Homeಮುಖಪುಟಗೌರಿ ಲಂಕೇಶ್ ಹತ್ಯೆ ವಿಚಾರಣೆ: ಆರೋಪಿ ಪರಶುರಾಮ್ ವಾಗ್ಮೋರೆಯನ್ನು ಗುರುತಿಸಿದ ಸಾಕ್ಷಿಗೆ ಜೀವ ಬೆದರಿಕೆ

ಗೌರಿ ಲಂಕೇಶ್ ಹತ್ಯೆ ವಿಚಾರಣೆ: ಆರೋಪಿ ಪರಶುರಾಮ್ ವಾಗ್ಮೋರೆಯನ್ನು ಗುರುತಿಸಿದ ಸಾಕ್ಷಿಗೆ ಜೀವ ಬೆದರಿಕೆ

- Advertisement -
- Advertisement -

ಗೌರಿ ಲಂಕೇಶ್‌ರವರಿಗೆ ಗುಂಡಿಟ್ಟು ಹತ್ಯೆ ಮಾಡಿದ ಆರೋಪಿಗಳಲ್ಲಿ ಒಬ್ಬನಾದ ಪರಶುರಾಮ್ ವಾಗ್ಮೋರೆಯನ್ನು ಗುರುತಿಸಿದ ಸಾಕ್ಷಿಯೊಬ್ಬರ ಮನೆಗೆ ನುಗ್ಗಿ ಮತ್ತು ಫೋನ್ ಮೂಲಕ ಜೀವ ಬೆದರಿಕೆ ಹಾಕಿರುವ ಘಟನೆ ಜರುಗಿದೆ. ಇದನ್ನು ಗಂಭೀರವಾಗಿ ಪರಿಗಣಿಸಿರುವ ನ್ಯಾಯಾಧೀಶರು ತೆರೆದ ನ್ಯಾಯಾಲಯದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಆರೋಪಿಗಳಿಗೆ ಮೌಖಿಕ ಎಚ್ಚರಿಕೆ ನೀಡಿದ್ದು, ಈ ರೀತಿಯ ಘಟನೆ ಮರುಕಳಿಸಬಾರದೆಂದು ತಾಕೀತು ಮಾಡಿದ್ದಾರೆ.

ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ಸಮುಚ್ಚಯದ ಹಾಲ್ ನಂ.1ರಲ್ಲಿ ಸೆಷನ್ಸ್ ನ್ಯಾಯಾಧೀಶರಾದ ರಾಮಚಂದ್ರ ಪಿ. ಹುದ್ದಾರ್‌ರವರು ಗೌರಿ ಲಂಕೇಶ್ ಹತ್ಯೆಯ ವಿಚಾರಣೆ ನಡೆಸುತ್ತಿದ್ದಾರೆ. ಈ ತಿಂಗಳ ವಿಚಾರಣೆಯ ಕೊನೆಯ ದಿನವಾದ ಇಂದು ಪರಶುರಾಮ್ ವಾಗ್ಮೋರೆಯ ಸ್ನೇಹಿತನೊಬ್ಬ ಆರೋಪಿಯನ್ನು ಗುರುತಿಸುವ ಮತ್ತು ಆರೋಪಿಯ ಮೇಲಿರುವ ಇತರ ಪ್ರಕರಣಗಳ ಬಗ್ಗೆ ಸಾಕ್ಷಿ ನುಡಿಯಬೇಕಾಗಿತ್ತು. ಆದರೆ ನಿನ್ನೆಯೇ ನಾಲ್ಕು ಜನರು ಆತನ ಮನೆಗೆ ನುಗ್ಗಿ ಸಾಕ್ಷಿ ನುಡಿಯದಂತೆ ಬೆದರಿಕೆಯೊಡ್ಡಿದ್ದಾರೆ ಮತ್ತು ಇಂದು ಬೆಳಿಗ್ಗೆ ಬೆಂಗಳೂರಿನಲ್ಲಿದ್ದಾಗ ಎರಡು ಮೂರು ಬಾರಿ ಫೋನ್ ಕರೆಗಳ ಮೂಲಕ ಧಮಕಿ ಹಾಕಿದ್ದಾರೆ ಎಂದು ಪ್ರಕರಣದ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಎಸ್ ಬಾಲನ್‌ರವರು ಮಾಹಿತಿ ಸಲ್ಲಿಸಿದ್ದಾರೆ.

ಬೆದರಿಕೆಗಳ ಹೊರತಾಗಿಯೂ ಸಾಕ್ಷಿಯಾಗಿದ್ದ ದೌಲತ್‌ರವರು ಆರೋಪಿ ಪರಶುರಾಮ್ ವಾಗ್ಮೋರೆಯನ್ನು ಗುರುತಿಸಿದ್ದು, ಈ ಹಿಂದೆ ಸಿಂಧಗಿಯಲ್ಲಿ ಪಾಕ್ ಧ್ವಜ ಹಾರಿಸಿದ ಆರೋಪಿಯಾಗಿದ್ದ ಎಂದು ಸಾಕ್ಷಿ ನುಡಿದಿದ್ದಾರೆ.

ಆನಂತರ ಸೆಷನ್ಸ್ ನ್ಯಾಯಾಧೀಶರಾದ ರಾಮಚಂದ್ರ ಪಿ. ಹುದ್ದಾರ್‌ರವರು ಸಾಕ್ಷಿ ನಾಶ ಮಾಡಲು ಯತ್ನಿಸಿದ ಆರೋಪಿಗಳಿಗೆ ಬೆದರಿಕೆ ಹಾಕದಂತೆ ಎಚ್ಚರಿಕೆ ನೀಡಿದ್ದಲ್ಲದೆ ಅದನ್ನು ಮುಂದುವರೆಸಿದರೆ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಸೂಚಿಸಿದ್ದಾರೆ. ಅಲ್ಲದೆ ಸಾಕ್ಷಿಯನ್ನು ಪೊಲೀಸ್ ಬೆಂಗಾವಲಿನಲ್ಲಿ ಸಿಂಧಗಿಗೆ ತಲುಪಿಸಬೇಕು ಮತ್ತು ಅಲ್ಲಿನ ಸ್ಥಳೀಯ ಪೊಲೀಸರು ಸಾಕ್ಷಿಗೆ ಭದ್ರತೆ ಒದಗಿಸಬೇಕೆಂದು ಮೌಖಿಕ ನಿರ್ದೇಶನ ನೀಡಿದ್ದಾರೆ. ನ್ಯಾಯಾಧೀಶರು ವಿಚಾರಣೆಯನ್ನು ಮುಂದಿನ ತಿಂಗಳಿಗೆ ಮುಂದೂಡಿದ್ದಾರೆ.

ಜನವರಿ 1, 2012ರಂದು ಸಿಂಧಗಿಯ ತಹಶೀಲ್ದಾರ್ ಕಚೇರಿಯ ಎದುರು ದುಷ್ಕರ್ಮಿಗಳು ಪಾಕಿಸ್ತಾನದ ಧ್ವಜ ಹಾರಿಸಿ ಗಲಭೆಗೆ ಯತ್ನಿಸಿದ್ದರು. ಅದರಲ್ಲಿ ಪರುಶುರಾಮ್ ವಾಗ್ಮೋರೆ 5ನೇ ಆರೋಪಿಯಾಗಿದ್ದ. ಆದರೆ 2018ರಲ್ಲಿ ವಿಜಯಪುರದ 1ನೇ ಹೆಚ್ಚುವರಿ ನ್ಯಾಯಾಲವು ಆರು ಜನ ಆರೋಪಿಗಳನ್ನು ಆರೋಪಮುಕ್ತಗೊಳಿಸಿತ್ತು.

ಇದನ್ನೂ ಓದಿ: ಗೌರಿ ಹತ್ಯೆ ವಿಚಾರಣೆ: ಹತ್ಯೆಗೆ ಬಳಸಿದ್ದ ಪ್ಯಾಷನ್ ಪ್ರೊ ಬೈಕ್ ಗುರುತುಹಚ್ಚಿದ ಸಾಕ್ಷಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...