Homeಕರ್ನಾಟಕಗೌರಿ ಲಂಕೇಶ್‌ ಹತ್ಯೆಯ ಪ್ರಮುಖ ಆರೋಪಿ ಜಾರ್ಖಂಡ್‌ನಲ್ಲಿ ಎಸ್‌ಐಟಿಯ ಬಲೆಗೆ...

ಗೌರಿ ಲಂಕೇಶ್‌ ಹತ್ಯೆಯ ಪ್ರಮುಖ ಆರೋಪಿ ಜಾರ್ಖಂಡ್‌ನಲ್ಲಿ ಎಸ್‌ಐಟಿಯ ಬಲೆಗೆ…

- Advertisement -
- Advertisement -

ಗೌರಿ ಲಂಕೇಶ್ ಮತ್ತು ಎಂ.ಎಂ ಕಲ್ಬುರ್ಗಿ ಅವರ ಹತ್ಯೆಗಳ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ದಳವು (ಎಸ್‌ಐಟಿ) ಗೌರಿ ಲಂಕೇಶ್ ಕೊಲೆ ಪ್ರಕರಣದಲ್ಲಿ ಪರಾರಿಯಾಗಿದ್ದ ಇಬ್ಬರು ಪ್ರಮುಖ ಆರೋಪಿಗಳಲ್ಲಿ ಒಬ್ಬರಾದ ರುಶಿಕೇಶ್ ದಿಯೋಡಿಕರ್‌ನನ್ನು ಗುರುವಾರ ಬಂಧಿಸಿದೆ.

ಇಬ್ಬರು ಆರೋಪಿಗಳಿಗಾಗಿ ಹುಡುಕುತ್ತಿದ್ದ ಎಸ್‌ಐಟಿ, 2019 ರ ಡಿಸೆಂಬರ್‌ನಲ್ಲಿ ರುಶಿಕೇಶ ದಿಯೋಡಿಕರ್‌ನ ಜಾಡು ಹಿಡಿದು ಕೊನೆಗೂ ಗುರುವಾರ ಬಂಧಿಸಲಾಯಿತು. ಜಾರ್ಖಂಡ್‌ನ ಧನ್‌ಬಾದ್ ಬಳಿಯ ಸಣ್ಣ ಪಟ್ಟಣವಾದ ಕಟ್ರಾಸ್‌‌ನಲ್ಲಿ ರುಶಿಕೇಶ್ ತಲೆಮರೆಸಿಕೊಂಡು ಪುಸ್ತಕದಂಗಡಿಯಲ್ಲಿ ಕೆಲಸ ಮಾಡುತ್ತಿದ್ದ.

ಮಹಾರಾಷ್ಟ್ರದ ಔರಂಗಾಬಾದ್ ಜಿಲ್ಲೆಯ 44 ವರ್ಷದ ರುಶಿಕೇಶ್ ದಿಯೋಡಿಕರ್, ಮುರಳಿ ಮತ್ತು ಶಿವ ಎಂಬ ಹೆಸರಿನಿಂದ ತಪ್ಪಿಸಿಕೊಂಡಿದ್ದ. 2013 ಮತ್ತು 2017 ರ ನಡುವೆ ಹತ್ಯೆಯಾದ ಡಾ. ನರೇಂದ್ರ ದಾಬೋಲ್ಕರ್, ಗೋವಿಂದ್ ಪನ್ಸರೆ, ಎಂಎಂ ಕಲ್ಬುರ್ಗಿ ಮತ್ತು ಗೌರಿ ಲಂಕೇಶ್ ಅವರ ಕೇಸುಗಳಲ್ಲಿ ಈತನದು ಪ್ರಧಾನ ಪಾತ್ರವಿತ್ತು.

ಗೌರಿ ಲಂಕೇಶ್ ಕೊಲೆ ಪ್ರಕರಣದ ಚಾರ್ಜ್‌ಶೀಟ್‌ನಲ್ಲಿ ಆತನ ಪಾತ್ರದ ಬಗ್ಗೆ ಹಲವಾರು ಉಲ್ಲೇಖಗಳಿವೆ. ಈ ಪ್ರಕರಣದ ಬಹು ಪ್ರಮುಖ ಆರೋಪಿಗಳಾದ ಶರದ್ ಕಲಾಸ್ಕರ್, ವಾಸುದೇವ್ ಸೂರ್ಯವಂಶಿ, ಕರ್ನಾಟಕದ ಗ್ಯಾಂಗ್‌ಗೆ ನೇಮಕಾತಿಯಾದ ಸುಜಿತ್ ಕುಮಾರ್ ಮತ್ತು ಮನೋಹರ್ ಎಡಾವ್‌ಗೆ ದಿಯೋಡಿಕರ್ ಸೈದ್ಧಾಂತಿಕ ಪ್ರೇರಕನಾಗಿದ್ದ ಮತ್ತು ನೇಮಕಾತಿ ಮಾಡಿದ್ದ ಎಂದು ತಿಳಿದುಬಂದಿದೆ.

ವಿಚಾರವಾದಿಗಳನ್ನು ಕೊಲ್ಲುವ ಗ್ಯಾಂಗ್‌ನಲ್ಲಿ ಡಾ. ವೀರೇಂದ್ರ ತಾವ್ಡೆ ಮತ್ತು ಅಮೋಲ್ ಕೇಲ್ ನಂತರದ ಸ್ಥಾನದಲ್ಲಿ ದಿಯೋಡಿಕರ್‌ ಇದ್ದ. ಈತ ನಾಲ್ಕು ಕೊಲೆಗಳ ಪಿತೂರಿ ಮತ್ತು ಮರಣಕ್ಕೆ ಕಾರಣವಾದವ. ಈ ಕೇಸುಗಳಲ್ಲಿ ಅಷ್ಟೆಲ್ಲಾ ಬಂಧನಗಳ ನಂತರವೂ ಸಹ ಗ್ಯಾಂಗ್ ಅನ್ನು ಮರುರೂಪಿಸಲು ಮತ್ತು  ವಿಚಾರವಾದಿಗಳನ್ನು ಕೊಲ್ಲುವ ಗುರಿಯನ್ನು ಮುಂದುವರೆಸುವ ಸಾಮರ್ಥ್ಯವನ್ನು ಈತ ಹೊಂದಿದ್ದರಿಂದ ದಿಯೋಡಿಕರ್ ಬಂಧನ ಬಹಳ ಮುಖ್ಯದ್ದಾಗಿದೆ ಎಂದು ಎಂದು ಎಸ್‌ಐಟಿಯ ಹಿರಿಯ ಅಧಿಕಾರಿಯೊಬ್ಬರು ದಿ ಹಿಂದೂ ಪತ್ರಿಕೆಗೆ ತಿಳಿಸಿದ್ದಾರೆ.

ರುಶಿಕೇಶ ದಿಯೋಡಿಕರ್‌ನನ್ನು ಜಾರ್ಖಂಡ್‌ನ ಕತ್ರಾಸ್‌ನ ಸ್ಥಳೀಯ ನ್ಯಾಯಾಲಯದಲ್ಲಿ ಶುಕ್ರವಾರ ಹಾಜರುಪಡಿಸಲಾಗುವುದು ಮತ್ತು ಸಾರಿಗೆ ವಾರಂಟ್‌ನಲ್ಲಿ ಶನಿವಾರದೊಳಗೆ ಬೆಂಗಳೂರಿಗೆ ಕರೆತರಲಾಗುವುದು. ಶನಿವಾರ ನಗರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಎಸ್‌ಐಟಿ ಅಧಿಕಾರಿಗಳು ತಿಳಿಸಿದ್ದಾರೆ.

ಡಿಯೋಡಿಕರ್ ಬಂಧನದೊಂದಿಗೆ, ಎಸ್‌ಐಟಿಯ ಮುಂದಿನ ಬೇಟೆ ವಿಕಾಸ್ ಪಾಟೀಲ್ ಅಲಿಯಾಸ್ ನಿಹಾಲ್ ಅಲಿಯಾಸ್ ದಾದಾ ಆಗಿದ್ದು ಆತ ಇನ್ನೊಬ್ಬ ಪ್ರಮುಖ ಆರೋಪಿಯಾಗಿದ್ದರೂ ಇನ್ನೂ ಸಿಕ್ಕಿಲ್ಲ.

ಇದನ್ನೂ ಓದಿ: ಗೌರಿ ಲಂಕೇಶ್ ಹತ್ಯೆ ಪ್ರಕರಣವನ್ನು ಕರ್ನಾಟಕ ವಿಶೇಷ ತನಿಖಾ ದಳ (SIT) ಭೇದಿಸಿದ್ದಾದರೂ ಹೇಗೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...