Homeಮುಖಪುಟಗೌರಿ ಲಂಕೇಶ್ ಹತ್ಯೆ ಪ್ರಕರಣದ ವಿಚಾರಣೆ ಇಂದಿನಿಂದ ಆರಂಭ

ಗೌರಿ ಲಂಕೇಶ್ ಹತ್ಯೆ ಪ್ರಕರಣದ ವಿಚಾರಣೆ ಇಂದಿನಿಂದ ಆರಂಭ

- Advertisement -
- Advertisement -

ದಿಟ್ಟ ಪತ್ರಕರ್ತೆ ಗೌರಿ ಲಂಕೇಶ್‌ ಹತ್ಯೆಯ 17 ಆರೋಪಿಗಳ ವಿರುದ್ಧದ ವಿಚಾರಣೆ ಇಂದಿನಿಂದ ಆರಂಭವಾಗಲಿದೆ. ಹತ್ಯೆಯ ಪ್ರಮುಖ ರುವಾರಿ ಅಮೋಲ್ ಕಾಳೆ, ಗುಂಡು ಹಾರಿಸಿದ ಪರಶುರಾಮ್ ವಾಗ್ಮೋರೆ ಮತ್ತು ಬೈಕ್ ಚಲಾಯಿಸಿದ ಆರೋಪ ಹೊತ್ತಿರುವ ಗಣೇಶ್ ಮಿಸ್ಕಿನ್ ಸೇರಿದಂತೆ ಇತರ ಆರೋಪಿಗಳು ವಿಚಾರಣೆ ಎದುರಿಸಲಿದ್ದಾರೆ.

ಸೆಪ್ಟಂಬರ್ 05, 2017ರ ರಾತ್ರಿ ಗೌರಿ ಲಂಕೇಶ್‌ರವರ ಕಚೇರಿ ಕೆಲಸ ಮುಗಿಸಿ ಮನೆಗೆ ತಲುಪಿದಾಗ ದುಷ್ಕರ್ಮಿಗಳು ಅವರ ಮನೆ ಮುಂದು ಗುಂಡು ಹಾರಿಸಿ ಕೊಂದಿದ್ದರು. ಹತ್ಯೆ ನಡೆದು ನಾಲ್ಕೂವರೆ ವರ್ಷದ ನಂತರ ವಿಚಾರಣೆ ಆರಂಭವಾಗುತ್ತಿದೆ.

ಆರೋಪಿಗಳ ಪರವಾಗಿ 60ಕ್ಕೂ ಹೆಚ್ಚು ವಕೀಲರು ವಕಾಲತ್ತು ವಹಿಸಿದ್ದರು. ಅವರು ಸಲ್ಲಿಸಿದ್ದ ಅರ್ಜಿಗಳ ವಿಚಾರಣೆಯ ಕಾರಣಕ್ಕೆ ಹತ್ಯೆ ಪ್ರಕರಣದ ವಿಚಾರಣೆ ತಡವಾಗಿದೆ ಎಂದು ಪ್ರಾಸಿಕ್ಯೂಷನ್ ವಕೀಲರು ಹೇಳಿದ್ದಾರೆ.

ಗೌರಿ ಲಂಕೇಶ್ ಹತ್ಯೆ ಸಂದರ್ಭದಲ್ಲಿ ಕರ್ನಾಟಕ ಸರ್ಕಾರ ನೇಮಿಸಿದ್ದ ಎಸ್‌ಐಟಿ ತಂಡವು 17 ಆರೋಪಿಗಳನ್ನು ಬಂಧಿಸಿ ಅವರು ವಿರುದ್ದ 8500 ಪುಟಗಳ ಚಾರ್ಜ್ ಶೀಟ್ ಸಲ್ಲಿಸಿತ್ತು.

ಧಾರವಾಡದಲ್ಲಿ ಕನ್ನಡ ವಿದ್ವಾಂಸ ಎಂ.ಎಂ.ಕಲಬುರ್ಗಿ, ಕೊಲ್ಲಾಪುರದಲ್ಲಿ ಎಡಪಂಥೀಯ ಚಿಂತಕ ಗೋವಿಂದ್ ಪನ್ಸಾರೆ ಹತ್ಯೆಗೆ ಬಳಸಿದ 7.65 ಎಂಎಂ ಕಂಟ್ರಿಮೇಡ್ ಪಿಸ್ತೂಲ್, ಗೌರಿ ಲಂಕೇಶ ಅವರ ಹತ್ಯೆಗೂ ಬಳಕೆಯಾಗಿದೆ ಎಂದು ಎಸ್‌ಐಟಿ ಪತ್ತೆ ಹಚ್ಚಿತ್ತು.

ಮಹಾರಾಷ್ಟ್ರದ ವಿಚಾರವಾದಿ ನರೇಂದ್ರ ದಾಭೋಲ್ಕರ್ ಅವರನ್ನು ಹತ್ಯೆ ಮಾಡಲು ಬಳಸಿದ ಬಂದೂಕಿಗೂ ಪನ್ಸಾರೆ ಗುಂಡಿನ ದಾಳಿಯಲ್ಲಿ ಬಳಸಿದ ಎರಡನೇ ಬಂದೂಕಿಗೂ ಹೊಂದಾಣಿಕೆಯಾಗಿರುವುದು ಕಂಡುಬಂದಿತ್ತು.

ಗೌರಿ ಲಂಕೇಶ್‌ ಅವರ ಹತ್ಯೆ ಆರೋಪಿಗಳಲ್ಲಿ ಒಬ್ಬನಾದ, ಅಮೋಲ್ ಕಾಳೆ ಸಹಚರ ಮೋಹನ್ ನಾಯಕ್‌ ವಿರುದ್ದ ದಾಖಲಾಗಿದ್ದ ‘ಕರ್ನಾಟಕ ಸಂಘಟಿತ ಅಪರಾಧಗಳ ಕಾಯ್ದೆ’ (KCOCA) ಪ್ರಕರಣವನ್ನು ಕರ್ನಾಟಕ ಹೈಕೊರ್ಟ್ ಈ ಹಿಂದೆ ರದ್ದು ಮಾಡಿತ್ತು. ಇದನ್ನು ಸುಪ್ರೀಂಕೋರ್ಟ್‌ನಲ್ಲಿ ಗೌರಿ ಲಂಕೇಶ್‌ ಅವರ ಸಹೋದರಿ ಕವಿತಾ ಲಂಕೇಶ್‌‌ ಅವರು ಪ್ರಶ್ನಿಸಿದ್ದರು.

“ಗೌರಿ ಲಂಕೇಶ್ ಅವರ ಹತ್ಯೆ ಸಾಮಾನ್ಯ ಕೊಲೆ ಅಲ್ಲ. ಒಂದು ಸಂಘಟಿತ ಮತ್ತು ಸೈದ್ಧಾಂತಿಕ ದ್ವೇಷದ ಕಾರಣಕ್ಕೆ ನಡೆಸಲಾದ ಹತ್ಯೆ. ಕೋಕಾ ಕಾಯ್ದೆಯನ್ನು ಕೈಬಿಡುವುದರಿಂದ ಹತ್ಯೆಯ ಹಿಂದಿರುವ ಕಾಣದ ಕೈಗಳಿಗೆ ಶಿಕ್ಷೆಯಾಗುವುದಿಲ್ಲ” ಎಂದು ಕವಿತಾ ಲಂಕೇಶ್ ಅವರ ಪರವಾಗಿ ನ್ಯಾಯವಾದಿ ತೀಸ್ತಾ ಸೆತಲ್ವಾದ್‌ ಅವರು ಸುಪ್ರೀಂ ಕೋರ್ಟ್‌ನಲ್ಲಿ ವಾದಿಸಿದ್ದರು. ನಂತರ ಸುಪ್ರೀಂ ಕೋರ್ಟ್ ಹೈಕೋರ್ಟ್ ಆದೇಶಕ್ಕೆ ತಡೆ ನೀಡಿ, ಕೋಕಾ ಕಾಯ್ದೆ ಹೇರಿತ್ತು.

ಗೌರಿ ಲಂಕೇಶ್ ಹತ್ಯೆಯ ಆರೋಪಿಗಳ ಪಟ್ಟಿ ಹೀಗಿದೆ; ಅಮೋಲ್ ಕಾಳೆ (37), ಪರಶುರಾಮ್ ವಾಘ್ಮೋರೆ (27), ಗಣೇಶ್ ಮಿಸ್ಕಿನ್ (27), ಅಮಿತ್ ಬಾಡ್ (27), ಅಮಿತ್ ದೆಗ್ವೇಕರ್ (38), ಭರತ್ ಕುರಣೆ (37), ಸುರೇಶ್ ಹೆಚ್ ಎಲ್ (36), ರಾಜೇಶ್ ಬಂಗೇರ (50 ವರ್ಷ), ಸುಧನ್ವ ಗೊಂದಲೇಕರ್ (39), ಶರದ್ ಕಲಾಸ್ಕರ್ (25), ಮೋಹನ್ ನಾಯಕ್ (50), ವಾಸುದೇವ್ ಸೂರ್ಯವಂಶಿ (29), ಸುಜಿತ್ ಕುಮಾರ್ (37), ಮನೋಹರ ಎಡವೆ (29), ಶ್ರೀಕಾಂತ್ ಪಂಗರ್ಕರ್ (40), ಕೆ ಟಿ ನವೀನ್ ಕುಮಾರ್ (37) ಮತ್ತು ರುಶಿಕೇಶ್ ದಿಯೋದಿಕರ್ (44).

ಈ ಎಲ್ಲಾ ಆರೋಪಿಗಳು ‘ಸನಾತನ ಸಂಸ್ಥೆ’ಯ 86 ಪುಟಗಳ ‘ಕ್ಷತ್ರ ಧರ್ಮ ಸಾಧನ’ ಪುಸ್ತಕದಿಂದ ಪ್ರೇರಿತರಾಗಿದ್ದಾರೆ ಎಂದು ವರದಿಯಾಗಿದೆ.


ಇದನ್ನೂ ಓದಿ: ಗೌರಿ ಲಂಕೇಶ್ ಹತ್ಯೆ ಪ್ರಕರಣವನ್ನು ಕರ್ನಾಟಕ ವಿಶೇಷ ತನಿಖಾ ದಳ (SIT) ಭೇದಿಸಿದ್ದಾದರೂ ಹೇಗೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...