Homeಕರ್ನಾಟಕಪ್ರಗ್ಯಾ ಠಾಕೂರ್ ಸಹಚರರಿಗೆ ಗೌರಿ ಲಂಕೇಶ್ ಹತ್ಯೆಯ ಜೊತೆಗೆ ನಂಟು: ಕೋರ್ಟ್ ಗೆ ಹೇಳಿದ ಎಸ್‍ಐಟಿ

ಪ್ರಗ್ಯಾ ಠಾಕೂರ್ ಸಹಚರರಿಗೆ ಗೌರಿ ಲಂಕೇಶ್ ಹತ್ಯೆಯ ಜೊತೆಗೆ ನಂಟು: ಕೋರ್ಟ್ ಗೆ ಹೇಳಿದ ಎಸ್‍ಐಟಿ

- Advertisement -
- Advertisement -

| ನಾನುಗೌರಿ ಡೆಸ್ಕ್ |

ಅಭಿನವ್ ಭಾರತ್ ಗೂ ಸನಾತನ ಸಂಸ್ಥೆಗೂ ಇದೆ ನಂಟು

ಭೋಪಾಲ್‍ನ ಬಿಜೆಪಿ ಅಭ್ಯರ್ಥಿ, ಭಯೋತ್ಪಾದನೆಯ ಆರೋಪಿ ಪ್ರಗ್ಯಾ ಸಿಂಗ್ ಠಾಕೂರ್‍ರ ಜೊತೆ 2008ರ ಮಾಲೆಗಾಂವ್ ಸ್ಫೋಟದಲ್ಲಿ ಆರೋಪಿಯಾಗಿದ್ದು ತಲೆ ಮರೆಸಿಕೊಂಡವರೇ ಗೌರಿ ಲಂಕೇಶ್ ಹತ್ಯೆಯ ಆರೋಪಿಗಳಿಗೆ ಬಾಂಬ್ ಹಾಕುವ ತರಬೇತಿ ಕೊಟ್ಟಿದ್ದಾರೆಂದು ಎಸ್‍ಐಟಿ ಕೋರ್ಟ್‍ಗೆ ಸಲ್ಲಿಸಿದ ಮಾಹಿತಿಯಲ್ಲಿ ಹೇಳಿದೆ. ಅಷ್ಟೇ ಅಲ್ಲದೇ ಈ ಬಾಂಬ್ ತರಬೇತಿ ನೀಡಿದವರು ಪ್ರಗ್ಯಾ ಠಾಕೂರ್‍ರ ಸಂಘಟನೆ ಅಭಿನವ್ ಭಾರತ್‍ನ ಸದಸ್ಯರಾಗಿದ್ದಾರೆಂದೂ ಕೋರ್ಟ್‍ಗೆ ಸಲ್ಲಿಸಿದ ಮಾಹಿತಿಯಲ್ಲಿ ಹೇಳಲಾಗಿದೆ. ಈ ಕುರಿತು ಇಂದಿನ ಇಂಡಿಯನ್ ಎಕ್ಸ್‍ಪ್ರೆಸ್‍ನಲ್ಲಿ ವಿವರವಾಗಿ ವರದಿ ಮಾಡಲಾಗಿದೆ.

2006ರಿಂದ 2008ರವರೆಗೆ ಹಲವು ಬಾಂಬ್ ಸ್ಫೋಟಗಳು ನಡೆದಿದ್ದವು. ಅವುಗಳೆಂದರೆ ಮಾಲೆಗಾಂವ್, ಮೆಕ್ಕಾ ಮಸ್ಜಿದ್, ಅಜ್ಮೀರ್ ದರ್ಗಾ, ಸಂಝೋತಾ ಎಕ್ಸ್‍ಪ್ರೆಸ್ ಸ್ಫೋಟಗಳು. ಇವೆಲ್ಲದರಲ್ಲಿ ಒಟ್ಟು 117 ಜನರು ಸತ್ತಿದ್ದರು. ಸಂಝೋತಾ ಎಕ್ಸ್‍ಪ್ರೆಸ್ ಎಂಬುದು ಬಿಜೆಪಿಯ ಅಟಲ್ ಬಿಹಾರಿ ವಾಜಪೇಯಿಯವರು ಪ್ರಧಾನಿಯಾಗಿದ್ದಾಗ ದೆಹಲಿ ಮತ್ತು ಲಾಹೋರ್ ಮಧ್ಯೆ ಆರಂಭಿಸಲಾಗಿದ್ದ ರೈಲು.

ಈ ಸ್ಫೋಟಗಳಲ್ಲಿ ಅಭಿನವ್ ಭಾರತ್ ಸಂಘಟನೆಯ ಸದಸ್ಯರು ಪಾಲ್ಗೊಂಡಿದ್ದಾರೆಂಬ ಆರೋಪದ ಮೇಲೆ ಹಲವರನ್ನು ಬಂಧಿಸಲಾಗಿತ್ತು. ಆದರೆ ತಲೆ ಮರೆಸಿಕೊಂಡಿದ್ದಾರೆಂದು ಹೇಳಲಾದ ಸಂದೀಪ್ ಡಾಂಗೆ, ರಾಮ್‍ಜಿ ಕಲ್ಸಾಂಗ್ರಾ ಮತ್ತು ಅಶ್ವಿನ್ ಚೌಹಾಣ್ ಇವರುಗಳು ನಡೆಸಿದ ರಹಸ್ಯ ಬಾಂಬ್ ತರಬೇತಿಯಲ್ಲಿ ಭಾಗವಹಿಸಿದ್ದವರಲ್ಲಿ ಕೆಲವರು ಗೌರಿ ಲಂಕೇಶ್ ಹತ್ಯೆ ಕೇಸಿನಲ್ಲಿ ಆರೋಪಿಗಳು ಮತ್ತು ಸಾಕ್ಷಿದಾರರಾಗಿದ್ದಾರೆ. ಈ ವಿಷಯವು ಎಸ್‍ಐಟಿಯು, ಸದರಿ ಕೇಸಿಲ್ಲಿ ಕೋರ್ಟಿಗೆ ಸಲ್ಲಿಸಿರುವ ದಾಖಲೆಗಳಲ್ಲಿ ಇದೆ.

ಅಷ್ಟೇ ಅಲ್ಲ, 2007ರ ಅಜ್ಮೀರ್ ದರ್ಗಾ ಸ್ಫೋಟದ ಪ್ರಕರಣದ ನಂತರ ಭೂಗತನಾಗಿದ್ದ ಸುರೇಶ್ ನಾಯರ್ ಅಲಿಯಾಸ್ ಬಾಬಾಜಿಯು ಆ ರಹಸ್ಯ ಕ್ಯಾಂಪಿನಲ್ಲಿ ತರಬೇತಿದಾರನಾಗಿದ್ದ ಮತ್ತು ಆತನನ್ನು ನವೆಂಬರ್ 2018ರಲ್ಲಿ ಗುಜರಾತ್‍ನ ಭರೂಚ್‍ನಲ್ಲಿ ಬಂಧಿಸಲಾಗಿದೆ. ಅಂದರೆ, ಅಭಿನವ್ ಭಾರತ್ ಮತ್ತು ಸನಾತನ ಸಂಸ್ಥೆಗೂ ಸಂಬಂಧವಿದೆಯೆಂದಾಯಿತು!

ಬಾಬಾಜಿ ಮತ್ತು ಗುರೂಜಿಗಳಿಂದ ಬಾಂಬ್ ತರಬೇತಿ

ಬಾಬಾಜಿಯ ಜೊತೆಗೆ ನಾಲ್ಕು ಜನ ಗುರೂಜಿಗಳೂ ಬಾಂಬ್ ತರಬೇತಿಯಲ್ಲಿದ್ದರೆಂದು ಗೌರಿ ಲಂಕೇಶ್ ಹಂತಕರು ಪೊಲೀಸರಿಗೆ ಹೇಳಿದ್ದರು. ಅಂತಹ ಒಬ್ಬ ತರಬೇತಿದಾರನನ್ನೂ ಬಂಧಿಸಲಾಗಿದ್ದು ಆತನ ಹೆಸರೇ ಪ್ರತಾಪ್ ಹಾಜಾ. ಆತ ಪ.ಬಂಗಾಳದ ಭವಾನಿ ಸೇನಾಕ್ಕೆ ಸೇರಿದ ವ್ಯಕ್ತಿ. ಈ ಎಲ್ಲಾ ಸಂಘಟನೆಗಳೂ ಹಿಂದುತ್ವವನ್ನು ತಮ್ಮ ಸಿದ್ಧಾಂತವೆಂದು ಹೇಳುತ್ತವೆ.

ಇದನ್ನೂ ಓದಿ: ಪ್ರಗ್ಯಾ ಎಂಬ ಭಯೋತ್ಪಾದನೆಯ ಆರೋಪಿಯೂ ನರೇಂದ್ರ ಮೋದಿಯೂ

ಆರೆಸ್ಸೆಸ್ ಇವರುಗಳ ಮಾತೃಸಂಸ್ಥೆಯಾಗಿದ್ದು, ಬಹುತೇಕರು ಒಂದಲ್ಲಾ ಒಂದು ಸಂದರ್ಭದಲ್ಲಿ ನೇರವಾಗಿ ಆರೆಸ್ಸೆಸ್ ಅಥವಾ ಅದರ ಅಂಗಸಂಘಟನೆಗಳಲ್ಲಿ ಸಕ್ರಿಯರಾಗಿರುತ್ತಾರೆ. ಇಂಥವರು ಸಿಕ್ಕಿಬಿದ್ದಾಗ ಅವರಿಗೂ, ಆರೆಸ್ಸೆಸ್‍ಗೂ ಅಥವಾ ಬಿಜೆಪಿಗೂ ಸಂಬಂಧ ಇಲ್ಲವೆಂದು ಪ್ರತಿಪಾದಿಸುತ್ತಾರೆ. ಆದರೆ ನಿಧಾನಕ್ಕೆ ಅವರನ್ನು ಸಮರ್ಥಿಸಿಕೊಳ್ಳುವ ಕೆಲಸ ಮಾಡುತ್ತಾ, ಬಹಿರಂಗವಾಗಿಯೇ ಜೊತೆಗೂಡುತ್ತಾರೆ. ಅದಕ್ಕೆ ದೊಡ್ಡ ಉದಾಹರಣೆ, ಪ್ರಗ್ಯಾ ಠಾಕೂರ್. ಆಕೆ ಮತ್ತು ಸಹಚರರು ಸಿಕ್ಕಿಬಿದ್ದಾಗ ಆರೆಸ್ಸೆಸ್‍ನ ಮುಖ್ಯಸ್ಥರೊಬ್ಬರು ಸಕಾರ್ರ್ಧರಕ್ಕೆ ಪತ್ರ ಬರೆದು, ಅವರಿಗೂ ತಮಗೂ ಯಾವುದೇ ಸಂಬಂಧವಿಲ್ಲವೆಂದು ಬಲವಾಗಿ ಪ್ರತಿಪಾದಿಸಿದ್ದರು. ಈಗ ಭೋಪಾಲ್‍ನಿಂದ ಎಂಪಿ ಟಿಕೆಟ್ಟೇ ಕೊಟ್ಟಿದ್ದಾರೆ.

ಇಂಡಿಯನ್ ಎಕ್ಸಪ್ರೆಸ್ ವರದಿ 

ಇವರುಗಳು ಹಿಂಸೆ, ಕೊಲೆ ಇತ್ಯಾದಿಗಳನ್ನು ತಮ್ಮ ಉದ್ದೇಶಗಳಿಗಾಗಿ ಬಳಸುವವರು. ಉದಾಹರಣೆಗೆ ಬಾಂಬ್ ಪರಿಣಿತ ಎನ್ನಲಾಗುವ ಡಾಂಗೆ, ಆರೆಸ್ಸೆಸ್‍ನಲ್ಲಿದ್ದ ವ್ಯಕ್ತಿ ಮತ್ತು ಆತನ ಮೇಲೆ ಇಂಟರ್‍ಪೋಲ್ ರೆಡ್ ಕಾರ್ನರ್ ನೋಟೀಸ್ ಹೊರಡಿಸಲಾಗಿದೆ. ಡಾಂಗೆ ಮತ್ತು ಕಲ್ಸಾಂಗ್ರಾ ಹಿಡಿದುಕೊಟ್ಟವರಿಗೆ ಸರ್ಕಾರವು 10 ಲಕ್ಷ ರೂ. ಮತ್ತು ಹಾಕ್ಲಾ ತಲೆಗೆ 5 ಲಕ್ಷ ರೂ ಬಹುಮಾನ ಘೋಷಿಸಿದ್ದಾರೆ.

ಅಹಮದಾಬಾದ್ ಮತ್ತು ಮಂಗಳೂರುಗಳಲ್ಲಿ ತರಬೇತಿ

ಬಾಬಾಜಿ ಅಲಿಯಾಸ್ ಸುರೇಶ್ ನಾಯರ್ ಹೇಗಿರುತ್ತಾನೆಂಬ ವಿವರವನ್ನು ಗೌರಿ ಲಂಕೇಶ್ ಹತ್ಯೆ ಕೇಸಿನಲ್ಲಿ ಬಂಧಿತರಾಗಿರುವ ಶ್ರೀಕಾಂತ್ ಪಂಗ್ರೇಕರ್, ಶರದ್ ಕಲಸ್ಕರ್ (ನರೇಂದ್ರ ಧಾಬೋಲ್ಕರ್ ಹತ್ಯೆಗೈದ ಶೂಟರ್ ಎಂಬ ಆರೋಪಿ)) ಮತ್ತು ವಾಸುದೇವ ಸೂರ್ಯವಂಶಿ ಇವರುಗಳು ಕೊಟ್ಟಿದ್ದಾರೆ. ಬಾಂಬ್ ಸ್ಫೋಟ ಮತ್ತು ಶಸ್ತ್ರಾಸ್ತ್ರ ತರಬೇತಿಯನ್ನು ನೀಡಲು 19 ತರಬೇತಿ ಶಿಬಿರಗಳನ್ನು ಆಯೋಜಿಸಲಾಗಿತ್ತೆಂದು ಎಸ್‍ಐಟಿ ಹೇಳಿದೆ. ಇಂತಹ ತರಬೇತಿ ನೀಡಲು ಬರುತ್ತಿದ್ದವರಲ್ಲಿ ಕೆಲವರು ಸಂತ/ಸ್ವಾಮೀಜಿ ವೇಷದಲ್ಲಿ ತಿರುಗಾಡುತ್ತಿದ್ದರೆಂದೂ ಆರೋಪಿಗಳು ಬಾಯಿ ಬಿಟ್ಟಿದ್ದಾರೆ. ಶಿಬಿರಗಳು ಅಹಮದಾಬಾದ್  ಮತ್ತು ಮಂಗಳೂರುಗಳಲ್ಲಿ ನಡೆಯಿತೆಂದು ಹೇಳಲಾಗುತ್ತಿದೆ.

ಇದೀಗ ಆರೆಸ್ಸೆಸ್ ಮತ್ತು ಬಿಜೆಪಿ ಏನು ಹೇಳುತ್ತವೆ ಕಾದು ನೋಡಬೇಕು.

ಆಧಾರ: ಇಂಡಿಯನ್ ಎಕ್ಸಪ್ರೆಸ್

ಬಿಜೆಪಿ ಅಭ್ಯರ್ಥಿ, ಭಯೋತ್ಪಾದನೆಯ ಆರೋಪಿ ಪ್ರಗ್ಯಾ ವಿರುದ್ಧ ಐಪಿಎಸ್ ಸಂಘ ಗುಟುರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...