Homeಕರ್ನಾಟಕಗೌರಿ ಲಂಕೇಶ್‌ ಹತ್ಯೆ ಪ್ರಕರಣ: ಪ್ರತಿ ತಿಂಗಳೂ ಒಂದು ವಾರ ಪೂರ್ತಿ ವಿಚಾರಣೆ ನಿಗದಿ, ಜುಲೈ...

ಗೌರಿ ಲಂಕೇಶ್‌ ಹತ್ಯೆ ಪ್ರಕರಣ: ಪ್ರತಿ ತಿಂಗಳೂ ಒಂದು ವಾರ ಪೂರ್ತಿ ವಿಚಾರಣೆ ನಿಗದಿ, ಜುಲೈ 4ರಿಂದ ಆರಂಭ

- Advertisement -
- Advertisement -

ದಿಟ್ಟ ಪತ್ರಕರ್ತೆ ಗೌರಿ ಲಂಕೇಶ್ ಅವರ ಹತ್ಯೆ ನಡೆದು ನಾಲ್ಕೂವರೆ ವರ್ಷಗಳ ಬಳಿಕ ಇಂದು (ಜುಲೈ 27) ಆರಂಭವಾದ ವಿಚಾರಣೆಯ ವೇಳೆ 18 ಜನ ಆರೋಪಿಗಳ ಪೈಕಿ 11 ಮಂದಿ ಮಾತ್ರ ಹಾಜರಾಗಿದ್ದರು.

ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆ ಆರಂಭವಾಗಿದ್ದು, ಆರೋಪಿಗಳು ಹಾಗೂ ಸಾಕ್ಷಿದಾರರ ಹೇಳಿಕೆಗಳನ್ನು ಕೋರ್ಟ್ ಪಡೆದುಕೊಳ್ಳಲಿದೆ. ಆದರೆ ಎಲ್ಲ ಆರೋಪಿಗಳು ಶುಕ್ರವಾರ ಹಾಜರಾಗದ ಕಾರಣ ಜುಲೈ 4ರಿಂದ ವಿಚಾರಣೆ ಶುರು ಮಾಡಿ, ಪ್ರತಿ ತಿಂಗಳು ಒಂದು ವಾರ ಕಾಲ ವಿಚಾರಣೆ ನಡೆಸುವುದಾಗಿ ಕೋರ್ಟ್ ತಿಳಿಸಿದೆ.

ಗೌರಿ ಲಂಕೇಶ್ ಅವರ ಸಹೋದರಿ ಕವಿತಾ ಲಂಕೇಶ್ ಅವರನ್ನು ವಿಚಾರಣೆಗೆ ಕರೆಸಿದ್ದರು. ಬಂಧಿತರಾಗಿರುವ 18 ಜನ ಆರೋಪಿಗಳ ಪೈಕಿ 11 ಮಂದಿ ಆರೋಪಿಗಳು ಕೇಂದ್ರ ಕಾರಾಗೃಹದಿಂದ ವಿಡಿಯೊ ಕಾನ್ಫರೆನ್ಸ್ ಮೂಲಕ ಹಾಜರಿದ್ದರು. ಉಳಿದ ಏಳು ಮಂದಿ ಬಂಧಿತರು ಮಹಾರಾಷ್ಟ್ರದಲ್ಲಿ ಅರ್ಥಾರ್‌ ರೋಡ್ ಜೈಲಿನಲ್ಲಿದ್ದಾರೆ. ಹೀಗಾಗಿ ಇಲ್ಲಿನ ವಿಚಾರಣೆಗೆ ಹಾಜರಾಗಿರಲಿಲ್ಲ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಆರೋಪಿಗಳನ್ನು ಗುರುತಿಸುವ ಪ್ರಕ್ರಿಯೆ ಈ ಹಂತದಲ್ಲಿ ಶುರುವಾಗಲಿದೆ. ವಿಶೇಷ ಪಬ್ಲಿಕ್‌ ಪ್ರಾಸಿಕ್ಯೂಟರ್‌ ಬಾಲನ್‌ ಮಾತನಾಡಿ, “ಘಟನೆಯ ಸಂದರ್ಭದಲ್ಲಿ ಕವಿತಾ ಲಂಕೇಶ್ ಅವರು ಹಾಜರಿರದ ಕಾರಣ ಆರೋಪಿಗಳನ್ನು ಅವರು ಗುರುತಿಸುವ ಪ್ರಶ್ನೆಯೇ ಬರುವುದಿಲ್ಲ. ಹಾಗಾಗಿ ಇದನ್ನು ಮುಖ್ಯವಾಗಿಟ್ಟುಕೊಂಡು ವಿಚಾರಣೆ ತಡ ಆಗುವುದು ಬೇಡ. ವಿಡಿಯೊ ಕಾನ್ಫರೆನ್ಸ್ ಮೂಲಕ ಎಲ್ಲ ಆರೋಪಿಗಳನ್ನು ಕರೆತಂದು ಟ್ರಯಲ್‌ ಶುರು ಮಾಡೋಣ” ಎಂದರು.

“ಆರೋಪಿ ಪರ ವಕೀಲರು ಒಪ್ಪುವುದಾದರೆ ವಿಚಾರಣೆ ಶುರುಮಾಡಲಾಗುವುದು” ಎಂದು ನ್ಯಾಯಾಧೀಶರು ಪ್ರತಿಕ್ರಿಯೆ ನೀಡಿದರು. ಆರೋಪಿಗಳ ಭೌತಿಕ ಹಾಜರಾತಿಯ ಪ್ರಶ್ನೆ ಬಂದಿತು. ವರ್ಚ್ಯೂವಲ್‌‌ ಹಾಜರಾತಿಯೂ ಸಾಧ್ಯವಾಗದ ಕಾರಣ, ಬಂಧಿತರೊಂದಿಗೆ ಮಾತನಾಡಲು ಸಾಧ್ಯವಾಗುತ್ತಿಲ್ಲ ಎಂದು ವಕೀಲರು ಪ್ರತಿಕ್ರಿಯೆ ನೀಡಿದರು.

ಜೈಲಿನ ಅಧಿಕಾರಿಗಳಿಗೆ ತಿಳಿಸಿ ಮಾತನಾಡಲು ಅವಕಾಶ ಮಾಡಿಕೊಡಲಾಗುವುದು, ಆದರೆ ವಿಚಾರಣೆಯನ್ನು ಜುಲೈ 4ರಿಂದ ಶುರು ಮಾಡಲೇಬೇಕು ಎಂದು ವಕೀಲರಿಗೆ ನ್ಯಾಯಾಧೀಶರು ಸ್ಪಷ್ಟಪಡಿಸಿದರು.

ವಿಚಾರಣೆ ಆರಂಭವಾದರೆ ಪ್ರತಿ ತಿಂಗಳು ನಿರಂತರವಾಗಿ ನಡೆಯಲಿದೆ. ಜುಲೈ 4ರಿಂದ 8 ತಾರೀಖಿನವರೆಗೆ ಮುಂದಿನ ಹಿಯರಿಂಗ್ ನಿಗದಿಯಾಗಿದೆ.

ಮೊದಲ ಹಂತದಲ್ಲಿ ಯಾರ್‍ಯಾರು ಸಾಕ್ಷಿದಾರರನ್ನು ಕರೆಸಲಾಗುವುದು ಎಂದು ಜೂನ್‌ 6ರೊಳಗೆ ಪ್ರಬ್ಲಿಕ್ ಪ್ರಾಸಿಕ್ಯೂಟರ್‌ ಮೆಮೊ ಹಾಕಬೇಕು. ಅದರ ಆಧಾರದಲ್ಲಿ ಯಾರ್‍ಯಾರನ್ನು ವಿಚಾರಣೆಗೆ ಒಳಪಡಿಸಬೇಕು ಎಂದು ಪ್ರತಿವಾದಿಗಳು ತಿಳಿಸಬೇಕಾಗಿದೆ.

“ಒಟ್ಟು 527 ಜನ ಸಾಕ್ಷಿಗಳು ಇದ್ದಾರೆ. ಅದರಲ್ಲಿ ಎಲ್ಲರನ್ನು ವಿಚಾರಣೆಗೆ ಒಳಪಡಿಸುವ ಅಗತ್ಯ ಬೀಳುವುದಿಲ್ಲ. ಕೆಲವರ ಹೇಳಿಕೆ ಒಂದೇ ರೀತಿಯಲ್ಲಿ ಇರುತ್ತದೆ. ಕನಿಷ್ಠ 250 ಸಾಕ್ಷಿಗಳನ್ನಾದರೂ ವಿಚಾರಣೆಗೆ ಒಳಪಡಿಸಬೇಕು” ಎಂದು ಬಾಲನ್ ಮಾಹಿತಿ ನೀಡಿದ್ದಾರೆ.

ಗೌರಿ ಲಂಕೇಶ್ ಹತ್ಯೆಯ ಆರೋಪಿಗಳ ಪಟ್ಟಿ ಹೀಗಿದೆ: ಅಮೋಲ್ ಕಾಳೆ (37), ಪರಶುರಾಮ್ ವಾಘ್ಮೋರೆ (27), ಗಣೇಶ್ ಮಿಸ್ಕಿನ್ (27), ಅಮಿತ್ ಬಾಡ್ (27), ಅಮಿತ್ ದೆಗ್ವೇಕರ್ (38), ಭರತ್ ಕುರಣೆ (37), ಸುರೇಶ್ ಹೆಚ್ ಎಲ್ (36), ರಾಜೇಶ್ ಬಂಗೇರ (50 ವರ್ಷ), ಸುಧನ್ವ ಗೊಂದಲೇಕರ್ (39), ಶರದ್ ಕಲಾಸ್ಕರ್ (25), ಮೋಹನ್ ನಾಯಕ್ (50), ವಾಸುದೇವ್ ಸೂರ್ಯವಂಶಿ (29), ಸುಜಿತ್ ಕುಮಾರ್ (37), ಮನೋಹರ ಎಡವೆ (29), ಶ್ರೀಕಾಂತ್ ಪಂಗರ್ಕರ್ (40), ಕೆ ಟಿ ನವೀನ್ ಕುಮಾರ್ (37) ಮತ್ತು ರುಶಿಕೇಶ್ ದಿಯೋದಿಕರ್ (44).

ಸೆಪ್ಟಂಬರ್ 05, 2017ರ ರಾತ್ರಿ ಗೌರಿ ಲಂಕೇಶ್‌ರವರ ಕಚೇರಿ ಕೆಲಸ ಮುಗಿಸಿ ಮನೆಗೆ ತಲುಪಿದಾಗ ದುಷ್ಕರ್ಮಿಗಳು ಅವರ ಮನೆ ಮುಂದು ಗುಂಡು ಹಾರಿಸಿ ಕೊಂದಿದ್ದರು. ಹತ್ಯೆ ನಡೆದು ನಾಲ್ಕೂವರೆ ವರ್ಷದ ನಂತರ ವಿಚಾರಣೆ ಆರಂಭವಾಗುತ್ತಿದೆ.

ಆರೋಪಿಗಳ ಪರವಾಗಿ 60ಕ್ಕೂ ಹೆಚ್ಚು ವಕೀಲರು ವಕಾಲತ್ತು ವಹಿಸಿದ್ದರು. ಅವರು ಸಲ್ಲಿಸಿದ್ದ ಅರ್ಜಿಗಳ ವಿಚಾರಣೆಯ ಕಾರಣಕ್ಕೆ ಹತ್ಯೆ ಪ್ರಕರಣದ ವಿಚಾರಣೆ ತಡವಾಗಿದೆ ಎಂದು ಪ್ರಾಸಿಕ್ಯೂಷನ್ ವಕೀಲರು ಹೇಳಿದ್ದಾರೆ.

ಗೌರಿ ಲಂಕೇಶ್ ಹತ್ಯೆ ಸಂದರ್ಭದಲ್ಲಿ ಕರ್ನಾಟಕ ಸರ್ಕಾರ ನೇಮಿಸಿದ್ದ ಎಸ್‌ಐಟಿ ತಂಡವು 17 ಆರೋಪಿಗಳನ್ನು ಬಂಧಿಸಿ ಅವರು ವಿರುದ್ದ 8500 ಪುಟಗಳ ಚಾರ್ಜ್ ಶೀಟ್ ಸಲ್ಲಿಸಿತ್ತು.

ಧಾರವಾಡದಲ್ಲಿ ಕನ್ನಡ ವಿದ್ವಾಂಸ ಎಂ.ಎಂ.ಕಲಬುರ್ಗಿ, ಕೊಲ್ಲಾಪುರದಲ್ಲಿ ಎಡಪಂಥೀಯ ಚಿಂತಕ ಗೋವಿಂದ್ ಪನ್ಸಾರೆ ಹತ್ಯೆಗೆ ಬಳಸಿದ 7.65 ಎಂಎಂ ಕಂಟ್ರಿಮೇಡ್ ಪಿಸ್ತೂಲ್, ಗೌರಿ ಲಂಕೇಶ ಅವರ ಹತ್ಯೆಗೂ ಬಳಕೆಯಾಗಿದೆ ಎಂದು ಎಸ್‌ಐಟಿ ಪತ್ತೆ ಹಚ್ಚಿತ್ತು.

ಇದನ್ನೂ ಓದಿರಿ: ಗೌರಿ ಲಂಕೇಶ್ ಹತ್ಯಾ ಆರೋಪಿ ಮೇಲಿನ ಕೋಕಾ ಮೊಕದ್ದಮೆ ಎತ್ತಿ ಹಿಡಿದ ಸುಪ್ರೀಂ

ಮಹಾರಾಷ್ಟ್ರದ ವಿಚಾರವಾದಿ ನರೇಂದ್ರ ದಾಭೋಲ್ಕರ್ ಅವರನ್ನು ಹತ್ಯೆ ಮಾಡಲು ಬಳಸಿದ ಬಂದೂಕಿಗೂ ಪನ್ಸಾರೆ ಗುಂಡಿನ ದಾಳಿಯಲ್ಲಿ ಬಳಸಿದ ಎರಡನೇ ಬಂದೂಕಿಗೂ ಹೊಂದಾಣಿಕೆಯಾಗಿರುವುದು ಕಂಡುಬಂದಿತ್ತು.

ಗೌರಿ ಲಂಕೇಶ್‌ ಅವರ ಹತ್ಯೆ ಆರೋಪಿಗಳಲ್ಲಿ ಒಬ್ಬನಾದ, ಅಮೋಲ್ ಕಾಳೆ ಸಹಚರ ಮೋಹನ್ ನಾಯಕ್‌ ವಿರುದ್ದ ದಾಖಲಾಗಿದ್ದ ‘ಕರ್ನಾಟಕ ಸಂಘಟಿತ ಅಪರಾಧಗಳ ಕಾಯ್ದೆ’ (KCOCA) ಪ್ರಕರಣವನ್ನು ಕರ್ನಾಟಕ ಹೈಕೊರ್ಟ್ ಈ ಹಿಂದೆ ರದ್ದು ಮಾಡಿತ್ತು. ಇದನ್ನು ಸುಪ್ರೀಂಕೋರ್ಟ್‌ನಲ್ಲಿ ಗೌರಿ ಲಂಕೇಶ್‌ ಅವರ ಸಹೋದರಿ ಕವಿತಾ ಲಂಕೇಶ್‌‌ ಅವರು ಪ್ರಶ್ನಿಸಿದ್ದರು.

“ಗೌರಿ ಲಂಕೇಶ್ ಅವರ ಹತ್ಯೆ ಸಾಮಾನ್ಯ ಕೊಲೆ ಅಲ್ಲ. ಒಂದು ಸಂಘಟಿತ ಮತ್ತು ಸೈದ್ಧಾಂತಿಕ ದ್ವೇಷದ ಕಾರಣಕ್ಕೆ ನಡೆಸಲಾದ ಹತ್ಯೆ. ಕೋಕಾ ಕಾಯ್ದೆಯನ್ನು ಕೈಬಿಡುವುದರಿಂದ ಹತ್ಯೆಯ ಹಿಂದಿರುವ ಕಾಣದ ಕೈಗಳಿಗೆ ಶಿಕ್ಷೆಯಾಗುವುದಿಲ್ಲ” ಎಂದು ಕವಿತಾ ಲಂಕೇಶ್ ಅವರ ಪರವಾಗಿ ನ್ಯಾಯವಾದಿ ತೀಸ್ತಾ ಸೆತಲ್ವಾದ್‌ ಅವರು ಸುಪ್ರೀಂ ಕೋರ್ಟ್‌ನಲ್ಲಿ ವಾದಿಸಿದ್ದರು. ನಂತರ ಸುಪ್ರೀಂ ಕೋರ್ಟ್ ಹೈಕೋರ್ಟ್ ಆದೇಶಕ್ಕೆ ತಡೆ ನೀಡಿ, ಕೋಕಾ ಕಾಯ್ದೆ ಹೇರಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...