Homeಕರ್ನಾಟಕಗೌರಿ ಲಂಕೇಶ್‌ ಹತ್ಯೆ ಆರೋಪಿಗಳಿಗೆ ಬಿಜೆಪಿ ಬೆಂಬಲಿತ ಸಂಘಟನೆಗಳಿಂದ ಸನ್ಮಾನ

ಗೌರಿ ಲಂಕೇಶ್‌ ಹತ್ಯೆ ಆರೋಪಿಗಳಿಗೆ ಬಿಜೆಪಿ ಬೆಂಬಲಿತ ಸಂಘಟನೆಗಳಿಂದ ಸನ್ಮಾನ

- Advertisement -
- Advertisement -

ಖ್ಯಾತ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಜಾಮೀನು ಪಡೆದು ಬಿಡುಗಡೆಯಾದ ಇಬ್ಬರು ಆರೋಪಿಗಳಿಗೆ ಬಿಜೆಪಿ ಬೆಂಬಲಿಗ ಸಂಘಟನೆಗಳು ಸನ್ಮಾನ ಮಾಡಿರುವ ಬಗ್ಗೆ ವರದಿಯಾಗಿದೆ. ಇಬ್ಬರು ಆರೋಪಿಗಳಿಗೆ ವಿಜಯಪುರ ಜಿಲ್ಲೆಯ ಸಂಘಪರಿವಾರ ಹಾಗೂ ಶ್ರೀರಾಮ ಸೇನೆಯ ಮುಖಂಡರು, ಕಾರ್ಯಕರ್ತರು ಸ್ವಾಗತ ಮಾಡಿದ್ದು ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿವೆ. ಗೌರಿ ಲಂಕೇಶ್‌ ಹತ್ಯೆ

ಜಾಮೀನು ಪಡೆದು ವಿಜಯಪುರಕ್ಕೆ ಆಗಮಿಸಿದ್ದ ಆರೋಪಿಗಳಾದ ಪರಶುರಾಮ ವಾಗ್ಮೋರೆ ಹಾಗೂ ಮನೋಹರ ಯಡವೆ ನಗರದ ಕಾಳಿಕಾ ದೇವಾಲಯದಲ್ಲಿ ಪೂಜೆ ಮಾಡಿಸಿದ್ದಾರೆ. ಪೂಜೆಯ ನಂತರ ಬಿಜೆಪಿ ಬೆಂಬಲಿಗ ಸಂಘಟನೆಗಳ ಕಾರ್ಯಕರ್ತರು ಅವರಿಗೆ ಶಾಲು ಹೊದಿಸಿ ಹಾರ ಹಾಕಿ ಸನ್ಮಾನಿಸಿದ್ದಾರೆ. ಬಳಿಕ ಶಿವಾಜಿ ವೃತ್ತಕ್ಕೆ ತೆರಳಿ ಶಿವಾಜಿ ಮೂರ್ತಿಗೆ ಆರೋಪಿಗಳು ಹಾರ ಹಾಕಿದ್ದಾರೆ ಎಂದು ವಾರ್ತಾಭಾರತಿ ವರದಿ ಮಾಡಿದೆ.

ಇದನ್ನೂಓದಿ: ಗೌರಿ ಲಂಕೇಶ್ ಹತ್ಯೆ ಆರೋಪಿಯನ್ನು ಭೇಟಿಯಾದ ಮಾಜಿ ಬಿಜೆಪಿ ಸಂಸದ ಪ್ರತಾಪ್ ಸಿಂಹ

2017ರಲ್ಲಿ ಬೆಂಗಳೂರಿನಲ್ಲಿ ನಡೆದ ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಬೆಂಗಳೂರು ಸೆಷನ್ಸ್ ಕೋರ್ಟ್ ಇಬ್ಬರು ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ಇತ್ತಿಚೆಗೆ ನೀಡಿದೆ. ಸುಮಾರು ಆರುವರೆ ವರ್ಷಗಳ ಬಳಿಕ ಅವರು ಜಾಮೀನು ಪಡೆದಿದ್ದರು. ಪ್ರಕರಣದಲ್ಲಿ ಒಟ್ಟು 25 ಜನ ಆರೋಪಿಗಳನ್ನು ಎಸ್‌ಐಟಿ ಬಂಧಿಸಿತ್ತು.

ವಿಜಯಪುರದ ಸಿಂದಗಿ ಪಟ್ಟಣದ ಬಸವನಗರ ನಿವಾಸಿ ಪರಶುರಾಮ್ ವಾಗ್ಮೋರೆ ಹಾಗೂ ಜಯಪುರ ತಾಲೂಕಿನ ರತ್ನಾಪೂರ ಗ್ರಾಮದ ಮನೋಹರ ಯಡವೆ ಎಂಬುವರನ್ನು ಪ್ರಕರಣದ ತನಿಖೆ ನಡೆಸುತ್ತಿದ್ದ ವಿಶೇಷ ತನಿಖಾ ತಂಡ(ಎಸ್‌ಐಟಿ) 2018ರಲ್ಲಿ ಬಂಧಿಸಿತ್ತು. ಬಿಡುಗಡೆಯಾದ ಇಬ್ಬರುಲ್ಲಿ ಪರಶುರಾಮ್ ವಾಗ್ಮೋರೆ ಗೌರಿ ಲಂಕೇಶ್ ಅವರಿಗೆ ಗುಂಡು ಹಾರಿಸಿ ಹತ್ಯೆ ಮಾಡಿದ್ದ ಎಂದು ಆರೋಪಿಸಲಾಗಿದೆ. ಗೌರಿ ಲಂಕೇಶ್‌ ಹತ್ಯೆ

ಹತ್ಯೆ ಪ್ರಕರಣದ ಒಟ್ಟು 25 ಜನ ಆರೋಪಿಗಳಲ್ಲಿ ಈ ವರೆಗೆ 18 ಜನ ಆರೋಪಿತರಿಗೆ ಜಾಮೀನು ದೊರಕಿದೆ. ಇನ್ನೂ 7ಮಂದಿ ಆರೋಪಿಗಳಿಗೂ ಜಾಮೀನು ಸಿಗಲಿದೆ ಎನ್ನಲಾಗಿದೆ.

ಇದನ್ನೂ ಓದಿ:ರೈತರ ಪಂಪ್ ಸೆಟ್ ಗಳಿಗೆ ಪ್ರಿ ಪೇಯ್ಡ್ ಮೀಟರ್ ಅಳವಡಿಸಲು ಬಿಜೆಪಿ ಸಂಚು ಹೂಡುತ್ತಿದೆ: ಟಿ.ಯಶವಂತ್ #farmlaws

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...