Homeಕರ್ನಾಟಕಗೌರಿ ಹತ್ಯೆಯ ತನಿಖೆ ನಡೆದದ್ದು ಹೇಗೆ? ಈಗ ಎಲ್ಲಿಯವರೆಗೂ ಬಂದಿದೆ? ಕೊನೆಯ ಭಾಗ ಓದಿ

ಗೌರಿ ಹತ್ಯೆಯ ತನಿಖೆ ನಡೆದದ್ದು ಹೇಗೆ? ಈಗ ಎಲ್ಲಿಯವರೆಗೂ ಬಂದಿದೆ? ಕೊನೆಯ ಭಾಗ ಓದಿ

ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಬಂಧಿತರ ಸಂಖ್ಯೆ 16ಕ್ಕೇರಿದೆ. ಸಂಚಿನಲ್ಲಿ ಭಾಗವಹಿಸಿದ್ದ ವಿಕಾಸ್ ಪಾಟೀಲ್ ಮತ್ತು ರುಷಿಕೇಶ್ ದೇವ್ಡಿಕರ್ ಎಂಬಿಬ್ಬರ ಬಂಧನ ಬಾಕಿಯಿದೆ.

- Advertisement -
- Advertisement -

ಭಾಗ-3  ಕೃಪೆ: ದಿ ಕ್ವಿಂಟ್
ನಿರೂಪಣೆ: ನಿಖಿಲ್ ಕೋಲ್ಪೆ

ಭಾಗ 1: ಗೌರಿ ಲಂಕೇಶ್ ಹತ್ಯೆ ಪ್ರಕರಣವನ್ನು ಕರ್ನಾಟಕ ವಿಶೇಷ ತನಿಖಾ ದಳ (SIT) ಭೇದಿಸಿದ್ದಾದರೂ ಹೇಗೆ?

ಭಾಗ-2 : ಗೌರಿ ಹತ್ಯೆಯ ತನಿಖೆಯ ಜಾಡು ಹಿಡಿದು ಹೊರಟಾಗ ಸಿಕ್ಕ ರೋಚಕ ಸತ್ಯಗಳು…

7. ಅಕ್ಯುಪಂಕ್ಚರ್ ‘ಸಂಪಾ’

ಗೌರಿ ಲಂಕೇಶ್ ಅವರನ್ನು ಹತ್ಯೆ ಮಾಡಿದ ಪ್ರಕರಣದ ಎಲ್ಲಾ ಆರೋಪಿಗಳನ್ನು ಎಸ್‌ಐಟಿ ಬಂಧಿಸಿದರೂ, ಈ ಸಂಚಿನಲ್ಲಿ ಭಾಗಿಯಾಗಿ ಸಹಕರಿಸಿದ ಇತರರನ್ನು ಗುಡಿಸಿ, ಕಸದಬುಟ್ಟಿಗೆ ಹಾಕುವ ಕೆಲಸ ಬಾಕಿ ಉಳಿದಿತ್ತು. ವಿಚಾರಣೆಯ ವೇಳೆ, ತಾನು ಮತ್ತು ಇತರ ಮೂವರು ಗೌರಿಹತ್ಯೆಗೆ ಮುನ್ನ ವಾಸಿಸುತ್ತಿದ್ದ ಬೆಂಗಳೂರು ಹೊರವಲಯದ ಕುಂಬಳಗೋಡಿನಲ್ಲಿರುವ ಅಕ್ಯುಪಂಕ್ಚರ್ ಸೆಂಟರ್ ಬಗ್ಗೆ ಪರಶುರಾಮ ವಾಘ್‌ಮೋರೆ ಎಸ್‌ಐಟಿಗೆ ತಿಳಿಸಿದ. ಆತ, ಅಮೋಲ್ ಕಾಳೆ ವಾಸಿಸುತ್ತಿದ್ದ ಗೌರಿಯವರ ಮನೆಗೆ ಹತ್ತಿರವಿರುವ ಸುರೇಶ ಎಂಬಾತನ ಮನೆಯ ಬಗ್ಗೆಯೂ ತಿಳಿಸಿದ.

ಈ ಮಾಹಿತಿ ಪಡೆದ ಎಸ್‌ಐಟಿ, ಮೊದಲಿಗೆ ಅಕ್ಯುಪಂಕ್ಚರ್ ಸೆಂಟರ್ ನಡೆಸುತ್ತಿದ್ದ ಮನೆಗೆ ದಾಳಿ ನಡೆಸಿತು. ಅಲ್ಲಿ ಯಾರೂ ಇರಲಿಲ್ಲ. ಅಲ್ಲಿ ಸಿಕ್ಕಿದ ಡೈರಿಯಲ್ಲಿ ಮೊಬೈಲ್ ನಂಬರುಗಳಿಗಾಗಿ ಹುಡುಕುತ್ತಿದ್ದಾಗ, ಒಂದು ನಂಬರು ಸಿಕ್ಕಿತು. ಅದರ ಮುಂದೆ ಎಂ.ಎನ್. ಸಂಪಾ ಎಂದಿತ್ತು. ಇದೆಂತಹ ಹೆಸರು ಎಂದು ಪೊಲೀಸರು ತಲೆಕೆಡಿಸಿಕೊಂಡರು. ಅದು ಸಂಕೇತ ಭಾಷೆಯಾಗಿತ್ತು. ಪೊಲೀಸರು ಆ ನಂಬರಿನ ಕಾಲ್ ಡಿಟೈಲ್‌ ಹುಡುಕಿದಾಗ ಅಲ್ಲಿ ಎರಡು ಬೆಂಗಳೂರಿನ ನಂಬರುಗಳು ಸಿಕ್ಕಿದವು. ಅವು ಇಬ್ಬರು ರಿಯಲ್ ಎಸ್ಟೇಟ್ ಏಜೆಂಟುಗಳ ನಂಬರುಗಳಾಗಿದ್ದವು. ಅವರಲ್ಲೊಬ್ಬ ತಾನು ಆ ಮನೆಯನ್ನು ಅಕ್ಯುಪಂಕ್ಚರ್ ಸೆಂಟರ್ ನಡೆಸುವುದಕ್ಕಾಗಿ ವ್ಯಕ್ತಿಯೊಬ್ಬನಿಗೆ ಬಾಡಿಗೆಗೆ ಕೊಟ್ಟಿದ್ದುದಾಗಿ ಹೇಳಿದ.

ಆರೋಪಿಗಳನ್ನು ನ್ಯಾಯಾಲಯಕ್ಕೆ ಕರೆದೊಯ್ಯುವಾಗ

ಆ ಮೊಬೈಲನ್ನು ಕೊನೆಯ ಬಾರಿಗೆ ದಕ್ಷಿಣ ಕನ್ನಡ ಗಡಿಯಲ್ಲಿ, ಕೊಡಗಿನಲ್ಲಿರುವ ಸಂಪಾಜೆ ಗ್ರಾಮದಲ್ಲಿ ಬಳಸಿದ್ದು ಪೊಲೀಸರಿಗೆ ತಿಳಿಯಿತು. ಆಗ ಅವರಿಗೆ ಗೊತ್ತಾಯಿತು- ಸಂಪಾ ಎಂದರೆ ವ್ಯಕ್ತಿಯಲ್ಲ, ಊರು ಎಂದು. ಎಂ.ಎನ್. ಎಂದರೆ ಆ ವ್ಯಕ್ತಿಯ ಹೆಸರು ಎಂದು ಊಹಿಸುವುದು ಸುಲಭವಾಗಿತ್ತು. ಪೊಲೀಸರು ಸಂಪಾಜೆ ತಲಪಿ, ಅಲ್ಲಿ ಅಕ್ಯುಪಂಕ್ಚರ್ ಬಲ್ಲವರ ಬಗ್ಗೆ ವಿಚಾರಿಸಲು ಆರಂಭಿಸಿದರು. ಸ್ವಲ್ಪ ಸಮಯದಲ್ಲೇ ‘ಸಂಪಾ’ ಬಲೆಗೆ ಬಿದ್ದ. ಅವನ ಹೆಸರು ಮೋಹನ್ ನಾಯಕ್ ಎಂದಾಗಿತ್ತು. ಮೂವರು ಹಂತಕರು ಪರಶುರಾಮ ವಾಘ್‌ಮೋರೆ, ಗಣೇಶ ಮಿಸ್ಕಿನ್ ಮತ್ತು ಅಮಿತ್ ಬಡ್ಡಿ ಯಾವುದೇ ಗಮನ ಸೆಳೆಯದಂತೆ ವಾಸಿಸಲು ಅನುಕೂಲಕ್ಕಾಗಿ, ಅಮೋಲ್ ಕಾಳೆಯ ಸೂಚನೆಯಂತೆ ತಾನು ಆ ಮನೆಯನ್ನು ಬಾಡಿಗೆಗೆ ಪಡೆದು ಅಕ್ಯುಪಂಕ್ಚರ್ ಸೆಂಟರ್ ತೆರೆದುದಾಗಿ ಮನೋಹರ ನಾಯಕ್ ಒಪ್ಪಿಕೊಂಡ.

8. ರಾಜೇಶ್‌ ಬಂಗೇರಾ

ಪೊಲೀಸರ ಮುಂದಿದ್ದ ಒಂದು ಒಗಟೆಂದರೆ, ಪಿಸ್ತೂಲು ಬಳಕೆಯ ಬಗ್ಗೆ ತರಬೇತಿ ನೀಡಿದವರು ಯಾರು ಎಂಬುದು. ಅಮೋಲ್ ಕಾಳೆ ಸೇರಿದಂತೆ ಎಲ್ಲಾ ಆರೋಪಿಗಳು ಆತನನ್ನು ‘ಸರ್’ ಎಂದು ಕರೆಯುತ್ತಿದ್ದರು. ಮತ್ತೆ ವಶಪಡಿಸಿಕೊಳ್ಳಲಾದ ಡೈರಿಗಳು ನೆರವಿಗೆ ಬಂದವು. ಅವುಗಳೊಂದರಲ್ಲಿ ಈ ‘ಸರ್’ ಇದ್ದ. ಅದರ ಮುಂದೆ ಇದ್ದ ಮೊಬೈಲ್ ನಂಬರ್ ಕೊಡಗಿನದ್ದೆಂದು ಎಸ್‌ಐಟಿಗೆ ಗೊತ್ತಾಯಿತು.

ಮನೋಹರ ನಾಯಕ್ ಕೂಡಾ ಕೊಡಗಿನವನೇ ಆಗಿರುವುದರಿಂದ ಅವನಿಗೆ ಈತನ ಸಂಪರ್ಕವಿರಬೇಕು ಎಂದು ತರ್ಕಿಸಿದ ಎಸ್‌ಐಟಿ, ಆತನ ಕಾಲ್ ರೆಕಾರ್ಡ್‌ನ ವಿಶ್ಲೇಷಣೆ ನಡೆಸಿದಾಗ, ಒಂದು ಹೆಸರು ಎದ್ದು ಕಾಣುತ್ತಿತ್ತು. ಯಾಕೆಂದರೆ, ಅವರಿಬ್ಬರೂ ಆಗಿಂದಾಗ್ಗೆ ಮಾತಾಡುತ್ತಿದ್ದರು. ಆ ವ್ಯಕ್ತಿಯ ಹೆಸರು ರಾಜೇಶ್ ಬಂಗೇರ ಎಂದಾಗಿತ್ತು. ಆತನನ್ನು ಬಂಧಿಸಲಾಯಿತು.

ವಿಚಾರಣೆಯ ವೇಳೆ, ತಾನು ಇತರ ಆರೋಪಿಗಳಿಗೆ ಬೆಳಗಾವಿ ಜಿಲ್ಲೆಯ ತೋಟದ ಮನೆಯೊಂದರಲ್ಲಿ ಪಿಸ್ತೂಲು ಬಳಸುವ ತರಬೇತಿ ನೀಡಿದುದಾಗಿಯೂ, ತಾನು 1990ರ ದಶಕದಲ್ಲಿ ‘ಸನಾತನ ಸಂಸ್ಥೆ’ ಎಂಬ ಸಂಘಟನೆ ಸೇರಿದ್ದು, ಆ ಸಂಸ್ಥೆಯು ಶಸ್ತ್ರಾಸ್ತ್ರ ತರಬೇತಿ ನೀಡಿದ್ದವರಲ್ಲಿ ತಾನೂ ಒಬ್ಬ ಎಂದು ರಾಜೇಶ್ ಬಂಗೇರ ತಿಳಿಸಿದ. ತಾನು ಈ ತರಬೇತಿಯಲ್ಲಿ ಅತ್ಯುತ್ತಮವಾಗಿದ್ದುದರಿಂದ, ಹೊಸದಾಗಿ ಸಂಘಟನೆ ಸೇರಿದವರಿಗೆ ತರಬೇತಿ ನೀಡುತ್ತಿದ್ದೆ ಎಂದು ಆತ ತಿಳಿಸಿದ. ಇದಕ್ಕೂ ಹೆಚ್ಚಾಗಿ, ನರೇಂದ್ರ ದಾಬೋಲ್ಕರ್ ಮತ್ತು ಎಂ‌.ಎಂ. ಕಲಬುರ್ಗಿಯವರ ಹಂತಕರಿಗೆ ತರಬೇತಿ ನೀಡಿದವನು ತಾನೇ ಎಂದು ಹೇಳಿಕೊಂಡನಾದರೂ, ಅವರ ಬಗ್ಗೆ ತನಗೆ ಯಾವುದೇ ಮಾಹಿತಿ ಇಲ್ಲ ಎಂದು ಹೇಳಿದ.

9. ಆರೋಪಿಯಾಗಿ ಬದಲಾದ ಸಾಕ್ಷಿ

ಎರಡು ಮನೆಗಳು ಈಗ ತನಿಖೆಗೆ ಮುಖ್ಯವಾಗಿದ್ದವು. ಅವುಗಳಲ್ಲಿ ಒಂದಾದ ಕುಂಬಳಗೋಡಿನ ಮನೆ ಹಂತಕರು ವಾಸಿಸುತ್ತಿದ್ದದ್ದು. ಎರಡನೇ ಮನೆ ಸೀಗೆಹಳ್ಳಿಯಲ್ಲಿ ಅಮೋಲ್ ಕಾಳೆ ಮತ್ತು ಇತರರು ವಾಸಿಸುತ್ತಿದ್ದದ್ದು. ಕುಂಬಳಗೋಡಿನ ಮನೆ ವಿಷಯ ಆಗಲೇ ಗೊತ್ತಿದ್ದುದರಿಂದ, ಎಸ್‌ಐಟಿಯವರು ಸೀಗೆಹಳ್ಳಿಯ ಮನೆಗೆ ಹೋದರು. ಅದು ಎಚ್.ಎಲ್. ಸುರೇಶ್ ಎಂಬವನದ್ದಾಗಿತ್ತು. ತಾನು ಕೇವಲ ಮನೆ ಮಾಲಕನಾಗಿದ್ದು, ತನಗೆ ಈ ಸಂಚಿನ ಬಗ್ಗೆ ಏನೇನೂ ಗೊತ್ತಿಲ್ಲ ಎಂದು ಆತ ಹೇಳಿದ. ಎಸ್‌ಐಟಿ ಆತನ ಮಾತುಗಳನ್ನು ನಂಬಿತು ಮತ್ತು ಅತನನ್ನು ಈ ಪ್ರಕರಣದಲ್ಲಿ ಸಾಕ್ಷಿಯಾಗಿ ಮಾಡಿತು. ಆತ, ತಾನು ಈ ಪ್ರಕರಣದ ಸಾಕ್ಷಿ ಎಂದು ಸಿಆರ್‌ಪಿಸಿ ವಿಧಿ 164ರ ಅನ್ವಯ ಮ್ಯಾಜಿಸ್ಟ್ರೇಟ್ ಒಬ್ಬರ ಮುಂದೆ ಹೇಳಿಕೆಯನ್ನೂ ದಾಖಲಿಸಿದ.

ಆದರೆ ಇನ್ನಷ್ಟು ಬಂಧನಗಳು ನಡೆದಾಗ ಆತನ ಬಣ್ಣ ಬಯಲಾಯಿತು. ಈ ಸುರೇಶ ಕೂಡಾ ಸಂಚಿನ ಪಾಲುದಾರನಾಗಿದ್ದ. ಎಸ್‌ಐಟಿ ಹೇಳುವಂತೆ ಸುರೇಶ, ಆರೋಪಿಗಳಿಗೆ ಆಶ್ರಯ ನೀಡಿ,  ಅಡುಗೆಯನ್ನೂ ಮಾಡಿಕೊಡುತ್ತಿದ್ದ ಮತ್ತು ನಂತರ ಸಾಕ್ಷ್ಯಗಳನ್ನೂ ನಾಶಪಡಿಸಿದ್ದ. ಗೌರಿ ಹತ್ಯೆಯ ಬಳಿಕ ಹಂತಕರು ಹಾಕಿದ್ದ ಬಟ್ಟೆಗಳನ್ನು ವಿಲೇವಾರಿ ಮಾಡುವ ಕೆಲಸವನ್ನು ಸುರೇಶನಿಗೆ ವಹಿಸಲಾಗಿತ್ತು. ಮುಂದಿನ ದಿಗಳಲ್ಲಿ ಆತ ಅವುಗಳನ್ನು ನಗರದ ಬೇರೆ ಬೇರೆ ಭಾಗಗಳಲ್ಲಿ ಎಸೆದುಬಂದಿದ್ದ. ಸುರೇಶ ಕನಿಷ್ಟ 2008ರಿಂದ ಗೋವಾ ಮೂಲದ ‘ಹಿಂದೂತ್ವ’ ಸಂಘಟನೆಯ ಸಕ್ರಿಯ ಸದಸ್ಯನಾಗಿದ್ದು, ಅಮೋಲ್ ಕಾಳೆಯ ಹತ್ತಿರದ ಗೆಳೆಯನೂ ಆಗಿದ್ದ. ಬೇಗನೇ ಸಾಕ್ಷಿಯಾಗಿದ್ದ ಸುರೇಶ 11ನೇ ಆರೋಪಿಯಾದ.

10. ಅಂಕಲ್ ಮತ್ತು ತೋಟದಮನೆ

ಬಂಗೇರನ ಬಂಧನದ ನಂತರವೂ ಇನ್ನಷ್ಟು ಆರೋಪಿಗಳನ್ನು ಬಂಧಿಸುವುದು ಬಾಕಿಯಿತ್ತು. ಕಾಳೆಯ ಮನೆಯಲ್ಲಿ ವಶಪಡಿಸಿಕೊಂಡ ಡೈರಿಗಳು, ಕಸ್ಟಡಿಯಲ್ಲಿ ಆರೋಪಿಗಳ ವಿಚಾರಣೆಯ ವೇಳೆ ಒಬ್ಬ ‘ಅಂಕಲ್’ ಕಾಣಿಸಿಕೊಂಡಿದ್ದ. ಆತ ಈ ಗ್ಯಾಂಗಿನ ಸಭೆಗಳಲ್ಲಿ ಭಾಗವಹಿಸಿದ್ದ. ಅವನನ್ನು ‘ಟಮಾಟರ್’ ಅಂದರೆ ಟೊಮೆಟೊ ಎಂದೂ ಕರೆಯಲಾಗುತ್ತಿತ್ತು. ಯಾಕೆಂದರೆ, ಆತ ತರಕಾರಿ ಮಾರುತ್ತಿದ್ದನಂತೆ. ಆತ ಕುಂಬಳಗೋಡಿನ ಮನೆಯಲ್ಲಿ ಹಂತಕರ ಜೊತೆಗೂ ಇದ್ದ. ಗೌರಿಯವರಿಗೆ ಗುಂಡಿಕ್ಕಿದ ಬಳಿಕ ಪರಶುರಾಮ ವಾಘ್‌ಮೋರೆಯನ್ನು ನಗರದ ಹೊರವಲಯಕ್ಕೆ ಬಿಟ್ಟೂ ಬಂದಿದ್ದ. ಯಾರು ಈ ‘ಅಂಕಲ್’ ಎಂಬುದು ಎಸ್‌ಐಟಿಗೆ ಸಮಸ್ಯೆಯಾಯಿತು.

ಗಣೇಶ ಮಿಸ್ಕಿನ್‌ ಬಂಧನದಲ್ಲಿ ಆರೋಪಿಯೊಬ್ಬ ಪ್ರಮುಖ ಪಾತ್ರ ವಹಿಸಿದ್ದ. ವಿಚಾರಣೆಯ ವೇಳೆ ಆತ, ತಾವು ‘ಅಂಕಲ್’ನನ್ನು ಭೇಟಿಯಾದ ಜಾಗವನ್ನು ತೋರಿಸುವುದಾಗಿ ಹೇಳಿದ್ದ. ಅದರಂತೆಯೇ ಆತ ಎಸ್‌ಐಟಿ ಪೊಲೀಸರನ್ನು ಬೆಳಗಾವಿಯ ಖಾನಾಪುರದಲ್ಲಿರುವ ಮೂರೆಕರೆಯ ತೋಟದ ಮನೆಗೆ ಕರೆದೊಯ್ದ. ಅದೇ ತೋಟದ ಮನೆಯಲ್ಲಿ ರಾಜೇಶ್ ಬಂಗೇರ ಹತ್ಯೆ ಆರೋಪಿಗಳಿಗೆ, ಮತ್ತಿತರರಿಗೆ ತರಬೇತಿ ನೀಡಿದ್ದುದು. ಅಲ್ಲದೇ, ಹತ್ಯೆಯ ಯೋಜನೆ ರೂಪಿಸುವ ಹಲವು ಸಭೆಗಳು ನಡೆದಿದ್ದುದೂ ಇದೇ ತೋಟದ ಮನೆಯಲ್ಲಿ. ಈ ತೋಟದಮನೆ ಮಹಿಳೆಯೊಬ್ಬರ ಹೆಸರಿನಲ್ಲಿ ನೋಂದಣಿಯಾಗಿತ್ತು. ವಿಚಾರಣೆಯ ವೇಳೆ ಪೊಲೀಸರು ಆಕೆಯಿಂದ ಆಕೆಯ ಮಕ್ಕಳಿಬ್ಬರ ಫೊಟೋ ಪಡೆದರು. ಅವರಲ್ಲಿ ಒಬ್ಬನ ಫೊಟೋವನ್ನು ಮಿಸ್ಕಿನ್, ‘ಅಂಕಲ್’ಎಂದು ಗುರುತಿಸಿದ. ಅವನೇ ಭರತ್ ಕುರ್ಣೆ. ಆತ ಈ ಪ್ರಕರಣದಲ್ಲಿ ಬಂಧಿತನಾದ 11ನೇ ವ್ಯಕ್ತಿ.

11. ಪೂರ್ತಿ ಗುಡಿಸುವ ಕೆಲಸ
ಬಹುತೇಕ ಎಲ್ಲಾ ಸಂಚುಕೋರರನ್ನು ಬಂಧಿಸಲಾಗಿದ್ದರೂ, ಹತ್ಯೆ ಸಂಚಿನಲ್ಲಿ ಶಾಮೀಲಾದ ಎಲ್ಲರನ್ನೂ ಗುಡಿಸುವ ಕೆಲಸ ಇನ್ನೂ ಬಾಕಿಯಿತ್ತು. ವಿಚಾರಣೆಯ ವೇಳೆ ಆರೋಪಿಗಳು ಹತ್ಯೆಯ ವೇಳೆ ಬಳಸಿದ್ದ ಬೈಕ್ ಕಳವು, ಪಿಸ್ತೂಲಿನ ವಿಲೇವಾರಿ ಇತ್ಯಾದಿಗಳಲ್ಲಿ ಪಾಲುಗೊಂಡಿದ್ದ ಇನ್ನೂ ನಾಲ್ವರ ಹೆಸರುಗಳನ್ನು ಬಾಯಿಬಿಟ್ಟಿದ್ದರು. ಗೌರಿ ಹತ್ಯೆ ಮತ್ತು ಮಹಾರಾಷ್ಟ್ರದಲ್ಲಿ ನಡೆದಿದ್ದ ದಾಬೋಲ್ಕರ್ ಮತ್ತು ಪನ್ಸಾರೆ ಹತ್ಯೆಗಳ ನಡುವೆ ಸಂಬಂಧ ಇದ್ದುದರಿಂದ ಕರ್ನಾಟಕ ಎಸ್‌ಐಟಿ, ಮಹಾರಾಷ್ಟ್ರ ಪೊಲೀಸರೊಂದಿಗೆ ಈ ಮಾಹಿತಿಗಳನ್ನು ಹಂಚಿಕೊಂಡಿತ್ತು.

ಪರಿಣಾಮ ನಿರೀಕ್ಷೆ ಮೀರಿತ್ತು. ಮಹಾರಾಷ್ಟ್ರ ಭಯೋತ್ಪಾದಕ ವಿರೋಧಿ ದಳ (ಎಟಿಎಸ್), ಮುಂಬಯಿಯ ನಲಸೊಪಾರ ಮತ್ತು ಪುಣೆಯಲ್ಲಿ ನಡೆಸಿದ ದಾಳಿಯಲ್ಲಿ ದೊಡ್ಡ ಪ್ರಮಾಣದ ಶಸ್ತ್ರಾಸ್ತ್ರ ವಶವಾಗಿತ್ತು. ಅದರ ನಂತರ ನಡೆದ ಬಂಧನ ಸರಣಿಯಲ್ಲಿ ಕರ್ನಾಟಕ ಎಸ್‌ಐಟಿಗೆ ಬೇಕಾಗಿದ್ದ ನಾಲ್ವರೂ ಇದ್ದರು. ಅವರಲ್ಲೊಬ್ಬ, ವಾಸುದೇವ ಸೂರ್ಯವಂಶಿ. ಈತ ಮೋಟಾರ್ ಸೈಕಲ್ ಮೆಕ್ಯಾನಿಕ್ ಆಗಿದ್ದು, ಗೌರಿ ಹತ್ಯೆಗೆ ಬಳಸಿದ್ದ ಬೈಕ್ ಕದ್ದಿದ್ದ. ಇನ್ನೊಬ್ಬ ಶರದ್ ಕಾಲಸ್ಕರ್, ಗೌರಿ ಹತ್ಯೆಗೆ ಬಳಸಿದ್ದ ಪಿಸ್ತೂಲನ್ನು ವಿಲೇವಾರಿ ಮಾಡಿದ್ದ. ಶ್ರೀಕಾಂತ ಪಾಂಗರ್ಕರ್ ಸಂಚಿನ ಸಭೆಗಳಲ್ಲಿ ಭಾಗವಹಿಸಿದ್ದ. ಸುಧನ್ವ ಕಾಲಸ್ಕರ್ ಎಂಬಾತ ಹತ್ಯೆಯ ಸ್ಥಳದಲ್ಲಿ ಉಪಸ್ಥಿತನಿದ್ದ.

ಈ ನಾಲ್ವರ ಬಂಧನದೊಂದಿಗೆ ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಬಂಧಿತರ ಸಂಖ್ಯೆ 16ಕ್ಕೇರಿತು. ಸಂಚಿನಲ್ಲಿ ಭಾಗವಹಿಸಿದ್ದ ವಿಕಾಸ್ ಪಾಟೀಲ್ ಮತ್ತು ರುಷಿಕೇಶ್ ದೇವ್ಡಿಕರ್ ಎಂಬಿಬ್ಬರ ಬಂಧನ ಬಾಕಿಯಿದೆ.

ಈ ಪ್ರಕರಣದಲ್ಲಿ ವಿಶೇಷ ತನಿಖಾ ತಂಡವು ಮೂಲ ಆರೋಪಪಟ್ಟಿಗೆ ಹೆಚ್ಚುವರಿಯಾಗಿ 9,235 ಪುಟಗಳ ವಿವರವಾದ ಆರೋಪಪಟ್ಟಿಯನ್ನೂ ಸಲ್ಲಿಸಿದೆ. ತೀರ್ಪು ನ್ಯಾಯಾಲಯದ ಕೈಯ್ಯಲ್ಲಿದೆ.

(ಮುಗಿಯಿತು)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...

ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ಸಾವು : ಪಿತೂರಿ ಶಂಕೆ ವ್ಯಕ್ತಪಡಿಸಿದ ಮಮತಾ ಬ್ಯಾನರ್ಜಿ, ಉನ್ನತ ಮಟ್ಟದ ತನಿಖೆಗೆ ಒತ್ತಾಯಿಸಿದ ರಾಜಕೀಯ ನಾಯಕರು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಸಾವಿಗೆ ಕಾರಣವಾದ ಬಾರಾಮತಿ ವಿಮಾನ ಪತನದ ಕುರಿತು ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸಬೇಕೆಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ಜ.28) ಒತ್ತಾಯಿಸಿದ್ದಾರೆ....

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ ತಡೆಯಲು ಯುಜಿಸಿ ಹೊಸ ನಿಯಮ; ಮುಂದುವರೆದ ಪ್ರಬಲಜಾತಿ ಗುಂಪಿನ ವಿರೋಧ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ಪರಿಹರಿಸುವ ಗುರಿಯನ್ನು ಹೊಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಪರಿಷ್ಕೃತ ನಿಯಮಗಳ ಕುರಿತು ದೇಶದಲ್ಲಿ ಭಾರಿ ರಾಜಕೀಯ ವಾಗ್ವಾದ ಭುಗಿಲೆದ್ದಿದೆ. ಹೊಸ ಮಾರ್ಗಸೂಚಿಗಳ ಕುರಿತು...