Homeಕರ್ನಾಟಕಪ್ರಗ್ಯಾ ಠಾಕೂರ್ ಸಹಚರರಿಗೆ ಗೌರಿ ಲಂಕೇಶ್ ಹತ್ಯೆಯ ಜೊತೆಗೆ ನಂಟು: ಕೋರ್ಟ್ ಗೆ ಹೇಳಿದ ಎಸ್‍ಐಟಿ

ಪ್ರಗ್ಯಾ ಠಾಕೂರ್ ಸಹಚರರಿಗೆ ಗೌರಿ ಲಂಕೇಶ್ ಹತ್ಯೆಯ ಜೊತೆಗೆ ನಂಟು: ಕೋರ್ಟ್ ಗೆ ಹೇಳಿದ ಎಸ್‍ಐಟಿ

- Advertisement -
- Advertisement -

| ನಾನುಗೌರಿ ಡೆಸ್ಕ್ |

ಅಭಿನವ್ ಭಾರತ್ ಗೂ ಸನಾತನ ಸಂಸ್ಥೆಗೂ ಇದೆ ನಂಟು

ಭೋಪಾಲ್‍ನ ಬಿಜೆಪಿ ಅಭ್ಯರ್ಥಿ, ಭಯೋತ್ಪಾದನೆಯ ಆರೋಪಿ ಪ್ರಗ್ಯಾ ಸಿಂಗ್ ಠಾಕೂರ್‍ರ ಜೊತೆ 2008ರ ಮಾಲೆಗಾಂವ್ ಸ್ಫೋಟದಲ್ಲಿ ಆರೋಪಿಯಾಗಿದ್ದು ತಲೆ ಮರೆಸಿಕೊಂಡವರೇ ಗೌರಿ ಲಂಕೇಶ್ ಹತ್ಯೆಯ ಆರೋಪಿಗಳಿಗೆ ಬಾಂಬ್ ಹಾಕುವ ತರಬೇತಿ ಕೊಟ್ಟಿದ್ದಾರೆಂದು ಎಸ್‍ಐಟಿ ಕೋರ್ಟ್‍ಗೆ ಸಲ್ಲಿಸಿದ ಮಾಹಿತಿಯಲ್ಲಿ ಹೇಳಿದೆ. ಅಷ್ಟೇ ಅಲ್ಲದೇ ಈ ಬಾಂಬ್ ತರಬೇತಿ ನೀಡಿದವರು ಪ್ರಗ್ಯಾ ಠಾಕೂರ್‍ರ ಸಂಘಟನೆ ಅಭಿನವ್ ಭಾರತ್‍ನ ಸದಸ್ಯರಾಗಿದ್ದಾರೆಂದೂ ಕೋರ್ಟ್‍ಗೆ ಸಲ್ಲಿಸಿದ ಮಾಹಿತಿಯಲ್ಲಿ ಹೇಳಲಾಗಿದೆ. ಈ ಕುರಿತು ಇಂದಿನ ಇಂಡಿಯನ್ ಎಕ್ಸ್‍ಪ್ರೆಸ್‍ನಲ್ಲಿ ವಿವರವಾಗಿ ವರದಿ ಮಾಡಲಾಗಿದೆ.

2006ರಿಂದ 2008ರವರೆಗೆ ಹಲವು ಬಾಂಬ್ ಸ್ಫೋಟಗಳು ನಡೆದಿದ್ದವು. ಅವುಗಳೆಂದರೆ ಮಾಲೆಗಾಂವ್, ಮೆಕ್ಕಾ ಮಸ್ಜಿದ್, ಅಜ್ಮೀರ್ ದರ್ಗಾ, ಸಂಝೋತಾ ಎಕ್ಸ್‍ಪ್ರೆಸ್ ಸ್ಫೋಟಗಳು. ಇವೆಲ್ಲದರಲ್ಲಿ ಒಟ್ಟು 117 ಜನರು ಸತ್ತಿದ್ದರು. ಸಂಝೋತಾ ಎಕ್ಸ್‍ಪ್ರೆಸ್ ಎಂಬುದು ಬಿಜೆಪಿಯ ಅಟಲ್ ಬಿಹಾರಿ ವಾಜಪೇಯಿಯವರು ಪ್ರಧಾನಿಯಾಗಿದ್ದಾಗ ದೆಹಲಿ ಮತ್ತು ಲಾಹೋರ್ ಮಧ್ಯೆ ಆರಂಭಿಸಲಾಗಿದ್ದ ರೈಲು.

ಈ ಸ್ಫೋಟಗಳಲ್ಲಿ ಅಭಿನವ್ ಭಾರತ್ ಸಂಘಟನೆಯ ಸದಸ್ಯರು ಪಾಲ್ಗೊಂಡಿದ್ದಾರೆಂಬ ಆರೋಪದ ಮೇಲೆ ಹಲವರನ್ನು ಬಂಧಿಸಲಾಗಿತ್ತು. ಆದರೆ ತಲೆ ಮರೆಸಿಕೊಂಡಿದ್ದಾರೆಂದು ಹೇಳಲಾದ ಸಂದೀಪ್ ಡಾಂಗೆ, ರಾಮ್‍ಜಿ ಕಲ್ಸಾಂಗ್ರಾ ಮತ್ತು ಅಶ್ವಿನ್ ಚೌಹಾಣ್ ಇವರುಗಳು ನಡೆಸಿದ ರಹಸ್ಯ ಬಾಂಬ್ ತರಬೇತಿಯಲ್ಲಿ ಭಾಗವಹಿಸಿದ್ದವರಲ್ಲಿ ಕೆಲವರು ಗೌರಿ ಲಂಕೇಶ್ ಹತ್ಯೆ ಕೇಸಿನಲ್ಲಿ ಆರೋಪಿಗಳು ಮತ್ತು ಸಾಕ್ಷಿದಾರರಾಗಿದ್ದಾರೆ. ಈ ವಿಷಯವು ಎಸ್‍ಐಟಿಯು, ಸದರಿ ಕೇಸಿಲ್ಲಿ ಕೋರ್ಟಿಗೆ ಸಲ್ಲಿಸಿರುವ ದಾಖಲೆಗಳಲ್ಲಿ ಇದೆ.

ಅಷ್ಟೇ ಅಲ್ಲ, 2007ರ ಅಜ್ಮೀರ್ ದರ್ಗಾ ಸ್ಫೋಟದ ಪ್ರಕರಣದ ನಂತರ ಭೂಗತನಾಗಿದ್ದ ಸುರೇಶ್ ನಾಯರ್ ಅಲಿಯಾಸ್ ಬಾಬಾಜಿಯು ಆ ರಹಸ್ಯ ಕ್ಯಾಂಪಿನಲ್ಲಿ ತರಬೇತಿದಾರನಾಗಿದ್ದ ಮತ್ತು ಆತನನ್ನು ನವೆಂಬರ್ 2018ರಲ್ಲಿ ಗುಜರಾತ್‍ನ ಭರೂಚ್‍ನಲ್ಲಿ ಬಂಧಿಸಲಾಗಿದೆ. ಅಂದರೆ, ಅಭಿನವ್ ಭಾರತ್ ಮತ್ತು ಸನಾತನ ಸಂಸ್ಥೆಗೂ ಸಂಬಂಧವಿದೆಯೆಂದಾಯಿತು!

ಬಾಬಾಜಿ ಮತ್ತು ಗುರೂಜಿಗಳಿಂದ ಬಾಂಬ್ ತರಬೇತಿ

ಬಾಬಾಜಿಯ ಜೊತೆಗೆ ನಾಲ್ಕು ಜನ ಗುರೂಜಿಗಳೂ ಬಾಂಬ್ ತರಬೇತಿಯಲ್ಲಿದ್ದರೆಂದು ಗೌರಿ ಲಂಕೇಶ್ ಹಂತಕರು ಪೊಲೀಸರಿಗೆ ಹೇಳಿದ್ದರು. ಅಂತಹ ಒಬ್ಬ ತರಬೇತಿದಾರನನ್ನೂ ಬಂಧಿಸಲಾಗಿದ್ದು ಆತನ ಹೆಸರೇ ಪ್ರತಾಪ್ ಹಾಜಾ. ಆತ ಪ.ಬಂಗಾಳದ ಭವಾನಿ ಸೇನಾಕ್ಕೆ ಸೇರಿದ ವ್ಯಕ್ತಿ. ಈ ಎಲ್ಲಾ ಸಂಘಟನೆಗಳೂ ಹಿಂದುತ್ವವನ್ನು ತಮ್ಮ ಸಿದ್ಧಾಂತವೆಂದು ಹೇಳುತ್ತವೆ.

ಇದನ್ನೂ ಓದಿ: ಪ್ರಗ್ಯಾ ಎಂಬ ಭಯೋತ್ಪಾದನೆಯ ಆರೋಪಿಯೂ ನರೇಂದ್ರ ಮೋದಿಯೂ

ಆರೆಸ್ಸೆಸ್ ಇವರುಗಳ ಮಾತೃಸಂಸ್ಥೆಯಾಗಿದ್ದು, ಬಹುತೇಕರು ಒಂದಲ್ಲಾ ಒಂದು ಸಂದರ್ಭದಲ್ಲಿ ನೇರವಾಗಿ ಆರೆಸ್ಸೆಸ್ ಅಥವಾ ಅದರ ಅಂಗಸಂಘಟನೆಗಳಲ್ಲಿ ಸಕ್ರಿಯರಾಗಿರುತ್ತಾರೆ. ಇಂಥವರು ಸಿಕ್ಕಿಬಿದ್ದಾಗ ಅವರಿಗೂ, ಆರೆಸ್ಸೆಸ್‍ಗೂ ಅಥವಾ ಬಿಜೆಪಿಗೂ ಸಂಬಂಧ ಇಲ್ಲವೆಂದು ಪ್ರತಿಪಾದಿಸುತ್ತಾರೆ. ಆದರೆ ನಿಧಾನಕ್ಕೆ ಅವರನ್ನು ಸಮರ್ಥಿಸಿಕೊಳ್ಳುವ ಕೆಲಸ ಮಾಡುತ್ತಾ, ಬಹಿರಂಗವಾಗಿಯೇ ಜೊತೆಗೂಡುತ್ತಾರೆ. ಅದಕ್ಕೆ ದೊಡ್ಡ ಉದಾಹರಣೆ, ಪ್ರಗ್ಯಾ ಠಾಕೂರ್. ಆಕೆ ಮತ್ತು ಸಹಚರರು ಸಿಕ್ಕಿಬಿದ್ದಾಗ ಆರೆಸ್ಸೆಸ್‍ನ ಮುಖ್ಯಸ್ಥರೊಬ್ಬರು ಸಕಾರ್ರ್ಧರಕ್ಕೆ ಪತ್ರ ಬರೆದು, ಅವರಿಗೂ ತಮಗೂ ಯಾವುದೇ ಸಂಬಂಧವಿಲ್ಲವೆಂದು ಬಲವಾಗಿ ಪ್ರತಿಪಾದಿಸಿದ್ದರು. ಈಗ ಭೋಪಾಲ್‍ನಿಂದ ಎಂಪಿ ಟಿಕೆಟ್ಟೇ ಕೊಟ್ಟಿದ್ದಾರೆ.

ಇಂಡಿಯನ್ ಎಕ್ಸಪ್ರೆಸ್ ವರದಿ 

ಇವರುಗಳು ಹಿಂಸೆ, ಕೊಲೆ ಇತ್ಯಾದಿಗಳನ್ನು ತಮ್ಮ ಉದ್ದೇಶಗಳಿಗಾಗಿ ಬಳಸುವವರು. ಉದಾಹರಣೆಗೆ ಬಾಂಬ್ ಪರಿಣಿತ ಎನ್ನಲಾಗುವ ಡಾಂಗೆ, ಆರೆಸ್ಸೆಸ್‍ನಲ್ಲಿದ್ದ ವ್ಯಕ್ತಿ ಮತ್ತು ಆತನ ಮೇಲೆ ಇಂಟರ್‍ಪೋಲ್ ರೆಡ್ ಕಾರ್ನರ್ ನೋಟೀಸ್ ಹೊರಡಿಸಲಾಗಿದೆ. ಡಾಂಗೆ ಮತ್ತು ಕಲ್ಸಾಂಗ್ರಾ ಹಿಡಿದುಕೊಟ್ಟವರಿಗೆ ಸರ್ಕಾರವು 10 ಲಕ್ಷ ರೂ. ಮತ್ತು ಹಾಕ್ಲಾ ತಲೆಗೆ 5 ಲಕ್ಷ ರೂ ಬಹುಮಾನ ಘೋಷಿಸಿದ್ದಾರೆ.

ಅಹಮದಾಬಾದ್ ಮತ್ತು ಮಂಗಳೂರುಗಳಲ್ಲಿ ತರಬೇತಿ

ಬಾಬಾಜಿ ಅಲಿಯಾಸ್ ಸುರೇಶ್ ನಾಯರ್ ಹೇಗಿರುತ್ತಾನೆಂಬ ವಿವರವನ್ನು ಗೌರಿ ಲಂಕೇಶ್ ಹತ್ಯೆ ಕೇಸಿನಲ್ಲಿ ಬಂಧಿತರಾಗಿರುವ ಶ್ರೀಕಾಂತ್ ಪಂಗ್ರೇಕರ್, ಶರದ್ ಕಲಸ್ಕರ್ (ನರೇಂದ್ರ ಧಾಬೋಲ್ಕರ್ ಹತ್ಯೆಗೈದ ಶೂಟರ್ ಎಂಬ ಆರೋಪಿ)) ಮತ್ತು ವಾಸುದೇವ ಸೂರ್ಯವಂಶಿ ಇವರುಗಳು ಕೊಟ್ಟಿದ್ದಾರೆ. ಬಾಂಬ್ ಸ್ಫೋಟ ಮತ್ತು ಶಸ್ತ್ರಾಸ್ತ್ರ ತರಬೇತಿಯನ್ನು ನೀಡಲು 19 ತರಬೇತಿ ಶಿಬಿರಗಳನ್ನು ಆಯೋಜಿಸಲಾಗಿತ್ತೆಂದು ಎಸ್‍ಐಟಿ ಹೇಳಿದೆ. ಇಂತಹ ತರಬೇತಿ ನೀಡಲು ಬರುತ್ತಿದ್ದವರಲ್ಲಿ ಕೆಲವರು ಸಂತ/ಸ್ವಾಮೀಜಿ ವೇಷದಲ್ಲಿ ತಿರುಗಾಡುತ್ತಿದ್ದರೆಂದೂ ಆರೋಪಿಗಳು ಬಾಯಿ ಬಿಟ್ಟಿದ್ದಾರೆ. ಶಿಬಿರಗಳು ಅಹಮದಾಬಾದ್  ಮತ್ತು ಮಂಗಳೂರುಗಳಲ್ಲಿ ನಡೆಯಿತೆಂದು ಹೇಳಲಾಗುತ್ತಿದೆ.

ಇದೀಗ ಆರೆಸ್ಸೆಸ್ ಮತ್ತು ಬಿಜೆಪಿ ಏನು ಹೇಳುತ್ತವೆ ಕಾದು ನೋಡಬೇಕು.

ಆಧಾರ: ಇಂಡಿಯನ್ ಎಕ್ಸಪ್ರೆಸ್

ಬಿಜೆಪಿ ಅಭ್ಯರ್ಥಿ, ಭಯೋತ್ಪಾದನೆಯ ಆರೋಪಿ ಪ್ರಗ್ಯಾ ವಿರುದ್ಧ ಐಪಿಎಸ್ ಸಂಘ ಗುಟುರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...