Homeಕರ್ನಾಟಕಪ್ರಗ್ಯಾ ಠಾಕೂರ್ ಸಹಚರರಿಗೆ ಗೌರಿ ಲಂಕೇಶ್ ಹತ್ಯೆಯ ಜೊತೆಗೆ ನಂಟು: ಕೋರ್ಟ್ ಗೆ ಹೇಳಿದ ಎಸ್‍ಐಟಿ

ಪ್ರಗ್ಯಾ ಠಾಕೂರ್ ಸಹಚರರಿಗೆ ಗೌರಿ ಲಂಕೇಶ್ ಹತ್ಯೆಯ ಜೊತೆಗೆ ನಂಟು: ಕೋರ್ಟ್ ಗೆ ಹೇಳಿದ ಎಸ್‍ಐಟಿ

- Advertisement -
- Advertisement -

| ನಾನುಗೌರಿ ಡೆಸ್ಕ್ |

ಅಭಿನವ್ ಭಾರತ್ ಗೂ ಸನಾತನ ಸಂಸ್ಥೆಗೂ ಇದೆ ನಂಟು

ಭೋಪಾಲ್‍ನ ಬಿಜೆಪಿ ಅಭ್ಯರ್ಥಿ, ಭಯೋತ್ಪಾದನೆಯ ಆರೋಪಿ ಪ್ರಗ್ಯಾ ಸಿಂಗ್ ಠಾಕೂರ್‍ರ ಜೊತೆ 2008ರ ಮಾಲೆಗಾಂವ್ ಸ್ಫೋಟದಲ್ಲಿ ಆರೋಪಿಯಾಗಿದ್ದು ತಲೆ ಮರೆಸಿಕೊಂಡವರೇ ಗೌರಿ ಲಂಕೇಶ್ ಹತ್ಯೆಯ ಆರೋಪಿಗಳಿಗೆ ಬಾಂಬ್ ಹಾಕುವ ತರಬೇತಿ ಕೊಟ್ಟಿದ್ದಾರೆಂದು ಎಸ್‍ಐಟಿ ಕೋರ್ಟ್‍ಗೆ ಸಲ್ಲಿಸಿದ ಮಾಹಿತಿಯಲ್ಲಿ ಹೇಳಿದೆ. ಅಷ್ಟೇ ಅಲ್ಲದೇ ಈ ಬಾಂಬ್ ತರಬೇತಿ ನೀಡಿದವರು ಪ್ರಗ್ಯಾ ಠಾಕೂರ್‍ರ ಸಂಘಟನೆ ಅಭಿನವ್ ಭಾರತ್‍ನ ಸದಸ್ಯರಾಗಿದ್ದಾರೆಂದೂ ಕೋರ್ಟ್‍ಗೆ ಸಲ್ಲಿಸಿದ ಮಾಹಿತಿಯಲ್ಲಿ ಹೇಳಲಾಗಿದೆ. ಈ ಕುರಿತು ಇಂದಿನ ಇಂಡಿಯನ್ ಎಕ್ಸ್‍ಪ್ರೆಸ್‍ನಲ್ಲಿ ವಿವರವಾಗಿ ವರದಿ ಮಾಡಲಾಗಿದೆ.

2006ರಿಂದ 2008ರವರೆಗೆ ಹಲವು ಬಾಂಬ್ ಸ್ಫೋಟಗಳು ನಡೆದಿದ್ದವು. ಅವುಗಳೆಂದರೆ ಮಾಲೆಗಾಂವ್, ಮೆಕ್ಕಾ ಮಸ್ಜಿದ್, ಅಜ್ಮೀರ್ ದರ್ಗಾ, ಸಂಝೋತಾ ಎಕ್ಸ್‍ಪ್ರೆಸ್ ಸ್ಫೋಟಗಳು. ಇವೆಲ್ಲದರಲ್ಲಿ ಒಟ್ಟು 117 ಜನರು ಸತ್ತಿದ್ದರು. ಸಂಝೋತಾ ಎಕ್ಸ್‍ಪ್ರೆಸ್ ಎಂಬುದು ಬಿಜೆಪಿಯ ಅಟಲ್ ಬಿಹಾರಿ ವಾಜಪೇಯಿಯವರು ಪ್ರಧಾನಿಯಾಗಿದ್ದಾಗ ದೆಹಲಿ ಮತ್ತು ಲಾಹೋರ್ ಮಧ್ಯೆ ಆರಂಭಿಸಲಾಗಿದ್ದ ರೈಲು.

ಈ ಸ್ಫೋಟಗಳಲ್ಲಿ ಅಭಿನವ್ ಭಾರತ್ ಸಂಘಟನೆಯ ಸದಸ್ಯರು ಪಾಲ್ಗೊಂಡಿದ್ದಾರೆಂಬ ಆರೋಪದ ಮೇಲೆ ಹಲವರನ್ನು ಬಂಧಿಸಲಾಗಿತ್ತು. ಆದರೆ ತಲೆ ಮರೆಸಿಕೊಂಡಿದ್ದಾರೆಂದು ಹೇಳಲಾದ ಸಂದೀಪ್ ಡಾಂಗೆ, ರಾಮ್‍ಜಿ ಕಲ್ಸಾಂಗ್ರಾ ಮತ್ತು ಅಶ್ವಿನ್ ಚೌಹಾಣ್ ಇವರುಗಳು ನಡೆಸಿದ ರಹಸ್ಯ ಬಾಂಬ್ ತರಬೇತಿಯಲ್ಲಿ ಭಾಗವಹಿಸಿದ್ದವರಲ್ಲಿ ಕೆಲವರು ಗೌರಿ ಲಂಕೇಶ್ ಹತ್ಯೆ ಕೇಸಿನಲ್ಲಿ ಆರೋಪಿಗಳು ಮತ್ತು ಸಾಕ್ಷಿದಾರರಾಗಿದ್ದಾರೆ. ಈ ವಿಷಯವು ಎಸ್‍ಐಟಿಯು, ಸದರಿ ಕೇಸಿಲ್ಲಿ ಕೋರ್ಟಿಗೆ ಸಲ್ಲಿಸಿರುವ ದಾಖಲೆಗಳಲ್ಲಿ ಇದೆ.

ಅಷ್ಟೇ ಅಲ್ಲ, 2007ರ ಅಜ್ಮೀರ್ ದರ್ಗಾ ಸ್ಫೋಟದ ಪ್ರಕರಣದ ನಂತರ ಭೂಗತನಾಗಿದ್ದ ಸುರೇಶ್ ನಾಯರ್ ಅಲಿಯಾಸ್ ಬಾಬಾಜಿಯು ಆ ರಹಸ್ಯ ಕ್ಯಾಂಪಿನಲ್ಲಿ ತರಬೇತಿದಾರನಾಗಿದ್ದ ಮತ್ತು ಆತನನ್ನು ನವೆಂಬರ್ 2018ರಲ್ಲಿ ಗುಜರಾತ್‍ನ ಭರೂಚ್‍ನಲ್ಲಿ ಬಂಧಿಸಲಾಗಿದೆ. ಅಂದರೆ, ಅಭಿನವ್ ಭಾರತ್ ಮತ್ತು ಸನಾತನ ಸಂಸ್ಥೆಗೂ ಸಂಬಂಧವಿದೆಯೆಂದಾಯಿತು!

ಬಾಬಾಜಿ ಮತ್ತು ಗುರೂಜಿಗಳಿಂದ ಬಾಂಬ್ ತರಬೇತಿ

ಬಾಬಾಜಿಯ ಜೊತೆಗೆ ನಾಲ್ಕು ಜನ ಗುರೂಜಿಗಳೂ ಬಾಂಬ್ ತರಬೇತಿಯಲ್ಲಿದ್ದರೆಂದು ಗೌರಿ ಲಂಕೇಶ್ ಹಂತಕರು ಪೊಲೀಸರಿಗೆ ಹೇಳಿದ್ದರು. ಅಂತಹ ಒಬ್ಬ ತರಬೇತಿದಾರನನ್ನೂ ಬಂಧಿಸಲಾಗಿದ್ದು ಆತನ ಹೆಸರೇ ಪ್ರತಾಪ್ ಹಾಜಾ. ಆತ ಪ.ಬಂಗಾಳದ ಭವಾನಿ ಸೇನಾಕ್ಕೆ ಸೇರಿದ ವ್ಯಕ್ತಿ. ಈ ಎಲ್ಲಾ ಸಂಘಟನೆಗಳೂ ಹಿಂದುತ್ವವನ್ನು ತಮ್ಮ ಸಿದ್ಧಾಂತವೆಂದು ಹೇಳುತ್ತವೆ.

ಇದನ್ನೂ ಓದಿ: ಪ್ರಗ್ಯಾ ಎಂಬ ಭಯೋತ್ಪಾದನೆಯ ಆರೋಪಿಯೂ ನರೇಂದ್ರ ಮೋದಿಯೂ

ಆರೆಸ್ಸೆಸ್ ಇವರುಗಳ ಮಾತೃಸಂಸ್ಥೆಯಾಗಿದ್ದು, ಬಹುತೇಕರು ಒಂದಲ್ಲಾ ಒಂದು ಸಂದರ್ಭದಲ್ಲಿ ನೇರವಾಗಿ ಆರೆಸ್ಸೆಸ್ ಅಥವಾ ಅದರ ಅಂಗಸಂಘಟನೆಗಳಲ್ಲಿ ಸಕ್ರಿಯರಾಗಿರುತ್ತಾರೆ. ಇಂಥವರು ಸಿಕ್ಕಿಬಿದ್ದಾಗ ಅವರಿಗೂ, ಆರೆಸ್ಸೆಸ್‍ಗೂ ಅಥವಾ ಬಿಜೆಪಿಗೂ ಸಂಬಂಧ ಇಲ್ಲವೆಂದು ಪ್ರತಿಪಾದಿಸುತ್ತಾರೆ. ಆದರೆ ನಿಧಾನಕ್ಕೆ ಅವರನ್ನು ಸಮರ್ಥಿಸಿಕೊಳ್ಳುವ ಕೆಲಸ ಮಾಡುತ್ತಾ, ಬಹಿರಂಗವಾಗಿಯೇ ಜೊತೆಗೂಡುತ್ತಾರೆ. ಅದಕ್ಕೆ ದೊಡ್ಡ ಉದಾಹರಣೆ, ಪ್ರಗ್ಯಾ ಠಾಕೂರ್. ಆಕೆ ಮತ್ತು ಸಹಚರರು ಸಿಕ್ಕಿಬಿದ್ದಾಗ ಆರೆಸ್ಸೆಸ್‍ನ ಮುಖ್ಯಸ್ಥರೊಬ್ಬರು ಸಕಾರ್ರ್ಧರಕ್ಕೆ ಪತ್ರ ಬರೆದು, ಅವರಿಗೂ ತಮಗೂ ಯಾವುದೇ ಸಂಬಂಧವಿಲ್ಲವೆಂದು ಬಲವಾಗಿ ಪ್ರತಿಪಾದಿಸಿದ್ದರು. ಈಗ ಭೋಪಾಲ್‍ನಿಂದ ಎಂಪಿ ಟಿಕೆಟ್ಟೇ ಕೊಟ್ಟಿದ್ದಾರೆ.

ಇಂಡಿಯನ್ ಎಕ್ಸಪ್ರೆಸ್ ವರದಿ 

ಇವರುಗಳು ಹಿಂಸೆ, ಕೊಲೆ ಇತ್ಯಾದಿಗಳನ್ನು ತಮ್ಮ ಉದ್ದೇಶಗಳಿಗಾಗಿ ಬಳಸುವವರು. ಉದಾಹರಣೆಗೆ ಬಾಂಬ್ ಪರಿಣಿತ ಎನ್ನಲಾಗುವ ಡಾಂಗೆ, ಆರೆಸ್ಸೆಸ್‍ನಲ್ಲಿದ್ದ ವ್ಯಕ್ತಿ ಮತ್ತು ಆತನ ಮೇಲೆ ಇಂಟರ್‍ಪೋಲ್ ರೆಡ್ ಕಾರ್ನರ್ ನೋಟೀಸ್ ಹೊರಡಿಸಲಾಗಿದೆ. ಡಾಂಗೆ ಮತ್ತು ಕಲ್ಸಾಂಗ್ರಾ ಹಿಡಿದುಕೊಟ್ಟವರಿಗೆ ಸರ್ಕಾರವು 10 ಲಕ್ಷ ರೂ. ಮತ್ತು ಹಾಕ್ಲಾ ತಲೆಗೆ 5 ಲಕ್ಷ ರೂ ಬಹುಮಾನ ಘೋಷಿಸಿದ್ದಾರೆ.

ಅಹಮದಾಬಾದ್ ಮತ್ತು ಮಂಗಳೂರುಗಳಲ್ಲಿ ತರಬೇತಿ

ಬಾಬಾಜಿ ಅಲಿಯಾಸ್ ಸುರೇಶ್ ನಾಯರ್ ಹೇಗಿರುತ್ತಾನೆಂಬ ವಿವರವನ್ನು ಗೌರಿ ಲಂಕೇಶ್ ಹತ್ಯೆ ಕೇಸಿನಲ್ಲಿ ಬಂಧಿತರಾಗಿರುವ ಶ್ರೀಕಾಂತ್ ಪಂಗ್ರೇಕರ್, ಶರದ್ ಕಲಸ್ಕರ್ (ನರೇಂದ್ರ ಧಾಬೋಲ್ಕರ್ ಹತ್ಯೆಗೈದ ಶೂಟರ್ ಎಂಬ ಆರೋಪಿ)) ಮತ್ತು ವಾಸುದೇವ ಸೂರ್ಯವಂಶಿ ಇವರುಗಳು ಕೊಟ್ಟಿದ್ದಾರೆ. ಬಾಂಬ್ ಸ್ಫೋಟ ಮತ್ತು ಶಸ್ತ್ರಾಸ್ತ್ರ ತರಬೇತಿಯನ್ನು ನೀಡಲು 19 ತರಬೇತಿ ಶಿಬಿರಗಳನ್ನು ಆಯೋಜಿಸಲಾಗಿತ್ತೆಂದು ಎಸ್‍ಐಟಿ ಹೇಳಿದೆ. ಇಂತಹ ತರಬೇತಿ ನೀಡಲು ಬರುತ್ತಿದ್ದವರಲ್ಲಿ ಕೆಲವರು ಸಂತ/ಸ್ವಾಮೀಜಿ ವೇಷದಲ್ಲಿ ತಿರುಗಾಡುತ್ತಿದ್ದರೆಂದೂ ಆರೋಪಿಗಳು ಬಾಯಿ ಬಿಟ್ಟಿದ್ದಾರೆ. ಶಿಬಿರಗಳು ಅಹಮದಾಬಾದ್  ಮತ್ತು ಮಂಗಳೂರುಗಳಲ್ಲಿ ನಡೆಯಿತೆಂದು ಹೇಳಲಾಗುತ್ತಿದೆ.

ಇದೀಗ ಆರೆಸ್ಸೆಸ್ ಮತ್ತು ಬಿಜೆಪಿ ಏನು ಹೇಳುತ್ತವೆ ಕಾದು ನೋಡಬೇಕು.

ಆಧಾರ: ಇಂಡಿಯನ್ ಎಕ್ಸಪ್ರೆಸ್

ಬಿಜೆಪಿ ಅಭ್ಯರ್ಥಿ, ಭಯೋತ್ಪಾದನೆಯ ಆರೋಪಿ ಪ್ರಗ್ಯಾ ವಿರುದ್ಧ ಐಪಿಎಸ್ ಸಂಘ ಗುಟುರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...