Homeಕರ್ನಾಟಕಗೌರಿ ಲಂಕೇಶ್‌ ಹತ್ಯೆಯ ಪ್ರಮುಖ ಆರೋಪಿ ಜಾರ್ಖಂಡ್‌ನಲ್ಲಿ ಎಸ್‌ಐಟಿಯ ಬಲೆಗೆ...

ಗೌರಿ ಲಂಕೇಶ್‌ ಹತ್ಯೆಯ ಪ್ರಮುಖ ಆರೋಪಿ ಜಾರ್ಖಂಡ್‌ನಲ್ಲಿ ಎಸ್‌ಐಟಿಯ ಬಲೆಗೆ…

- Advertisement -
- Advertisement -

ಗೌರಿ ಲಂಕೇಶ್ ಮತ್ತು ಎಂ.ಎಂ ಕಲ್ಬುರ್ಗಿ ಅವರ ಹತ್ಯೆಗಳ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ದಳವು (ಎಸ್‌ಐಟಿ) ಗೌರಿ ಲಂಕೇಶ್ ಕೊಲೆ ಪ್ರಕರಣದಲ್ಲಿ ಪರಾರಿಯಾಗಿದ್ದ ಇಬ್ಬರು ಪ್ರಮುಖ ಆರೋಪಿಗಳಲ್ಲಿ ಒಬ್ಬರಾದ ರುಶಿಕೇಶ್ ದಿಯೋಡಿಕರ್‌ನನ್ನು ಗುರುವಾರ ಬಂಧಿಸಿದೆ.

ಇಬ್ಬರು ಆರೋಪಿಗಳಿಗಾಗಿ ಹುಡುಕುತ್ತಿದ್ದ ಎಸ್‌ಐಟಿ, 2019 ರ ಡಿಸೆಂಬರ್‌ನಲ್ಲಿ ರುಶಿಕೇಶ ದಿಯೋಡಿಕರ್‌ನ ಜಾಡು ಹಿಡಿದು ಕೊನೆಗೂ ಗುರುವಾರ ಬಂಧಿಸಲಾಯಿತು. ಜಾರ್ಖಂಡ್‌ನ ಧನ್‌ಬಾದ್ ಬಳಿಯ ಸಣ್ಣ ಪಟ್ಟಣವಾದ ಕಟ್ರಾಸ್‌‌ನಲ್ಲಿ ರುಶಿಕೇಶ್ ತಲೆಮರೆಸಿಕೊಂಡು ಪುಸ್ತಕದಂಗಡಿಯಲ್ಲಿ ಕೆಲಸ ಮಾಡುತ್ತಿದ್ದ.

ಮಹಾರಾಷ್ಟ್ರದ ಔರಂಗಾಬಾದ್ ಜಿಲ್ಲೆಯ 44 ವರ್ಷದ ರುಶಿಕೇಶ್ ದಿಯೋಡಿಕರ್, ಮುರಳಿ ಮತ್ತು ಶಿವ ಎಂಬ ಹೆಸರಿನಿಂದ ತಪ್ಪಿಸಿಕೊಂಡಿದ್ದ. 2013 ಮತ್ತು 2017 ರ ನಡುವೆ ಹತ್ಯೆಯಾದ ಡಾ. ನರೇಂದ್ರ ದಾಬೋಲ್ಕರ್, ಗೋವಿಂದ್ ಪನ್ಸರೆ, ಎಂಎಂ ಕಲ್ಬುರ್ಗಿ ಮತ್ತು ಗೌರಿ ಲಂಕೇಶ್ ಅವರ ಕೇಸುಗಳಲ್ಲಿ ಈತನದು ಪ್ರಧಾನ ಪಾತ್ರವಿತ್ತು.

ಗೌರಿ ಲಂಕೇಶ್ ಕೊಲೆ ಪ್ರಕರಣದ ಚಾರ್ಜ್‌ಶೀಟ್‌ನಲ್ಲಿ ಆತನ ಪಾತ್ರದ ಬಗ್ಗೆ ಹಲವಾರು ಉಲ್ಲೇಖಗಳಿವೆ. ಈ ಪ್ರಕರಣದ ಬಹು ಪ್ರಮುಖ ಆರೋಪಿಗಳಾದ ಶರದ್ ಕಲಾಸ್ಕರ್, ವಾಸುದೇವ್ ಸೂರ್ಯವಂಶಿ, ಕರ್ನಾಟಕದ ಗ್ಯಾಂಗ್‌ಗೆ ನೇಮಕಾತಿಯಾದ ಸುಜಿತ್ ಕುಮಾರ್ ಮತ್ತು ಮನೋಹರ್ ಎಡಾವ್‌ಗೆ ದಿಯೋಡಿಕರ್ ಸೈದ್ಧಾಂತಿಕ ಪ್ರೇರಕನಾಗಿದ್ದ ಮತ್ತು ನೇಮಕಾತಿ ಮಾಡಿದ್ದ ಎಂದು ತಿಳಿದುಬಂದಿದೆ.

ವಿಚಾರವಾದಿಗಳನ್ನು ಕೊಲ್ಲುವ ಗ್ಯಾಂಗ್‌ನಲ್ಲಿ ಡಾ. ವೀರೇಂದ್ರ ತಾವ್ಡೆ ಮತ್ತು ಅಮೋಲ್ ಕೇಲ್ ನಂತರದ ಸ್ಥಾನದಲ್ಲಿ ದಿಯೋಡಿಕರ್‌ ಇದ್ದ. ಈತ ನಾಲ್ಕು ಕೊಲೆಗಳ ಪಿತೂರಿ ಮತ್ತು ಮರಣಕ್ಕೆ ಕಾರಣವಾದವ. ಈ ಕೇಸುಗಳಲ್ಲಿ ಅಷ್ಟೆಲ್ಲಾ ಬಂಧನಗಳ ನಂತರವೂ ಸಹ ಗ್ಯಾಂಗ್ ಅನ್ನು ಮರುರೂಪಿಸಲು ಮತ್ತು  ವಿಚಾರವಾದಿಗಳನ್ನು ಕೊಲ್ಲುವ ಗುರಿಯನ್ನು ಮುಂದುವರೆಸುವ ಸಾಮರ್ಥ್ಯವನ್ನು ಈತ ಹೊಂದಿದ್ದರಿಂದ ದಿಯೋಡಿಕರ್ ಬಂಧನ ಬಹಳ ಮುಖ್ಯದ್ದಾಗಿದೆ ಎಂದು ಎಂದು ಎಸ್‌ಐಟಿಯ ಹಿರಿಯ ಅಧಿಕಾರಿಯೊಬ್ಬರು ದಿ ಹಿಂದೂ ಪತ್ರಿಕೆಗೆ ತಿಳಿಸಿದ್ದಾರೆ.

ರುಶಿಕೇಶ ದಿಯೋಡಿಕರ್‌ನನ್ನು ಜಾರ್ಖಂಡ್‌ನ ಕತ್ರಾಸ್‌ನ ಸ್ಥಳೀಯ ನ್ಯಾಯಾಲಯದಲ್ಲಿ ಶುಕ್ರವಾರ ಹಾಜರುಪಡಿಸಲಾಗುವುದು ಮತ್ತು ಸಾರಿಗೆ ವಾರಂಟ್‌ನಲ್ಲಿ ಶನಿವಾರದೊಳಗೆ ಬೆಂಗಳೂರಿಗೆ ಕರೆತರಲಾಗುವುದು. ಶನಿವಾರ ನಗರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಎಸ್‌ಐಟಿ ಅಧಿಕಾರಿಗಳು ತಿಳಿಸಿದ್ದಾರೆ.

ಡಿಯೋಡಿಕರ್ ಬಂಧನದೊಂದಿಗೆ, ಎಸ್‌ಐಟಿಯ ಮುಂದಿನ ಬೇಟೆ ವಿಕಾಸ್ ಪಾಟೀಲ್ ಅಲಿಯಾಸ್ ನಿಹಾಲ್ ಅಲಿಯಾಸ್ ದಾದಾ ಆಗಿದ್ದು ಆತ ಇನ್ನೊಬ್ಬ ಪ್ರಮುಖ ಆರೋಪಿಯಾಗಿದ್ದರೂ ಇನ್ನೂ ಸಿಕ್ಕಿಲ್ಲ.

ಇದನ್ನೂ ಓದಿ: ಗೌರಿ ಲಂಕೇಶ್ ಹತ್ಯೆ ಪ್ರಕರಣವನ್ನು ಕರ್ನಾಟಕ ವಿಶೇಷ ತನಿಖಾ ದಳ (SIT) ಭೇದಿಸಿದ್ದಾದರೂ ಹೇಗೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...