Homeಕರ್ನಾಟಕಪ್ರಗ್ಯಾ ಠಾಕೂರ್ ಸಹಚರರಿಗೆ ಗೌರಿ ಲಂಕೇಶ್ ಹತ್ಯೆಯ ಜೊತೆಗೆ ನಂಟು: ಕೋರ್ಟ್ ಗೆ ಹೇಳಿದ ಎಸ್‍ಐಟಿ

ಪ್ರಗ್ಯಾ ಠಾಕೂರ್ ಸಹಚರರಿಗೆ ಗೌರಿ ಲಂಕೇಶ್ ಹತ್ಯೆಯ ಜೊತೆಗೆ ನಂಟು: ಕೋರ್ಟ್ ಗೆ ಹೇಳಿದ ಎಸ್‍ಐಟಿ

- Advertisement -
- Advertisement -

| ನಾನುಗೌರಿ ಡೆಸ್ಕ್ |

ಅಭಿನವ್ ಭಾರತ್ ಗೂ ಸನಾತನ ಸಂಸ್ಥೆಗೂ ಇದೆ ನಂಟು

ಭೋಪಾಲ್‍ನ ಬಿಜೆಪಿ ಅಭ್ಯರ್ಥಿ, ಭಯೋತ್ಪಾದನೆಯ ಆರೋಪಿ ಪ್ರಗ್ಯಾ ಸಿಂಗ್ ಠಾಕೂರ್‍ರ ಜೊತೆ 2008ರ ಮಾಲೆಗಾಂವ್ ಸ್ಫೋಟದಲ್ಲಿ ಆರೋಪಿಯಾಗಿದ್ದು ತಲೆ ಮರೆಸಿಕೊಂಡವರೇ ಗೌರಿ ಲಂಕೇಶ್ ಹತ್ಯೆಯ ಆರೋಪಿಗಳಿಗೆ ಬಾಂಬ್ ಹಾಕುವ ತರಬೇತಿ ಕೊಟ್ಟಿದ್ದಾರೆಂದು ಎಸ್‍ಐಟಿ ಕೋರ್ಟ್‍ಗೆ ಸಲ್ಲಿಸಿದ ಮಾಹಿತಿಯಲ್ಲಿ ಹೇಳಿದೆ. ಅಷ್ಟೇ ಅಲ್ಲದೇ ಈ ಬಾಂಬ್ ತರಬೇತಿ ನೀಡಿದವರು ಪ್ರಗ್ಯಾ ಠಾಕೂರ್‍ರ ಸಂಘಟನೆ ಅಭಿನವ್ ಭಾರತ್‍ನ ಸದಸ್ಯರಾಗಿದ್ದಾರೆಂದೂ ಕೋರ್ಟ್‍ಗೆ ಸಲ್ಲಿಸಿದ ಮಾಹಿತಿಯಲ್ಲಿ ಹೇಳಲಾಗಿದೆ. ಈ ಕುರಿತು ಇಂದಿನ ಇಂಡಿಯನ್ ಎಕ್ಸ್‍ಪ್ರೆಸ್‍ನಲ್ಲಿ ವಿವರವಾಗಿ ವರದಿ ಮಾಡಲಾಗಿದೆ.

2006ರಿಂದ 2008ರವರೆಗೆ ಹಲವು ಬಾಂಬ್ ಸ್ಫೋಟಗಳು ನಡೆದಿದ್ದವು. ಅವುಗಳೆಂದರೆ ಮಾಲೆಗಾಂವ್, ಮೆಕ್ಕಾ ಮಸ್ಜಿದ್, ಅಜ್ಮೀರ್ ದರ್ಗಾ, ಸಂಝೋತಾ ಎಕ್ಸ್‍ಪ್ರೆಸ್ ಸ್ಫೋಟಗಳು. ಇವೆಲ್ಲದರಲ್ಲಿ ಒಟ್ಟು 117 ಜನರು ಸತ್ತಿದ್ದರು. ಸಂಝೋತಾ ಎಕ್ಸ್‍ಪ್ರೆಸ್ ಎಂಬುದು ಬಿಜೆಪಿಯ ಅಟಲ್ ಬಿಹಾರಿ ವಾಜಪೇಯಿಯವರು ಪ್ರಧಾನಿಯಾಗಿದ್ದಾಗ ದೆಹಲಿ ಮತ್ತು ಲಾಹೋರ್ ಮಧ್ಯೆ ಆರಂಭಿಸಲಾಗಿದ್ದ ರೈಲು.

ಈ ಸ್ಫೋಟಗಳಲ್ಲಿ ಅಭಿನವ್ ಭಾರತ್ ಸಂಘಟನೆಯ ಸದಸ್ಯರು ಪಾಲ್ಗೊಂಡಿದ್ದಾರೆಂಬ ಆರೋಪದ ಮೇಲೆ ಹಲವರನ್ನು ಬಂಧಿಸಲಾಗಿತ್ತು. ಆದರೆ ತಲೆ ಮರೆಸಿಕೊಂಡಿದ್ದಾರೆಂದು ಹೇಳಲಾದ ಸಂದೀಪ್ ಡಾಂಗೆ, ರಾಮ್‍ಜಿ ಕಲ್ಸಾಂಗ್ರಾ ಮತ್ತು ಅಶ್ವಿನ್ ಚೌಹಾಣ್ ಇವರುಗಳು ನಡೆಸಿದ ರಹಸ್ಯ ಬಾಂಬ್ ತರಬೇತಿಯಲ್ಲಿ ಭಾಗವಹಿಸಿದ್ದವರಲ್ಲಿ ಕೆಲವರು ಗೌರಿ ಲಂಕೇಶ್ ಹತ್ಯೆ ಕೇಸಿನಲ್ಲಿ ಆರೋಪಿಗಳು ಮತ್ತು ಸಾಕ್ಷಿದಾರರಾಗಿದ್ದಾರೆ. ಈ ವಿಷಯವು ಎಸ್‍ಐಟಿಯು, ಸದರಿ ಕೇಸಿಲ್ಲಿ ಕೋರ್ಟಿಗೆ ಸಲ್ಲಿಸಿರುವ ದಾಖಲೆಗಳಲ್ಲಿ ಇದೆ.

ಅಷ್ಟೇ ಅಲ್ಲ, 2007ರ ಅಜ್ಮೀರ್ ದರ್ಗಾ ಸ್ಫೋಟದ ಪ್ರಕರಣದ ನಂತರ ಭೂಗತನಾಗಿದ್ದ ಸುರೇಶ್ ನಾಯರ್ ಅಲಿಯಾಸ್ ಬಾಬಾಜಿಯು ಆ ರಹಸ್ಯ ಕ್ಯಾಂಪಿನಲ್ಲಿ ತರಬೇತಿದಾರನಾಗಿದ್ದ ಮತ್ತು ಆತನನ್ನು ನವೆಂಬರ್ 2018ರಲ್ಲಿ ಗುಜರಾತ್‍ನ ಭರೂಚ್‍ನಲ್ಲಿ ಬಂಧಿಸಲಾಗಿದೆ. ಅಂದರೆ, ಅಭಿನವ್ ಭಾರತ್ ಮತ್ತು ಸನಾತನ ಸಂಸ್ಥೆಗೂ ಸಂಬಂಧವಿದೆಯೆಂದಾಯಿತು!

ಬಾಬಾಜಿ ಮತ್ತು ಗುರೂಜಿಗಳಿಂದ ಬಾಂಬ್ ತರಬೇತಿ

ಬಾಬಾಜಿಯ ಜೊತೆಗೆ ನಾಲ್ಕು ಜನ ಗುರೂಜಿಗಳೂ ಬಾಂಬ್ ತರಬೇತಿಯಲ್ಲಿದ್ದರೆಂದು ಗೌರಿ ಲಂಕೇಶ್ ಹಂತಕರು ಪೊಲೀಸರಿಗೆ ಹೇಳಿದ್ದರು. ಅಂತಹ ಒಬ್ಬ ತರಬೇತಿದಾರನನ್ನೂ ಬಂಧಿಸಲಾಗಿದ್ದು ಆತನ ಹೆಸರೇ ಪ್ರತಾಪ್ ಹಾಜಾ. ಆತ ಪ.ಬಂಗಾಳದ ಭವಾನಿ ಸೇನಾಕ್ಕೆ ಸೇರಿದ ವ್ಯಕ್ತಿ. ಈ ಎಲ್ಲಾ ಸಂಘಟನೆಗಳೂ ಹಿಂದುತ್ವವನ್ನು ತಮ್ಮ ಸಿದ್ಧಾಂತವೆಂದು ಹೇಳುತ್ತವೆ.

ಇದನ್ನೂ ಓದಿ: ಪ್ರಗ್ಯಾ ಎಂಬ ಭಯೋತ್ಪಾದನೆಯ ಆರೋಪಿಯೂ ನರೇಂದ್ರ ಮೋದಿಯೂ

ಆರೆಸ್ಸೆಸ್ ಇವರುಗಳ ಮಾತೃಸಂಸ್ಥೆಯಾಗಿದ್ದು, ಬಹುತೇಕರು ಒಂದಲ್ಲಾ ಒಂದು ಸಂದರ್ಭದಲ್ಲಿ ನೇರವಾಗಿ ಆರೆಸ್ಸೆಸ್ ಅಥವಾ ಅದರ ಅಂಗಸಂಘಟನೆಗಳಲ್ಲಿ ಸಕ್ರಿಯರಾಗಿರುತ್ತಾರೆ. ಇಂಥವರು ಸಿಕ್ಕಿಬಿದ್ದಾಗ ಅವರಿಗೂ, ಆರೆಸ್ಸೆಸ್‍ಗೂ ಅಥವಾ ಬಿಜೆಪಿಗೂ ಸಂಬಂಧ ಇಲ್ಲವೆಂದು ಪ್ರತಿಪಾದಿಸುತ್ತಾರೆ. ಆದರೆ ನಿಧಾನಕ್ಕೆ ಅವರನ್ನು ಸಮರ್ಥಿಸಿಕೊಳ್ಳುವ ಕೆಲಸ ಮಾಡುತ್ತಾ, ಬಹಿರಂಗವಾಗಿಯೇ ಜೊತೆಗೂಡುತ್ತಾರೆ. ಅದಕ್ಕೆ ದೊಡ್ಡ ಉದಾಹರಣೆ, ಪ್ರಗ್ಯಾ ಠಾಕೂರ್. ಆಕೆ ಮತ್ತು ಸಹಚರರು ಸಿಕ್ಕಿಬಿದ್ದಾಗ ಆರೆಸ್ಸೆಸ್‍ನ ಮುಖ್ಯಸ್ಥರೊಬ್ಬರು ಸಕಾರ್ರ್ಧರಕ್ಕೆ ಪತ್ರ ಬರೆದು, ಅವರಿಗೂ ತಮಗೂ ಯಾವುದೇ ಸಂಬಂಧವಿಲ್ಲವೆಂದು ಬಲವಾಗಿ ಪ್ರತಿಪಾದಿಸಿದ್ದರು. ಈಗ ಭೋಪಾಲ್‍ನಿಂದ ಎಂಪಿ ಟಿಕೆಟ್ಟೇ ಕೊಟ್ಟಿದ್ದಾರೆ.

ಇಂಡಿಯನ್ ಎಕ್ಸಪ್ರೆಸ್ ವರದಿ 

ಇವರುಗಳು ಹಿಂಸೆ, ಕೊಲೆ ಇತ್ಯಾದಿಗಳನ್ನು ತಮ್ಮ ಉದ್ದೇಶಗಳಿಗಾಗಿ ಬಳಸುವವರು. ಉದಾಹರಣೆಗೆ ಬಾಂಬ್ ಪರಿಣಿತ ಎನ್ನಲಾಗುವ ಡಾಂಗೆ, ಆರೆಸ್ಸೆಸ್‍ನಲ್ಲಿದ್ದ ವ್ಯಕ್ತಿ ಮತ್ತು ಆತನ ಮೇಲೆ ಇಂಟರ್‍ಪೋಲ್ ರೆಡ್ ಕಾರ್ನರ್ ನೋಟೀಸ್ ಹೊರಡಿಸಲಾಗಿದೆ. ಡಾಂಗೆ ಮತ್ತು ಕಲ್ಸಾಂಗ್ರಾ ಹಿಡಿದುಕೊಟ್ಟವರಿಗೆ ಸರ್ಕಾರವು 10 ಲಕ್ಷ ರೂ. ಮತ್ತು ಹಾಕ್ಲಾ ತಲೆಗೆ 5 ಲಕ್ಷ ರೂ ಬಹುಮಾನ ಘೋಷಿಸಿದ್ದಾರೆ.

ಅಹಮದಾಬಾದ್ ಮತ್ತು ಮಂಗಳೂರುಗಳಲ್ಲಿ ತರಬೇತಿ

ಬಾಬಾಜಿ ಅಲಿಯಾಸ್ ಸುರೇಶ್ ನಾಯರ್ ಹೇಗಿರುತ್ತಾನೆಂಬ ವಿವರವನ್ನು ಗೌರಿ ಲಂಕೇಶ್ ಹತ್ಯೆ ಕೇಸಿನಲ್ಲಿ ಬಂಧಿತರಾಗಿರುವ ಶ್ರೀಕಾಂತ್ ಪಂಗ್ರೇಕರ್, ಶರದ್ ಕಲಸ್ಕರ್ (ನರೇಂದ್ರ ಧಾಬೋಲ್ಕರ್ ಹತ್ಯೆಗೈದ ಶೂಟರ್ ಎಂಬ ಆರೋಪಿ)) ಮತ್ತು ವಾಸುದೇವ ಸೂರ್ಯವಂಶಿ ಇವರುಗಳು ಕೊಟ್ಟಿದ್ದಾರೆ. ಬಾಂಬ್ ಸ್ಫೋಟ ಮತ್ತು ಶಸ್ತ್ರಾಸ್ತ್ರ ತರಬೇತಿಯನ್ನು ನೀಡಲು 19 ತರಬೇತಿ ಶಿಬಿರಗಳನ್ನು ಆಯೋಜಿಸಲಾಗಿತ್ತೆಂದು ಎಸ್‍ಐಟಿ ಹೇಳಿದೆ. ಇಂತಹ ತರಬೇತಿ ನೀಡಲು ಬರುತ್ತಿದ್ದವರಲ್ಲಿ ಕೆಲವರು ಸಂತ/ಸ್ವಾಮೀಜಿ ವೇಷದಲ್ಲಿ ತಿರುಗಾಡುತ್ತಿದ್ದರೆಂದೂ ಆರೋಪಿಗಳು ಬಾಯಿ ಬಿಟ್ಟಿದ್ದಾರೆ. ಶಿಬಿರಗಳು ಅಹಮದಾಬಾದ್  ಮತ್ತು ಮಂಗಳೂರುಗಳಲ್ಲಿ ನಡೆಯಿತೆಂದು ಹೇಳಲಾಗುತ್ತಿದೆ.

ಇದೀಗ ಆರೆಸ್ಸೆಸ್ ಮತ್ತು ಬಿಜೆಪಿ ಏನು ಹೇಳುತ್ತವೆ ಕಾದು ನೋಡಬೇಕು.

ಆಧಾರ: ಇಂಡಿಯನ್ ಎಕ್ಸಪ್ರೆಸ್

ಬಿಜೆಪಿ ಅಭ್ಯರ್ಥಿ, ಭಯೋತ್ಪಾದನೆಯ ಆರೋಪಿ ಪ್ರಗ್ಯಾ ವಿರುದ್ಧ ಐಪಿಎಸ್ ಸಂಘ ಗುಟುರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...

ಕರ್ನಾಟಕದಲ್ಲಿ 2 ಗಂಟೆಗಳ ಬೃಹತ್ ಕಾರ್ಯಾಚರಣೆ: 800 ಬಾಲಕಾರ್ಮಿಕರ ರಕ್ಷಣೆ; ಬೆಂಗಳೂರಿನಲ್ಲೇ 503 ಮಕ್ಕಳು

ಬಾಲಕಾರ್ಮಿಕ ಪದ್ಧತಿಯ ವಿರುದ್ಧ ಕರ್ನಾಟಕ ಪೊಲೀಸರು ಹಾಗೂ ಕಾರ್ಮಿಕ ಇಲಾಖೆ ಶನಿವಾರ ರಾಜ್ಯಾದ್ಯಂತ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 800 ಮಕ್ಕಳನ್ನು ರಕ್ಷಿಸಲಾಗಿದೆ. ರಾಜ್ಯದ 962 ಪೊಲೀಸ್ ಠಾಣೆಗಳು ಹಾಗೂ ಘಟಕಗಳ ವ್ಯಾಪ್ತಿಯಲ್ಲಿ 16,951...

‘ದಿ ಹಿಂದೂ’, ‘ದೈನಿಕ್ ಭಾಸ್ಕರ್’ ಗಳಲ್ಲಿ ಅತ್ಯಾಚಾರ ಅಪರಾಧಿ ಗುರ್ಮೀತ್ ರಾಮ್ ರಹೀಮ್ ಸಮರ್ಥಿಸುವ ಜಾಹೀರಾತು: ಓದುಗರಲ್ಲಿ ಕ್ಷಮೆಯಾಚಿಸಿದ ‘ದಿ ಹಿಂದೂ’

ನವದೆಹಲಿ: ಇಬ್ಬರು ಮಹಿಳಾ ಶಿಷ್ಯೆಯರ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಅವರನ್ನು ಸಮರ್ಥಿಸುವ ರೀತಿಯಲ್ಲಿ ಪೂರ್ಣ ಪುಟದ ಮುಖಪುಟ ಜಾಹೀರಾತು...