಧಿ ನೀತಿಗಳು ಮಹಿಳೆ, ಮಕ್ಕಳು, ಲೈಂಗಿಕ ಅಲ್ಪಸಂಖ್ಯಾತರ ಮೇಲೆ ಕೆಟ್ಟ ಪರಿಣಾಮ ಬೀರಿವೆ. ಹಾಗಂತ ಈ ಪರಿಸ್ಥಿತಿಯನ್ನು ಎದುರಿಸಲು ಮಹಿಳಾ ವಿಷಯಾಧಾರಿತ ಹೋರಾಟವೊಂದೇ ಸಾಕಾಗುವುದಿಲ್ಲ.. ಹಾಗಾಗಿ ಎಲ್ಲಾ ವರ್ಗದ ಹೋರಾಟಗಾರರು ಸೇರಿಕೊಂಡು ಸೆಪ್ಟೆಂಬರ್ 05 ರಂದು ರಾಷ್ಟ್ರಮಟ್ಟದಲ್ಲಿ ಅಭಿಯಾನ ಮಾಡುತ್ತಿದ್ದೆವೆ. ಸಾಮಾಜಿಕ ಜಾಲತಾಣದಲ್ಲಿ ನಡೆಯುವ ಈ ಪ್ರತಿರೋಧಕ್ಕೆ ಎಲ್ಲಾ ವರ್ಗಗಳಿಂದ ಬೆಂಬಲ ವ್ಯಕ್ತವಾಗಿದ್ದು ನಿರೀಕ್ಷೆಗೂ ಮೀರಿ ಯಶಸ್ವಿಯಾಗುತ್ತದೆ ಎಂಬ ನಂಬಿಕೆ ಇದೆ ಎಂದು ಹೇಳಿದರು.

ಚಿತ್ರ ನಟಿ ಅನಿತಾ ಭಟ್ ರವರು ಸೆಪ್ಟೆಂಬರ್ 05 ರಂದು ನಡೆಯುವ ಮಹಿಳಾ ಮತ್ತು ಮಕ್ಕಳ ಹಕ್ಕುಗಳ ಬಗೆಗಿನ ಆನ್ ಲೈನ್ ಕ್ಯಾಂಪೇನ್ ಗೆ ಜೊತೆಯಾಗಿದ್ದಾರೆ.. ✊#IfWeDoNotRise#IfWeDoNotRiseKarnataka#ನಾವೆದ್ದು_ನಿಲ್ಲದಿದ್ದರೆ

Posted by Kavya Achuth on Tuesday, September 1, 2020

ಅಭಿಯಾನದ ಕುರಿತು ಜನಪರ ಸಾಹಿತಿ ಜನಾರ್ಧನ ಕೆಸರಗದ್ದೆಯವರು ಅಭಿಯಾನದ ಥೀಮ್ ಸಾಂಗ್ ಬರೆದಿದ್ದು ಎಲ್ಲೆಡೆ ವೈರಲ್ ಆಗಿದೆ.

ಒಟ್ಟಾರೆ, ಕೊರೊನಾ, ಲಾಕ್‌ಡೌನ್  ಮಧ್ಯೆ ಯಾವ ದೌರ್ಜನ್ಯಗಳು ನಿಂತಿಲ್ಲ. ಇನ್ನು ಅಂತಹ ಪ್ರಕರಣಗಳು ಹೆಚ್ಚಾಗುತ್ತಿವೆ ಹೀಗಾಗಿ ಅವುಗಳ ವಿರುದ್ಧದ ಪ್ರತಿಭಟನೆಗಳು, ಪ್ರತಿರೋಧ ಕೂಡ ನಿಲ್ಲಬಾರದು ಎಂಬುದು ಅಭಿಯಾನ ಸಂಯೋಜಕರ ಅಭಿಪ್ರಾಯವಾಗಿದೆ.


ಇದನ್ನೂ ಓದಿ: ಸತ್ಯವ ನುಡಿಯುವ ದಿಟ್ಟತೆಗೆ ಪ್ರತೀಕವಾದ ಗೌರಿ ಲಂಕೇಶ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...