Homeಕರ್ನಾಟಕಗೌರಿ ಹತ್ಯೆ ಪ್ರಕರಣ; 'ಕೋಕಾ ಕಾಯ್ದೆ' ಆರೋಪಿ ಮೋಹನ್ ನಾಯಕ್‌ಗೆ ಜಾಮೀನು!

ಗೌರಿ ಹತ್ಯೆ ಪ್ರಕರಣ; ‘ಕೋಕಾ ಕಾಯ್ದೆ’ ಆರೋಪಿ ಮೋಹನ್ ನಾಯಕ್‌ಗೆ ಜಾಮೀನು!

- Advertisement -
- Advertisement -

ಜನಪರ ಪತ್ರಕರ್ತೆ, ಬರಹಗಾರ್ತಿ ಗೌರಿ ಲಂಕೇಶ್ ಹತ್ಯೆ ಪ್ರಕರಣದ 11ನೇ ಆರೋಪಿ, ದಕ್ಷಿಣ ಕನ್ನಡ ಜಿಲ್ಲೆ ನಿವಾಸಿ ಮೋಹನ್ ನಾಯಕ್‌ಗೆ ಕರ್ನಾಟಕ ಹೈಕೋರ್ಟ್ ಗುರುವಾರ (ಡಿ.7) ಜಾಮೀನು ನೀಡಿದೆ. ಹತ್ಯೆ ಮಾಡಿದ ಆರೋಪಿಗಳಿಗೆ ಆಶ್ರಯ ನೀಡಿದ ಹಾಗೂ ಕೊಲೆ ಸಂಚಿನಲ್ಲಿ ಭಾಗಿಯಾದ ಆರೋಪ ಎದುರಿಸುತ್ತಿರುವ ಮೋಹನ್ ವಿರುದ್ಧ ‘ಕರ್ನಾಟಕ ಸಂಘಟಿತ ಅಪರಾಧಗಳ ನಿಯಂತ್ರಣ ಕಾಯ್ದೆ’ (ಕೋಕಾ) ನಿಯಮಗಳ ಅಡಿ ವಿಚಾರಣೆ ನಡೆಯುತ್ತಿದೆ.

ಪ್ರಕರಣ ಸಂಬಂಧ ಅಮೋಲ್ ಕಾಳೆ, ಅಮಿತ್ ಬದ್ದಿ, ಪರಶುರಾಮ್ ವಾಘ್ಮೋರೆ, ಗಣೇಶ್ ಮಿಸ್ಕಿನ್, ಅಮಿತ್ ದೆಗ್ವೇಕರ್, ಭರತ್ ಕುರಾಣೆ, ರಾಜೇಶ್ ಡಿ. ಬಂಗೇರ, ಸುಧನ್ವ ಗೊಂದಲೇಕರ್, ಮೋಹನ್ ನಾಯಕ್ ಎನ್., ಸುರೇಶ್ ಎಚ್.ಎಲ್., ಶರದ್ ಬಿ.ಕಲಸ್ಕರ್, ವಾಸುದೇವ್ ಬಿ. ಸೂರ್ಯವಂಶಿ, ಸುಜಿತ್ಕುಮಾರ್, ಮನೋಹರ ಯಡವೆ, ಶ್ರೀಕಾಂತ ಜೆ.ಪಗಾರಕರ್, ಕೆ.ಟಿ. ನವೀನ್ ಕುಮಾರ್ ಮತ್ತು ಋಷಿಕೇಶ್ ದೇವಡೇಕರ್ ಎಂಬುವವರನ್ನು ಪೊಲೀಸರು ಈಗಾಗಲೇ ಬಂಧಿಸಿದ್ದು, ವಿಚಾರಣಾಧೀನ ಖೈದಿಗಳಾಗಿ ಜೈಲಿನಲ್ಲಿದ್ದಾರೆ.

ಮೋಹನ್ ವಿರುದ್ಧದ ಕೋಕಾ ಕಾಯ್ದೆ ಮರುಸ್ಥಾಪಿಸಿದ್ದ ಸುಪ್ರೀಂಕೋರ್ಟ್:

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿಗಳಲ್ಲಿ ಒಬ್ಬನಾದ ಮೋಹನ್ ನಾಯಕ್ ವಿರುದ್ಧ ಕರ್ನಾಟಕ ಸಂಘಟಿತ ಅಪರಾಧಗಳ ನಿಯಂತ್ರಣ ಕಾಯ್ದೆ (ಕೋಕಾ) ನಿಯಮಗಳ ಅಡಿ ದಾಖಲಿಸಲಾದ ಆರೋಪ ಪಟ್ಟಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿತ್ತು. ಹೈಕೋರ್ಟ್ ಆದೇಶ ಪ್ರಶ್ನಿಸಿದ್ದ ಗೌರಿ ಸಹೋದರಿ ಕವಿತಾ ಸುಪ್ರೀಂಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು. 2021ರ ಅಕ್ಟೋಬರ್‌ನಲ್ಲಿ ಆದೇಶ ನೀಡಿದ್ದ ಸುಪ್ರೀಂ, ಮೋಹನ್ ನಾಯಕ್ ವಿರುದ್ಧ ಕೋಕಾ ಕಾಯ್ದೆಯನ್ನು ಮರು ಸ್ಥಾಪಿಸುವಂತೆ ಸೂಚನೆ ನೀಡಿತ್ತು.

ಮೋಹನ್ ನಾಯಕ್ ವಿರುದ್ಧದ ಕೋಕಾ ತನಿಖೆಯನ್ನು ಜಾರಿಗೊಳಿಸಲು ಪೊಲೀಸ್ ಇಲಾಖೆ ನೀಡಿದ್ದ ಅನುಮೋದನೆಯನ್ನು 2018ರ ಆಗಸ್ಟ್ 14ರಂದು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿತ್ತು. ಇದನ್ನು ಪ್ರಶ್ನಿಸಿದ್ದ ಕವಿತಾ ಲಂಕೇಶ್ ಹಾಗೂ ಕರ್ನಾಟಕ ಪೊಲೀಸರು ಸುಪ್ರೀಂಕೋರ್ಟ್ ಮೊರೆ ಹೋಗಿದ್ದರು. ಮನವಿ ಪುರಸ್ಕರಿಸಿದ್ದ ನ್ಯಾಯಮೂರ್ತಿಗಳಾದ ಎಎಂ ಖಾನ್ವಿಲ್ಕರ್ ನೇತೃತ್ವದ ನ್ಯಾಯಪೀಠ, ಕೋಕಾ ಕಾಯ್ದೆ ಮರುಸ್ಥಾಪನೆಗೆ ಅನುಮತಿ ನೀಡಿತ್ತು.

ಕೋಕಾ ಕಾಯ್ದೆಯಡಿ ಬಂಧಿತನಾಗಿದ್ದ ಮೋಹನ್ ನಾಯಕ್‌ಗೆ ವಿಚಾರಣೆ ಮುಗಿಯುವವರೆಗೂ ಜಾಮೀನು ಪಡೆಯುವುದು ಕಷ್ಟವಾಗಲಿದೆ ಎನ್ನಲಾಗಿತ್ತು. 2018ರಲ್ಲಿ ಈತನ ವಿರುದ್ಧ ಕೋಕಾ ಕಾಯ್ದೆ ರದ್ದುಗೊಳಿಸಿದ ಬೆನ್ನಲ್ಲೇ ವಕೀಲರು ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು. ಆದರೆ, ಈ ಅರ್ಜಿಯನ್ನು ಇತ್ಯರ್ಥಪಡಿಸುವವರೆಗೂ ಜಾಮೀನು ನೀಡಲು ಸಾಧ್ಯವಿಲ್ಲ ಎಂದು ಸುಪ್ರೀಂ ಹೇಳಿತ್ತು. ಇದೀಗ ಮೋಹನ್ ಕೋಕಾ ಕಾಯ್ದೆಯಡಿ ಬಂಧಿತನಾಗಿದ್ದರೂ ಜಾಮೀನು ಲಭಿಸಿರುವುದು ಆಶ್ಚರ್ಯ ಮೂಡಿಸಿದೆ.

ಪ್ರಮುಖ ಆರೋಪಿ ಅಮೋಲ್ ಕಾಳೆ ನೇತೃತ್ವದಲ್ಲಿ ನಡೆದ ಗೌರಿ ಲಂಕೇಶ್ ಹತ್ಯೆ ಸಂಚಿನಲ್ಲಿ ಮೋಹನ್ ನಾಯಕ್ ಭಾಗಿಯಾಗಿದ್ದ. ಆರೋಪಿ ಕಾಳೆ, ಗೌರಿ ಅವರಲ್ಲದೆ ಇನ್ನೂ ಅನೇಕ ಸಂಘಟಿತ ಅಪರಾಧಗಳಲ್ಲಿ ಭಾಗಿಯಾಗಿದ್ದಾನೆ ಎನ್ನುವುದು ಎಸ್ಐಟಿ ತನಿಖೆಯಿಂದ ಬಹಿರಂಗವಾಗಿದೆ ಎಂದು ಪೊಲೀಸರು ಚಾರ್ಜ್ ಶೀಟ್ ಸಲ್ಲಿಸಿದ್ದರು.

ಇದನ್ನೂ ಓದಿ; ಕಲ್ಬುರ್ಗಿ-ಗೌರಿ ಹತ್ಯೆ ವಿಚಾರಣೆ; ವಿಶೇಷ ನ್ಯಾಯಾಲಯ ಸ್ಥಾಪನೆಗೆ ಸಿಎಂ ಸೂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...