Homeಕರ್ನಾಟಕಗೌರಿ ಲಂಕೇಶ್‌ ಹತ್ಯೆ ಆರೋಪಿಗಳಿಗೆ ಬಿಜೆಪಿ ಬೆಂಬಲಿತ ಸಂಘಟನೆಗಳಿಂದ ಸನ್ಮಾನ

ಗೌರಿ ಲಂಕೇಶ್‌ ಹತ್ಯೆ ಆರೋಪಿಗಳಿಗೆ ಬಿಜೆಪಿ ಬೆಂಬಲಿತ ಸಂಘಟನೆಗಳಿಂದ ಸನ್ಮಾನ

- Advertisement -
- Advertisement -

ಖ್ಯಾತ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಜಾಮೀನು ಪಡೆದು ಬಿಡುಗಡೆಯಾದ ಇಬ್ಬರು ಆರೋಪಿಗಳಿಗೆ ಬಿಜೆಪಿ ಬೆಂಬಲಿಗ ಸಂಘಟನೆಗಳು ಸನ್ಮಾನ ಮಾಡಿರುವ ಬಗ್ಗೆ ವರದಿಯಾಗಿದೆ. ಇಬ್ಬರು ಆರೋಪಿಗಳಿಗೆ ವಿಜಯಪುರ ಜಿಲ್ಲೆಯ ಸಂಘಪರಿವಾರ ಹಾಗೂ ಶ್ರೀರಾಮ ಸೇನೆಯ ಮುಖಂಡರು, ಕಾರ್ಯಕರ್ತರು ಸ್ವಾಗತ ಮಾಡಿದ್ದು ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿವೆ. ಗೌರಿ ಲಂಕೇಶ್‌ ಹತ್ಯೆ

ಜಾಮೀನು ಪಡೆದು ವಿಜಯಪುರಕ್ಕೆ ಆಗಮಿಸಿದ್ದ ಆರೋಪಿಗಳಾದ ಪರಶುರಾಮ ವಾಗ್ಮೋರೆ ಹಾಗೂ ಮನೋಹರ ಯಡವೆ ನಗರದ ಕಾಳಿಕಾ ದೇವಾಲಯದಲ್ಲಿ ಪೂಜೆ ಮಾಡಿಸಿದ್ದಾರೆ. ಪೂಜೆಯ ನಂತರ ಬಿಜೆಪಿ ಬೆಂಬಲಿಗ ಸಂಘಟನೆಗಳ ಕಾರ್ಯಕರ್ತರು ಅವರಿಗೆ ಶಾಲು ಹೊದಿಸಿ ಹಾರ ಹಾಕಿ ಸನ್ಮಾನಿಸಿದ್ದಾರೆ. ಬಳಿಕ ಶಿವಾಜಿ ವೃತ್ತಕ್ಕೆ ತೆರಳಿ ಶಿವಾಜಿ ಮೂರ್ತಿಗೆ ಆರೋಪಿಗಳು ಹಾರ ಹಾಕಿದ್ದಾರೆ ಎಂದು ವಾರ್ತಾಭಾರತಿ ವರದಿ ಮಾಡಿದೆ.

ಇದನ್ನೂಓದಿ: ಗೌರಿ ಲಂಕೇಶ್ ಹತ್ಯೆ ಆರೋಪಿಯನ್ನು ಭೇಟಿಯಾದ ಮಾಜಿ ಬಿಜೆಪಿ ಸಂಸದ ಪ್ರತಾಪ್ ಸಿಂಹ

2017ರಲ್ಲಿ ಬೆಂಗಳೂರಿನಲ್ಲಿ ನಡೆದ ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಬೆಂಗಳೂರು ಸೆಷನ್ಸ್ ಕೋರ್ಟ್ ಇಬ್ಬರು ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ಇತ್ತಿಚೆಗೆ ನೀಡಿದೆ. ಸುಮಾರು ಆರುವರೆ ವರ್ಷಗಳ ಬಳಿಕ ಅವರು ಜಾಮೀನು ಪಡೆದಿದ್ದರು. ಪ್ರಕರಣದಲ್ಲಿ ಒಟ್ಟು 25 ಜನ ಆರೋಪಿಗಳನ್ನು ಎಸ್‌ಐಟಿ ಬಂಧಿಸಿತ್ತು.

ವಿಜಯಪುರದ ಸಿಂದಗಿ ಪಟ್ಟಣದ ಬಸವನಗರ ನಿವಾಸಿ ಪರಶುರಾಮ್ ವಾಗ್ಮೋರೆ ಹಾಗೂ ಜಯಪುರ ತಾಲೂಕಿನ ರತ್ನಾಪೂರ ಗ್ರಾಮದ ಮನೋಹರ ಯಡವೆ ಎಂಬುವರನ್ನು ಪ್ರಕರಣದ ತನಿಖೆ ನಡೆಸುತ್ತಿದ್ದ ವಿಶೇಷ ತನಿಖಾ ತಂಡ(ಎಸ್‌ಐಟಿ) 2018ರಲ್ಲಿ ಬಂಧಿಸಿತ್ತು. ಬಿಡುಗಡೆಯಾದ ಇಬ್ಬರುಲ್ಲಿ ಪರಶುರಾಮ್ ವಾಗ್ಮೋರೆ ಗೌರಿ ಲಂಕೇಶ್ ಅವರಿಗೆ ಗುಂಡು ಹಾರಿಸಿ ಹತ್ಯೆ ಮಾಡಿದ್ದ ಎಂದು ಆರೋಪಿಸಲಾಗಿದೆ. ಗೌರಿ ಲಂಕೇಶ್‌ ಹತ್ಯೆ

ಹತ್ಯೆ ಪ್ರಕರಣದ ಒಟ್ಟು 25 ಜನ ಆರೋಪಿಗಳಲ್ಲಿ ಈ ವರೆಗೆ 18 ಜನ ಆರೋಪಿತರಿಗೆ ಜಾಮೀನು ದೊರಕಿದೆ. ಇನ್ನೂ 7ಮಂದಿ ಆರೋಪಿಗಳಿಗೂ ಜಾಮೀನು ಸಿಗಲಿದೆ ಎನ್ನಲಾಗಿದೆ.

ಇದನ್ನೂ ಓದಿ:ರೈತರ ಪಂಪ್ ಸೆಟ್ ಗಳಿಗೆ ಪ್ರಿ ಪೇಯ್ಡ್ ಮೀಟರ್ ಅಳವಡಿಸಲು ಬಿಜೆಪಿ ಸಂಚು ಹೂಡುತ್ತಿದೆ: ಟಿ.ಯಶವಂತ್ #farmlaws

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...