Homeಮುಖಪುಟಗೌರಿ ಲಂಕೇಶ್ ಹತ್ಯೆ ಪ್ರಕರಣದ ವಿಚಾರಣೆ ಇಂದಿನಿಂದ ಆರಂಭ

ಗೌರಿ ಲಂಕೇಶ್ ಹತ್ಯೆ ಪ್ರಕರಣದ ವಿಚಾರಣೆ ಇಂದಿನಿಂದ ಆರಂಭ

- Advertisement -
- Advertisement -

ದಿಟ್ಟ ಪತ್ರಕರ್ತೆ ಗೌರಿ ಲಂಕೇಶ್‌ ಹತ್ಯೆಯ 17 ಆರೋಪಿಗಳ ವಿರುದ್ಧದ ವಿಚಾರಣೆ ಇಂದಿನಿಂದ ಆರಂಭವಾಗಲಿದೆ. ಹತ್ಯೆಯ ಪ್ರಮುಖ ರುವಾರಿ ಅಮೋಲ್ ಕಾಳೆ, ಗುಂಡು ಹಾರಿಸಿದ ಪರಶುರಾಮ್ ವಾಗ್ಮೋರೆ ಮತ್ತು ಬೈಕ್ ಚಲಾಯಿಸಿದ ಆರೋಪ ಹೊತ್ತಿರುವ ಗಣೇಶ್ ಮಿಸ್ಕಿನ್ ಸೇರಿದಂತೆ ಇತರ ಆರೋಪಿಗಳು ವಿಚಾರಣೆ ಎದುರಿಸಲಿದ್ದಾರೆ.

ಸೆಪ್ಟಂಬರ್ 05, 2017ರ ರಾತ್ರಿ ಗೌರಿ ಲಂಕೇಶ್‌ರವರ ಕಚೇರಿ ಕೆಲಸ ಮುಗಿಸಿ ಮನೆಗೆ ತಲುಪಿದಾಗ ದುಷ್ಕರ್ಮಿಗಳು ಅವರ ಮನೆ ಮುಂದು ಗುಂಡು ಹಾರಿಸಿ ಕೊಂದಿದ್ದರು. ಹತ್ಯೆ ನಡೆದು ನಾಲ್ಕೂವರೆ ವರ್ಷದ ನಂತರ ವಿಚಾರಣೆ ಆರಂಭವಾಗುತ್ತಿದೆ.

ಆರೋಪಿಗಳ ಪರವಾಗಿ 60ಕ್ಕೂ ಹೆಚ್ಚು ವಕೀಲರು ವಕಾಲತ್ತು ವಹಿಸಿದ್ದರು. ಅವರು ಸಲ್ಲಿಸಿದ್ದ ಅರ್ಜಿಗಳ ವಿಚಾರಣೆಯ ಕಾರಣಕ್ಕೆ ಹತ್ಯೆ ಪ್ರಕರಣದ ವಿಚಾರಣೆ ತಡವಾಗಿದೆ ಎಂದು ಪ್ರಾಸಿಕ್ಯೂಷನ್ ವಕೀಲರು ಹೇಳಿದ್ದಾರೆ.

ಗೌರಿ ಲಂಕೇಶ್ ಹತ್ಯೆ ಸಂದರ್ಭದಲ್ಲಿ ಕರ್ನಾಟಕ ಸರ್ಕಾರ ನೇಮಿಸಿದ್ದ ಎಸ್‌ಐಟಿ ತಂಡವು 17 ಆರೋಪಿಗಳನ್ನು ಬಂಧಿಸಿ ಅವರು ವಿರುದ್ದ 8500 ಪುಟಗಳ ಚಾರ್ಜ್ ಶೀಟ್ ಸಲ್ಲಿಸಿತ್ತು.

ಧಾರವಾಡದಲ್ಲಿ ಕನ್ನಡ ವಿದ್ವಾಂಸ ಎಂ.ಎಂ.ಕಲಬುರ್ಗಿ, ಕೊಲ್ಲಾಪುರದಲ್ಲಿ ಎಡಪಂಥೀಯ ಚಿಂತಕ ಗೋವಿಂದ್ ಪನ್ಸಾರೆ ಹತ್ಯೆಗೆ ಬಳಸಿದ 7.65 ಎಂಎಂ ಕಂಟ್ರಿಮೇಡ್ ಪಿಸ್ತೂಲ್, ಗೌರಿ ಲಂಕೇಶ ಅವರ ಹತ್ಯೆಗೂ ಬಳಕೆಯಾಗಿದೆ ಎಂದು ಎಸ್‌ಐಟಿ ಪತ್ತೆ ಹಚ್ಚಿತ್ತು.

ಮಹಾರಾಷ್ಟ್ರದ ವಿಚಾರವಾದಿ ನರೇಂದ್ರ ದಾಭೋಲ್ಕರ್ ಅವರನ್ನು ಹತ್ಯೆ ಮಾಡಲು ಬಳಸಿದ ಬಂದೂಕಿಗೂ ಪನ್ಸಾರೆ ಗುಂಡಿನ ದಾಳಿಯಲ್ಲಿ ಬಳಸಿದ ಎರಡನೇ ಬಂದೂಕಿಗೂ ಹೊಂದಾಣಿಕೆಯಾಗಿರುವುದು ಕಂಡುಬಂದಿತ್ತು.

ಗೌರಿ ಲಂಕೇಶ್‌ ಅವರ ಹತ್ಯೆ ಆರೋಪಿಗಳಲ್ಲಿ ಒಬ್ಬನಾದ, ಅಮೋಲ್ ಕಾಳೆ ಸಹಚರ ಮೋಹನ್ ನಾಯಕ್‌ ವಿರುದ್ದ ದಾಖಲಾಗಿದ್ದ ‘ಕರ್ನಾಟಕ ಸಂಘಟಿತ ಅಪರಾಧಗಳ ಕಾಯ್ದೆ’ (KCOCA) ಪ್ರಕರಣವನ್ನು ಕರ್ನಾಟಕ ಹೈಕೊರ್ಟ್ ಈ ಹಿಂದೆ ರದ್ದು ಮಾಡಿತ್ತು. ಇದನ್ನು ಸುಪ್ರೀಂಕೋರ್ಟ್‌ನಲ್ಲಿ ಗೌರಿ ಲಂಕೇಶ್‌ ಅವರ ಸಹೋದರಿ ಕವಿತಾ ಲಂಕೇಶ್‌‌ ಅವರು ಪ್ರಶ್ನಿಸಿದ್ದರು.

“ಗೌರಿ ಲಂಕೇಶ್ ಅವರ ಹತ್ಯೆ ಸಾಮಾನ್ಯ ಕೊಲೆ ಅಲ್ಲ. ಒಂದು ಸಂಘಟಿತ ಮತ್ತು ಸೈದ್ಧಾಂತಿಕ ದ್ವೇಷದ ಕಾರಣಕ್ಕೆ ನಡೆಸಲಾದ ಹತ್ಯೆ. ಕೋಕಾ ಕಾಯ್ದೆಯನ್ನು ಕೈಬಿಡುವುದರಿಂದ ಹತ್ಯೆಯ ಹಿಂದಿರುವ ಕಾಣದ ಕೈಗಳಿಗೆ ಶಿಕ್ಷೆಯಾಗುವುದಿಲ್ಲ” ಎಂದು ಕವಿತಾ ಲಂಕೇಶ್ ಅವರ ಪರವಾಗಿ ನ್ಯಾಯವಾದಿ ತೀಸ್ತಾ ಸೆತಲ್ವಾದ್‌ ಅವರು ಸುಪ್ರೀಂ ಕೋರ್ಟ್‌ನಲ್ಲಿ ವಾದಿಸಿದ್ದರು. ನಂತರ ಸುಪ್ರೀಂ ಕೋರ್ಟ್ ಹೈಕೋರ್ಟ್ ಆದೇಶಕ್ಕೆ ತಡೆ ನೀಡಿ, ಕೋಕಾ ಕಾಯ್ದೆ ಹೇರಿತ್ತು.

ಗೌರಿ ಲಂಕೇಶ್ ಹತ್ಯೆಯ ಆರೋಪಿಗಳ ಪಟ್ಟಿ ಹೀಗಿದೆ; ಅಮೋಲ್ ಕಾಳೆ (37), ಪರಶುರಾಮ್ ವಾಘ್ಮೋರೆ (27), ಗಣೇಶ್ ಮಿಸ್ಕಿನ್ (27), ಅಮಿತ್ ಬಾಡ್ (27), ಅಮಿತ್ ದೆಗ್ವೇಕರ್ (38), ಭರತ್ ಕುರಣೆ (37), ಸುರೇಶ್ ಹೆಚ್ ಎಲ್ (36), ರಾಜೇಶ್ ಬಂಗೇರ (50 ವರ್ಷ), ಸುಧನ್ವ ಗೊಂದಲೇಕರ್ (39), ಶರದ್ ಕಲಾಸ್ಕರ್ (25), ಮೋಹನ್ ನಾಯಕ್ (50), ವಾಸುದೇವ್ ಸೂರ್ಯವಂಶಿ (29), ಸುಜಿತ್ ಕುಮಾರ್ (37), ಮನೋಹರ ಎಡವೆ (29), ಶ್ರೀಕಾಂತ್ ಪಂಗರ್ಕರ್ (40), ಕೆ ಟಿ ನವೀನ್ ಕುಮಾರ್ (37) ಮತ್ತು ರುಶಿಕೇಶ್ ದಿಯೋದಿಕರ್ (44).

ಈ ಎಲ್ಲಾ ಆರೋಪಿಗಳು ‘ಸನಾತನ ಸಂಸ್ಥೆ’ಯ 86 ಪುಟಗಳ ‘ಕ್ಷತ್ರ ಧರ್ಮ ಸಾಧನ’ ಪುಸ್ತಕದಿಂದ ಪ್ರೇರಿತರಾಗಿದ್ದಾರೆ ಎಂದು ವರದಿಯಾಗಿದೆ.


ಇದನ್ನೂ ಓದಿ: ಗೌರಿ ಲಂಕೇಶ್ ಹತ್ಯೆ ಪ್ರಕರಣವನ್ನು ಕರ್ನಾಟಕ ವಿಶೇಷ ತನಿಖಾ ದಳ (SIT) ಭೇದಿಸಿದ್ದಾದರೂ ಹೇಗೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...