Homeಕರ್ನಾಟಕಗೌರಿ ಲಂಕೇಶ್‌ ಹತ್ಯೆ ಪ್ರಕರಣ: 17 ಆರೋಪಿಗಳ ಮೇಲೆ KCOCA, ಐಪಿಸಿ ಅಡಿ ದೋಷಾರೋಪ

ಗೌರಿ ಲಂಕೇಶ್‌ ಹತ್ಯೆ ಪ್ರಕರಣ: 17 ಆರೋಪಿಗಳ ಮೇಲೆ KCOCA, ಐಪಿಸಿ ಅಡಿ ದೋಷಾರೋಪ

- Advertisement -
- Advertisement -

ಬೆಂಗಳೂರಿನ ಸಂಘಟಿತ ಅಪರಾಧಗಳ ವಿಶೇಷ ನ್ಯಾಯಾಲಯವು ಪತ್ರಕರ್ತೆ, ದಿಟ್ಟ ಹೋರಾಟಗಾರ್ತಿ ಗೌರಿ ಲಂಕೇಶ್‌ ಅವರ ಹತ್ಯೆಗೆ ಸಂಬಂಧಿಸಿದಂತೆ ಉಗ್ರ ಬಲಪಂಥೀಯ ಸಂಘಟನೆಯ 17 ಜನರ ಮೇಲೆ ಕೊಲೆ, ಸಂಘಟಿತ ಅಪರಾಧ ಕೃತ್ಯಗಳ ಅಡಿ ದೋಷಾರೋಪ ಮಾಡಿದೆ.

ಕ್ರಿಮಿನಲ್ ಪಿತೂರಿ ಮತ್ತು ಕ್ರಿಮಿನಲ್ ಉದ್ದೇಶದಿಂದ ನಡೆಸಿದ ಅಪರಾಧಗಳಿಗೆ ಸಂಬಂಧಿಸಿದ ಐಪಿಸಿ ಸೆಕ್ಷನ್‌ಗಳ ಅಡಿಯಲ್ಲಿ ದೋಷಾರೋಪಗಳನ್ನು ದಾಖಲಿಸಲಾಗಿದೆ. ಕರ್ನಾಟಕ ಸಂಘಟಿತ ಅಪರಾಧ ಕಾಯಿದೆ 2000 ಮತ್ತು ಶಸ್ತ್ರಾಸ್ತ್ರ ಕಾಯಿದೆ, 1959ರ ಅಡಿಯಲ್ಲಿ ಆರೋಪಗಳನ್ನು ದಾಖಲು ಮಾಡಲಾಗಿದೆ. ನ್ಯಾಯಾಲಯವು ಡಿಸೆಂಬರ್ 8ರಂದು ವಿಚಾರಣೆಯನ್ನು ಪ್ರಾರಂಭಿಸಲು ದಿನಾಂಕವನ್ನು ನಿಗದಿಪಡಿಸಲಿದೆ.

ವಿವಿಧ ಬಲಪಂಥೀಯ ಹಿಂದುತ್ವವಾದಿ ಸಂಘಟನೆಗಳಿಂದ ಬಂದ 17 ಆರೋಪಿಗಳನ್ನು ಕರ್ನಾಟಕ ಪೊಲೀಸ್ ವಿಶೇಷ ತನಿಖಾ ತಂಡ ಬಂಧಿಸಿದೆ. ಲಂಕೇಶ್ ಅವರನ್ನು “ಹಿಂದೂ ವಿರೋಧಿ” ಎಂದು ಟಾರ್ಗೆಟ್‌ ಮಾಡಲಾಗಿತ್ತು.

ಬೆಂಗಳೂರು ಸೆಂಟ್ರಲ್ ಜೈಲು, ಮುಂಬೈನ ಆರ್ಥರ್ ರೋಡ್ ಜೈಲು ಮತ್ತು ಪುಣೆಯ ಯರವಾಡ ಜೈಲಿನಲ್ಲಿರುವ 17 ಜನರನ್ನು ವೀಡಿಯೊ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಆರೋಪಿಗಳು ತಪ್ಪೊಪ್ಪಿಕೊಂಡಿಲ್ಲ.

ಸುಗಮ ವಿಚಾರಣೆಯನ್ನು ಖಚಿತಪಡಿಸಿಕೊಳ್ಳಲು, “ನಿರ್ದಿಷ್ಟ ಆದೇಶಗಳಿಲ್ಲದೆ ಯಾವುದೇ ಆರೋಪಿಗಳನ್ನು ಬೇರೆ ಯಾವುದೇ ಜೈಲಿಗೆ ವರ್ಗಾಯಿಸಬೇಡಿ” ಎಂದು ಜೈಲಿನ ಅಧಿಕಾರಿಗಳಿಗೆ ನ್ಯಾಯಾಲಯ ನಿರ್ದೇಶನ ನೀಡಿದೆ. 

ಎಸ್‌ಐಟಿ ಸುಮಾರು ಮೂರು ವರ್ಷಗಳ ಹಿಂದೆ ಆರೋಪಪಟ್ಟಿ ಸಲ್ಲಿಸಿದ್ದು, ಆರೋಪಿಗಳು ಸಲ್ಲಿಸಿದ ವಿವಿಧ ಅರ್ಜಿಗಳು, ಅವರು ವಿವಿಧ ಜೈಲುಗಳಲ್ಲಿರುವುದು ಮತ್ತು ಕೋವಿಡ್ ಪರಿಸ್ಥಿತಿಯಿಂದಾಗಿ ವಿಚಾರಣೆಯ ಪ್ರಾರಂಭವು ವಿಳಂಬವಾಯಿತು. ಆರೋಪಗಳನ್ನು ರೂಪಿಸುವ ಹಂತದಲ್ಲಿ ಎಲ್ಲಾ ಆರೋಪಿಗಳು ನ್ಯಾಯಾಲಯಕ್ಕೆ ಹಾಜರಾಗಬೇಕಿತ್ತು. 17 ಆರೋಪಿಗಳು ಅಂತಿಮವಾಗಿ ಬೆಂಗಳೂರು ನ್ಯಾಯಾಲಯಕ್ಕೆ ಶನಿವಾರ ಹಾಜರುಪಡಿಸಲಾಗಿತ್ತು.

ಧಾರವಾಡದಲ್ಲಿ ಕನ್ನಡ ವಿದ್ವಾಂಸ ಎಂ.ಎಂ.ಕಲಬುರ್ಗಿ, ಕೊಲ್ಲಾಪುರದಲ್ಲಿ ಎಡಪಂಥೀಯ ಚಿಂತಕ ಗೋವಿಂದ್ ಪನ್ಸಾರೆ ಹತ್ಯೆಗೆ ಬಳಸಿದ 7.65 ಎಂಎಂ ಕಂಟ್ರಿಮೇಡ್ ಪಿಸ್ತೂಲ್, ಗೌರಿ ಲಂಕೇಶ ಅವರ ಹತ್ಯೆಗೂ ಬಳಕೆಯಾಗಿದೆ ಎಂದು ಎಸ್‌ಐಟಿ ಪತ್ತೆ ಹಚ್ಚಿತ್ತು.

ಮಹಾರಾಷ್ಟ್ರದ ವಿಚಾರವಾದಿ ನರೇಂದ್ರ ದಾಭೋಲ್ಕರ್ ಅವರನ್ನು ಹತ್ಯೆ ಮಾಡಲು ಬಳಸಿದ ಬಂದೂಕಿಗೂ ಪನ್ಸಾರೆ ಗುಂಡಿನ ದಾಳಿಯಲ್ಲಿ ಬಳಸಿದ ಎರಡನೇ ಬಂದೂಕಿಗೂ ಹೊಂದಾಣಿಕೆಯಾಗಿರುವುದು ಕಂಡುಬಂದಿದೆ.

ಆರೋಪಿಗಳು: ಅಮೋಲ್ ಕಾಳೆ (37), ಪರಶುರಾಮ್ ವಾಘ್ಮೋರೆ (27), ಗಣೇಶ್ ಮಿಸ್ಕಿನ್ (27), ಅಮಿತ್ ಬಾಡ್ (27), ಅಮಿತ್ ದೆಗ್ವೇಕರ್ (38), ಭರತ್ ಕುರಣೆ (37), ಸುರೇಶ್ ಹೆಚ್ ಎಲ್ (36), ರಾಜೇಶ್ ಬಂಗೇರ (50 ವರ್ಷ), ಸುಧನ್ವ ಗೊಂದಲೇಕರ್ (39), ಶರದ್ ಕಲಾಸ್ಕರ್ (25), ಮೋಹನ್ ನಾಯಕ್ (50), ವಾಸುದೇವ್ ಸೂರ್ಯವಂಶಿ (29), ಸುಜಿತ್ ಕುಮಾರ್ (37), ಮನೋಹರ ಎಡವೆ (29), ಶ್ರೀಕಾಂತ್ ಪಂಗರ್ಕರ್ (40), ಕೆ ಟಿ ನವೀನ್ ಕುಮಾರ್ (37) ಮತ್ತು ರುಶಿಕೇಶ್ ದಿಯೋದಿಕರ್ (44).


ಇದನ್ನೂ ಓದಿರಿ: ಗೌರಿ ಲಂಕೇಶ್ ಹತ್ಯೆ ಆರೋಪಿ ವಿರುದ್ಧದ KCOCA ರದ್ದುಗೊಳಿಸುವ ಕುರಿತ ಆದೇಶ ಕಾಯ್ದಿರಿಸಿದ ಸುಪ್ರೀಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...