Homeಮುಖಪುಟಗೌರಿ ಲಂಕೇಶ್ ಹತ್ಯೆ ಪ್ರಕರಣದ ವಿಚಾರಣೆ ಇಂದಿನಿಂದ ಆರಂಭ

ಗೌರಿ ಲಂಕೇಶ್ ಹತ್ಯೆ ಪ್ರಕರಣದ ವಿಚಾರಣೆ ಇಂದಿನಿಂದ ಆರಂಭ

- Advertisement -
- Advertisement -

ದಿಟ್ಟ ಪತ್ರಕರ್ತೆ ಗೌರಿ ಲಂಕೇಶ್‌ ಹತ್ಯೆಯ 17 ಆರೋಪಿಗಳ ವಿರುದ್ಧದ ವಿಚಾರಣೆ ಇಂದಿನಿಂದ ಆರಂಭವಾಗಲಿದೆ. ಹತ್ಯೆಯ ಪ್ರಮುಖ ರುವಾರಿ ಅಮೋಲ್ ಕಾಳೆ, ಗುಂಡು ಹಾರಿಸಿದ ಪರಶುರಾಮ್ ವಾಗ್ಮೋರೆ ಮತ್ತು ಬೈಕ್ ಚಲಾಯಿಸಿದ ಆರೋಪ ಹೊತ್ತಿರುವ ಗಣೇಶ್ ಮಿಸ್ಕಿನ್ ಸೇರಿದಂತೆ ಇತರ ಆರೋಪಿಗಳು ವಿಚಾರಣೆ ಎದುರಿಸಲಿದ್ದಾರೆ.

ಸೆಪ್ಟಂಬರ್ 05, 2017ರ ರಾತ್ರಿ ಗೌರಿ ಲಂಕೇಶ್‌ರವರ ಕಚೇರಿ ಕೆಲಸ ಮುಗಿಸಿ ಮನೆಗೆ ತಲುಪಿದಾಗ ದುಷ್ಕರ್ಮಿಗಳು ಅವರ ಮನೆ ಮುಂದು ಗುಂಡು ಹಾರಿಸಿ ಕೊಂದಿದ್ದರು. ಹತ್ಯೆ ನಡೆದು ನಾಲ್ಕೂವರೆ ವರ್ಷದ ನಂತರ ವಿಚಾರಣೆ ಆರಂಭವಾಗುತ್ತಿದೆ.

ಆರೋಪಿಗಳ ಪರವಾಗಿ 60ಕ್ಕೂ ಹೆಚ್ಚು ವಕೀಲರು ವಕಾಲತ್ತು ವಹಿಸಿದ್ದರು. ಅವರು ಸಲ್ಲಿಸಿದ್ದ ಅರ್ಜಿಗಳ ವಿಚಾರಣೆಯ ಕಾರಣಕ್ಕೆ ಹತ್ಯೆ ಪ್ರಕರಣದ ವಿಚಾರಣೆ ತಡವಾಗಿದೆ ಎಂದು ಪ್ರಾಸಿಕ್ಯೂಷನ್ ವಕೀಲರು ಹೇಳಿದ್ದಾರೆ.

ಗೌರಿ ಲಂಕೇಶ್ ಹತ್ಯೆ ಸಂದರ್ಭದಲ್ಲಿ ಕರ್ನಾಟಕ ಸರ್ಕಾರ ನೇಮಿಸಿದ್ದ ಎಸ್‌ಐಟಿ ತಂಡವು 17 ಆರೋಪಿಗಳನ್ನು ಬಂಧಿಸಿ ಅವರು ವಿರುದ್ದ 8500 ಪುಟಗಳ ಚಾರ್ಜ್ ಶೀಟ್ ಸಲ್ಲಿಸಿತ್ತು.

ಧಾರವಾಡದಲ್ಲಿ ಕನ್ನಡ ವಿದ್ವಾಂಸ ಎಂ.ಎಂ.ಕಲಬುರ್ಗಿ, ಕೊಲ್ಲಾಪುರದಲ್ಲಿ ಎಡಪಂಥೀಯ ಚಿಂತಕ ಗೋವಿಂದ್ ಪನ್ಸಾರೆ ಹತ್ಯೆಗೆ ಬಳಸಿದ 7.65 ಎಂಎಂ ಕಂಟ್ರಿಮೇಡ್ ಪಿಸ್ತೂಲ್, ಗೌರಿ ಲಂಕೇಶ ಅವರ ಹತ್ಯೆಗೂ ಬಳಕೆಯಾಗಿದೆ ಎಂದು ಎಸ್‌ಐಟಿ ಪತ್ತೆ ಹಚ್ಚಿತ್ತು.

ಮಹಾರಾಷ್ಟ್ರದ ವಿಚಾರವಾದಿ ನರೇಂದ್ರ ದಾಭೋಲ್ಕರ್ ಅವರನ್ನು ಹತ್ಯೆ ಮಾಡಲು ಬಳಸಿದ ಬಂದೂಕಿಗೂ ಪನ್ಸಾರೆ ಗುಂಡಿನ ದಾಳಿಯಲ್ಲಿ ಬಳಸಿದ ಎರಡನೇ ಬಂದೂಕಿಗೂ ಹೊಂದಾಣಿಕೆಯಾಗಿರುವುದು ಕಂಡುಬಂದಿತ್ತು.

ಗೌರಿ ಲಂಕೇಶ್‌ ಅವರ ಹತ್ಯೆ ಆರೋಪಿಗಳಲ್ಲಿ ಒಬ್ಬನಾದ, ಅಮೋಲ್ ಕಾಳೆ ಸಹಚರ ಮೋಹನ್ ನಾಯಕ್‌ ವಿರುದ್ದ ದಾಖಲಾಗಿದ್ದ ‘ಕರ್ನಾಟಕ ಸಂಘಟಿತ ಅಪರಾಧಗಳ ಕಾಯ್ದೆ’ (KCOCA) ಪ್ರಕರಣವನ್ನು ಕರ್ನಾಟಕ ಹೈಕೊರ್ಟ್ ಈ ಹಿಂದೆ ರದ್ದು ಮಾಡಿತ್ತು. ಇದನ್ನು ಸುಪ್ರೀಂಕೋರ್ಟ್‌ನಲ್ಲಿ ಗೌರಿ ಲಂಕೇಶ್‌ ಅವರ ಸಹೋದರಿ ಕವಿತಾ ಲಂಕೇಶ್‌‌ ಅವರು ಪ್ರಶ್ನಿಸಿದ್ದರು.

“ಗೌರಿ ಲಂಕೇಶ್ ಅವರ ಹತ್ಯೆ ಸಾಮಾನ್ಯ ಕೊಲೆ ಅಲ್ಲ. ಒಂದು ಸಂಘಟಿತ ಮತ್ತು ಸೈದ್ಧಾಂತಿಕ ದ್ವೇಷದ ಕಾರಣಕ್ಕೆ ನಡೆಸಲಾದ ಹತ್ಯೆ. ಕೋಕಾ ಕಾಯ್ದೆಯನ್ನು ಕೈಬಿಡುವುದರಿಂದ ಹತ್ಯೆಯ ಹಿಂದಿರುವ ಕಾಣದ ಕೈಗಳಿಗೆ ಶಿಕ್ಷೆಯಾಗುವುದಿಲ್ಲ” ಎಂದು ಕವಿತಾ ಲಂಕೇಶ್ ಅವರ ಪರವಾಗಿ ನ್ಯಾಯವಾದಿ ತೀಸ್ತಾ ಸೆತಲ್ವಾದ್‌ ಅವರು ಸುಪ್ರೀಂ ಕೋರ್ಟ್‌ನಲ್ಲಿ ವಾದಿಸಿದ್ದರು. ನಂತರ ಸುಪ್ರೀಂ ಕೋರ್ಟ್ ಹೈಕೋರ್ಟ್ ಆದೇಶಕ್ಕೆ ತಡೆ ನೀಡಿ, ಕೋಕಾ ಕಾಯ್ದೆ ಹೇರಿತ್ತು.

ಗೌರಿ ಲಂಕೇಶ್ ಹತ್ಯೆಯ ಆರೋಪಿಗಳ ಪಟ್ಟಿ ಹೀಗಿದೆ; ಅಮೋಲ್ ಕಾಳೆ (37), ಪರಶುರಾಮ್ ವಾಘ್ಮೋರೆ (27), ಗಣೇಶ್ ಮಿಸ್ಕಿನ್ (27), ಅಮಿತ್ ಬಾಡ್ (27), ಅಮಿತ್ ದೆಗ್ವೇಕರ್ (38), ಭರತ್ ಕುರಣೆ (37), ಸುರೇಶ್ ಹೆಚ್ ಎಲ್ (36), ರಾಜೇಶ್ ಬಂಗೇರ (50 ವರ್ಷ), ಸುಧನ್ವ ಗೊಂದಲೇಕರ್ (39), ಶರದ್ ಕಲಾಸ್ಕರ್ (25), ಮೋಹನ್ ನಾಯಕ್ (50), ವಾಸುದೇವ್ ಸೂರ್ಯವಂಶಿ (29), ಸುಜಿತ್ ಕುಮಾರ್ (37), ಮನೋಹರ ಎಡವೆ (29), ಶ್ರೀಕಾಂತ್ ಪಂಗರ್ಕರ್ (40), ಕೆ ಟಿ ನವೀನ್ ಕುಮಾರ್ (37) ಮತ್ತು ರುಶಿಕೇಶ್ ದಿಯೋದಿಕರ್ (44).

ಈ ಎಲ್ಲಾ ಆರೋಪಿಗಳು ‘ಸನಾತನ ಸಂಸ್ಥೆ’ಯ 86 ಪುಟಗಳ ‘ಕ್ಷತ್ರ ಧರ್ಮ ಸಾಧನ’ ಪುಸ್ತಕದಿಂದ ಪ್ರೇರಿತರಾಗಿದ್ದಾರೆ ಎಂದು ವರದಿಯಾಗಿದೆ.


ಇದನ್ನೂ ಓದಿ: ಗೌರಿ ಲಂಕೇಶ್ ಹತ್ಯೆ ಪ್ರಕರಣವನ್ನು ಕರ್ನಾಟಕ ವಿಶೇಷ ತನಿಖಾ ದಳ (SIT) ಭೇದಿಸಿದ್ದಾದರೂ ಹೇಗೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...