Homeಕರ್ನಾಟಕಗೌರಿ ಲಂಕೇಶ್ ಹತ್ಯೆ ಪ್ರಕರಣ | ಬಂಧಿತ ಎಲ್ಲಾ ಆರೋಪಿಗಳಿಗೆ ಜಾಮೀನು

ಗೌರಿ ಲಂಕೇಶ್ ಹತ್ಯೆ ಪ್ರಕರಣ | ಬಂಧಿತ ಎಲ್ಲಾ ಆರೋಪಿಗಳಿಗೆ ಜಾಮೀನು

- Advertisement -
- Advertisement -

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಮತ್ತೊಬ್ಬ ಆರೋಪಿಗೆ ಬುಧವಾರ (ಜ.8) ಬೆಂಗಳೂರಿನ ನ್ಯಾಯಾಲಯ ಜಾಮೀನು ನೀಡಿದೆ. ಈ ಮೂಲಕ ಪ್ರಕರಣದಲ್ಲಿ ಬಂಧಿತರಾಗಿದ್ದ ಎಲ್ಲಾ ಆರೋಪಿಗಳಿಗೆ ಜಾಮೀನು ದೊರೆತಂತಾಗಿದೆ.

ಬೆಂಗಳೂರಿನ ಪ್ರಧಾನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಧೀಶ ಮುರಳೀಧರ ಪೈ ಬಿ ಅವರು ಆರೋಪಿ ಶರದ್ ಬಾಹು ಸಾಹೇಬ್ ಕಲಾಸ್ಕರ್ ಅವರಿಗೆ ಜಾಮೀನು ಮಂಜೂರು ಮಾಡಿದ್ದಾರೆ.

ಸೆಪ್ಟೆಂಬರ್ 2018ರಿಂದ ಈತ ಬಂಧನದಲ್ಲಿದ್ದು, ವಿಚಾರಣೆ ಶೀಘ್ರದಲ್ಲೇ ಮುಕ್ತಾಯಗೊಳ್ಳುವ ಸಾಧ್ಯತೆಯಿಲ್ಲ ಎಂಬುವುದನ್ನು ಗಮನಿಸಿದ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ ಎಂದು ತಿಳಿದು ಬಂದಿದೆ.

ಕಲಾಸ್ಕರ್‌ಗೆ ನ್ಯಾಯಾಲಯ ಜಾಮೀನು ನೀಡಿದ ಹಿನ್ನೆಲೆ, ಪ್ರಕರಣದಲ್ಲಿ ಬಂಧಿತರಾಗಿದ್ದ ಎಲ್ಲಾ 17 ಆರೋಪಿಗಳು ಜಾಮೀನು ಪಡೆದಂತಾಗಿದೆ. ಈ ಪ್ರಕರಣದಲ್ಲಿ ಒಟ್ಟು 18 ಆರೋಪಿಗಳನ್ನು ಗುರುತಿಸಲಾಗಿದ್ದು, 17 ಮಂದಿಯನ್ನು ಬಂಧಿಸಲಾಗಿತ್ತು. ಇನ್ನೋರ್ವ ಆರೋಪಿ ವಿಕಾಸ್ ಪಾಟೀಲ್ ಎಂಬಾತ ತಲೆಮರೆಸಿಕೊಂಡಿದ್ದು, ಇನ್ನೂ ಬಂಧನವಾಗಿಲ್ಲ.

ಆರೋಪಿ ಕಲಾಸ್ಕರ್ ತಾನು ನಿರಪರಾಧಿ, ಪ್ರಕರಣಕ್ಕೂ ನನಗೂ ಯಾವುದೇ ಸಂಬಂಧವಿಲ್ಲ ಎಂದು ಹೇಳಿಕೊಂಡು ಜಾಮೀನು ಕೋರಿದ್ದರು. ಪ್ರಕರಣದಲ್ಲಿ ತನ್ನ ಸಹ ಆರೋಪಿಗಳಲ್ಲಿ ಹೆಚ್ಚಿನವರಿಗೆ ಈಗಾಗಲೇ ಜಾಮೀನು ನೀಡಲಾಗಿದೆ ಎಂದು ಹೇಳಿದ್ದರು. ಸಮಾನತೆಯ ಆಧಾರದ ಮೇಲೆ ಜಾಮೀನು ನೀಡುವಂತೆ ಮನವಿ ಮಾಡಿದ್ದರು.

ಕಲಾಸ್ಕರ್‌ ಜಾಮೀನು ಅರ್ಜಿಗೆ ಪ್ರಾಸಿಕ್ಯೂಷನ್ ವಿರೋಧ ವ್ಯಕ್ತಪಡಿಸಿತ್ತು. ಈತ ಪುನರಾವರ್ತಿತ ಅಪರಾಧಿಯಾಗಿದ್ದು, ಮತ್ತೊಂದು ಕ್ರಿಮಿನಲ್ ಪ್ರಕರಣದಲ್ಲಿ ಶಿಕ್ಷೆಯನ್ನು ಎದುರಿಸಿದ್ದಾರೆ. ಜಾಮೀನಿನ ಮೇಲೆ ಬಿಡುಗಡೆಯಾದರೆ, ಇನ್ನೊಂದು ಅಪರಾಧ ಮಾಡುವ ಸಾಧ್ಯತೆಯಿದೆ ಎಂದು ವಾದಿಸಿತ್ತು.

ಆದಾಗ್ಯೂ, ನ್ಯಾಯಾಲಯವು ಕಲಾಸ್ಕರ್‌ ಅವರಿಗೆ ಸಮಾನತೆಯ ಆಧಾರದ ಮೇಲೆ ಜಾಮೀನು ಪಡೆಯಲು ಅರ್ಹತೆ ಇದೆ ಎಂದು ತೀರ್ಪು ನೀಡಿದೆ.

ಸಂವಿಧಾನದ ವಿಧಿ 21ರ ಅಡಿ ಸ್ವತಂತ್ರ ಬದುಕು ಮೂಲಭೂತ ಹಕ್ಕು. ಪ್ರಕರಣದ ವಿಚಾರಣೆ ಬಾಕಿ ಇರುವಾಗ ಮತ್ತು ಅದು ಶೀಘ್ರ ಮುಕ್ತಾಯಗೊಳ್ಳುವ ಸಾಧ್ಯತೆ ಇಲ್ಲದಿರುವಾಗ ಆರೋಪಿಯನ್ನು ಬಂಧನದಲ್ಲಿಟ್ಟು ಅವರ ವೈಯಕ್ತಿಕ ಬದುಕಿನ ಹಕ್ಕು ಕಸಿದುಕೊಳ್ಳಲು ಸಾಧ್ಯವಿಲ್ಲ. ಜಾಮೀನಿನ ಅನಗತ್ಯ ವಿಳಂಬವು ಆರೋಪಿಯ ಬದುಕುವ ಹಕ್ಕನ್ನು ಮೊಟಕುಗೊಳಿಸುತ್ತದೆ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ ಎಂದು ನ್ಯಾಯಾಲಯ ಹೇಳಿದೆ.

ಕಳೆದ ವರ್ಷ ಜುಲೈನಲ್ಲಿ ಕರ್ನಾಟಕ ಹೈಕೋರ್ಟ್‌ನ ಏಕ ಸದಸ್ಯ ಪೀಠ ಗೌರಿ ಹತ್ಯೆ ಪ್ರಕರಣದ ಮೂವರು ಆರೋಪಿಗಳಿಗೆ ಜಾಮೀನು ನೀಡಿತ್ತು. ಇದಾಗಿ, ಒಂದು ತಿಂಗಳ ನಂತರ, ಪ್ರಕರಣದ ಇನ್ನೂ ನಾಲ್ವರು ಆರೋಪಿಗಳಿಗೆ ಮಂಜೂರು ಮಾಡಿತ್ತು. ಈ ಎಲ್ಲಾ ಆರೋಪಿಗಳು ಸಮಾನತೆಯ ಆಧಾರದ ಮೇಲೆ ಜಾಮೀನು ಕೋರಿದ್ದರು. ವಿಚಾರಣೆಯಲ್ಲಿ ವಿಳಂಬದ ಕಾರಣ ನೀಡಿ ಡಿಸೆಂಬರ್ 2023ರಲ್ಲಿ ಹೈಕೋರ್ಟ್ ಪ್ರಮುಖ ಆರೋಪಿ ಮೋಹನ್ ನಾಯಕ್‌ಗೆ ಜಾಮೀನು ನೀಡಿತ್ತು.

ಮಾಸಿಕ ₹10 ಸಾವಿರ ಗೌರವಧನ ನೀಡುವುದಾಗಿ ಸಿಎಂ ಭರವಸೆ : ಮುಷ್ಕರ ಹಿಂಪಡೆದ ಆಶಾ ಕಾರ್ಯಕರ್ತೆಯರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...