Homeಕರ್ನಾಟಕಗೌರಿ ಲಂಕೇಶ್‌ ಹತ್ಯೆ ಪ್ರಕರಣ: 17 ಆರೋಪಿಗಳ ಮೇಲೆ KCOCA, ಐಪಿಸಿ ಅಡಿ ದೋಷಾರೋಪ

ಗೌರಿ ಲಂಕೇಶ್‌ ಹತ್ಯೆ ಪ್ರಕರಣ: 17 ಆರೋಪಿಗಳ ಮೇಲೆ KCOCA, ಐಪಿಸಿ ಅಡಿ ದೋಷಾರೋಪ

- Advertisement -
- Advertisement -

ಬೆಂಗಳೂರಿನ ಸಂಘಟಿತ ಅಪರಾಧಗಳ ವಿಶೇಷ ನ್ಯಾಯಾಲಯವು ಪತ್ರಕರ್ತೆ, ದಿಟ್ಟ ಹೋರಾಟಗಾರ್ತಿ ಗೌರಿ ಲಂಕೇಶ್‌ ಅವರ ಹತ್ಯೆಗೆ ಸಂಬಂಧಿಸಿದಂತೆ ಉಗ್ರ ಬಲಪಂಥೀಯ ಸಂಘಟನೆಯ 17 ಜನರ ಮೇಲೆ ಕೊಲೆ, ಸಂಘಟಿತ ಅಪರಾಧ ಕೃತ್ಯಗಳ ಅಡಿ ದೋಷಾರೋಪ ಮಾಡಿದೆ.

ಕ್ರಿಮಿನಲ್ ಪಿತೂರಿ ಮತ್ತು ಕ್ರಿಮಿನಲ್ ಉದ್ದೇಶದಿಂದ ನಡೆಸಿದ ಅಪರಾಧಗಳಿಗೆ ಸಂಬಂಧಿಸಿದ ಐಪಿಸಿ ಸೆಕ್ಷನ್‌ಗಳ ಅಡಿಯಲ್ಲಿ ದೋಷಾರೋಪಗಳನ್ನು ದಾಖಲಿಸಲಾಗಿದೆ. ಕರ್ನಾಟಕ ಸಂಘಟಿತ ಅಪರಾಧ ಕಾಯಿದೆ 2000 ಮತ್ತು ಶಸ್ತ್ರಾಸ್ತ್ರ ಕಾಯಿದೆ, 1959ರ ಅಡಿಯಲ್ಲಿ ಆರೋಪಗಳನ್ನು ದಾಖಲು ಮಾಡಲಾಗಿದೆ. ನ್ಯಾಯಾಲಯವು ಡಿಸೆಂಬರ್ 8ರಂದು ವಿಚಾರಣೆಯನ್ನು ಪ್ರಾರಂಭಿಸಲು ದಿನಾಂಕವನ್ನು ನಿಗದಿಪಡಿಸಲಿದೆ.

ವಿವಿಧ ಬಲಪಂಥೀಯ ಹಿಂದುತ್ವವಾದಿ ಸಂಘಟನೆಗಳಿಂದ ಬಂದ 17 ಆರೋಪಿಗಳನ್ನು ಕರ್ನಾಟಕ ಪೊಲೀಸ್ ವಿಶೇಷ ತನಿಖಾ ತಂಡ ಬಂಧಿಸಿದೆ. ಲಂಕೇಶ್ ಅವರನ್ನು “ಹಿಂದೂ ವಿರೋಧಿ” ಎಂದು ಟಾರ್ಗೆಟ್‌ ಮಾಡಲಾಗಿತ್ತು.

ಬೆಂಗಳೂರು ಸೆಂಟ್ರಲ್ ಜೈಲು, ಮುಂಬೈನ ಆರ್ಥರ್ ರೋಡ್ ಜೈಲು ಮತ್ತು ಪುಣೆಯ ಯರವಾಡ ಜೈಲಿನಲ್ಲಿರುವ 17 ಜನರನ್ನು ವೀಡಿಯೊ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಆರೋಪಿಗಳು ತಪ್ಪೊಪ್ಪಿಕೊಂಡಿಲ್ಲ.

ಸುಗಮ ವಿಚಾರಣೆಯನ್ನು ಖಚಿತಪಡಿಸಿಕೊಳ್ಳಲು, “ನಿರ್ದಿಷ್ಟ ಆದೇಶಗಳಿಲ್ಲದೆ ಯಾವುದೇ ಆರೋಪಿಗಳನ್ನು ಬೇರೆ ಯಾವುದೇ ಜೈಲಿಗೆ ವರ್ಗಾಯಿಸಬೇಡಿ” ಎಂದು ಜೈಲಿನ ಅಧಿಕಾರಿಗಳಿಗೆ ನ್ಯಾಯಾಲಯ ನಿರ್ದೇಶನ ನೀಡಿದೆ. 

ಎಸ್‌ಐಟಿ ಸುಮಾರು ಮೂರು ವರ್ಷಗಳ ಹಿಂದೆ ಆರೋಪಪಟ್ಟಿ ಸಲ್ಲಿಸಿದ್ದು, ಆರೋಪಿಗಳು ಸಲ್ಲಿಸಿದ ವಿವಿಧ ಅರ್ಜಿಗಳು, ಅವರು ವಿವಿಧ ಜೈಲುಗಳಲ್ಲಿರುವುದು ಮತ್ತು ಕೋವಿಡ್ ಪರಿಸ್ಥಿತಿಯಿಂದಾಗಿ ವಿಚಾರಣೆಯ ಪ್ರಾರಂಭವು ವಿಳಂಬವಾಯಿತು. ಆರೋಪಗಳನ್ನು ರೂಪಿಸುವ ಹಂತದಲ್ಲಿ ಎಲ್ಲಾ ಆರೋಪಿಗಳು ನ್ಯಾಯಾಲಯಕ್ಕೆ ಹಾಜರಾಗಬೇಕಿತ್ತು. 17 ಆರೋಪಿಗಳು ಅಂತಿಮವಾಗಿ ಬೆಂಗಳೂರು ನ್ಯಾಯಾಲಯಕ್ಕೆ ಶನಿವಾರ ಹಾಜರುಪಡಿಸಲಾಗಿತ್ತು.

ಧಾರವಾಡದಲ್ಲಿ ಕನ್ನಡ ವಿದ್ವಾಂಸ ಎಂ.ಎಂ.ಕಲಬುರ್ಗಿ, ಕೊಲ್ಲಾಪುರದಲ್ಲಿ ಎಡಪಂಥೀಯ ಚಿಂತಕ ಗೋವಿಂದ್ ಪನ್ಸಾರೆ ಹತ್ಯೆಗೆ ಬಳಸಿದ 7.65 ಎಂಎಂ ಕಂಟ್ರಿಮೇಡ್ ಪಿಸ್ತೂಲ್, ಗೌರಿ ಲಂಕೇಶ ಅವರ ಹತ್ಯೆಗೂ ಬಳಕೆಯಾಗಿದೆ ಎಂದು ಎಸ್‌ಐಟಿ ಪತ್ತೆ ಹಚ್ಚಿತ್ತು.

ಮಹಾರಾಷ್ಟ್ರದ ವಿಚಾರವಾದಿ ನರೇಂದ್ರ ದಾಭೋಲ್ಕರ್ ಅವರನ್ನು ಹತ್ಯೆ ಮಾಡಲು ಬಳಸಿದ ಬಂದೂಕಿಗೂ ಪನ್ಸಾರೆ ಗುಂಡಿನ ದಾಳಿಯಲ್ಲಿ ಬಳಸಿದ ಎರಡನೇ ಬಂದೂಕಿಗೂ ಹೊಂದಾಣಿಕೆಯಾಗಿರುವುದು ಕಂಡುಬಂದಿದೆ.

ಆರೋಪಿಗಳು: ಅಮೋಲ್ ಕಾಳೆ (37), ಪರಶುರಾಮ್ ವಾಘ್ಮೋರೆ (27), ಗಣೇಶ್ ಮಿಸ್ಕಿನ್ (27), ಅಮಿತ್ ಬಾಡ್ (27), ಅಮಿತ್ ದೆಗ್ವೇಕರ್ (38), ಭರತ್ ಕುರಣೆ (37), ಸುರೇಶ್ ಹೆಚ್ ಎಲ್ (36), ರಾಜೇಶ್ ಬಂಗೇರ (50 ವರ್ಷ), ಸುಧನ್ವ ಗೊಂದಲೇಕರ್ (39), ಶರದ್ ಕಲಾಸ್ಕರ್ (25), ಮೋಹನ್ ನಾಯಕ್ (50), ವಾಸುದೇವ್ ಸೂರ್ಯವಂಶಿ (29), ಸುಜಿತ್ ಕುಮಾರ್ (37), ಮನೋಹರ ಎಡವೆ (29), ಶ್ರೀಕಾಂತ್ ಪಂಗರ್ಕರ್ (40), ಕೆ ಟಿ ನವೀನ್ ಕುಮಾರ್ (37) ಮತ್ತು ರುಶಿಕೇಶ್ ದಿಯೋದಿಕರ್ (44).


ಇದನ್ನೂ ಓದಿರಿ: ಗೌರಿ ಲಂಕೇಶ್ ಹತ್ಯೆ ಆರೋಪಿ ವಿರುದ್ಧದ KCOCA ರದ್ದುಗೊಳಿಸುವ ಕುರಿತ ಆದೇಶ ಕಾಯ್ದಿರಿಸಿದ ಸುಪ್ರೀಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...