Homeಮುಖಪುಟಸೆ.5 ಕ್ಕೆ ಗೌರಿ ಲಂಕೇಶ್ ನೆನಪಿನಲ್ಲಿ ಮೊಳಗಲಿದೆ 'ನಾವೆದ್ದು ನಿಲ್ಲದಿದ್ದರೆ…' ಧ್ವನಿ

ಸೆ.5 ಕ್ಕೆ ಗೌರಿ ಲಂಕೇಶ್ ನೆನಪಿನಲ್ಲಿ ಮೊಳಗಲಿದೆ ‘ನಾವೆದ್ದು ನಿಲ್ಲದಿದ್ದರೆ…’ ಧ್ವನಿ

ಅಭಿಯಾನವು ಭಾರತದ ಜನತೆಯ ಸಂವಿಧಾನಾತ್ಮಕ ಹಕ್ಕುಗಳ ವಿರುದ್ಧ ನಡೆಯುತ್ತಿರುವ ಗುರುತರ ದಾಳಿಯನ್ನು ಪ್ರತಿರೋಧಿಸುವ ಧ್ವನಿಗಳನ್ನು ಒಗ್ಗೊಡಿಸುವ ಧ್ಯೇಯವನ್ನು ಹೊಂದಿದೆ.

- Advertisement -
- Advertisement -

ಸೆಪ್ಟೆಂಬರ್ 05, 2017…. ಯಾರಿಗೆ ತಾನೇ ನೆನಪಿಲ್ಲ ಹೇಳಿ ಒಬ್ಬ ನಿರ್ಭಿತ, ದಿಟ್ಟ ಪತ್ರಕರ್ತೆಯನ್ನು ದೇಶ ಕಳೆದುಕೊಂಡ ದಿನ. ಪತ್ರಕರ್ತೆ ಎನ್ನುವುದಕ್ಕಿಂತ ಮಾತೃಹೃದಯಿ ನಮ್ಮನ್ನಗಲಿದ ದಿನ. ಅಭಿವ್ಯಕ್ತಿ ಸ್ವಾತಂತ್ರಕ್ಕೆ ಪೆಟ್ಟು ಬಿದ್ದ ದಿನ. ಮಹಿಳೆಯರ ಹಕ್ಕುಗಳ ಮೇಲೆ, ಸತ್ಯದ ಮೇಲೆ ಬರೆ ಬಿದ್ದ ದಿನ.. ಆ ದುರಂತಕ್ಕೆ 3 ವರ್ಷಗಳಾಗುತ್ತಾ ಬಂತು.

ರಾಜಕೀಯ ಮತ್ತು ಸಾರ್ವಜನಿಕ ಜೀವನದಲ್ಲಿ ಬೆಳೆಯುತ್ತಿರುವ ಪ್ಯಾಸಿಸ್ಟ್ ಶಕ್ತಿಗಳ ವಿರುದ್ಧ ಎದೆಗುಂದದೆ ಹೋರಾಡಿದ ಅಪ್ರತಿಮ ಮಹಿಳೆ ಗೌರಿ ಲಂಕೇಶ್. ಜನರಲ್ಲಿ ಬದುಕುವ ಹಕ್ಕು, ಭಿನ್ನಾಭಿಪ್ರಾಯಗಳನ್ನು ಹೊಂದುವ ಸ್ವತಂತ್ರ ಮನೋಭಾವವನ್ನು ಬೆಳೆಸಿಕೊಳ್ಳುವ ಹಕ್ಕುಗಳನ್ನು ಒಪ್ಪಿ, ಅಪ್ಪಿಕೊಂಡಿದ್ದ ಅವರು ತನ್ನ ಜೀವವನ್ನೇ ಪಣಕ್ಕಿಟ್ಟು ಮನುಷ್ಯ ಬದುಕಿನ ಸಂಕೇತವಾದರು. ಇವರ ನಿರ್ಭಿತ ಚೈತನ್ಯ ಮತ್ತು ಗಾಢ ನಂಬಿಕೆಗಳಿಂದ ಉತ್ತೇಜಿತವಾಗಿ, ಸಂವಿಧಾನ ಮತ್ತು ಜನರ ಮೇಲಿನ ಹಲ್ಲೆಗಳನ್ನು ಖಂಡಿಸಿ ಅವುಗಳ ವಿರುದ್ಧ ಧ್ವನಿ ಎತ್ತಲು ಇದೇ ಸೆಪ್ಟಂಬರ್ 5ರಂದೇ “ನಾವೆದ್ದು ನಿಲ್ಲದಿದ್ದರೆ”… ಆಂದೋಲನ ನಡೆಯುತ್ತಿದೆ.

ಅಂದು ರಾಷ್ಟ್ರಮಟ್ಟದಲ್ಲಿ ಮಹಿಳಾ ಪರ ಹೋರಾಟಗಾರರು, ಚಿಂತಕರು, ಲೈಂಗಿಕ ಅಲ್ಪ ಸಂಖ್ಯಾತ LGBTQIA ಸಮುದಾಯಗಳು ಮತ್ತು ಮಾನವ ಹಕ್ಕುಗಳ ಸಂಘಟನೆಗಳು “ನಾವೆದ್ದು ನಿಲ್ಲದಿದ್ದರೆ” ಎಂಬ ಪ್ರಚಾರಾಂದೋಲನ ಹಮ್ಮಿಕೊಂಡಿವೆ. ಅಭಿಯಾನವು ಭಾರತದ ಜನತೆಯ ಸಂವಿಧಾನಾತ್ಮಕ ಹಕ್ಕುಗಳ ವಿರುದ್ಧ ನಡೆಯುತ್ತಿರುವ ಗುರುತರ ದಾಳಿಯನ್ನು ಪ್ರತಿರೋಧಿಸುವ ಧ್ವನಿಗಳನ್ನು ಒಗ್ಗೊಡಿಸುವ ಧ್ಯೇಯವನ್ನು ಹೊಂದಿದೆ. ಈ ಅಭಿಯಾನದಲ್ಲಿ ಜಾತಿ, ಮತ, ಧರ್ಮಗಳ ಕಟ್ಟಳೆಗಳಿಂದ ಹೊರ ಬಂದು ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುವ ಕೆಲಸ ನಡೆಯಲಿದೆ.

ದೇಶದಲ್ಲಿನ ಪ್ಯಾಸಿಸ್ಟ್ ಶಕ್ತಿಗಳ ಬೆಳವಣಿಗೆಯಿಂದ ಮಹಿಳೆಯರು, ಮಕ್ಕಳು ಮತ್ತು ಲೈಂಗಿಕ ಅಲ್ಪಸಂಖ್ಯಾತರು ತಮ್ಮ ಹಕ್ಕುಗಳಿಗಾಗಿ ಪರದಾಡುವಂತಾಗಿದೆ. ಅವರ ಜೀವನದ ಮೇಲೆ ಅಗಾಧ ಪರಿಣಾಮ ಉಂಟಾಗಿದೆ. ಅಭಿಯಾನದ ಮೂಲಕ ಅವರಲ್ಲಿ ಆತ್ಮಸ್ಥೈರ್ಯ ತುಂಬಲಾಗುತ್ತದೆ. ಈ ಮೂಲಕ ಸಂವಿಧಾನ ನೀಡಿರುವ ಹಕ್ಕುಗಳನ್ನು ಪಡೆಯಲು ಧ್ವನಿ ಎತ್ತಲಾಗುತ್ತಿದೆ ಎಂದು ಸುದ್ದಿಗೊಷ್ಟಿಯಲ್ಲಿ ಹೋರಾಟಗಾರ್ತಿಯರು ತಿಳಿಸಿದ್ದಾರೆ.

ಕೊರೊನಾ ಸಂಕಷ್ಟದ ಸಮಯದಲ್ಲಿ ಆಶಾ ಕಾರ್ಯಕರ್ತೆಯರು, ಪೌರ  ಕಾರ್ಮಿಕರು, ದಲಿತರ ಮೇಲೆ ಅತ್ಯಾಚಾರದ ಪ್ರಕರಣಗಳು ಹೆಚ್ಚಾಗಿದ್ದು, ಇವುಗಳನ್ನು ಪ್ರಚಾರಾಂದೋಲನದಲ್ಲಿ ಚರ್ಚಿಸಿ, ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲು ಅಭಿಯಾನದ ಸಂಯೋಜಕರು ನಿರ್ಧರಿಸಿದ್ದಾರೆ.

ದೇಶದಲ್ಲಿ ನ್ಯಾಯಕ್ಕಾಗಿ ನಡೆಯುವ ಶಾಂತಿಯುತ ಪ್ರತಿಭಟನೆಗಳನ್ನು ಆಳುವ ಪಕ್ಷ ತಡೆಯುತ್ತಿದ್ದು, ದ್ವೇಷ ಕೆರಳಿಸುವ ಭಾಷಣ ಮಾಡುವ ನಾಯಕರನ್ನು ಬಂಧಿಸುವ ಬದಲು ಐಕ್ಯತೆ, ಶಾಂತಿ ಮತ್ತು ಸಂವಿಧಾನಕ್ಕೆ ಹೊರಾಡುತ್ತಿದ್ದವರನ್ನು ಬಂಧಿಸಿ ಜೈಲಿಗಟ್ಟಿದ್ದಾರೆ, ಅವರುಗಳ ಬಿಡುಗಡೆಯಾಗಬೇಕು. ಮಾಹಿತಿ ಹಕ್ಕು ಕಾಯ್ದೆಯನ್ನು ದುರ್ಬಲಗೊಳಿಸಲಾಗಿದೆ. ಕಠಿಣ ಲಾಕ್‌ಡೌನ್‌ನಲ್ಲಿ ವಲಸೆ ಕಾರ್ಮಿಕರು, ಬಡವರ ಬಗ್ಗೆ ಸರ್ಕಾರ ನಿರ್ಲಕ್ಷ್ಯ ತೋರಿದೆ ಎಂದು ಅಭಿಯಾನದ ಭಿತ್ತಿಪತ್ರಗಳು ಸಾರುತ್ತಿವೆ.

ಇನ್ನು ಅಭಿಯಾನದ ಮೂಲಕ ನಿರ್ದಿಷ್ಟ ಬೇಡಿಕೆಗಳಿರುವ ಮನವಿ ಪತ್ರವನ್ನು ಮುಖ್ಯಮಂತ್ರಿಗಳಿಗೆ ಸಲ್ಲಿಸಲಾಗುತ್ತದೆ. ಸ್ಥಳೀಯವಾದ ಬೇಡಿಕೆಗಳನ್ನು ಸ್ಥಳೀಯ ಮುಖಂಡರಿಗೆ ಸಲ್ಲಿಸಲು ನಿರ್ಧರಿಸಲಾಗಿದೆ. ಆನ್‌ಲೈನ್‌ ಮೂಲಕ ವಿವಿಧ ವಲಯಗಳ ಮಹಿಳೆಯರ, ರೈತರ, ದಿನಗೂಲಿ ಕಾರ್ಮಿಕರ, ಲೈಂಗಿಕ ಕಾರ್ಯಕರ್ತೆಯರ ಹೋರಾಟದ ಮಾಹಿತಿಗಳಿರುವ ವಿಡಿಯೋ ಬಿಡುಗಡೆ ಮಾಡಲಾಗುತ್ತದೆ. ಜೊತೆಗೆ ಅಂದು ವಿದ್ಯಾರ್ಥಿಗಳು, ವೃತ್ತಿಪರರು, ಚಿಂತಕರು, ಸಾಹಿತಿಗಳು, ಕಾರ್ಯಕರ್ತರು ಫೇಸ್‌ಬುಕ್ ಲೈವ್ ಬರಲಿದ್ದಾರೆ.

ರಾಷ್ಟ್ರವ್ಯಾಪಿ ನಡೆಯಲಿರುವ ಈ ಅಭಿಯಾನಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಬೆಂಬಲ ವ್ಯಕ್ತವಾಗುತ್ತಿದೆ. ನಿರ್ದೇಶಕಿ ಕವಿತಾ ಲಂಕೇಶ್, ನಿರ್ದೇಶಕ ಬಿ.ಸುರೇಶ್, ಗುಜರಾತ್ ರಾಜಕಾರಣಿ ಜಿಗ್ನೇಶ್ ಮೇವಾನಿ, ನಟಿ ಅನಿತಾ ಭಟ್, ನೀತು, ಹೋರಾಟಗಾರರು, ಮಹಿಳಾ ಪರ ಚಿಂತಕರು ಚಲನಚಿತ್ರ ನಟ, ನಟಿಯರು ಈ ಅಭಿಯಾನದ ಮಹತ್ವವನ್ನು ಸೂಚಿಸಿ ತಮ್ಮ ಬೆಂಬಲ ನೀಡಿ ಆನ್‌ಲೈನ್ ಕ್ಯಾಂಪೇನ್‌ನಲ್ಲಿ ಭಾಗವಹಿಸಿ ಅಭಿಯಾನದ ಭಾಗವಾಗಲು ಜನರಲ್ಲಿ ಮನವಿ ಮಾಡಿದ್ದಾರೆ.

ಇದನ್ನೂ ಓದಿ:ಗಟ್ಟಿ ಗಿತ್ತಿಯಾಗಿ ಜೀವಂತವಾಗಿರುವ ಗೌರಿ ಲಂಕೇಶ್ ಹಾಗೂ ಮಂತ್ರಿ ರಾಜಶೇಖರ ಪಾಟೀಲರೂ…

ಅಭಿಯಾನ ಆಯೋಜಕರಲ್ಲಿ ಒಬ್ಬರಾದ ವಿದ್ಯಾ ದಿನಕರ್‌ ನಾನು ಗೌರಿ.ಕಾಂ ಜೊತೆ ಮಾತನಾಡುತ್ತಾ,  ಈ ಕ್ಯಾಂಪೇನ್ ಮಹಿಳಾಪರ, ಲೈಂಗಿಕ ಅಲ್ಪಸಂಖ್ಯಾತರು, ದಮನಿತರ ಪರ ಇದೆ. ಆನ್ಲೈನ್ ಮತ್ತು ಆಫ್‌ಲೈನ್ ಎರಡು ಕಡೆ ಹೋರಾಟ ನಡೆಯಲಿದೆ. ಜಿಲ್ಲೆಗಳಲ್ಲಿ ಮಹಿಳೆಯರು ನಮ್ಮ ಹಕ್ಕೋತ್ತಾಯಗಳನ್ನು ಸಲ್ಲಿಸಲಿದ್ದಾರೆ. ಸಾಂಸ್ಕೃತಿಕ ಪ್ರತಿರೋಧ ಕೂಡ ಇದೆ. ಕೋಲಾಟ, ಹಾಡುಗಳು, ನೃತ್ಯದ ಮೂಲಕ ಪ್ರತಿರೋಧ ಒಡ್ಡಲಿದ್ದಾರೆ. ಕೊರೋನಾ ಸಮಯದಲ್ಲಿ ಸುಮ್ಮನೆ ಕೂರುವುದಲ್ಲ. ಸಾಮಾಜಿಕ ಅಂತರ ಪಾಲಿಸಿಕೊಂಡೆ ನಮ್ಮ ಹಕ್ಕುಗಳ ಬಗ್ಗೆ ಹೋರಾಟ ಮಾಡಬೇಕಿದೆ. ಜೊತೆಗೆ ಹೆಚ್ಚು ಜನ ಸೇರಲು ಆಗದ ಹಿನ್ನೆಲೆ ಆನ್‌ಲೈನ್‌ನಲ್ಲೂ ಕೂಡ ಕ್ಯಾಂಪೇನ್ ಮಾಡಲಾಗುತ್ತದೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ.

ಮತ್ತೊಬ್ಬ ಸಾಮಾಜಿಕ ಕಾರ್ಯಕರ್ತೆ ಕಾವ್ಯ ಅಚ್ಯುತ್ ಮಾತನಾಡಿ “ಇಂದಿನ ಕೋಮುವಾದೀಕರಣ, ಆರ್ಥಿಕ ಕುಸಿತ, ಮಹಿಳೆ, ಮಕ್ಕಳು, ಕಾರ್ಮಿಕ ವಿರೋಧಿ ನೀತಿಗಳು ಮಹಿಳೆ, ಮಕ್ಕಳು, ಲೈಂಗಿಕ ಅಲ್ಪಸಂಖ್ಯಾತರ ಮೇಲೆ ಕೆಟ್ಟ ಪರಿಣಾಮ ಬೀರಿವೆ. ಹಾಗಂತ ಈ ಪರಿಸ್ಥಿತಿಯನ್ನು ಎದುರಿಸಲು ಮಹಿಳಾ ವಿಷಯಾಧಾರಿತ ಹೋರಾಟವೊಂದೇ ಸಾಕಾಗುವುದಿಲ್ಲ.. ಹಾಗಾಗಿ ಎಲ್ಲಾ ವರ್ಗದ ಹೋರಾಟಗಾರರು ಸೇರಿಕೊಂಡು ಸೆಪ್ಟೆಂಬರ್ 05 ರಂದು ರಾಷ್ಟ್ರಮಟ್ಟದಲ್ಲಿ ಅಭಿಯಾನ ಮಾಡುತ್ತಿದ್ದೆವೆ. ಸಾಮಾಜಿಕ ಜಾಲತಾಣದಲ್ಲಿ ನಡೆಯುವ ಈ ಪ್ರತಿರೋಧಕ್ಕೆ ಎಲ್ಲಾ ವರ್ಗಗಳಿಂದ ಬೆಂಬಲ ವ್ಯಕ್ತವಾಗಿದ್ದು ನಿರೀಕ್ಷೆಗೂ ಮೀರಿ ಯಶಸ್ವಿಯಾಗುತ್ತದೆ ಎಂಬ ನಂಬಿಕೆ ಇದೆ ಎಂದು ಹೇಳಿದರು.

ಚಿತ್ರ ನಟಿ ಅನಿತಾ ಭಟ್ ರವರು ಸೆಪ್ಟೆಂಬರ್ 05 ರಂದು ನಡೆಯುವ ಮಹಿಳಾ ಮತ್ತು ಮಕ್ಕಳ ಹಕ್ಕುಗಳ ಬಗೆಗಿನ ಆನ್ ಲೈನ್ ಕ್ಯಾಂಪೇನ್ ಗೆ ಜೊತೆಯಾಗಿದ್ದಾರೆ.. ✊#IfWeDoNotRise#IfWeDoNotRiseKarnataka#ನಾವೆದ್ದು_ನಿಲ್ಲದಿದ್ದರೆ

Posted by Kavya Achuth on Tuesday, September 1, 2020

ಅಭಿಯಾನದ ಕುರಿತು ಜನಪರ ಸಾಹಿತಿ ಜನಾರ್ಧನ ಕೆಸರಗದ್ದೆಯವರು ಅಭಿಯಾನದ ಥೀಮ್ ಸಾಂಗ್ ಬರೆದಿದ್ದು ಎಲ್ಲೆಡೆ ವೈರಲ್ ಆಗಿದೆ.

ಒಟ್ಟಾರೆ, ಕೊರೊನಾ, ಲಾಕ್‌ಡೌನ್  ಮಧ್ಯೆ ಯಾವ ದೌರ್ಜನ್ಯಗಳು ನಿಂತಿಲ್ಲ. ಇನ್ನು ಅಂತಹ ಪ್ರಕರಣಗಳು ಹೆಚ್ಚಾಗುತ್ತಿವೆ ಹೀಗಾಗಿ ಅವುಗಳ ವಿರುದ್ಧದ ಪ್ರತಿಭಟನೆಗಳು, ಪ್ರತಿರೋಧ ಕೂಡ ನಿಲ್ಲಬಾರದು ಎಂಬುದು ಅಭಿಯಾನ ಸಂಯೋಜಕರ ಅಭಿಪ್ರಾಯವಾಗಿದೆ.


ಇದನ್ನೂ ಓದಿ: ಸತ್ಯವ ನುಡಿಯುವ ದಿಟ್ಟತೆಗೆ ಪ್ರತೀಕವಾದ ಗೌರಿ ಲಂಕೇಶ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....