Homeಕರ್ನಾಟಕಗೌರಿ ಲಂಕೇಶ್‌ ಹತ್ಯೆಯ ಪ್ರಮುಖ ಆರೋಪಿ ಜಾರ್ಖಂಡ್‌ನಲ್ಲಿ ಎಸ್‌ಐಟಿಯ ಬಲೆಗೆ...

ಗೌರಿ ಲಂಕೇಶ್‌ ಹತ್ಯೆಯ ಪ್ರಮುಖ ಆರೋಪಿ ಜಾರ್ಖಂಡ್‌ನಲ್ಲಿ ಎಸ್‌ಐಟಿಯ ಬಲೆಗೆ…

- Advertisement -
- Advertisement -

ಗೌರಿ ಲಂಕೇಶ್ ಮತ್ತು ಎಂ.ಎಂ ಕಲ್ಬುರ್ಗಿ ಅವರ ಹತ್ಯೆಗಳ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ದಳವು (ಎಸ್‌ಐಟಿ) ಗೌರಿ ಲಂಕೇಶ್ ಕೊಲೆ ಪ್ರಕರಣದಲ್ಲಿ ಪರಾರಿಯಾಗಿದ್ದ ಇಬ್ಬರು ಪ್ರಮುಖ ಆರೋಪಿಗಳಲ್ಲಿ ಒಬ್ಬರಾದ ರುಶಿಕೇಶ್ ದಿಯೋಡಿಕರ್‌ನನ್ನು ಗುರುವಾರ ಬಂಧಿಸಿದೆ.

ಇಬ್ಬರು ಆರೋಪಿಗಳಿಗಾಗಿ ಹುಡುಕುತ್ತಿದ್ದ ಎಸ್‌ಐಟಿ, 2019 ರ ಡಿಸೆಂಬರ್‌ನಲ್ಲಿ ರುಶಿಕೇಶ ದಿಯೋಡಿಕರ್‌ನ ಜಾಡು ಹಿಡಿದು ಕೊನೆಗೂ ಗುರುವಾರ ಬಂಧಿಸಲಾಯಿತು. ಜಾರ್ಖಂಡ್‌ನ ಧನ್‌ಬಾದ್ ಬಳಿಯ ಸಣ್ಣ ಪಟ್ಟಣವಾದ ಕಟ್ರಾಸ್‌‌ನಲ್ಲಿ ರುಶಿಕೇಶ್ ತಲೆಮರೆಸಿಕೊಂಡು ಪುಸ್ತಕದಂಗಡಿಯಲ್ಲಿ ಕೆಲಸ ಮಾಡುತ್ತಿದ್ದ.

ಮಹಾರಾಷ್ಟ್ರದ ಔರಂಗಾಬಾದ್ ಜಿಲ್ಲೆಯ 44 ವರ್ಷದ ರುಶಿಕೇಶ್ ದಿಯೋಡಿಕರ್, ಮುರಳಿ ಮತ್ತು ಶಿವ ಎಂಬ ಹೆಸರಿನಿಂದ ತಪ್ಪಿಸಿಕೊಂಡಿದ್ದ. 2013 ಮತ್ತು 2017 ರ ನಡುವೆ ಹತ್ಯೆಯಾದ ಡಾ. ನರೇಂದ್ರ ದಾಬೋಲ್ಕರ್, ಗೋವಿಂದ್ ಪನ್ಸರೆ, ಎಂಎಂ ಕಲ್ಬುರ್ಗಿ ಮತ್ತು ಗೌರಿ ಲಂಕೇಶ್ ಅವರ ಕೇಸುಗಳಲ್ಲಿ ಈತನದು ಪ್ರಧಾನ ಪಾತ್ರವಿತ್ತು.

ಗೌರಿ ಲಂಕೇಶ್ ಕೊಲೆ ಪ್ರಕರಣದ ಚಾರ್ಜ್‌ಶೀಟ್‌ನಲ್ಲಿ ಆತನ ಪಾತ್ರದ ಬಗ್ಗೆ ಹಲವಾರು ಉಲ್ಲೇಖಗಳಿವೆ. ಈ ಪ್ರಕರಣದ ಬಹು ಪ್ರಮುಖ ಆರೋಪಿಗಳಾದ ಶರದ್ ಕಲಾಸ್ಕರ್, ವಾಸುದೇವ್ ಸೂರ್ಯವಂಶಿ, ಕರ್ನಾಟಕದ ಗ್ಯಾಂಗ್‌ಗೆ ನೇಮಕಾತಿಯಾದ ಸುಜಿತ್ ಕುಮಾರ್ ಮತ್ತು ಮನೋಹರ್ ಎಡಾವ್‌ಗೆ ದಿಯೋಡಿಕರ್ ಸೈದ್ಧಾಂತಿಕ ಪ್ರೇರಕನಾಗಿದ್ದ ಮತ್ತು ನೇಮಕಾತಿ ಮಾಡಿದ್ದ ಎಂದು ತಿಳಿದುಬಂದಿದೆ.

ವಿಚಾರವಾದಿಗಳನ್ನು ಕೊಲ್ಲುವ ಗ್ಯಾಂಗ್‌ನಲ್ಲಿ ಡಾ. ವೀರೇಂದ್ರ ತಾವ್ಡೆ ಮತ್ತು ಅಮೋಲ್ ಕೇಲ್ ನಂತರದ ಸ್ಥಾನದಲ್ಲಿ ದಿಯೋಡಿಕರ್‌ ಇದ್ದ. ಈತ ನಾಲ್ಕು ಕೊಲೆಗಳ ಪಿತೂರಿ ಮತ್ತು ಮರಣಕ್ಕೆ ಕಾರಣವಾದವ. ಈ ಕೇಸುಗಳಲ್ಲಿ ಅಷ್ಟೆಲ್ಲಾ ಬಂಧನಗಳ ನಂತರವೂ ಸಹ ಗ್ಯಾಂಗ್ ಅನ್ನು ಮರುರೂಪಿಸಲು ಮತ್ತು  ವಿಚಾರವಾದಿಗಳನ್ನು ಕೊಲ್ಲುವ ಗುರಿಯನ್ನು ಮುಂದುವರೆಸುವ ಸಾಮರ್ಥ್ಯವನ್ನು ಈತ ಹೊಂದಿದ್ದರಿಂದ ದಿಯೋಡಿಕರ್ ಬಂಧನ ಬಹಳ ಮುಖ್ಯದ್ದಾಗಿದೆ ಎಂದು ಎಂದು ಎಸ್‌ಐಟಿಯ ಹಿರಿಯ ಅಧಿಕಾರಿಯೊಬ್ಬರು ದಿ ಹಿಂದೂ ಪತ್ರಿಕೆಗೆ ತಿಳಿಸಿದ್ದಾರೆ.

ರುಶಿಕೇಶ ದಿಯೋಡಿಕರ್‌ನನ್ನು ಜಾರ್ಖಂಡ್‌ನ ಕತ್ರಾಸ್‌ನ ಸ್ಥಳೀಯ ನ್ಯಾಯಾಲಯದಲ್ಲಿ ಶುಕ್ರವಾರ ಹಾಜರುಪಡಿಸಲಾಗುವುದು ಮತ್ತು ಸಾರಿಗೆ ವಾರಂಟ್‌ನಲ್ಲಿ ಶನಿವಾರದೊಳಗೆ ಬೆಂಗಳೂರಿಗೆ ಕರೆತರಲಾಗುವುದು. ಶನಿವಾರ ನಗರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಎಸ್‌ಐಟಿ ಅಧಿಕಾರಿಗಳು ತಿಳಿಸಿದ್ದಾರೆ.

ಡಿಯೋಡಿಕರ್ ಬಂಧನದೊಂದಿಗೆ, ಎಸ್‌ಐಟಿಯ ಮುಂದಿನ ಬೇಟೆ ವಿಕಾಸ್ ಪಾಟೀಲ್ ಅಲಿಯಾಸ್ ನಿಹಾಲ್ ಅಲಿಯಾಸ್ ದಾದಾ ಆಗಿದ್ದು ಆತ ಇನ್ನೊಬ್ಬ ಪ್ರಮುಖ ಆರೋಪಿಯಾಗಿದ್ದರೂ ಇನ್ನೂ ಸಿಕ್ಕಿಲ್ಲ.

ಇದನ್ನೂ ಓದಿ: ಗೌರಿ ಲಂಕೇಶ್ ಹತ್ಯೆ ಪ್ರಕರಣವನ್ನು ಕರ್ನಾಟಕ ವಿಶೇಷ ತನಿಖಾ ದಳ (SIT) ಭೇದಿಸಿದ್ದಾದರೂ ಹೇಗೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...