Homeಕರ್ನಾಟಕಗೌರಿ ಹತ್ಯೆ ಪ್ರಕರಣ; 'ಕೋಕಾ ಕಾಯ್ದೆ' ಆರೋಪಿ ಮೋಹನ್ ನಾಯಕ್‌ಗೆ ಜಾಮೀನು!

ಗೌರಿ ಹತ್ಯೆ ಪ್ರಕರಣ; ‘ಕೋಕಾ ಕಾಯ್ದೆ’ ಆರೋಪಿ ಮೋಹನ್ ನಾಯಕ್‌ಗೆ ಜಾಮೀನು!

- Advertisement -
- Advertisement -

ಜನಪರ ಪತ್ರಕರ್ತೆ, ಬರಹಗಾರ್ತಿ ಗೌರಿ ಲಂಕೇಶ್ ಹತ್ಯೆ ಪ್ರಕರಣದ 11ನೇ ಆರೋಪಿ, ದಕ್ಷಿಣ ಕನ್ನಡ ಜಿಲ್ಲೆ ನಿವಾಸಿ ಮೋಹನ್ ನಾಯಕ್‌ಗೆ ಕರ್ನಾಟಕ ಹೈಕೋರ್ಟ್ ಗುರುವಾರ (ಡಿ.7) ಜಾಮೀನು ನೀಡಿದೆ. ಹತ್ಯೆ ಮಾಡಿದ ಆರೋಪಿಗಳಿಗೆ ಆಶ್ರಯ ನೀಡಿದ ಹಾಗೂ ಕೊಲೆ ಸಂಚಿನಲ್ಲಿ ಭಾಗಿಯಾದ ಆರೋಪ ಎದುರಿಸುತ್ತಿರುವ ಮೋಹನ್ ವಿರುದ್ಧ ‘ಕರ್ನಾಟಕ ಸಂಘಟಿತ ಅಪರಾಧಗಳ ನಿಯಂತ್ರಣ ಕಾಯ್ದೆ’ (ಕೋಕಾ) ನಿಯಮಗಳ ಅಡಿ ವಿಚಾರಣೆ ನಡೆಯುತ್ತಿದೆ.

ಪ್ರಕರಣ ಸಂಬಂಧ ಅಮೋಲ್ ಕಾಳೆ, ಅಮಿತ್ ಬದ್ದಿ, ಪರಶುರಾಮ್ ವಾಘ್ಮೋರೆ, ಗಣೇಶ್ ಮಿಸ್ಕಿನ್, ಅಮಿತ್ ದೆಗ್ವೇಕರ್, ಭರತ್ ಕುರಾಣೆ, ರಾಜೇಶ್ ಡಿ. ಬಂಗೇರ, ಸುಧನ್ವ ಗೊಂದಲೇಕರ್, ಮೋಹನ್ ನಾಯಕ್ ಎನ್., ಸುರೇಶ್ ಎಚ್.ಎಲ್., ಶರದ್ ಬಿ.ಕಲಸ್ಕರ್, ವಾಸುದೇವ್ ಬಿ. ಸೂರ್ಯವಂಶಿ, ಸುಜಿತ್ಕುಮಾರ್, ಮನೋಹರ ಯಡವೆ, ಶ್ರೀಕಾಂತ ಜೆ.ಪಗಾರಕರ್, ಕೆ.ಟಿ. ನವೀನ್ ಕುಮಾರ್ ಮತ್ತು ಋಷಿಕೇಶ್ ದೇವಡೇಕರ್ ಎಂಬುವವರನ್ನು ಪೊಲೀಸರು ಈಗಾಗಲೇ ಬಂಧಿಸಿದ್ದು, ವಿಚಾರಣಾಧೀನ ಖೈದಿಗಳಾಗಿ ಜೈಲಿನಲ್ಲಿದ್ದಾರೆ.

ಮೋಹನ್ ವಿರುದ್ಧದ ಕೋಕಾ ಕಾಯ್ದೆ ಮರುಸ್ಥಾಪಿಸಿದ್ದ ಸುಪ್ರೀಂಕೋರ್ಟ್:

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿಗಳಲ್ಲಿ ಒಬ್ಬನಾದ ಮೋಹನ್ ನಾಯಕ್ ವಿರುದ್ಧ ಕರ್ನಾಟಕ ಸಂಘಟಿತ ಅಪರಾಧಗಳ ನಿಯಂತ್ರಣ ಕಾಯ್ದೆ (ಕೋಕಾ) ನಿಯಮಗಳ ಅಡಿ ದಾಖಲಿಸಲಾದ ಆರೋಪ ಪಟ್ಟಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿತ್ತು. ಹೈಕೋರ್ಟ್ ಆದೇಶ ಪ್ರಶ್ನಿಸಿದ್ದ ಗೌರಿ ಸಹೋದರಿ ಕವಿತಾ ಸುಪ್ರೀಂಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು. 2021ರ ಅಕ್ಟೋಬರ್‌ನಲ್ಲಿ ಆದೇಶ ನೀಡಿದ್ದ ಸುಪ್ರೀಂ, ಮೋಹನ್ ನಾಯಕ್ ವಿರುದ್ಧ ಕೋಕಾ ಕಾಯ್ದೆಯನ್ನು ಮರು ಸ್ಥಾಪಿಸುವಂತೆ ಸೂಚನೆ ನೀಡಿತ್ತು.

ಮೋಹನ್ ನಾಯಕ್ ವಿರುದ್ಧದ ಕೋಕಾ ತನಿಖೆಯನ್ನು ಜಾರಿಗೊಳಿಸಲು ಪೊಲೀಸ್ ಇಲಾಖೆ ನೀಡಿದ್ದ ಅನುಮೋದನೆಯನ್ನು 2018ರ ಆಗಸ್ಟ್ 14ರಂದು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿತ್ತು. ಇದನ್ನು ಪ್ರಶ್ನಿಸಿದ್ದ ಕವಿತಾ ಲಂಕೇಶ್ ಹಾಗೂ ಕರ್ನಾಟಕ ಪೊಲೀಸರು ಸುಪ್ರೀಂಕೋರ್ಟ್ ಮೊರೆ ಹೋಗಿದ್ದರು. ಮನವಿ ಪುರಸ್ಕರಿಸಿದ್ದ ನ್ಯಾಯಮೂರ್ತಿಗಳಾದ ಎಎಂ ಖಾನ್ವಿಲ್ಕರ್ ನೇತೃತ್ವದ ನ್ಯಾಯಪೀಠ, ಕೋಕಾ ಕಾಯ್ದೆ ಮರುಸ್ಥಾಪನೆಗೆ ಅನುಮತಿ ನೀಡಿತ್ತು.

ಕೋಕಾ ಕಾಯ್ದೆಯಡಿ ಬಂಧಿತನಾಗಿದ್ದ ಮೋಹನ್ ನಾಯಕ್‌ಗೆ ವಿಚಾರಣೆ ಮುಗಿಯುವವರೆಗೂ ಜಾಮೀನು ಪಡೆಯುವುದು ಕಷ್ಟವಾಗಲಿದೆ ಎನ್ನಲಾಗಿತ್ತು. 2018ರಲ್ಲಿ ಈತನ ವಿರುದ್ಧ ಕೋಕಾ ಕಾಯ್ದೆ ರದ್ದುಗೊಳಿಸಿದ ಬೆನ್ನಲ್ಲೇ ವಕೀಲರು ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು. ಆದರೆ, ಈ ಅರ್ಜಿಯನ್ನು ಇತ್ಯರ್ಥಪಡಿಸುವವರೆಗೂ ಜಾಮೀನು ನೀಡಲು ಸಾಧ್ಯವಿಲ್ಲ ಎಂದು ಸುಪ್ರೀಂ ಹೇಳಿತ್ತು. ಇದೀಗ ಮೋಹನ್ ಕೋಕಾ ಕಾಯ್ದೆಯಡಿ ಬಂಧಿತನಾಗಿದ್ದರೂ ಜಾಮೀನು ಲಭಿಸಿರುವುದು ಆಶ್ಚರ್ಯ ಮೂಡಿಸಿದೆ.

ಪ್ರಮುಖ ಆರೋಪಿ ಅಮೋಲ್ ಕಾಳೆ ನೇತೃತ್ವದಲ್ಲಿ ನಡೆದ ಗೌರಿ ಲಂಕೇಶ್ ಹತ್ಯೆ ಸಂಚಿನಲ್ಲಿ ಮೋಹನ್ ನಾಯಕ್ ಭಾಗಿಯಾಗಿದ್ದ. ಆರೋಪಿ ಕಾಳೆ, ಗೌರಿ ಅವರಲ್ಲದೆ ಇನ್ನೂ ಅನೇಕ ಸಂಘಟಿತ ಅಪರಾಧಗಳಲ್ಲಿ ಭಾಗಿಯಾಗಿದ್ದಾನೆ ಎನ್ನುವುದು ಎಸ್ಐಟಿ ತನಿಖೆಯಿಂದ ಬಹಿರಂಗವಾಗಿದೆ ಎಂದು ಪೊಲೀಸರು ಚಾರ್ಜ್ ಶೀಟ್ ಸಲ್ಲಿಸಿದ್ದರು.

ಇದನ್ನೂ ಓದಿ; ಕಲ್ಬುರ್ಗಿ-ಗೌರಿ ಹತ್ಯೆ ವಿಚಾರಣೆ; ವಿಶೇಷ ನ್ಯಾಯಾಲಯ ಸ್ಥಾಪನೆಗೆ ಸಿಎಂ ಸೂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...