Homeಕರ್ನಾಟಕಪ್ರಗ್ಯಾ ಠಾಕೂರ್ ಸಹಚರರಿಗೆ ಗೌರಿ ಲಂಕೇಶ್ ಹತ್ಯೆಯ ಜೊತೆಗೆ ನಂಟು: ಕೋರ್ಟ್ ಗೆ ಹೇಳಿದ ಎಸ್‍ಐಟಿ

ಪ್ರಗ್ಯಾ ಠಾಕೂರ್ ಸಹಚರರಿಗೆ ಗೌರಿ ಲಂಕೇಶ್ ಹತ್ಯೆಯ ಜೊತೆಗೆ ನಂಟು: ಕೋರ್ಟ್ ಗೆ ಹೇಳಿದ ಎಸ್‍ಐಟಿ

- Advertisement -
- Advertisement -

| ನಾನುಗೌರಿ ಡೆಸ್ಕ್ |

ಅಭಿನವ್ ಭಾರತ್ ಗೂ ಸನಾತನ ಸಂಸ್ಥೆಗೂ ಇದೆ ನಂಟು

ಭೋಪಾಲ್‍ನ ಬಿಜೆಪಿ ಅಭ್ಯರ್ಥಿ, ಭಯೋತ್ಪಾದನೆಯ ಆರೋಪಿ ಪ್ರಗ್ಯಾ ಸಿಂಗ್ ಠಾಕೂರ್‍ರ ಜೊತೆ 2008ರ ಮಾಲೆಗಾಂವ್ ಸ್ಫೋಟದಲ್ಲಿ ಆರೋಪಿಯಾಗಿದ್ದು ತಲೆ ಮರೆಸಿಕೊಂಡವರೇ ಗೌರಿ ಲಂಕೇಶ್ ಹತ್ಯೆಯ ಆರೋಪಿಗಳಿಗೆ ಬಾಂಬ್ ಹಾಕುವ ತರಬೇತಿ ಕೊಟ್ಟಿದ್ದಾರೆಂದು ಎಸ್‍ಐಟಿ ಕೋರ್ಟ್‍ಗೆ ಸಲ್ಲಿಸಿದ ಮಾಹಿತಿಯಲ್ಲಿ ಹೇಳಿದೆ. ಅಷ್ಟೇ ಅಲ್ಲದೇ ಈ ಬಾಂಬ್ ತರಬೇತಿ ನೀಡಿದವರು ಪ್ರಗ್ಯಾ ಠಾಕೂರ್‍ರ ಸಂಘಟನೆ ಅಭಿನವ್ ಭಾರತ್‍ನ ಸದಸ್ಯರಾಗಿದ್ದಾರೆಂದೂ ಕೋರ್ಟ್‍ಗೆ ಸಲ್ಲಿಸಿದ ಮಾಹಿತಿಯಲ್ಲಿ ಹೇಳಲಾಗಿದೆ. ಈ ಕುರಿತು ಇಂದಿನ ಇಂಡಿಯನ್ ಎಕ್ಸ್‍ಪ್ರೆಸ್‍ನಲ್ಲಿ ವಿವರವಾಗಿ ವರದಿ ಮಾಡಲಾಗಿದೆ.

2006ರಿಂದ 2008ರವರೆಗೆ ಹಲವು ಬಾಂಬ್ ಸ್ಫೋಟಗಳು ನಡೆದಿದ್ದವು. ಅವುಗಳೆಂದರೆ ಮಾಲೆಗಾಂವ್, ಮೆಕ್ಕಾ ಮಸ್ಜಿದ್, ಅಜ್ಮೀರ್ ದರ್ಗಾ, ಸಂಝೋತಾ ಎಕ್ಸ್‍ಪ್ರೆಸ್ ಸ್ಫೋಟಗಳು. ಇವೆಲ್ಲದರಲ್ಲಿ ಒಟ್ಟು 117 ಜನರು ಸತ್ತಿದ್ದರು. ಸಂಝೋತಾ ಎಕ್ಸ್‍ಪ್ರೆಸ್ ಎಂಬುದು ಬಿಜೆಪಿಯ ಅಟಲ್ ಬಿಹಾರಿ ವಾಜಪೇಯಿಯವರು ಪ್ರಧಾನಿಯಾಗಿದ್ದಾಗ ದೆಹಲಿ ಮತ್ತು ಲಾಹೋರ್ ಮಧ್ಯೆ ಆರಂಭಿಸಲಾಗಿದ್ದ ರೈಲು.

ಈ ಸ್ಫೋಟಗಳಲ್ಲಿ ಅಭಿನವ್ ಭಾರತ್ ಸಂಘಟನೆಯ ಸದಸ್ಯರು ಪಾಲ್ಗೊಂಡಿದ್ದಾರೆಂಬ ಆರೋಪದ ಮೇಲೆ ಹಲವರನ್ನು ಬಂಧಿಸಲಾಗಿತ್ತು. ಆದರೆ ತಲೆ ಮರೆಸಿಕೊಂಡಿದ್ದಾರೆಂದು ಹೇಳಲಾದ ಸಂದೀಪ್ ಡಾಂಗೆ, ರಾಮ್‍ಜಿ ಕಲ್ಸಾಂಗ್ರಾ ಮತ್ತು ಅಶ್ವಿನ್ ಚೌಹಾಣ್ ಇವರುಗಳು ನಡೆಸಿದ ರಹಸ್ಯ ಬಾಂಬ್ ತರಬೇತಿಯಲ್ಲಿ ಭಾಗವಹಿಸಿದ್ದವರಲ್ಲಿ ಕೆಲವರು ಗೌರಿ ಲಂಕೇಶ್ ಹತ್ಯೆ ಕೇಸಿನಲ್ಲಿ ಆರೋಪಿಗಳು ಮತ್ತು ಸಾಕ್ಷಿದಾರರಾಗಿದ್ದಾರೆ. ಈ ವಿಷಯವು ಎಸ್‍ಐಟಿಯು, ಸದರಿ ಕೇಸಿಲ್ಲಿ ಕೋರ್ಟಿಗೆ ಸಲ್ಲಿಸಿರುವ ದಾಖಲೆಗಳಲ್ಲಿ ಇದೆ.

ಅಷ್ಟೇ ಅಲ್ಲ, 2007ರ ಅಜ್ಮೀರ್ ದರ್ಗಾ ಸ್ಫೋಟದ ಪ್ರಕರಣದ ನಂತರ ಭೂಗತನಾಗಿದ್ದ ಸುರೇಶ್ ನಾಯರ್ ಅಲಿಯಾಸ್ ಬಾಬಾಜಿಯು ಆ ರಹಸ್ಯ ಕ್ಯಾಂಪಿನಲ್ಲಿ ತರಬೇತಿದಾರನಾಗಿದ್ದ ಮತ್ತು ಆತನನ್ನು ನವೆಂಬರ್ 2018ರಲ್ಲಿ ಗುಜರಾತ್‍ನ ಭರೂಚ್‍ನಲ್ಲಿ ಬಂಧಿಸಲಾಗಿದೆ. ಅಂದರೆ, ಅಭಿನವ್ ಭಾರತ್ ಮತ್ತು ಸನಾತನ ಸಂಸ್ಥೆಗೂ ಸಂಬಂಧವಿದೆಯೆಂದಾಯಿತು!

ಬಾಬಾಜಿ ಮತ್ತು ಗುರೂಜಿಗಳಿಂದ ಬಾಂಬ್ ತರಬೇತಿ

ಬಾಬಾಜಿಯ ಜೊತೆಗೆ ನಾಲ್ಕು ಜನ ಗುರೂಜಿಗಳೂ ಬಾಂಬ್ ತರಬೇತಿಯಲ್ಲಿದ್ದರೆಂದು ಗೌರಿ ಲಂಕೇಶ್ ಹಂತಕರು ಪೊಲೀಸರಿಗೆ ಹೇಳಿದ್ದರು. ಅಂತಹ ಒಬ್ಬ ತರಬೇತಿದಾರನನ್ನೂ ಬಂಧಿಸಲಾಗಿದ್ದು ಆತನ ಹೆಸರೇ ಪ್ರತಾಪ್ ಹಾಜಾ. ಆತ ಪ.ಬಂಗಾಳದ ಭವಾನಿ ಸೇನಾಕ್ಕೆ ಸೇರಿದ ವ್ಯಕ್ತಿ. ಈ ಎಲ್ಲಾ ಸಂಘಟನೆಗಳೂ ಹಿಂದುತ್ವವನ್ನು ತಮ್ಮ ಸಿದ್ಧಾಂತವೆಂದು ಹೇಳುತ್ತವೆ.

ಇದನ್ನೂ ಓದಿ: ಪ್ರಗ್ಯಾ ಎಂಬ ಭಯೋತ್ಪಾದನೆಯ ಆರೋಪಿಯೂ ನರೇಂದ್ರ ಮೋದಿಯೂ

ಆರೆಸ್ಸೆಸ್ ಇವರುಗಳ ಮಾತೃಸಂಸ್ಥೆಯಾಗಿದ್ದು, ಬಹುತೇಕರು ಒಂದಲ್ಲಾ ಒಂದು ಸಂದರ್ಭದಲ್ಲಿ ನೇರವಾಗಿ ಆರೆಸ್ಸೆಸ್ ಅಥವಾ ಅದರ ಅಂಗಸಂಘಟನೆಗಳಲ್ಲಿ ಸಕ್ರಿಯರಾಗಿರುತ್ತಾರೆ. ಇಂಥವರು ಸಿಕ್ಕಿಬಿದ್ದಾಗ ಅವರಿಗೂ, ಆರೆಸ್ಸೆಸ್‍ಗೂ ಅಥವಾ ಬಿಜೆಪಿಗೂ ಸಂಬಂಧ ಇಲ್ಲವೆಂದು ಪ್ರತಿಪಾದಿಸುತ್ತಾರೆ. ಆದರೆ ನಿಧಾನಕ್ಕೆ ಅವರನ್ನು ಸಮರ್ಥಿಸಿಕೊಳ್ಳುವ ಕೆಲಸ ಮಾಡುತ್ತಾ, ಬಹಿರಂಗವಾಗಿಯೇ ಜೊತೆಗೂಡುತ್ತಾರೆ. ಅದಕ್ಕೆ ದೊಡ್ಡ ಉದಾಹರಣೆ, ಪ್ರಗ್ಯಾ ಠಾಕೂರ್. ಆಕೆ ಮತ್ತು ಸಹಚರರು ಸಿಕ್ಕಿಬಿದ್ದಾಗ ಆರೆಸ್ಸೆಸ್‍ನ ಮುಖ್ಯಸ್ಥರೊಬ್ಬರು ಸಕಾರ್ರ್ಧರಕ್ಕೆ ಪತ್ರ ಬರೆದು, ಅವರಿಗೂ ತಮಗೂ ಯಾವುದೇ ಸಂಬಂಧವಿಲ್ಲವೆಂದು ಬಲವಾಗಿ ಪ್ರತಿಪಾದಿಸಿದ್ದರು. ಈಗ ಭೋಪಾಲ್‍ನಿಂದ ಎಂಪಿ ಟಿಕೆಟ್ಟೇ ಕೊಟ್ಟಿದ್ದಾರೆ.

ಇಂಡಿಯನ್ ಎಕ್ಸಪ್ರೆಸ್ ವರದಿ 

ಇವರುಗಳು ಹಿಂಸೆ, ಕೊಲೆ ಇತ್ಯಾದಿಗಳನ್ನು ತಮ್ಮ ಉದ್ದೇಶಗಳಿಗಾಗಿ ಬಳಸುವವರು. ಉದಾಹರಣೆಗೆ ಬಾಂಬ್ ಪರಿಣಿತ ಎನ್ನಲಾಗುವ ಡಾಂಗೆ, ಆರೆಸ್ಸೆಸ್‍ನಲ್ಲಿದ್ದ ವ್ಯಕ್ತಿ ಮತ್ತು ಆತನ ಮೇಲೆ ಇಂಟರ್‍ಪೋಲ್ ರೆಡ್ ಕಾರ್ನರ್ ನೋಟೀಸ್ ಹೊರಡಿಸಲಾಗಿದೆ. ಡಾಂಗೆ ಮತ್ತು ಕಲ್ಸಾಂಗ್ರಾ ಹಿಡಿದುಕೊಟ್ಟವರಿಗೆ ಸರ್ಕಾರವು 10 ಲಕ್ಷ ರೂ. ಮತ್ತು ಹಾಕ್ಲಾ ತಲೆಗೆ 5 ಲಕ್ಷ ರೂ ಬಹುಮಾನ ಘೋಷಿಸಿದ್ದಾರೆ.

ಅಹಮದಾಬಾದ್ ಮತ್ತು ಮಂಗಳೂರುಗಳಲ್ಲಿ ತರಬೇತಿ

ಬಾಬಾಜಿ ಅಲಿಯಾಸ್ ಸುರೇಶ್ ನಾಯರ್ ಹೇಗಿರುತ್ತಾನೆಂಬ ವಿವರವನ್ನು ಗೌರಿ ಲಂಕೇಶ್ ಹತ್ಯೆ ಕೇಸಿನಲ್ಲಿ ಬಂಧಿತರಾಗಿರುವ ಶ್ರೀಕಾಂತ್ ಪಂಗ್ರೇಕರ್, ಶರದ್ ಕಲಸ್ಕರ್ (ನರೇಂದ್ರ ಧಾಬೋಲ್ಕರ್ ಹತ್ಯೆಗೈದ ಶೂಟರ್ ಎಂಬ ಆರೋಪಿ)) ಮತ್ತು ವಾಸುದೇವ ಸೂರ್ಯವಂಶಿ ಇವರುಗಳು ಕೊಟ್ಟಿದ್ದಾರೆ. ಬಾಂಬ್ ಸ್ಫೋಟ ಮತ್ತು ಶಸ್ತ್ರಾಸ್ತ್ರ ತರಬೇತಿಯನ್ನು ನೀಡಲು 19 ತರಬೇತಿ ಶಿಬಿರಗಳನ್ನು ಆಯೋಜಿಸಲಾಗಿತ್ತೆಂದು ಎಸ್‍ಐಟಿ ಹೇಳಿದೆ. ಇಂತಹ ತರಬೇತಿ ನೀಡಲು ಬರುತ್ತಿದ್ದವರಲ್ಲಿ ಕೆಲವರು ಸಂತ/ಸ್ವಾಮೀಜಿ ವೇಷದಲ್ಲಿ ತಿರುಗಾಡುತ್ತಿದ್ದರೆಂದೂ ಆರೋಪಿಗಳು ಬಾಯಿ ಬಿಟ್ಟಿದ್ದಾರೆ. ಶಿಬಿರಗಳು ಅಹಮದಾಬಾದ್  ಮತ್ತು ಮಂಗಳೂರುಗಳಲ್ಲಿ ನಡೆಯಿತೆಂದು ಹೇಳಲಾಗುತ್ತಿದೆ.

ಇದೀಗ ಆರೆಸ್ಸೆಸ್ ಮತ್ತು ಬಿಜೆಪಿ ಏನು ಹೇಳುತ್ತವೆ ಕಾದು ನೋಡಬೇಕು.

ಆಧಾರ: ಇಂಡಿಯನ್ ಎಕ್ಸಪ್ರೆಸ್

ಬಿಜೆಪಿ ಅಭ್ಯರ್ಥಿ, ಭಯೋತ್ಪಾದನೆಯ ಆರೋಪಿ ಪ್ರಗ್ಯಾ ವಿರುದ್ಧ ಐಪಿಎಸ್ ಸಂಘ ಗುಟುರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...

ಮುಂಬೈ| ಬುರ್ಖಾ ಧರಿಸಿ ಲೋಕಲ್‌ ಟ್ರೈನ್‌ನ ಮಹಿಳಾ ಬೋಗಿಯಲ್ಲಿ ಪ್ರಯಾಣಿಸಿದ ವ್ಯಕ್ತಿ ಬಂಧನ

ಮುಂಬೈನ ಉಪನಗರ ರೈಲಿನ ಮಹಿಳಾ ಬೋಗಿಯಲ್ಲಿ ಬುರ್ಖಾ ಧರಿಸಿ ಪ್ರಯಾಣಿಸುತ್ತಿದ್ದ ಆರೋಪದ ಮೇಲೆ ನಾಸಿಕ್‌ನ 57 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಈ ಘಟನೆ ಫೆಬ್ರವರಿ 6 ರಂದು ಘಾಟ್ಕೋಪರ್...

ಎಪ್‌ಸ್ಟೀನ್‌ ಫೈಲ್ಸ್ ಜನಾಕ್ರೋಶ : ಎಐ ಶೃಂಗಸಭೆಯಿಂದ ದೂರ ಉಳಿದ ಬಿಲ್‌ ಗೇಟ್ಸ್‌

ಎಪ್‌ಸ್ಟೀನ್‌ ಫೈಲ್ಸ್‌ ಮುಂದಿಟ್ಟುಕೊಂಡು ಜನರು ತೀವ್ರ ವಿರೋಧ ವ್ಯಕ್ತಪಡಿಸಿದ ಬೆನ್ನಲ್ಲೇ, 'ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆ'ಯಿಂದ ಮೈಕ್ರೋಸಾಫ್ಟ್‌ ಸಹ-ಸಂಸ್ಥಾಪಕ ಬಿಲ್ ಗೇಟ್ಸ್ ದೂರ ಉಳಿದಿದ್ದಾರೆ. ಈ ಕುರಿತು ಗೇಟ್ಸ್ ಫೌಂಡೇಶನ್ ಇಂಡಿಯಾ ಗುರುವಾರ...

ಬೆಂಗಳೂರಿನಲ್ಲಿ ರಂಜಾನ್ ಆಹಾರ ಮೇಳ ನಡೆಸದಂತೆ ಹೋಟೆಲ್‌ಗಳಿಗೆ ಎಚ್ಚರಿಕೆ

ಬೆಂಗಳೂರು: ಫ್ರೇಸರ್ ಟೌನ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿನ ಎಂಎಂ ರಸ್ತೆಯಲ್ಲಿ ರಂಜಾನ್ ಆಹಾರ ಮೇಳ ನಡೆಸದಂತೆ ಹೋಟೆಲ್ ಮಾಲೀಕರಿಗೆ ಸ್ಥಳೀಯ ನಿವಾಸಿಗಳು ಎಚ್ಚರಿಕೆ ನೀಡಿದ್ದಾರೆ. ರಂಜಾನ್ ಆಹಾರ ಮೇಳದಿಂದ ಸಂಚಾರ ದಟ್ಟಣೆ. ಅವ್ಯವಸ್ಥೆಯ ಜೊತೆಗೆ...