Homeಕರ್ನಾಟಕಪ್ರಗ್ಯಾ ಠಾಕೂರ್ ಸಹಚರರಿಗೆ ಗೌರಿ ಲಂಕೇಶ್ ಹತ್ಯೆಯ ಜೊತೆಗೆ ನಂಟು: ಕೋರ್ಟ್ ಗೆ ಹೇಳಿದ ಎಸ್‍ಐಟಿ

ಪ್ರಗ್ಯಾ ಠಾಕೂರ್ ಸಹಚರರಿಗೆ ಗೌರಿ ಲಂಕೇಶ್ ಹತ್ಯೆಯ ಜೊತೆಗೆ ನಂಟು: ಕೋರ್ಟ್ ಗೆ ಹೇಳಿದ ಎಸ್‍ಐಟಿ

- Advertisement -
- Advertisement -

| ನಾನುಗೌರಿ ಡೆಸ್ಕ್ |

ಅಭಿನವ್ ಭಾರತ್ ಗೂ ಸನಾತನ ಸಂಸ್ಥೆಗೂ ಇದೆ ನಂಟು

ಭೋಪಾಲ್‍ನ ಬಿಜೆಪಿ ಅಭ್ಯರ್ಥಿ, ಭಯೋತ್ಪಾದನೆಯ ಆರೋಪಿ ಪ್ರಗ್ಯಾ ಸಿಂಗ್ ಠಾಕೂರ್‍ರ ಜೊತೆ 2008ರ ಮಾಲೆಗಾಂವ್ ಸ್ಫೋಟದಲ್ಲಿ ಆರೋಪಿಯಾಗಿದ್ದು ತಲೆ ಮರೆಸಿಕೊಂಡವರೇ ಗೌರಿ ಲಂಕೇಶ್ ಹತ್ಯೆಯ ಆರೋಪಿಗಳಿಗೆ ಬಾಂಬ್ ಹಾಕುವ ತರಬೇತಿ ಕೊಟ್ಟಿದ್ದಾರೆಂದು ಎಸ್‍ಐಟಿ ಕೋರ್ಟ್‍ಗೆ ಸಲ್ಲಿಸಿದ ಮಾಹಿತಿಯಲ್ಲಿ ಹೇಳಿದೆ. ಅಷ್ಟೇ ಅಲ್ಲದೇ ಈ ಬಾಂಬ್ ತರಬೇತಿ ನೀಡಿದವರು ಪ್ರಗ್ಯಾ ಠಾಕೂರ್‍ರ ಸಂಘಟನೆ ಅಭಿನವ್ ಭಾರತ್‍ನ ಸದಸ್ಯರಾಗಿದ್ದಾರೆಂದೂ ಕೋರ್ಟ್‍ಗೆ ಸಲ್ಲಿಸಿದ ಮಾಹಿತಿಯಲ್ಲಿ ಹೇಳಲಾಗಿದೆ. ಈ ಕುರಿತು ಇಂದಿನ ಇಂಡಿಯನ್ ಎಕ್ಸ್‍ಪ್ರೆಸ್‍ನಲ್ಲಿ ವಿವರವಾಗಿ ವರದಿ ಮಾಡಲಾಗಿದೆ.

2006ರಿಂದ 2008ರವರೆಗೆ ಹಲವು ಬಾಂಬ್ ಸ್ಫೋಟಗಳು ನಡೆದಿದ್ದವು. ಅವುಗಳೆಂದರೆ ಮಾಲೆಗಾಂವ್, ಮೆಕ್ಕಾ ಮಸ್ಜಿದ್, ಅಜ್ಮೀರ್ ದರ್ಗಾ, ಸಂಝೋತಾ ಎಕ್ಸ್‍ಪ್ರೆಸ್ ಸ್ಫೋಟಗಳು. ಇವೆಲ್ಲದರಲ್ಲಿ ಒಟ್ಟು 117 ಜನರು ಸತ್ತಿದ್ದರು. ಸಂಝೋತಾ ಎಕ್ಸ್‍ಪ್ರೆಸ್ ಎಂಬುದು ಬಿಜೆಪಿಯ ಅಟಲ್ ಬಿಹಾರಿ ವಾಜಪೇಯಿಯವರು ಪ್ರಧಾನಿಯಾಗಿದ್ದಾಗ ದೆಹಲಿ ಮತ್ತು ಲಾಹೋರ್ ಮಧ್ಯೆ ಆರಂಭಿಸಲಾಗಿದ್ದ ರೈಲು.

ಈ ಸ್ಫೋಟಗಳಲ್ಲಿ ಅಭಿನವ್ ಭಾರತ್ ಸಂಘಟನೆಯ ಸದಸ್ಯರು ಪಾಲ್ಗೊಂಡಿದ್ದಾರೆಂಬ ಆರೋಪದ ಮೇಲೆ ಹಲವರನ್ನು ಬಂಧಿಸಲಾಗಿತ್ತು. ಆದರೆ ತಲೆ ಮರೆಸಿಕೊಂಡಿದ್ದಾರೆಂದು ಹೇಳಲಾದ ಸಂದೀಪ್ ಡಾಂಗೆ, ರಾಮ್‍ಜಿ ಕಲ್ಸಾಂಗ್ರಾ ಮತ್ತು ಅಶ್ವಿನ್ ಚೌಹಾಣ್ ಇವರುಗಳು ನಡೆಸಿದ ರಹಸ್ಯ ಬಾಂಬ್ ತರಬೇತಿಯಲ್ಲಿ ಭಾಗವಹಿಸಿದ್ದವರಲ್ಲಿ ಕೆಲವರು ಗೌರಿ ಲಂಕೇಶ್ ಹತ್ಯೆ ಕೇಸಿನಲ್ಲಿ ಆರೋಪಿಗಳು ಮತ್ತು ಸಾಕ್ಷಿದಾರರಾಗಿದ್ದಾರೆ. ಈ ವಿಷಯವು ಎಸ್‍ಐಟಿಯು, ಸದರಿ ಕೇಸಿಲ್ಲಿ ಕೋರ್ಟಿಗೆ ಸಲ್ಲಿಸಿರುವ ದಾಖಲೆಗಳಲ್ಲಿ ಇದೆ.

ಅಷ್ಟೇ ಅಲ್ಲ, 2007ರ ಅಜ್ಮೀರ್ ದರ್ಗಾ ಸ್ಫೋಟದ ಪ್ರಕರಣದ ನಂತರ ಭೂಗತನಾಗಿದ್ದ ಸುರೇಶ್ ನಾಯರ್ ಅಲಿಯಾಸ್ ಬಾಬಾಜಿಯು ಆ ರಹಸ್ಯ ಕ್ಯಾಂಪಿನಲ್ಲಿ ತರಬೇತಿದಾರನಾಗಿದ್ದ ಮತ್ತು ಆತನನ್ನು ನವೆಂಬರ್ 2018ರಲ್ಲಿ ಗುಜರಾತ್‍ನ ಭರೂಚ್‍ನಲ್ಲಿ ಬಂಧಿಸಲಾಗಿದೆ. ಅಂದರೆ, ಅಭಿನವ್ ಭಾರತ್ ಮತ್ತು ಸನಾತನ ಸಂಸ್ಥೆಗೂ ಸಂಬಂಧವಿದೆಯೆಂದಾಯಿತು!

ಬಾಬಾಜಿ ಮತ್ತು ಗುರೂಜಿಗಳಿಂದ ಬಾಂಬ್ ತರಬೇತಿ

ಬಾಬಾಜಿಯ ಜೊತೆಗೆ ನಾಲ್ಕು ಜನ ಗುರೂಜಿಗಳೂ ಬಾಂಬ್ ತರಬೇತಿಯಲ್ಲಿದ್ದರೆಂದು ಗೌರಿ ಲಂಕೇಶ್ ಹಂತಕರು ಪೊಲೀಸರಿಗೆ ಹೇಳಿದ್ದರು. ಅಂತಹ ಒಬ್ಬ ತರಬೇತಿದಾರನನ್ನೂ ಬಂಧಿಸಲಾಗಿದ್ದು ಆತನ ಹೆಸರೇ ಪ್ರತಾಪ್ ಹಾಜಾ. ಆತ ಪ.ಬಂಗಾಳದ ಭವಾನಿ ಸೇನಾಕ್ಕೆ ಸೇರಿದ ವ್ಯಕ್ತಿ. ಈ ಎಲ್ಲಾ ಸಂಘಟನೆಗಳೂ ಹಿಂದುತ್ವವನ್ನು ತಮ್ಮ ಸಿದ್ಧಾಂತವೆಂದು ಹೇಳುತ್ತವೆ.

ಇದನ್ನೂ ಓದಿ: ಪ್ರಗ್ಯಾ ಎಂಬ ಭಯೋತ್ಪಾದನೆಯ ಆರೋಪಿಯೂ ನರೇಂದ್ರ ಮೋದಿಯೂ

ಆರೆಸ್ಸೆಸ್ ಇವರುಗಳ ಮಾತೃಸಂಸ್ಥೆಯಾಗಿದ್ದು, ಬಹುತೇಕರು ಒಂದಲ್ಲಾ ಒಂದು ಸಂದರ್ಭದಲ್ಲಿ ನೇರವಾಗಿ ಆರೆಸ್ಸೆಸ್ ಅಥವಾ ಅದರ ಅಂಗಸಂಘಟನೆಗಳಲ್ಲಿ ಸಕ್ರಿಯರಾಗಿರುತ್ತಾರೆ. ಇಂಥವರು ಸಿಕ್ಕಿಬಿದ್ದಾಗ ಅವರಿಗೂ, ಆರೆಸ್ಸೆಸ್‍ಗೂ ಅಥವಾ ಬಿಜೆಪಿಗೂ ಸಂಬಂಧ ಇಲ್ಲವೆಂದು ಪ್ರತಿಪಾದಿಸುತ್ತಾರೆ. ಆದರೆ ನಿಧಾನಕ್ಕೆ ಅವರನ್ನು ಸಮರ್ಥಿಸಿಕೊಳ್ಳುವ ಕೆಲಸ ಮಾಡುತ್ತಾ, ಬಹಿರಂಗವಾಗಿಯೇ ಜೊತೆಗೂಡುತ್ತಾರೆ. ಅದಕ್ಕೆ ದೊಡ್ಡ ಉದಾಹರಣೆ, ಪ್ರಗ್ಯಾ ಠಾಕೂರ್. ಆಕೆ ಮತ್ತು ಸಹಚರರು ಸಿಕ್ಕಿಬಿದ್ದಾಗ ಆರೆಸ್ಸೆಸ್‍ನ ಮುಖ್ಯಸ್ಥರೊಬ್ಬರು ಸಕಾರ್ರ್ಧರಕ್ಕೆ ಪತ್ರ ಬರೆದು, ಅವರಿಗೂ ತಮಗೂ ಯಾವುದೇ ಸಂಬಂಧವಿಲ್ಲವೆಂದು ಬಲವಾಗಿ ಪ್ರತಿಪಾದಿಸಿದ್ದರು. ಈಗ ಭೋಪಾಲ್‍ನಿಂದ ಎಂಪಿ ಟಿಕೆಟ್ಟೇ ಕೊಟ್ಟಿದ್ದಾರೆ.

ಇಂಡಿಯನ್ ಎಕ್ಸಪ್ರೆಸ್ ವರದಿ 

ಇವರುಗಳು ಹಿಂಸೆ, ಕೊಲೆ ಇತ್ಯಾದಿಗಳನ್ನು ತಮ್ಮ ಉದ್ದೇಶಗಳಿಗಾಗಿ ಬಳಸುವವರು. ಉದಾಹರಣೆಗೆ ಬಾಂಬ್ ಪರಿಣಿತ ಎನ್ನಲಾಗುವ ಡಾಂಗೆ, ಆರೆಸ್ಸೆಸ್‍ನಲ್ಲಿದ್ದ ವ್ಯಕ್ತಿ ಮತ್ತು ಆತನ ಮೇಲೆ ಇಂಟರ್‍ಪೋಲ್ ರೆಡ್ ಕಾರ್ನರ್ ನೋಟೀಸ್ ಹೊರಡಿಸಲಾಗಿದೆ. ಡಾಂಗೆ ಮತ್ತು ಕಲ್ಸಾಂಗ್ರಾ ಹಿಡಿದುಕೊಟ್ಟವರಿಗೆ ಸರ್ಕಾರವು 10 ಲಕ್ಷ ರೂ. ಮತ್ತು ಹಾಕ್ಲಾ ತಲೆಗೆ 5 ಲಕ್ಷ ರೂ ಬಹುಮಾನ ಘೋಷಿಸಿದ್ದಾರೆ.

ಅಹಮದಾಬಾದ್ ಮತ್ತು ಮಂಗಳೂರುಗಳಲ್ಲಿ ತರಬೇತಿ

ಬಾಬಾಜಿ ಅಲಿಯಾಸ್ ಸುರೇಶ್ ನಾಯರ್ ಹೇಗಿರುತ್ತಾನೆಂಬ ವಿವರವನ್ನು ಗೌರಿ ಲಂಕೇಶ್ ಹತ್ಯೆ ಕೇಸಿನಲ್ಲಿ ಬಂಧಿತರಾಗಿರುವ ಶ್ರೀಕಾಂತ್ ಪಂಗ್ರೇಕರ್, ಶರದ್ ಕಲಸ್ಕರ್ (ನರೇಂದ್ರ ಧಾಬೋಲ್ಕರ್ ಹತ್ಯೆಗೈದ ಶೂಟರ್ ಎಂಬ ಆರೋಪಿ)) ಮತ್ತು ವಾಸುದೇವ ಸೂರ್ಯವಂಶಿ ಇವರುಗಳು ಕೊಟ್ಟಿದ್ದಾರೆ. ಬಾಂಬ್ ಸ್ಫೋಟ ಮತ್ತು ಶಸ್ತ್ರಾಸ್ತ್ರ ತರಬೇತಿಯನ್ನು ನೀಡಲು 19 ತರಬೇತಿ ಶಿಬಿರಗಳನ್ನು ಆಯೋಜಿಸಲಾಗಿತ್ತೆಂದು ಎಸ್‍ಐಟಿ ಹೇಳಿದೆ. ಇಂತಹ ತರಬೇತಿ ನೀಡಲು ಬರುತ್ತಿದ್ದವರಲ್ಲಿ ಕೆಲವರು ಸಂತ/ಸ್ವಾಮೀಜಿ ವೇಷದಲ್ಲಿ ತಿರುಗಾಡುತ್ತಿದ್ದರೆಂದೂ ಆರೋಪಿಗಳು ಬಾಯಿ ಬಿಟ್ಟಿದ್ದಾರೆ. ಶಿಬಿರಗಳು ಅಹಮದಾಬಾದ್  ಮತ್ತು ಮಂಗಳೂರುಗಳಲ್ಲಿ ನಡೆಯಿತೆಂದು ಹೇಳಲಾಗುತ್ತಿದೆ.

ಇದೀಗ ಆರೆಸ್ಸೆಸ್ ಮತ್ತು ಬಿಜೆಪಿ ಏನು ಹೇಳುತ್ತವೆ ಕಾದು ನೋಡಬೇಕು.

ಆಧಾರ: ಇಂಡಿಯನ್ ಎಕ್ಸಪ್ರೆಸ್

ಬಿಜೆಪಿ ಅಭ್ಯರ್ಥಿ, ಭಯೋತ್ಪಾದನೆಯ ಆರೋಪಿ ಪ್ರಗ್ಯಾ ವಿರುದ್ಧ ಐಪಿಎಸ್ ಸಂಘ ಗುಟುರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಪೃಶ್ಯ ಅಲೆಮಾರಿ ಸಮುದಾಯಗಳನ್ನು ಪ್ರವರ್ಗ ಸಿಗೆ ಸೇರಿಸಿದ್ದನ್ನು ಕೋರ್ಟ್‌ನಲ್ಲಿ ಸಮರ್ಥಿಸಿಕೊಂಡ ರಾಜ್ಯ ಸರ್ಕಾರ

ಆಗಸ್ಟ್‌ 18 2025ರಂದು ರಾಜ್ಯ ಸರ್ಕಾರ ಒಳಮೀಸಲಾತಿ ವರ್ಗೀಕರಣ ಆದೇಶ ಹೊರಡಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಅಸ್ಪೃಶ್ಯ ಅಲೆಮಾರಿ ಸಮುದಾಯಗಳ ಮಹಾ ಒಕ್ಕೂಟವು ಕರ್ನಾಟಕ ಹೈಕೋರ್ಟ್‌ನಲ್ಲಿ ರಿಟ್‌ ಅರ್ಜಿಯನ್ನು ದಾಖಲಿಸಿತ್ತು. ರಾಜ್ಯ ಸರ್ಕಾರ...

ಐದು ವರ್ಷಗಳಲ್ಲಿ ಸುಮಾರು ಒಂಬತ್ತು ಲಕ್ಷ ಜನರು ಪೌರತ್ವ ತ್ಯಜಿಸಿದ್ದಾರೆ: ಎಂಇಎ

ಕಳೆದ ಐದು ವರ್ಷಗಳಲ್ಲಿ ಸುಮಾರು ಒಂಬತ್ತು ಲಕ್ಷ ಜನರು ತಮ್ಮ ಭಾರತೀಯ ಪೌರತ್ವವನ್ನು ತ್ಯಜಿಸಿದ್ದಾರೆ. ಜಾಗತಿಕ ಚಲನಶೀಲತೆ ಹೆಚ್ಚಾದಂತೆ ಮತ್ತು ವೈಯಕ್ತಿಕ ಆಯ್ಕೆಗಳು ವಲಸೆ ಪ್ರವೃತ್ತಿಯನ್ನು ರೂಪಿಸುತ್ತಿರುವುದರಿಂದ ವಾರ್ಷಿಕವಾಗಿ ಸಂಖ್ಯೆಗಳು ಗಮನಾರ್ಹವಾಗಿ ಬದಲಾಗಿವೆ...

ನಟ ದಿಲೀಪ್ ಖುಲಾಸೆ: ನ್ಯಾಯಾಲಯದ ಕಲಾಪವನ್ನು ವಿರೂಪಗೊಳಿಸಬೇಡಿ ಎಂದು ಮಾಧ್ಯಮ ಮತ್ತು ವಕೀಲರಿಗೆ ಎಚ್ಚರಿಕೆ ನೀಡಿದ ನ್ಯಾಯಾದೀಶೆ ಹನಿ ವರ್ಗೀಸ್ 

2017 ರಲ್ಲಿ ದಕ್ಷಿಣ ಭಾರತದ ನಟಿಯ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಲಯಾಳಂ ನಟ ದಿಲೀಪ್ ಅವರನ್ನು ಖುಲಾಸೆಗೊಳಿಸಿದ ಎರ್ನಾಕುಲಂ ಪ್ರಧಾನ ಸೆಷನ್ಸ್ ನ್ಯಾಯಾಧೀಶೆ ಹನಿ ಎಂ ವರ್ಗೀಸ್, ತಮ್ಮ ತೀರ್ಪಿನ...

ರಾಜ್‌ಕೋಟ್‌ ಬಾಲಕಿ ಅತ್ಯಾಚಾರ ಪ್ರಕರಣ; ಆಕ್ರೋಶ ಹೊರಹಾಕಿದ ಶಾಸಕ ಜಿಗ್ನೇಶ್‌ ಮೇವಾನಿ; ಕಠಿಣ ಶಿಕ್ಷೆಗೆ ಆಗ್ರಹ

ಗುಜರಾತ್‌ನ ರಾಜ್‌ಕೋಟ್‌ನಲ್ಲಿ ಏಳು ವರ್ಷದ ಬಾಲಕಿ ಅತ್ಯಾಚಾರ ಹಾಗೂ ಗಂಭೀರ ಹಲ್ಲೆ ಪ್ರಕರಣಕ್ಕೆ ಸಂಬಧಿಸಿದಂತೆ ಆಕ್ರೋಶ ಹೊರಹಾಕಿರುವ ಕಾಂಗ್ರೆಸ್ ಶಾಸಕ ಜಿಗ್ನೇಶ್‌ ಮೇವಾನಿ; ಆರೋಪಿಯನ್ನು ಕಠಿಣ ಶಿಕ್ಷೆಗೆ ಗುರಿಪಡಿಸಬೇಕು ಎಂದು ಆಗ್ರಹಿಸಿದ್ದಾರೆ. ಘಟನೆ ಕುರಿತು...

ಯುವ ರೈತರನ್ನು ಮದುವೆಯಾಗುವ ಯುವತಿಯರಿಗೆ ₹5 ಲಕ್ಷ ಪ್ರೋತ್ಸಾಹಧನ ನೀಡಲು BJP ಕಾರ್ಯಕರ್ತರ ಮನವಿ

ಮಂಡ್ಯ:  ಕರ್ನಾಟಕ ಸರ್ಕಾರ ಜಾರಿಗೆ ತಂದಿರುವ ‘ಶಾದಿ ಭಾಗ್ಯ’ದಂತೆ ರೈತರನ್ನು ಮದುವೆಯಾಗುವ ಯುವತಿಯರಿಗೆ ಸರ್ಕಾರದ ವತಿಯಿಂದ ರೂ.5ಲಕ್ಷ ಪ್ರೋತ್ಸಾಹಧನ ನೀಡಬೇಕು ಎಂದು ಬಿಜೆಪಿ ಕಾರ್ಯಕರ್ತರು ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಸಿ. ಶಿವಾನಂದಮೂರ್ತಿ ಅವರ ಮೂಲಕ...

ನಿವೃತ್ತಿ ನಿರ್ಧಾರ ಹಿಂತೆಗೆದುಕೊಂಡ ವಿನೇಶ್ ಫೋಗಟ್; ಲಾಸ್ ಏಂಜಲೀಸ್ ಒಲಿಂಪಿಕ್ಸ್‌ಗೆ ತಯಾರಿ

ಕುಸ್ತಿಪಟು ವಿನೇಶ್ ಫೋಗಟ್ ಸ್ಪರ್ಧಾತ್ಮಕ ಕ್ರೀಡೆಗೆ ಮರಳುವುದಾಗಿ ಘೋಷಿಸುವ ಮೂಲಕ ತಮ್ಮ ನಿವೃತ್ತಿ ನಿರ್ಧಾರವನ್ನು ಹಿಂತೆಗೆದುಕೊಂಡಿದ್ದಾರೆ. 2028 ರ ಲಾಸ್ ಏಂಜಲೀಸ್ ಒಲಿಂಪಿಕ್ಸ್ ಅನ್ನು ಗುರಿಯಾಗಿಸಿಕೊಂಡಿರುವುದಾಗಿ ತಿಳಿಸಿದ್ದಾರೆ. ಈ ಕುರಿತ ಹೇಳಿಕೆ ಬಿಡುಗಡೆ ಮಾಡಿರುವ...

ಗುಜರಾತ್‌ನ ವಲ್ಸಾದ್‌ನಲ್ಲಿ ನಿರ್ಮಾಣ ಹಂತದ ಸೇತುವೆ ಕುಸಿದು ಐವರು ಕಾರ್ಮಿಕರಿಗೆ ಗಾಯ

ಗುಜರಾತ್‌ನ ವಲ್ಸಾದ್ ಜಿಲ್ಲೆಯಲ್ಲಿ ಔರಂಗ ನದಿಗೆ ನಿರ್ಮಾಣ ಹಂತದಲ್ಲಿರುವ ಸೇತುವೆಯ ಮೇಲಿನ ಗಿರ್ಡರ್ ಕುಸಿದಿದ್ದು, ಐವರು ಕಾರ್ಮಿಕರು ಗಾಯಗೊಂಡಿದ್ದಾರೆ.  ಹಳೆಯ ಸೇತುವೆಗೆ ಸಮಾನಾಂತರವಾಗಿ ಹೊಸ ಸೇತುವೆಯನ್ನು ನಿರ್ಮಿಸಲಾಗುತ್ತಿರುವ ಕೈಲಾಶ್ ರಸ್ತೆಯಲ್ಲಿ ಶುಕ್ರವಾರ ಬೆಳಿಗ್ಗೆ 8...

ಆಮದು ಸುಂಕ ಹೆಚ್ಚಿಸಿದ ಮೆಕ್ಸಿಕೊ: ಭಾರತದ ವಾಹನ-ಉಕ್ಕು ರಫ್ತಿನ ವೆಚ್ಚ ಹೆಚ್ಚಳ ಸಾಧ್ಯತೆ

ಸ್ಥಳೀಯ ಕೈಗಾರಿಕೆಗಳನ್ನು ರಕ್ಷಿಸುವ ಗುರಿಯ ಭಾಗವಾಗಿ, ಭಾರತ, ಚೀನಾ ಮತ್ತು ದಕ್ಷಿಣ ಕೊರಿಯಾ ಸೇರಿದಂತೆ ಏಷ್ಯಾದ ದೇಶಗಳಿಂದ ಆಮದು ಮಾಡಿಕೊಳ್ಳುವ ವಸ್ತುಗಳ ಮೇಲಿನ ಹೆಚ್ಚಿನ ಸುಂಕ ಹೆಚ್ಚಳ ನಿರ್ಧಾರವನ್ನು ಮೆಕ್ಸಿಕೋ ಅನುಮೋದಿಸಿದೆ. ಮೆಕ್ಸಿಕನ್...

Cognizant ಕಂಪನಿಗೆ 99 ಪೈಸೆಗೆ ಒಂದು ಎಕರೆ ಭೂಮಿ: ವಿಶಾಖಪಟ್ಟಣದಲ್ಲಿ ತಾತ್ಕಾಲಿಕ ಕಛೇರಿ ಉದ್ಘಾಟನೆ

ಕಳೆದ ಜೂನ್‌ ನಲ್ಲಿ ಸುದ್ದಿಗೆ ಗ್ರಾಸವಾಗಿದ್ದ ಆಂಧ್ರ ಪ್ರದೇಶದ ವಿಶಾಖಪಟ್ಟಣದಲ್ಲಿ Cognizant ಕಂಪನಿಯು 1582 ಕೋಟಿ ಹೂಡಿಕೆ ಮಾಡಿ 8 ಸಾವಿರ ಉದ್ಯೋಗ ಸೃಷ್ಠಿ ಮಾಡಲಾಗುವುದೆಂದು ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಸರ್ಕಾರ ಘೋಷಿಸಿತ್ತು....

ಅಲ್ಪಸಂಖ್ಯಾತ ಶಾಲೆಗಳಿಗೆ ಆರ್.ಟಿ.ಇ ಕಾಯ್ದೆಯಿಂದ ವಿನಾಯಿತಿ ತೀರ್ಪಿನ ವಿರುದ್ಧ ಅರ್ಜಿ; ಎನ್.ಜಿ.ಒಗೆ ದಂಡ ವಿಧಿಸಿದ ಸುಪ್ರೀಂ  

ಶಿಕ್ಷಣ ಹಕ್ಕು ಕಾಯ್ದೆಯ (ಆರ್‌ಟಿಇ) ನಿಬಂಧನೆಗಳಿಂದ ಅಲ್ಪಸಂಖ್ಯಾತ ಶಾಲೆಗಳಿಗೆ ವಿನಾಯಿತಿ ನೀಡಿದ್ದ, ತನ್ನ ಹಿಂದಿನ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಲಾದ ರಿಟ್ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ತೀವ್ರವಾಗಿ ಖಂಡಿಸಿದೆ.  ಜಸ್ಟೀಸ್ ಬಿ.ವಿ. ನಾಗರತ್ನ ಮತ್ತು...