Homeಕರ್ನಾಟಕಗೌರಿ ಲಂಕೇಶ್ ಹತ್ಯೆ ಪ್ರಕರಣ | ಬಂಧಿತ ಎಲ್ಲಾ ಆರೋಪಿಗಳಿಗೆ ಜಾಮೀನು

ಗೌರಿ ಲಂಕೇಶ್ ಹತ್ಯೆ ಪ್ರಕರಣ | ಬಂಧಿತ ಎಲ್ಲಾ ಆರೋಪಿಗಳಿಗೆ ಜಾಮೀನು

- Advertisement -
- Advertisement -

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಮತ್ತೊಬ್ಬ ಆರೋಪಿಗೆ ಬುಧವಾರ (ಜ.8) ಬೆಂಗಳೂರಿನ ನ್ಯಾಯಾಲಯ ಜಾಮೀನು ನೀಡಿದೆ. ಈ ಮೂಲಕ ಪ್ರಕರಣದಲ್ಲಿ ಬಂಧಿತರಾಗಿದ್ದ ಎಲ್ಲಾ ಆರೋಪಿಗಳಿಗೆ ಜಾಮೀನು ದೊರೆತಂತಾಗಿದೆ.

ಬೆಂಗಳೂರಿನ ಪ್ರಧಾನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಧೀಶ ಮುರಳೀಧರ ಪೈ ಬಿ ಅವರು ಆರೋಪಿ ಶರದ್ ಬಾಹು ಸಾಹೇಬ್ ಕಲಾಸ್ಕರ್ ಅವರಿಗೆ ಜಾಮೀನು ಮಂಜೂರು ಮಾಡಿದ್ದಾರೆ.

ಸೆಪ್ಟೆಂಬರ್ 2018ರಿಂದ ಈತ ಬಂಧನದಲ್ಲಿದ್ದು, ವಿಚಾರಣೆ ಶೀಘ್ರದಲ್ಲೇ ಮುಕ್ತಾಯಗೊಳ್ಳುವ ಸಾಧ್ಯತೆಯಿಲ್ಲ ಎಂಬುವುದನ್ನು ಗಮನಿಸಿದ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ ಎಂದು ತಿಳಿದು ಬಂದಿದೆ.

ಕಲಾಸ್ಕರ್‌ಗೆ ನ್ಯಾಯಾಲಯ ಜಾಮೀನು ನೀಡಿದ ಹಿನ್ನೆಲೆ, ಪ್ರಕರಣದಲ್ಲಿ ಬಂಧಿತರಾಗಿದ್ದ ಎಲ್ಲಾ 17 ಆರೋಪಿಗಳು ಜಾಮೀನು ಪಡೆದಂತಾಗಿದೆ. ಈ ಪ್ರಕರಣದಲ್ಲಿ ಒಟ್ಟು 18 ಆರೋಪಿಗಳನ್ನು ಗುರುತಿಸಲಾಗಿದ್ದು, 17 ಮಂದಿಯನ್ನು ಬಂಧಿಸಲಾಗಿತ್ತು. ಇನ್ನೋರ್ವ ಆರೋಪಿ ವಿಕಾಸ್ ಪಾಟೀಲ್ ಎಂಬಾತ ತಲೆಮರೆಸಿಕೊಂಡಿದ್ದು, ಇನ್ನೂ ಬಂಧನವಾಗಿಲ್ಲ.

ಆರೋಪಿ ಕಲಾಸ್ಕರ್ ತಾನು ನಿರಪರಾಧಿ, ಪ್ರಕರಣಕ್ಕೂ ನನಗೂ ಯಾವುದೇ ಸಂಬಂಧವಿಲ್ಲ ಎಂದು ಹೇಳಿಕೊಂಡು ಜಾಮೀನು ಕೋರಿದ್ದರು. ಪ್ರಕರಣದಲ್ಲಿ ತನ್ನ ಸಹ ಆರೋಪಿಗಳಲ್ಲಿ ಹೆಚ್ಚಿನವರಿಗೆ ಈಗಾಗಲೇ ಜಾಮೀನು ನೀಡಲಾಗಿದೆ ಎಂದು ಹೇಳಿದ್ದರು. ಸಮಾನತೆಯ ಆಧಾರದ ಮೇಲೆ ಜಾಮೀನು ನೀಡುವಂತೆ ಮನವಿ ಮಾಡಿದ್ದರು.

ಕಲಾಸ್ಕರ್‌ ಜಾಮೀನು ಅರ್ಜಿಗೆ ಪ್ರಾಸಿಕ್ಯೂಷನ್ ವಿರೋಧ ವ್ಯಕ್ತಪಡಿಸಿತ್ತು. ಈತ ಪುನರಾವರ್ತಿತ ಅಪರಾಧಿಯಾಗಿದ್ದು, ಮತ್ತೊಂದು ಕ್ರಿಮಿನಲ್ ಪ್ರಕರಣದಲ್ಲಿ ಶಿಕ್ಷೆಯನ್ನು ಎದುರಿಸಿದ್ದಾರೆ. ಜಾಮೀನಿನ ಮೇಲೆ ಬಿಡುಗಡೆಯಾದರೆ, ಇನ್ನೊಂದು ಅಪರಾಧ ಮಾಡುವ ಸಾಧ್ಯತೆಯಿದೆ ಎಂದು ವಾದಿಸಿತ್ತು.

ಆದಾಗ್ಯೂ, ನ್ಯಾಯಾಲಯವು ಕಲಾಸ್ಕರ್‌ ಅವರಿಗೆ ಸಮಾನತೆಯ ಆಧಾರದ ಮೇಲೆ ಜಾಮೀನು ಪಡೆಯಲು ಅರ್ಹತೆ ಇದೆ ಎಂದು ತೀರ್ಪು ನೀಡಿದೆ.

ಸಂವಿಧಾನದ ವಿಧಿ 21ರ ಅಡಿ ಸ್ವತಂತ್ರ ಬದುಕು ಮೂಲಭೂತ ಹಕ್ಕು. ಪ್ರಕರಣದ ವಿಚಾರಣೆ ಬಾಕಿ ಇರುವಾಗ ಮತ್ತು ಅದು ಶೀಘ್ರ ಮುಕ್ತಾಯಗೊಳ್ಳುವ ಸಾಧ್ಯತೆ ಇಲ್ಲದಿರುವಾಗ ಆರೋಪಿಯನ್ನು ಬಂಧನದಲ್ಲಿಟ್ಟು ಅವರ ವೈಯಕ್ತಿಕ ಬದುಕಿನ ಹಕ್ಕು ಕಸಿದುಕೊಳ್ಳಲು ಸಾಧ್ಯವಿಲ್ಲ. ಜಾಮೀನಿನ ಅನಗತ್ಯ ವಿಳಂಬವು ಆರೋಪಿಯ ಬದುಕುವ ಹಕ್ಕನ್ನು ಮೊಟಕುಗೊಳಿಸುತ್ತದೆ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ ಎಂದು ನ್ಯಾಯಾಲಯ ಹೇಳಿದೆ.

ಕಳೆದ ವರ್ಷ ಜುಲೈನಲ್ಲಿ ಕರ್ನಾಟಕ ಹೈಕೋರ್ಟ್‌ನ ಏಕ ಸದಸ್ಯ ಪೀಠ ಗೌರಿ ಹತ್ಯೆ ಪ್ರಕರಣದ ಮೂವರು ಆರೋಪಿಗಳಿಗೆ ಜಾಮೀನು ನೀಡಿತ್ತು. ಇದಾಗಿ, ಒಂದು ತಿಂಗಳ ನಂತರ, ಪ್ರಕರಣದ ಇನ್ನೂ ನಾಲ್ವರು ಆರೋಪಿಗಳಿಗೆ ಮಂಜೂರು ಮಾಡಿತ್ತು. ಈ ಎಲ್ಲಾ ಆರೋಪಿಗಳು ಸಮಾನತೆಯ ಆಧಾರದ ಮೇಲೆ ಜಾಮೀನು ಕೋರಿದ್ದರು. ವಿಚಾರಣೆಯಲ್ಲಿ ವಿಳಂಬದ ಕಾರಣ ನೀಡಿ ಡಿಸೆಂಬರ್ 2023ರಲ್ಲಿ ಹೈಕೋರ್ಟ್ ಪ್ರಮುಖ ಆರೋಪಿ ಮೋಹನ್ ನಾಯಕ್‌ಗೆ ಜಾಮೀನು ನೀಡಿತ್ತು.

ಮಾಸಿಕ ₹10 ಸಾವಿರ ಗೌರವಧನ ನೀಡುವುದಾಗಿ ಸಿಎಂ ಭರವಸೆ : ಮುಷ್ಕರ ಹಿಂಪಡೆದ ಆಶಾ ಕಾರ್ಯಕರ್ತೆಯರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಂದೋರ್: ಪೊಲೀಸರಿಂದ ಹಣಕ್ಕಾಗಿ ಬೇಡಿಕೆ, ಹಲ್ಲೆ ಆರೋಪ; 25 ವರ್ಷದ ಟ್ಯಾಕ್ಸಿ ಚಾಲಕ ಆತ್ಮಹತ್ಯೆ: ಪೊಲೀಸ್ ಅಮಾನತು

ಇಂದೋರ್: ಪೊಲೀಸರ ಹಲ್ಲೆ ಮತ್ತು ಭ್ರಷ್ಟಾಚಾರವನ್ನು ಆರೋಪಿಸಿ ವೀಡಿಯೊ ರೆಕಾರ್ಡ್ ಮಾಡಿದ ನಂತರ 25 ವರ್ಷದ ಟ್ಯಾಕ್ಸಿ ಚಾಲಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದು, ಅಧಿಕಾರಿಗಳು ಸಬ್ ಇನ್ಸ್‌ಪೆಕ್ಟರ್‌ನನ್ನು ಅಮಾನತುಗೊಳಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಬುಧವಾರ ತಿಳಿಸಿದ್ದಾರೆ. ಅಭಿಷೇಕ್...

ಅಮೆರಿಕ ಕೋರ್ಟ್ ಮೆಟ್ಟಿಲೇರಿದ ಅದಾನಿ : ಎಸ್‌ಇಸಿ ವಂಚನೆ ಪ್ರಕರಣ ವಜಾಗೊಳಿಸುವಂತೆ ಮನವಿ

ಅದಾನಿ ಗ್ರೂಪ್‌ನ ಅಧ್ಯಕ್ಷ ಗೌತಮ್ ಅದಾನಿ ಮತ್ತು ಅವರ ಸೋದರಸಂಬಂಧಿ ಸಾಗರ್ ಅದಾನಿ ಅವರು ತಮ್ಮ ವಿರುದ್ಧದ ಭ್ರಷ್ಟಾಚಾರ ಮತ್ತು ವಂಚನೆ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಅಮೆರಿಕ ನ್ಯಾಯಾಲಯದ ಮೊರೆ ಹೋಗಿದ್ದಾರೆ ಎಂದು ವರದಿಯಾಗಿದೆ. ಅಮೆರಿಕದ ಸೆಕ್ಯುರಿಟೀಸ್ ಅಂಡ್ ಎಕ್ಸ್ಚೇಂಜ್...

ಜಮ್ಮು-ಕಾಶ್ಮೀರ: ಭಯೋತ್ಪಾದಕ ಸಂಘಟನೆಗಳೊಂದಿಗೆ ಸಂಪರ್ಕ ಆರೋಪ; ಇಬ್ಬರು ಸರ್ಕಾರಿ ನೌಕರರನ್ನು ವಜಾಗೊಳಿಸಿದ ಮನೋಜ್ ಸಿನ್ಹಾ

ಲಷ್ಕರ್-ಎ-ತೈಬಾ ಮತ್ತು ಹಿಜ್ಬುಲ್ ಮುಜಾಹಿದ್ದೀನ್ ಸೇರಿದಂತೆ ಭಯೋತ್ಪಾದಕ ಸಂಘಟನೆಗಳೊಂದಿಗೆ ಸಂಪರ್ಕ ಹೊಂದಿರುವ ಆರೋಪದ ಮೇಲೆ ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಬುಧವಾರ ಇಬ್ಬರು ಸರ್ಕಾರಿ ನೌಕರರನ್ನು ವಜಾಗೊಳಿಸಿದ್ದಾರೆ ಎಂದು...

ಭಾರಿ ಜನ ಬೆಂಬಲದ ನಡುವೆ ಭವಾನಿಪುರದಲ್ಲಿ ನಾಮಪತ್ರ ಸಲ್ಲಿಸಿದ ಮಮತಾ ಬ್ಯಾನರ್ಜಿ: ಶಕ್ತಿ ಪ್ರದರ್ಶನವಾಗಿ ಮಾರ್ಪಟ್ಟ ಮೆರವಣಿಗೆ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ ತಮ್ಮ ಕಾಲಿಘಾಟ್ಕಾಲ್ ನಿವಾಸದಿಂದ ಹೊರಬಂದು ಭಬಾನಿಪುರ ವಿಧಾನಸಭಾ ಸ್ಥಾನಕ್ಕೆ ನಾಮಪತ್ರ ಸಲ್ಲಿಸಲು ಕಾಲ್ನಡಿಗೆಯಲ್ಲಿ ತೆರಳಿದರು, ಆ ಸಮಯದಲ್ಲಿ ಬೆಂಬಲಿಗರ ದೊಡ್ಡ ಗುಂಪೊಂದು ತೃಣಮೂಲ ಕಾಂಗ್ರೆಸ್...

‘ಜ್ಞಾನೇಶ್ ಕುಮಾರ್ ನಮಗೆ ‘ಗೆಟ್ ಲಾಸ್ಟ್’ ಅಂದ್ರು’ : ಮುಖ್ಯ ಚುನಾವಣಾ ಆಯುಕ್ತರೊಂದಿಗಿನ ಸಭೆ ಬಳಿಕ ಟಿಎಂಸಿ ನಾಯಕರಿಂದ ಆರೋಪ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರೊಂದಿಗೆ ತೃಣಮೂಲ ಕಾಂಗ್ರೆಸ್‌ನ (ಟಿಎಂಸಿ) ನಾಲ್ವರು ಸದಸ್ಯರ ನಿಯೋಗ ನಡೆಸಿದ ಸಭೆಯು ಬುಧವಾರ ಕಾವೇರಿದ ಚರ್ಚೆಗೆ ಸಾಕ್ಷಿಯಾಯಿತು. ಈ ವೇಳೆ ಚುನಾವಣಾ ಆಯುಕ್ತರು ನಮಗೆ...

ಅಸ್ಸಾಂ ಸಿಎಂ ಪತ್ನಿ ದೂರಿನ ಮೇರೆಗೆ ಪವನ್ ಖೇರಾ ವಿರುದ್ಧ ಮಾನನಷ್ಟ, ಕ್ರಿಮಿನಲ್ ಪಿತೂರಿ ಆರೋಪದಡಿ ಪ್ರಕರಣ ದಾಖಲು

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ನೀಡಿದ ದೂರಿನ ಆಧಾರದ ಮೇಲೆ ಅಸ್ಸಾಂ ಪೊಲೀಸರು ಪವನ್ ಖೇರಾ ವಿರುದ್ಧ ಮಾನನಷ್ಟ, ನಕಲಿ ಮತ್ತು ಕ್ರಿಮಿನಲ್ ಪಿತೂರಿ ಸೇರಿದಂತೆ...

ಅಮೆರಿಕ-ಇರಾನ್ ಕದನ ವಿರಾಮಕ್ಕೆ ಪಾಕ್ ಮಧ್ಯಸ್ಥಿಕೆ, ಬೆತ್ತಲಾದ ವಿಶ್ವಗುರು : ಕಾಂಗ್ರೆಸ್

ಕೇಂದ್ರ ಸರ್ಕಾರದ ವಿರುದ್ಧ ಬುಧವಾರ ತೀವ್ರ ವಾಗ್ದಾಳಿ ನಡೆಸಿರುವ ಕಾಂಗ್ರೆಸ್, ಅಮೆರಿಕ ಮತ್ತು ಇರಾನ್ ನಡುವಿನ ಕದನ ವಿರಾಮಕ್ಕೆ ಪಾಕಿಸ್ತಾನ ಮಧ್ಯಸ್ಥಿಕೆ ವಹಿಸಿರುವುದನ್ನು ಪ್ರಧಾನಿ ನರೇಂದ್ರ ಮೋದಿಯವರ 'ಅತ್ಯಂತ ವೈಯಕ್ತಿಕ ರಾಜತಾಂತ್ರಿಕತೆಗೆ' ಉಂಟಾದ...

ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಅಸ್ಸಾಂ ಸಿಎಂ ನಿಂದನೀಯ ಪದ ಬಳಕೆ; ‘ಸಂಪೂರ್ಣ ನಾಚಿಕೆಗೇಡಿನ ಸಂಗತಿ’ ಎಂದ ಪ್ರಿಯಾಂಕಾ ಗಾಂಧಿ 

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು "ಅವಾಚ್ಯ" ಭಾಷೆ ಬಳಸಿರುವುದು "ಸಂಪೂರ್ಣವಾಗಿ ನಾಚಿಕೆಗೇಡಿನ" ಸಂಗತಿ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ...

ಇರಾಕ್‌ನಲ್ಲಿ ಅಪಹರಣಕ್ಕೊಳಗಾಗಿದ್ದ ಅಮೆರಿಕದ ಪತ್ರಕರ್ತೆ ಬಿಡುಗಡೆ

ಇರಾಕಿನ ರಾಜಧಾನಿ ಬಾಗ್ದಾದ್‌ನಲ್ಲಿ ಒಂದು ವಾರದ ಹಿಂದೆ ಅಪಹರಿಸಲ್ಪಟ್ಟಿದ್ದ ಅಮೆರಿಕದ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಬಿಡುಗಡೆ ಮಾಡಲಾಗಿದೆ ಎಂದು ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ತಿಳಿಸಿದ್ದಾರೆ. ಮಾರ್ಚ್ 31ರಂದು ಶೆಲ್ಲಿ...

ಅಸ್ಸಾಂನ ನಾಗಾಂವ್‌ನಲ್ಲಿ ದರೋಡೆ ಶಂಕೆಯ ಮೇಲೆ ಗುಂಪು ದಾಳಿ: ಮೂವರು ಮುಸ್ಲಿಂ ಪುರುಷರು ಸಾವು

ದರೋಡೆಯಲ್ಲಿ ಭಾಗಿಯಾಗಿದ್ದಾರೆಂದು ಶಂಕಿಸಿ ಅಸ್ಸಾಂನ ನಾಗಾಂವ್ ಜಿಲ್ಲೆಯಲ್ಲಿ ಸೋಮವಾರ ಮುಂಜಾನೆ ನಡೆದ ಗುಂಪು ದಾಳಿಯಲ್ಲಿ ಮೂವರು ಮುಸ್ಲಿಂ ಪುರುಷರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರನ್ನು ಸೈಫುಲ್ಲಾ, ಅಜೀಬುರ್ ಅಲಿಯಾಸ್ ಖೈರುಲ್ ಮತ್ತು ಇನಾಮುಲ್...